Homeಮುಖಪುಟ'ನಿಷೇಧಿಸಿರುವುದು ದಿಢೀರ್ ತ್ರಿವಳಿ ತಲಾಖ್ ಮಾತ್ರ, ತಲಾಖ್-ಇ-ಅಹ್ಸಾನ್ ಅಲ್ಲ': ಬಾಂಬೆ ಹೈಕೋರ್ಟ್

‘ನಿಷೇಧಿಸಿರುವುದು ದಿಢೀರ್ ತ್ರಿವಳಿ ತಲಾಖ್ ಮಾತ್ರ, ತಲಾಖ್-ಇ-ಅಹ್ಸಾನ್ ಅಲ್ಲ’: ಬಾಂಬೆ ಹೈಕೋರ್ಟ್

- Advertisement -
- Advertisement -

ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆ-2019 ‘ತಲಾಖ್-ಇ-ಬಿದತ್’ ಹೆಸರಿನ ದಿಢೀರ್‌ ಮತ್ತು ಬದಲಿಸಲಾಗದ ವಿಚ್ಛೇದನ ನೀಡುವ ಪದ್ದತಿಗೆ ಮಾತ್ರ ಅನ್ವಯಿಸುತ್ತದೆ, ಅಲ್ಲದೆ ಇಸ್ಲಾಂನಲ್ಲಿ ‘ತಲಾಖ್-ಇ-ಅಹ್ಸಾನ್’ ಎಂದು ಕರೆಯಲಾಗುವ ಸಾಂಪ್ರಾದಯಿಕ ವಿಚ್ಛೇದನಕ್ಕೆ ಅಲ್ಲ ಎಂದು ಬಾಂಬೆ ಹೈಕೋರ್ಟ್‌ ಬುಧವಾರ (ಏ.23) ಸ್ಪಷ್ಟಪಡಿಸಿರುವುದಾಗಿ barandbench.com ವರದಿ ಮಾಡಿದೆ.

ದಿಢೀರ್ ತ್ರಿವಳಿ ತಲಾಖ್ ನಿಷೇಧಿಸುವ ಕಾಯ್ದೆಯಡಿ ಮುಸ್ಲಿಂ ವ್ಯಕ್ತಿ ಮತ್ತು ಅವರ ಪೋಷಕರ ವಿರುದ್ಧ ದಾಖಲಾಗಿದ್ದ ಪೊಲೀಸ್ ಪ್ರಕರಣವನ್ನು ರದ್ದುಗೊಳಿಸುವಾಗ ನ್ಯಾಯಾಲಯ ಈ ಹೇಳಿಕೆ ನೀಡಿದೆ.

ತಲಾಖ್-ಎ-ಅಹ್ಸಾನ್ ವಿಧಾನವನ್ನು ಅನುಸರಿಸಿ ಗಂಡ ತನ್ನ ಹೆಂಡತಿಗೆ ವಿಚ್ಛೇದನ ನೀಡಿದ್ದರು. ಈ ವಿಧಾನದಡಿಯಲ್ಲಿ ತಲಾಖ್ ಅನ್ನು ಒಮ್ಮೆ ಉಚ್ಚರಿಸಲಾಗುತ್ತದೆ ಮತ್ತು ವಿಚ್ಛೇದನ ಜಾರಿಗೆ ಬರಲು 90 ದಿನಗಳ ಕಾಯುವ ಅವಧಿ ಇರುತ್ತದೆ. ಇಸ್ಲಾಮಿಕ್ ಕಾನೂನಿನಡಿಯ ಈ ವಿಚ್ಛೇದನ ಮಾರ್ಗವು ಇನ್ನೂ ಕಾನೂನು ಬದ್ದವಾಗಿ ಇದೆ.

ತಲಾಖ್-ಎ-ಅಹ್ಸಾನ್ ವಿಧಾನದಲ್ಲಿ ವಿಚ್ಛೇದ ನೀಡಿದ್ದ ವ್ಯಕ್ತಿ ಮತ್ತು ಅವರ ಪೋಷಕರ ಮೇಲೆ 2019ರ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆಂದು ಆರೋಪಿಸಿ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದರು.

ನ್ಯಾಯಮೂರ್ತಿ ವಿಭಾ ಕಂಕಣವಾಡಿ ಮತ್ತು ನ್ಯಾಯಮೂರ್ತಿ ಸಂಜಯ್ ದೇಶಮುಖ್ ಅವರಿದ್ದ ಪೀಠವು, ಈ ಪ್ರಕರಣದ ವಿಚ್ಛೇದನದ ರೂಪವು ನಿಷೇಧಿತ ವರ್ಗದ ಅಡಿಯಲ್ಲಿ ಬರುವುದಿಲ್ಲ ಎಂದು ಹೇಳಿದೆ.

ಪ್ರಕರಣದಲ್ಲಿ, ದಂಪತಿ 2022ರಲ್ಲಿ ವಿವಾಹವಾಗಿದ್ದರು. ಬಳಿಕ ಕೆಲ ತಿಂಗಳುಗಳ ಕಾಲ ಭಾರತದ ವಿವಿಧ ನಗರಗಳಲ್ಲಿ ಒಟ್ಟಿಗೆ ವಾಸವಿದ್ದರು. ವೈವಾಹಿಕ ಭಿನ್ನಾಭಿಪ್ರಾಯಗಳನ್ನು ಉಂಟಾದ ನಂತರ, ಪತಿ ಡಿಸೆಂಬರ್ 2023ರಲ್ಲಿ ಸಾಕ್ಷಿಗಳ ಸಮ್ಮುಖದಲ್ಲಿ ಒಂದು ಬಾರಿ ತಲಾಖ್ ಎಂದು ಉಚ್ಚರಿಸಿದ್ದರು. ಅದನ್ನು ಅನುಸರಿಸಿ ಔಪಚಾರಿಕ ನೋಟಿಸ್ ನೀಡಿದ್ದರು.

90 ದಿನಗಳ ಕಾಯುವ ಅವಧಿಯಲ್ಲಿ ದಂಪತಿ ಮತ್ತೆ ಒಂದಾಗಲು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ವಿಚ್ಛೇದನವು ಊರ್ಜಿತವಾಗಿತ್ತು.

ಆದರೆ, ವಿಚ್ಛೇದಿತ ಮಹಿಳೆ ಜಲಗಾಂವ್‌ನ ಭೂಸಾವಲ್ ಬಜಾರ್ ಪೇಠ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. 2019ರ ಕಾಯ್ದೆಯಡಿಯಲ್ಲಿ ವಿಚ್ಛೇದನವು ಕಾನೂನುಬಾಹಿರವಾಗಿದೆ. ತನ್ನ ಅತ್ತೆ ಮಾವ ಕೂಡ ನನಗೆ ತಲಾಖ್ ನೀಡಿರುವುದನ್ನು ಬೆಂಬಲಿಸಿದ್ದಾರೆ. ಅವರನ್ನೂ ಕೂಡ ತಪ್ಪಿತಸ್ಥರನ್ನಾಗಿ ಮಾಡಬೇಕು ಎಂದು ಆಗ್ರಹಿಸಿದ್ದರು.

ತಲಾಖ್-ಎ-ಅಹ್ಸಾನ್ ವಿಧಾನವನ್ನು ತಾನು ಅನುಸರಿಸಿದ್ದೇನೆ ಎಂದು ಮಹಿಳೆಯ ವಿಚ್ಛೇದಿತ ಪತಿ ನ್ಯಾಯಾಲಯದಲ್ಲಿ ವಾದಿಸಿದ್ದರು. ಇದು ತಲಾಖ್-ಎ-ಬಿದತ್ (ದಿಢೀರ್ ತ್ರಿವಳಿ ತಲಾಖ್) ನಂತೆ ಅಲ್ಲ. ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ತಲಾಖ್-ಎ-ಅಹ್ಸಾನ್ ಅನ್ನು ಮಾನ್ಯ ಮತ್ತು ಅಂಗೀಕೃತ ವಿಚ್ಛೇದನದ ರೂಪವೆಂದು ಗುರುತಿಸಿದ ಹಿಂದಿನ ನ್ಯಾಯಾಲಯದ ತೀರ್ಪುಗಳನ್ನು ಅವರ ವಕೀಲರು ಉಲ್ಲೇಖಿಸಿದ್ದರು. ಈ ನಿರ್ಧಾರದಲ್ಲಿ ನಮ್ಮದು ಯಾವುದೇ ಪಾತ್ರವಿಲ್ಲ ಎಂದು ಅತ್ತೆ-ಮಾವ ಹೇಳಿದ್ದರು.

ತಲಾಖ್-ಎ-ಅಹ್ಸಾನ್ ಮೂಲಕ ವಿಚ್ಛೇಧನ ನೀಡಿದ್ದರೂ, ಅದನ್ನು ವಾಪಸ್ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ, ಇದು 2019ರ ಕಾನೂನಿನ ಉಲ್ಲಂಘಣೆಯಾಗಿದೆ ಎಂದು ಮಹಿಳೆ ವಾದಿಸಿದ್ದರು.

ಆದರೆ, ಹೈಕೋರ್ಟ್ ಮಹಿಳೆಯ ವಾದವನ್ನು ಒಪ್ಪಿಲ್ಲ. ಯಾವುದೇ ಮಾತುಕತೆಗಳು ಇಲ್ಲದೆ, ತಕ್ಷಣ ತಲಾಖ್ ನೀಡುವುದನ್ನು ಮಾತ್ರ ನಿಷೇಧಿಸಲಾಗಿದೆ. ಅರ್ಜಿದಾರರು ವಿಚಾರಣೆ ಎದುರಿಸಬೇಕು ಎಂದು ಸೂಚಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ. ಆದ್ದರಿಂದ ವಿಚಾರಣೆ ಮತ್ತು ಎಫ್‌ಐಆರ್‌ ರದ್ದುಗೊಳಿಸಲಾಗುತ್ತಿದೆ ಎಂದಿದೆ.

ಪಹಲ್ಗಾಮ್ ದಾಳಿ | ಸರ್ವಪಕ್ಷ ಸಭೆಯಿಂದ ಸಣ್ಣ ಪಕ್ಷಗಳನ್ನು ಕೈಬಿಟ್ಟ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿದ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...