Homeಮುಖಪುಟ'ನಿಷೇಧಿಸಿರುವುದು ದಿಢೀರ್ ತ್ರಿವಳಿ ತಲಾಖ್ ಮಾತ್ರ, ತಲಾಖ್-ಇ-ಅಹ್ಸಾನ್ ಅಲ್ಲ': ಬಾಂಬೆ ಹೈಕೋರ್ಟ್

‘ನಿಷೇಧಿಸಿರುವುದು ದಿಢೀರ್ ತ್ರಿವಳಿ ತಲಾಖ್ ಮಾತ್ರ, ತಲಾಖ್-ಇ-ಅಹ್ಸಾನ್ ಅಲ್ಲ’: ಬಾಂಬೆ ಹೈಕೋರ್ಟ್

- Advertisement -
- Advertisement -

ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆ-2019 ‘ತಲಾಖ್-ಇ-ಬಿದತ್’ ಹೆಸರಿನ ದಿಢೀರ್‌ ಮತ್ತು ಬದಲಿಸಲಾಗದ ವಿಚ್ಛೇದನ ನೀಡುವ ಪದ್ದತಿಗೆ ಮಾತ್ರ ಅನ್ವಯಿಸುತ್ತದೆ, ಅಲ್ಲದೆ ಇಸ್ಲಾಂನಲ್ಲಿ ‘ತಲಾಖ್-ಇ-ಅಹ್ಸಾನ್’ ಎಂದು ಕರೆಯಲಾಗುವ ಸಾಂಪ್ರಾದಯಿಕ ವಿಚ್ಛೇದನಕ್ಕೆ ಅಲ್ಲ ಎಂದು ಬಾಂಬೆ ಹೈಕೋರ್ಟ್‌ ಬುಧವಾರ (ಏ.23) ಸ್ಪಷ್ಟಪಡಿಸಿರುವುದಾಗಿ barandbench.com ವರದಿ ಮಾಡಿದೆ.

ದಿಢೀರ್ ತ್ರಿವಳಿ ತಲಾಖ್ ನಿಷೇಧಿಸುವ ಕಾಯ್ದೆಯಡಿ ಮುಸ್ಲಿಂ ವ್ಯಕ್ತಿ ಮತ್ತು ಅವರ ಪೋಷಕರ ವಿರುದ್ಧ ದಾಖಲಾಗಿದ್ದ ಪೊಲೀಸ್ ಪ್ರಕರಣವನ್ನು ರದ್ದುಗೊಳಿಸುವಾಗ ನ್ಯಾಯಾಲಯ ಈ ಹೇಳಿಕೆ ನೀಡಿದೆ.

ತಲಾಖ್-ಎ-ಅಹ್ಸಾನ್ ವಿಧಾನವನ್ನು ಅನುಸರಿಸಿ ಗಂಡ ತನ್ನ ಹೆಂಡತಿಗೆ ವಿಚ್ಛೇದನ ನೀಡಿದ್ದರು. ಈ ವಿಧಾನದಡಿಯಲ್ಲಿ ತಲಾಖ್ ಅನ್ನು ಒಮ್ಮೆ ಉಚ್ಚರಿಸಲಾಗುತ್ತದೆ ಮತ್ತು ವಿಚ್ಛೇದನ ಜಾರಿಗೆ ಬರಲು 90 ದಿನಗಳ ಕಾಯುವ ಅವಧಿ ಇರುತ್ತದೆ. ಇಸ್ಲಾಮಿಕ್ ಕಾನೂನಿನಡಿಯ ಈ ವಿಚ್ಛೇದನ ಮಾರ್ಗವು ಇನ್ನೂ ಕಾನೂನು ಬದ್ದವಾಗಿ ಇದೆ.

ತಲಾಖ್-ಎ-ಅಹ್ಸಾನ್ ವಿಧಾನದಲ್ಲಿ ವಿಚ್ಛೇದ ನೀಡಿದ್ದ ವ್ಯಕ್ತಿ ಮತ್ತು ಅವರ ಪೋಷಕರ ಮೇಲೆ 2019ರ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆಂದು ಆರೋಪಿಸಿ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದರು.

ನ್ಯಾಯಮೂರ್ತಿ ವಿಭಾ ಕಂಕಣವಾಡಿ ಮತ್ತು ನ್ಯಾಯಮೂರ್ತಿ ಸಂಜಯ್ ದೇಶಮುಖ್ ಅವರಿದ್ದ ಪೀಠವು, ಈ ಪ್ರಕರಣದ ವಿಚ್ಛೇದನದ ರೂಪವು ನಿಷೇಧಿತ ವರ್ಗದ ಅಡಿಯಲ್ಲಿ ಬರುವುದಿಲ್ಲ ಎಂದು ಹೇಳಿದೆ.

ಪ್ರಕರಣದಲ್ಲಿ, ದಂಪತಿ 2022ರಲ್ಲಿ ವಿವಾಹವಾಗಿದ್ದರು. ಬಳಿಕ ಕೆಲ ತಿಂಗಳುಗಳ ಕಾಲ ಭಾರತದ ವಿವಿಧ ನಗರಗಳಲ್ಲಿ ಒಟ್ಟಿಗೆ ವಾಸವಿದ್ದರು. ವೈವಾಹಿಕ ಭಿನ್ನಾಭಿಪ್ರಾಯಗಳನ್ನು ಉಂಟಾದ ನಂತರ, ಪತಿ ಡಿಸೆಂಬರ್ 2023ರಲ್ಲಿ ಸಾಕ್ಷಿಗಳ ಸಮ್ಮುಖದಲ್ಲಿ ಒಂದು ಬಾರಿ ತಲಾಖ್ ಎಂದು ಉಚ್ಚರಿಸಿದ್ದರು. ಅದನ್ನು ಅನುಸರಿಸಿ ಔಪಚಾರಿಕ ನೋಟಿಸ್ ನೀಡಿದ್ದರು.

90 ದಿನಗಳ ಕಾಯುವ ಅವಧಿಯಲ್ಲಿ ದಂಪತಿ ಮತ್ತೆ ಒಂದಾಗಲು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ವಿಚ್ಛೇದನವು ಊರ್ಜಿತವಾಗಿತ್ತು.

ಆದರೆ, ವಿಚ್ಛೇದಿತ ಮಹಿಳೆ ಜಲಗಾಂವ್‌ನ ಭೂಸಾವಲ್ ಬಜಾರ್ ಪೇಠ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. 2019ರ ಕಾಯ್ದೆಯಡಿಯಲ್ಲಿ ವಿಚ್ಛೇದನವು ಕಾನೂನುಬಾಹಿರವಾಗಿದೆ. ತನ್ನ ಅತ್ತೆ ಮಾವ ಕೂಡ ನನಗೆ ತಲಾಖ್ ನೀಡಿರುವುದನ್ನು ಬೆಂಬಲಿಸಿದ್ದಾರೆ. ಅವರನ್ನೂ ಕೂಡ ತಪ್ಪಿತಸ್ಥರನ್ನಾಗಿ ಮಾಡಬೇಕು ಎಂದು ಆಗ್ರಹಿಸಿದ್ದರು.

ತಲಾಖ್-ಎ-ಅಹ್ಸಾನ್ ವಿಧಾನವನ್ನು ತಾನು ಅನುಸರಿಸಿದ್ದೇನೆ ಎಂದು ಮಹಿಳೆಯ ವಿಚ್ಛೇದಿತ ಪತಿ ನ್ಯಾಯಾಲಯದಲ್ಲಿ ವಾದಿಸಿದ್ದರು. ಇದು ತಲಾಖ್-ಎ-ಬಿದತ್ (ದಿಢೀರ್ ತ್ರಿವಳಿ ತಲಾಖ್) ನಂತೆ ಅಲ್ಲ. ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ತಲಾಖ್-ಎ-ಅಹ್ಸಾನ್ ಅನ್ನು ಮಾನ್ಯ ಮತ್ತು ಅಂಗೀಕೃತ ವಿಚ್ಛೇದನದ ರೂಪವೆಂದು ಗುರುತಿಸಿದ ಹಿಂದಿನ ನ್ಯಾಯಾಲಯದ ತೀರ್ಪುಗಳನ್ನು ಅವರ ವಕೀಲರು ಉಲ್ಲೇಖಿಸಿದ್ದರು. ಈ ನಿರ್ಧಾರದಲ್ಲಿ ನಮ್ಮದು ಯಾವುದೇ ಪಾತ್ರವಿಲ್ಲ ಎಂದು ಅತ್ತೆ-ಮಾವ ಹೇಳಿದ್ದರು.

ತಲಾಖ್-ಎ-ಅಹ್ಸಾನ್ ಮೂಲಕ ವಿಚ್ಛೇಧನ ನೀಡಿದ್ದರೂ, ಅದನ್ನು ವಾಪಸ್ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ, ಇದು 2019ರ ಕಾನೂನಿನ ಉಲ್ಲಂಘಣೆಯಾಗಿದೆ ಎಂದು ಮಹಿಳೆ ವಾದಿಸಿದ್ದರು.

ಆದರೆ, ಹೈಕೋರ್ಟ್ ಮಹಿಳೆಯ ವಾದವನ್ನು ಒಪ್ಪಿಲ್ಲ. ಯಾವುದೇ ಮಾತುಕತೆಗಳು ಇಲ್ಲದೆ, ತಕ್ಷಣ ತಲಾಖ್ ನೀಡುವುದನ್ನು ಮಾತ್ರ ನಿಷೇಧಿಸಲಾಗಿದೆ. ಅರ್ಜಿದಾರರು ವಿಚಾರಣೆ ಎದುರಿಸಬೇಕು ಎಂದು ಸೂಚಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ. ಆದ್ದರಿಂದ ವಿಚಾರಣೆ ಮತ್ತು ಎಫ್‌ಐಆರ್‌ ರದ್ದುಗೊಳಿಸಲಾಗುತ್ತಿದೆ ಎಂದಿದೆ.

ಪಹಲ್ಗಾಮ್ ದಾಳಿ | ಸರ್ವಪಕ್ಷ ಸಭೆಯಿಂದ ಸಣ್ಣ ಪಕ್ಷಗಳನ್ನು ಕೈಬಿಟ್ಟ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿದ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...