Homeಕರ್ನಾಟಕಎಸ್‌‌ಎಸ್‌ಸಿ ಪರೀಕ್ಷೆಯಲ್ಲಿ ಹಿಂದಿ, ಇಂಗ್ಲಿಷ್‌ಗಷ್ಟೇ ಅವಕಾಶ: ಕನ್ನಡಿಗರ ಕತ್ತು ಹಿಸುಕುತ್ತಿದೆ ಬಿಜೆಪಿ- ಎಚ್‌ಡಿಕೆ

ಎಸ್‌‌ಎಸ್‌ಸಿ ಪರೀಕ್ಷೆಯಲ್ಲಿ ಹಿಂದಿ, ಇಂಗ್ಲಿಷ್‌ಗಷ್ಟೇ ಅವಕಾಶ: ಕನ್ನಡಿಗರ ಕತ್ತು ಹಿಸುಕುತ್ತಿದೆ ಬಿಜೆಪಿ- ಎಚ್‌ಡಿಕೆ

“ಇದು ಕನ್ನಡ ವಿರೋಧಿ ಅಷ್ಟೇ ಅಲ್ಲ; ಭಾರತವನ್ನು ಉತ್ತರ, ದಕ್ಷಿಣ ಎಂದು ವಿಭಜಿಸಲು ಕೇಂದ್ರ ಬಿಜೆಪಿ ಸರಕಾರವೇ ಕೊಡುತ್ತಿರುವ ಕುಮ್ಮಕ್ಕು”

- Advertisement -
- Advertisement -

ಕೇಂದ್ರ ಸರಕಾರದ ಸಿಬ್ಬಂದಿ ಆಯ್ಕೆ ಆಯೋಗ (ಎಸ್‌‌ಎಸ್‌ಸಿ) ವಿವಿಧ ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಹಿಂದಿ ಮತ್ತು ಇಂಗ್ಲಿಷ್‌‌ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

#ಕೇಂದ್ರ_ಸರಕಾರಿ_ಕೆಲಸ_ಕನ್ನಡಿಗರ_ಹಕ್ಕು ಹ್ಯಾಷ್‌ಟ್ಯಾಗ್‌ ಬಳಸಿರುವ ಅವರು ಸರಣಿ ಟ್ವೀಟ್ ಮಾಡಿದ್ದಾರೆ. “ಕನ್ನಡದ ಕತ್ತು ಹಿಚುಕುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿರುವ ಬಿಜೆಪಿ ಆಡಳಿತಕ್ಕೆ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಮುಗಿಸಲೇಬೇಕು ಎನ್ನುವ ಹಪಾಹಪಿ, ತವಕ, ಹಠ ಉತ್ಕಟವಾಗಿದೆ ಎನ್ನುವುದಕ್ಕೆ ಇಲ್ಲಿದೆ ಹೊಸ ಸಾಕ್ಷಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೇದೆ ಆಯ್ಕೆಗೆ ಅರ್ಜಿ ಕರೆದಿರುವ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ) ಹಿಂದಿ, ಇಂಗ್ಲಿಷ್‌‌ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದೆ. ಹಾಗಾದರೆ, ಕನ್ನಡವೂ ಸೇರಿ ಇತರೆ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಅಭ್ಯರ್ಥಿಗಳು ಏನು ಮಾಡಬೇಕು? ಹಿಂದಿಗೆ ಬೆಣ್ಣೆ, ಕನ್ನಡಕ್ಕೆ ಸುಣ್ಣ! ಇದೆಂಥಾ ನ್ಯಾಯ?” ಎಂದು ಪ್ರಶ್ನಿಸಿದ್ದಾರೆ.

“ಗಡಿ ಭದ್ರತಾ ಪಡೆ, ಕೇಂದ್ರೀಯ ಕೈಗಾರಿಕಾ ಪಡೆ, ಕೇಂದ್ರ ಪೊಲೀಸ್ ಮೀಸಲು ಪಡೆ, ಇಂಡೋ ಟಿಬೆಟಿಯನ್ ಗಡಿ ಪೊಲೀಸ್, ಸಶಸ್ತ್ರ ಸೀಮಾಬಲ, ಸಚಿವಾಲಯ ಭದ್ರತಾ ಪಡೆ, ಅಸ್ಸಾಂ ರೈಫಲ್ಸ್, ಮಾದಕ ವಸ್ತು ನಿಯಂತ್ರಣಾ ಇಲಾಖೆ ಸೇರಿ ಹಲವು ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಜನವರಿಯಲ್ಲಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಕೇವಲ ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ಇರುತ್ತದೆ. ಅಲ್ಲಿಗೆ ಹಿಂದಿ ಭಾಷಿಕರು ಬಿಟ್ಟರೆ ಬೇರೆ ಯಾರೂ ಆಯ್ಕೆ ಆಗಲೇಬಾರದು ಎನ್ನುವ ಹುನ್ನಾರ ಇದರಲ್ಲಿ ಅಡಗಿದೆ. ನನ್ನ ಅಭಿಪ್ರಾಯದಲ್ಲಿ, ಇದು ಕನ್ನಡ ವಿರೋಧಿ ಅಷ್ಟೇ ಅಲ್ಲ; ಭಾರತವನ್ನು ಉತ್ತರ, ದಕ್ಷಿಣ ಎಂದು ವಿಭಜಿಸಲು ಕೇಂದ್ರ ಬಿಜೆಪಿ ಸರಕಾರವೇ ಕೊಡುತ್ತಿರುವ ಕುಮ್ಮಕ್ಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಈ ಅಪಾಯದ ಅರಿವು ಮಾಡಿಕೊಂಡು, ಕೂಡಲೇ ಈ ಕನ್ನಡ ವಿರೋಧಿ ಆದೇಶ ಹಿಂಪಡೆದು, ಹೊಸ ಆದೇಶ ಹೊರಡಿಸಿ ಕನ್ನಡವೂ ಸೇರಿ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಇಲ್ಲವಾದರೆ, ಬೀದಿಗಿಳಿದು ಕನ್ನಡಿಗರ ಶಕ್ತಿ ಏನೆಂದು ತೋರಿಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

“ಕೋಟಿ ಕಂಠ ಗಾಯನ ಎಂದರೆ ಕೋಟಿಗೂ ಹೆಚ್ಚು ಕನ್ನಡ ಕಂಠಗಳಿಗೆ ಜೀವ ತುಂಬುವುದು, ಅನ್ನದ ದಾರಿ ತೋರಿಸುವುದು, ಬದುಕಿನ ಖಾತರಿ ಕೊಡುವುದು. ಕೇವಲ ನಾಲಿಗೆ ಮೇಲೆ ಕನ್ನಡ ಎಂದು ಹೇಳಿ, ಮನದಾಳದಲ್ಲಿ ಅದೇ ಕನ್ನಡದ ಮೇಲೆ ವಿಷ ಕಕ್ಕುವುದಲ್ಲ. ಅದನ್ನು ಕನ್ನಡಿಗರು ಎಂದಿಗೂ ಸಹಿಸುವುದೂ ಅಲ್ಲ” ಎಂದು ತಿಳಿಸಿದ್ದಾರೆ.

“ನಿನ್ನೆಯಷ್ಟೇ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಾಡಿದ ರಾಜ್ಯ ಬಿಜೆಪಿ ಸರಕಾರ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಏನು ಹೇಳುತ್ತದೆ? ಕೋಟಿ ಕಂಠ ಗಾಯನ ಎನ್ನುತ್ತಲೇ ಕನ್ನಡದ ಕತ್ತು ಸೀಳುವುದಾ? ಕನ್ನಡಿಗರ ಅನ್ನ ಕಸಿದುಕೊಳ್ಳುವುದಾ? ಕನ್ನಡಿಗರ ಹಕ್ಕುಗಳಿಗೆ ಮರಣಶಾಸನ ಬರೆಯುವುದಾ? ಕನ್ನಡಿಗರಿಗೆ ಬೇಕಿದೆ ಉತ್ತರ” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...