Homeಮುಖಪುಟ'ನಿಷೇಧಿಸಿರುವುದು ದಿಢೀರ್ ತ್ರಿವಳಿ ತಲಾಖ್ ಮಾತ್ರ, ತಲಾಖ್-ಇ-ಅಹ್ಸಾನ್ ಅಲ್ಲ': ಬಾಂಬೆ ಹೈಕೋರ್ಟ್

‘ನಿಷೇಧಿಸಿರುವುದು ದಿಢೀರ್ ತ್ರಿವಳಿ ತಲಾಖ್ ಮಾತ್ರ, ತಲಾಖ್-ಇ-ಅಹ್ಸಾನ್ ಅಲ್ಲ’: ಬಾಂಬೆ ಹೈಕೋರ್ಟ್

- Advertisement -
- Advertisement -

ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆ-2019 ‘ತಲಾಖ್-ಇ-ಬಿದತ್’ ಹೆಸರಿನ ದಿಢೀರ್‌ ಮತ್ತು ಬದಲಿಸಲಾಗದ ವಿಚ್ಛೇದನ ನೀಡುವ ಪದ್ದತಿಗೆ ಮಾತ್ರ ಅನ್ವಯಿಸುತ್ತದೆ, ಅಲ್ಲದೆ ಇಸ್ಲಾಂನಲ್ಲಿ ‘ತಲಾಖ್-ಇ-ಅಹ್ಸಾನ್’ ಎಂದು ಕರೆಯಲಾಗುವ ಸಾಂಪ್ರಾದಯಿಕ ವಿಚ್ಛೇದನಕ್ಕೆ ಅಲ್ಲ ಎಂದು ಬಾಂಬೆ ಹೈಕೋರ್ಟ್‌ ಬುಧವಾರ (ಏ.23) ಸ್ಪಷ್ಟಪಡಿಸಿರುವುದಾಗಿ barandbench.com ವರದಿ ಮಾಡಿದೆ.

ದಿಢೀರ್ ತ್ರಿವಳಿ ತಲಾಖ್ ನಿಷೇಧಿಸುವ ಕಾಯ್ದೆಯಡಿ ಮುಸ್ಲಿಂ ವ್ಯಕ್ತಿ ಮತ್ತು ಅವರ ಪೋಷಕರ ವಿರುದ್ಧ ದಾಖಲಾಗಿದ್ದ ಪೊಲೀಸ್ ಪ್ರಕರಣವನ್ನು ರದ್ದುಗೊಳಿಸುವಾಗ ನ್ಯಾಯಾಲಯ ಈ ಹೇಳಿಕೆ ನೀಡಿದೆ.

ತಲಾಖ್-ಎ-ಅಹ್ಸಾನ್ ವಿಧಾನವನ್ನು ಅನುಸರಿಸಿ ಗಂಡ ತನ್ನ ಹೆಂಡತಿಗೆ ವಿಚ್ಛೇದನ ನೀಡಿದ್ದರು. ಈ ವಿಧಾನದಡಿಯಲ್ಲಿ ತಲಾಖ್ ಅನ್ನು ಒಮ್ಮೆ ಉಚ್ಚರಿಸಲಾಗುತ್ತದೆ ಮತ್ತು ವಿಚ್ಛೇದನ ಜಾರಿಗೆ ಬರಲು 90 ದಿನಗಳ ಕಾಯುವ ಅವಧಿ ಇರುತ್ತದೆ. ಇಸ್ಲಾಮಿಕ್ ಕಾನೂನಿನಡಿಯ ಈ ವಿಚ್ಛೇದನ ಮಾರ್ಗವು ಇನ್ನೂ ಕಾನೂನು ಬದ್ದವಾಗಿ ಇದೆ.

ತಲಾಖ್-ಎ-ಅಹ್ಸಾನ್ ವಿಧಾನದಲ್ಲಿ ವಿಚ್ಛೇದ ನೀಡಿದ್ದ ವ್ಯಕ್ತಿ ಮತ್ತು ಅವರ ಪೋಷಕರ ಮೇಲೆ 2019ರ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆಂದು ಆರೋಪಿಸಿ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದರು.

ನ್ಯಾಯಮೂರ್ತಿ ವಿಭಾ ಕಂಕಣವಾಡಿ ಮತ್ತು ನ್ಯಾಯಮೂರ್ತಿ ಸಂಜಯ್ ದೇಶಮುಖ್ ಅವರಿದ್ದ ಪೀಠವು, ಈ ಪ್ರಕರಣದ ವಿಚ್ಛೇದನದ ರೂಪವು ನಿಷೇಧಿತ ವರ್ಗದ ಅಡಿಯಲ್ಲಿ ಬರುವುದಿಲ್ಲ ಎಂದು ಹೇಳಿದೆ.

ಪ್ರಕರಣದಲ್ಲಿ, ದಂಪತಿ 2022ರಲ್ಲಿ ವಿವಾಹವಾಗಿದ್ದರು. ಬಳಿಕ ಕೆಲ ತಿಂಗಳುಗಳ ಕಾಲ ಭಾರತದ ವಿವಿಧ ನಗರಗಳಲ್ಲಿ ಒಟ್ಟಿಗೆ ವಾಸವಿದ್ದರು. ವೈವಾಹಿಕ ಭಿನ್ನಾಭಿಪ್ರಾಯಗಳನ್ನು ಉಂಟಾದ ನಂತರ, ಪತಿ ಡಿಸೆಂಬರ್ 2023ರಲ್ಲಿ ಸಾಕ್ಷಿಗಳ ಸಮ್ಮುಖದಲ್ಲಿ ಒಂದು ಬಾರಿ ತಲಾಖ್ ಎಂದು ಉಚ್ಚರಿಸಿದ್ದರು. ಅದನ್ನು ಅನುಸರಿಸಿ ಔಪಚಾರಿಕ ನೋಟಿಸ್ ನೀಡಿದ್ದರು.

90 ದಿನಗಳ ಕಾಯುವ ಅವಧಿಯಲ್ಲಿ ದಂಪತಿ ಮತ್ತೆ ಒಂದಾಗಲು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ವಿಚ್ಛೇದನವು ಊರ್ಜಿತವಾಗಿತ್ತು.

ಆದರೆ, ವಿಚ್ಛೇದಿತ ಮಹಿಳೆ ಜಲಗಾಂವ್‌ನ ಭೂಸಾವಲ್ ಬಜಾರ್ ಪೇಠ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. 2019ರ ಕಾಯ್ದೆಯಡಿಯಲ್ಲಿ ವಿಚ್ಛೇದನವು ಕಾನೂನುಬಾಹಿರವಾಗಿದೆ. ತನ್ನ ಅತ್ತೆ ಮಾವ ಕೂಡ ನನಗೆ ತಲಾಖ್ ನೀಡಿರುವುದನ್ನು ಬೆಂಬಲಿಸಿದ್ದಾರೆ. ಅವರನ್ನೂ ಕೂಡ ತಪ್ಪಿತಸ್ಥರನ್ನಾಗಿ ಮಾಡಬೇಕು ಎಂದು ಆಗ್ರಹಿಸಿದ್ದರು.

ತಲಾಖ್-ಎ-ಅಹ್ಸಾನ್ ವಿಧಾನವನ್ನು ತಾನು ಅನುಸರಿಸಿದ್ದೇನೆ ಎಂದು ಮಹಿಳೆಯ ವಿಚ್ಛೇದಿತ ಪತಿ ನ್ಯಾಯಾಲಯದಲ್ಲಿ ವಾದಿಸಿದ್ದರು. ಇದು ತಲಾಖ್-ಎ-ಬಿದತ್ (ದಿಢೀರ್ ತ್ರಿವಳಿ ತಲಾಖ್) ನಂತೆ ಅಲ್ಲ. ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ತಲಾಖ್-ಎ-ಅಹ್ಸಾನ್ ಅನ್ನು ಮಾನ್ಯ ಮತ್ತು ಅಂಗೀಕೃತ ವಿಚ್ಛೇದನದ ರೂಪವೆಂದು ಗುರುತಿಸಿದ ಹಿಂದಿನ ನ್ಯಾಯಾಲಯದ ತೀರ್ಪುಗಳನ್ನು ಅವರ ವಕೀಲರು ಉಲ್ಲೇಖಿಸಿದ್ದರು. ಈ ನಿರ್ಧಾರದಲ್ಲಿ ನಮ್ಮದು ಯಾವುದೇ ಪಾತ್ರವಿಲ್ಲ ಎಂದು ಅತ್ತೆ-ಮಾವ ಹೇಳಿದ್ದರು.

ತಲಾಖ್-ಎ-ಅಹ್ಸಾನ್ ಮೂಲಕ ವಿಚ್ಛೇಧನ ನೀಡಿದ್ದರೂ, ಅದನ್ನು ವಾಪಸ್ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ, ಇದು 2019ರ ಕಾನೂನಿನ ಉಲ್ಲಂಘಣೆಯಾಗಿದೆ ಎಂದು ಮಹಿಳೆ ವಾದಿಸಿದ್ದರು.

ಆದರೆ, ಹೈಕೋರ್ಟ್ ಮಹಿಳೆಯ ವಾದವನ್ನು ಒಪ್ಪಿಲ್ಲ. ಯಾವುದೇ ಮಾತುಕತೆಗಳು ಇಲ್ಲದೆ, ತಕ್ಷಣ ತಲಾಖ್ ನೀಡುವುದನ್ನು ಮಾತ್ರ ನಿಷೇಧಿಸಲಾಗಿದೆ. ಅರ್ಜಿದಾರರು ವಿಚಾರಣೆ ಎದುರಿಸಬೇಕು ಎಂದು ಸೂಚಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ. ಆದ್ದರಿಂದ ವಿಚಾರಣೆ ಮತ್ತು ಎಫ್‌ಐಆರ್‌ ರದ್ದುಗೊಳಿಸಲಾಗುತ್ತಿದೆ ಎಂದಿದೆ.

ಪಹಲ್ಗಾಮ್ ದಾಳಿ | ಸರ್ವಪಕ್ಷ ಸಭೆಯಿಂದ ಸಣ್ಣ ಪಕ್ಷಗಳನ್ನು ಕೈಬಿಟ್ಟ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿದ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...