Homeಮುಖಪುಟ'ನಿಷೇಧಿಸಿರುವುದು ದಿಢೀರ್ ತ್ರಿವಳಿ ತಲಾಖ್ ಮಾತ್ರ, ತಲಾಖ್-ಇ-ಅಹ್ಸಾನ್ ಅಲ್ಲ': ಬಾಂಬೆ ಹೈಕೋರ್ಟ್

‘ನಿಷೇಧಿಸಿರುವುದು ದಿಢೀರ್ ತ್ರಿವಳಿ ತಲಾಖ್ ಮಾತ್ರ, ತಲಾಖ್-ಇ-ಅಹ್ಸಾನ್ ಅಲ್ಲ’: ಬಾಂಬೆ ಹೈಕೋರ್ಟ್

- Advertisement -
- Advertisement -

ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆ-2019 ‘ತಲಾಖ್-ಇ-ಬಿದತ್’ ಹೆಸರಿನ ದಿಢೀರ್‌ ಮತ್ತು ಬದಲಿಸಲಾಗದ ವಿಚ್ಛೇದನ ನೀಡುವ ಪದ್ದತಿಗೆ ಮಾತ್ರ ಅನ್ವಯಿಸುತ್ತದೆ, ಅಲ್ಲದೆ ಇಸ್ಲಾಂನಲ್ಲಿ ‘ತಲಾಖ್-ಇ-ಅಹ್ಸಾನ್’ ಎಂದು ಕರೆಯಲಾಗುವ ಸಾಂಪ್ರಾದಯಿಕ ವಿಚ್ಛೇದನಕ್ಕೆ ಅಲ್ಲ ಎಂದು ಬಾಂಬೆ ಹೈಕೋರ್ಟ್‌ ಬುಧವಾರ (ಏ.23) ಸ್ಪಷ್ಟಪಡಿಸಿರುವುದಾಗಿ barandbench.com ವರದಿ ಮಾಡಿದೆ.

ದಿಢೀರ್ ತ್ರಿವಳಿ ತಲಾಖ್ ನಿಷೇಧಿಸುವ ಕಾಯ್ದೆಯಡಿ ಮುಸ್ಲಿಂ ವ್ಯಕ್ತಿ ಮತ್ತು ಅವರ ಪೋಷಕರ ವಿರುದ್ಧ ದಾಖಲಾಗಿದ್ದ ಪೊಲೀಸ್ ಪ್ರಕರಣವನ್ನು ರದ್ದುಗೊಳಿಸುವಾಗ ನ್ಯಾಯಾಲಯ ಈ ಹೇಳಿಕೆ ನೀಡಿದೆ.

ತಲಾಖ್-ಎ-ಅಹ್ಸಾನ್ ವಿಧಾನವನ್ನು ಅನುಸರಿಸಿ ಗಂಡ ತನ್ನ ಹೆಂಡತಿಗೆ ವಿಚ್ಛೇದನ ನೀಡಿದ್ದರು. ಈ ವಿಧಾನದಡಿಯಲ್ಲಿ ತಲಾಖ್ ಅನ್ನು ಒಮ್ಮೆ ಉಚ್ಚರಿಸಲಾಗುತ್ತದೆ ಮತ್ತು ವಿಚ್ಛೇದನ ಜಾರಿಗೆ ಬರಲು 90 ದಿನಗಳ ಕಾಯುವ ಅವಧಿ ಇರುತ್ತದೆ. ಇಸ್ಲಾಮಿಕ್ ಕಾನೂನಿನಡಿಯ ಈ ವಿಚ್ಛೇದನ ಮಾರ್ಗವು ಇನ್ನೂ ಕಾನೂನು ಬದ್ದವಾಗಿ ಇದೆ.

ತಲಾಖ್-ಎ-ಅಹ್ಸಾನ್ ವಿಧಾನದಲ್ಲಿ ವಿಚ್ಛೇದ ನೀಡಿದ್ದ ವ್ಯಕ್ತಿ ಮತ್ತು ಅವರ ಪೋಷಕರ ಮೇಲೆ 2019ರ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆಂದು ಆರೋಪಿಸಿ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದರು.

ನ್ಯಾಯಮೂರ್ತಿ ವಿಭಾ ಕಂಕಣವಾಡಿ ಮತ್ತು ನ್ಯಾಯಮೂರ್ತಿ ಸಂಜಯ್ ದೇಶಮುಖ್ ಅವರಿದ್ದ ಪೀಠವು, ಈ ಪ್ರಕರಣದ ವಿಚ್ಛೇದನದ ರೂಪವು ನಿಷೇಧಿತ ವರ್ಗದ ಅಡಿಯಲ್ಲಿ ಬರುವುದಿಲ್ಲ ಎಂದು ಹೇಳಿದೆ.

ಪ್ರಕರಣದಲ್ಲಿ, ದಂಪತಿ 2022ರಲ್ಲಿ ವಿವಾಹವಾಗಿದ್ದರು. ಬಳಿಕ ಕೆಲ ತಿಂಗಳುಗಳ ಕಾಲ ಭಾರತದ ವಿವಿಧ ನಗರಗಳಲ್ಲಿ ಒಟ್ಟಿಗೆ ವಾಸವಿದ್ದರು. ವೈವಾಹಿಕ ಭಿನ್ನಾಭಿಪ್ರಾಯಗಳನ್ನು ಉಂಟಾದ ನಂತರ, ಪತಿ ಡಿಸೆಂಬರ್ 2023ರಲ್ಲಿ ಸಾಕ್ಷಿಗಳ ಸಮ್ಮುಖದಲ್ಲಿ ಒಂದು ಬಾರಿ ತಲಾಖ್ ಎಂದು ಉಚ್ಚರಿಸಿದ್ದರು. ಅದನ್ನು ಅನುಸರಿಸಿ ಔಪಚಾರಿಕ ನೋಟಿಸ್ ನೀಡಿದ್ದರು.

90 ದಿನಗಳ ಕಾಯುವ ಅವಧಿಯಲ್ಲಿ ದಂಪತಿ ಮತ್ತೆ ಒಂದಾಗಲು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ವಿಚ್ಛೇದನವು ಊರ್ಜಿತವಾಗಿತ್ತು.

ಆದರೆ, ವಿಚ್ಛೇದಿತ ಮಹಿಳೆ ಜಲಗಾಂವ್‌ನ ಭೂಸಾವಲ್ ಬಜಾರ್ ಪೇಠ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. 2019ರ ಕಾಯ್ದೆಯಡಿಯಲ್ಲಿ ವಿಚ್ಛೇದನವು ಕಾನೂನುಬಾಹಿರವಾಗಿದೆ. ತನ್ನ ಅತ್ತೆ ಮಾವ ಕೂಡ ನನಗೆ ತಲಾಖ್ ನೀಡಿರುವುದನ್ನು ಬೆಂಬಲಿಸಿದ್ದಾರೆ. ಅವರನ್ನೂ ಕೂಡ ತಪ್ಪಿತಸ್ಥರನ್ನಾಗಿ ಮಾಡಬೇಕು ಎಂದು ಆಗ್ರಹಿಸಿದ್ದರು.

ತಲಾಖ್-ಎ-ಅಹ್ಸಾನ್ ವಿಧಾನವನ್ನು ತಾನು ಅನುಸರಿಸಿದ್ದೇನೆ ಎಂದು ಮಹಿಳೆಯ ವಿಚ್ಛೇದಿತ ಪತಿ ನ್ಯಾಯಾಲಯದಲ್ಲಿ ವಾದಿಸಿದ್ದರು. ಇದು ತಲಾಖ್-ಎ-ಬಿದತ್ (ದಿಢೀರ್ ತ್ರಿವಳಿ ತಲಾಖ್) ನಂತೆ ಅಲ್ಲ. ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ತಲಾಖ್-ಎ-ಅಹ್ಸಾನ್ ಅನ್ನು ಮಾನ್ಯ ಮತ್ತು ಅಂಗೀಕೃತ ವಿಚ್ಛೇದನದ ರೂಪವೆಂದು ಗುರುತಿಸಿದ ಹಿಂದಿನ ನ್ಯಾಯಾಲಯದ ತೀರ್ಪುಗಳನ್ನು ಅವರ ವಕೀಲರು ಉಲ್ಲೇಖಿಸಿದ್ದರು. ಈ ನಿರ್ಧಾರದಲ್ಲಿ ನಮ್ಮದು ಯಾವುದೇ ಪಾತ್ರವಿಲ್ಲ ಎಂದು ಅತ್ತೆ-ಮಾವ ಹೇಳಿದ್ದರು.

ತಲಾಖ್-ಎ-ಅಹ್ಸಾನ್ ಮೂಲಕ ವಿಚ್ಛೇಧನ ನೀಡಿದ್ದರೂ, ಅದನ್ನು ವಾಪಸ್ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ, ಇದು 2019ರ ಕಾನೂನಿನ ಉಲ್ಲಂಘಣೆಯಾಗಿದೆ ಎಂದು ಮಹಿಳೆ ವಾದಿಸಿದ್ದರು.

ಆದರೆ, ಹೈಕೋರ್ಟ್ ಮಹಿಳೆಯ ವಾದವನ್ನು ಒಪ್ಪಿಲ್ಲ. ಯಾವುದೇ ಮಾತುಕತೆಗಳು ಇಲ್ಲದೆ, ತಕ್ಷಣ ತಲಾಖ್ ನೀಡುವುದನ್ನು ಮಾತ್ರ ನಿಷೇಧಿಸಲಾಗಿದೆ. ಅರ್ಜಿದಾರರು ವಿಚಾರಣೆ ಎದುರಿಸಬೇಕು ಎಂದು ಸೂಚಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ. ಆದ್ದರಿಂದ ವಿಚಾರಣೆ ಮತ್ತು ಎಫ್‌ಐಆರ್‌ ರದ್ದುಗೊಳಿಸಲಾಗುತ್ತಿದೆ ಎಂದಿದೆ.

ಪಹಲ್ಗಾಮ್ ದಾಳಿ | ಸರ್ವಪಕ್ಷ ಸಭೆಯಿಂದ ಸಣ್ಣ ಪಕ್ಷಗಳನ್ನು ಕೈಬಿಟ್ಟ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿದ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...