Homeಮುಖಪುಟ'ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ'..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

- Advertisement -
- Advertisement -

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ.

ಚುನಾವಣಾ ಪ್ರಚಾರದ ಭಾಗವಾಗಿ ಗೋಪಾಲಕೃಷ್ಣನ್ ಕ್ಷೇತ್ರದಲ್ಲಿ ಬೃಹತ್ ಹೋರ್ಡಿಂಗ್ಸ್ ಹಾಕಿಸಿದ್ದು, ಅದರಲ್ಲಿ 1977ರಿಂದ ಇಲ್ಲಿಯವರೆ ಕ್ಷೇತ್ರದ ಶಾಸಕರಾದವರ ಹೆಸರನ್ನು ಹಾಕಲಾಗಿದೆ. “ನೀವು ಗಮನಿಸಿಲ್ವಾ..? 50 ವರ್ಷಗಳ ನಿರ್ಲಕ್ಷ್ಯ, ಇದು ಬದಲಾಗಬೇಕು. ಬದಲಾವಣೆಗಾಗಿ ಬಿ. ಗೋಪಾಲಕೃಷ್ಣನ್ ಅವರನ್ನು ಬೆಂಬಲಿಸಿ” ಎಂದು ಬರೆಯಲಾಗಿದೆ.

ಈ ಹೋರ್ಡಿಂಗ್ಸ್ ಮೂಲಕ ಗೋಪಾಲಕೃಷ್ಣನ್ ಅವರು, ಇದುವರೆಗೆ ಕ್ಷೇತ್ರದಲ್ಲಿ ಬರೀ ಮುಸ್ಲಿಮರೇ ಶಾಸಕರಾಗಿದ್ದಾರೆ. ಈ ಬಾರಿ ಹಿಂದೂವನ್ನು ಶಾಸಕನನ್ನಾಗಿ ಮಾಡಿ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಮುಸ್ಲಿಮರು ಶಾಸಕರಾಗಿರುವುದೇ ದೊಡ್ಡ ತಪ್ಪು ಅಥವಾ ಅಪಾಯ ಎಂಬಂತೆ ಬಿಂಬಿಸಿದ್ದಾರೆ.

ಹೋರ್ಡಿಂಗ್ಸ್‌ನಲ್ಲಿ ಯಾವುದೇ ಧರ್ಮವನ್ನು ನೇರವಾಗಿ ಉಲ್ಲೇಖಿಸಿಲ್ಲ. ಆದರೂ, ಬರೀ ಮುಸ್ಲಿಂ ಶಾಸಕರ ಹೆಸರುಗಳೇ ಇರುವುದರಿಂದ ಅದನ್ನು ಬಿಡಿಸಿ ಹೇಳುವ ಅಗತ್ಯ ಇಲ್ಲ. ಕೋಮು ಆಧಾರದ ಮೇಲೆ ಜನರನ್ನು ವಿಭಜಿಸಿ ಮತ ಪಡೆಯಲು ಗೋಪಾಲಕೃಷ್ಣನ್ ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿದೆ.

ಈ ಹಿಂದಿನ ಗೋಪಾಲಕೃಷ್ಣನ್ ಅವರ ಹೇಳಿಕೆಗಳು ಇಸ್ಲಾಮೋಫೋಬಿಕ್ ಆಗಿದ್ದರಿಂದ, ಈಗ ಅವರು ಹಾಕಿರುವ ಹೋರ್ಡಿಂಗ್ಸ್ ಕೂಡ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.

ಈ ಹಿಂದೆ, ಗೋಪಾಲಕೃಷ್ಣನ್ ಅವರು, ಗುರುವಾಯೂರು ಕಳೆದ 50 ವರ್ಷಗಳಲ್ಲಿ ಹಿಂದೂ ಶಾಸಕರನ್ನು ಆಯ್ಕೆ ಮಾಡಿಲ್ಲ ಎಂದು ಹೇಳಿದ್ದರು. ಗುರುವಾಯೂರಿನಂತಹ ರಾಷ್ಟ್ರೀಯ ಯಾತ್ರಾ ಕೇಂದ್ರವನ್ನು ಹಿಂದೂ ಶಾಸಕರು ಏಕೆ ಪ್ರತಿನಿಧಿಸಿಲ್ಲ ಎಂದು ಅವರು ಪ್ರಶ್ನಿಸಿದ್ದರು. ಎಲ್‌ಡಿಎಫ್ ಮತ್ತು ಯುಡಿಎಫ್ ಹಿಂದೂ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ ಎಂದು ಆರೋಪಿಸಿದ್ದರು.

ಈ ಹೇಳಿಕೆಗೆ ಸಂಬಂಧಿಸಿದಂತೆ ಗೋಪಾಲಕೃಷ್ಣನ್ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿತ್ತು. ಆಯೋಗ ದೂರನ್ನು ಗುರುವಾಯೂರು ದೇವಸ್ಥಾನ ಠಾಣೆ ಪೊಲೀಸರಿಗೆ ವರ್ಗಾಯಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು. ಪೊಲೀಸರು ಗೋಪಾಲಕೃಷ್ಣನ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 192 (ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು) ಮತ್ತು 1951ರ ಜನಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸೆಕ್ಷನ್ ಧರ್ಮದ ಆಧಾರದಲ್ಲಿ ದ್ವೇಷವನ್ನು ಹರಡುವುದಕ್ಕೆ ಸಂಬಂಧಿಸಿದೆ.

ಪ್ರಕರಣ ದಾಖಲಾಗಿದ್ದರೂ, ಗೋಪಾಲಕೃಷ್ಣನ್ ತಮ್ಮ ಕೋಮುವಾದಿ ಹೇಳಿಕೆಗಳನ್ನು ಮುಂದುವರಿಸಿದ್ದಾರೆ. ಗುರುವಾಯೂರು ದೇವಸ್ಥಾನವನ್ನು ಉಲ್ಲೇಖಿಸಿ ಕೋಮು ಧ್ರುವೀಕರಣದ ಹೇಳಿಕೆ ನೀಡುತ್ತಲೇ ಇದ್ದಾರೆ.

ಧಾರ್ಮಿಕ ನೆಲೆಯಲ್ಲಿ ಪ್ರಚಾರ ಮಾಡುವ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ, ಅವರು ತಮ್ಮ ಹೇಳಿಕೆಗಳಿಗೆ ಬದ್ಧರಾಗಿದ್ದೇನೆ ಎಂದಿದ್ದು, ಅವುಗಳನ್ನು ಪುನರಾವರ್ತಿಸುವುದಾಗಿಯೂ ತಿಳಿಸಿದ್ದಾರೆ.

ಗೋಪಾಲಕೃಷ್ಣನ್ ವಿರುದ್ಧ ಸಲ್ಲಿಸಲಾದ ದೂರನ್ನು ಪರಿಗಣಿಸುವಂತೆ ಮಾ.27ರಂದು ಕೇರಳ ಹೈಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು. ಕೇರಳ ವಿದ್ಯಾರ್ಥಿ ಒಕ್ಕೂಟದ (ಕೆಎಸ್‌ಯು) ನಾಯಕ ಗೋಕುಲ್ ಗುರುವಾಯೂರು ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಗೋಪಾಲಕೃಷ್ಣನ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಎಲ್‌ಡಿಎಫ್ ಅಭ್ಯರ್ಥಿ ಎನ್.ಕೆ. ಅಕ್ಬರ್, ದೇಶದಲ್ಲಿ ಎಲ್‌ಪಿಜಿ ಕೊರತೆಯಂತಹ ವಿಷಯಗಳ ಕುರಿತು ಟೀಕೆಗಳನ್ನು ಎದುರಿಸುತ್ತಿರುವ ಬಿಜೆಪಿ ಇಂತಹ ತಂತ್ರಗಳನ್ನು ಆಶ್ರಯಿಸುತ್ತಿದೆ ಎಂದಿದ್ದಾರೆ. ಯುಡಿಎಫ್ ಅಭ್ಯರ್ಥಿ ಪಿ.ಎಂ. ಸಾದಿಕಲಿ ಕೂಡ ಗೋಪಾಲಕೃಷ್ಣನ್ ಹೇಳಿಕೆಯನ್ನು ಟೀಕಿಸಿದ್ದು, ಚುನಾವಣೆಗೆ ಮುನ್ನ ಬಿಜೆಪಿ ಕೋಮು ವಿಭಜನೆಗೆ ಪ್ರಯತ್ನಿಸುತ್ತಿದೆ. ಆದರೆ, ಅದು ಕೇರಳದಲ್ಲಿ ಯಶಸ್ವಿಯಾಗುವುದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...