Homeಕರ್ನಾಟಕಅನರ್ಹ ಶಾಸಕರಿಗಿರುವುದು ಒಂದೇ ದಾರಿ- ವಿಧಾನಸಭೆ ವಿಸರ್ಜನೆ, ಆದರೆ ಯಡಿಯೂರಪ್ಪ ಒಪ್ಪುತ್ತಾರಾ?

ಅನರ್ಹ ಶಾಸಕರಿಗಿರುವುದು ಒಂದೇ ದಾರಿ- ವಿಧಾನಸಭೆ ವಿಸರ್ಜನೆ, ಆದರೆ ಯಡಿಯೂರಪ್ಪ ಒಪ್ಪುತ್ತಾರಾ?

- Advertisement -
- Advertisement -

ಅನರ್ಹ ಶಾಸಕರು ಈಗ ಇರುವುದು ಮೂರೇ ಜನ. ಆದರೆ, ಉಳಿದವರೂ ಅನರ್ಹರಾಗುವ ಸಾಧ್ಯತೆ ಇದ್ದೇ ಇದೆ. ಸ್ಪೀಕರ್ ರಮೇಶ್ ಕುಮಾರ್ ಅವರ ಆದೇಶದಂತೆ ಅವರು ಈಗ ಅನರ್ಹರಾಗುತ್ತಿರುವುದಷ್ಟೇ ಅಲ್ಲ, ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ, ಅಂದರೆ 2023ರವರೆಗೆ ಮತ್ತೆ ಚುನಾವಣೆಗೆ ನಿಲ್ಲುವಂತೆಯೂ ಇಲ್ಲ.

ಹೌದು, ಇದಕ್ಕೆ ಅವರಿಗೆ ಕೂಡಲೇ ಇರುವ ದಾರಿಯೆಂದರೆ ಸುಪ್ರೀಂಕೋರ್ಟಿಗೆ ಹೋಗುವುದು. ಆದರೆ ಸುಪ್ರೀಂಕೋರ್ಟು ಏನು ಹೇಳುತ್ತದೆಂದು ಊಹಿಸುವಂತಿಲ್ಲ. ಸ್ಪೀಕರ್ ಮಾತಾಡುತ್ತಿರುವ ಭಾಷೆ ಮತ್ತು ಕರ್ನಾಟಕದ ವಿಧಾನಸಭೆಯ ನಡಾವಳಿಗಳು ಪಕ್ಷಾಂತರ ನಿಷೇಧಕ್ಕೆ ಪ್ರೋತ್ಸಾಹ ಕೊಡುವುದು ನಾಚಿಕೆಗೇಡು ಎಂಬ ಸಂದೇಶವನ್ನು ಸಾರ್ವಜನಿಕವಾಗಿ ನೀಡಿಯಾಗಿದೆ. ಹಾಗಾಗಿಯೇ ವಾಚಾಮಗೋಚರವಾಗಿ ಆಡಳಿತ ಪಕ್ಷಗಳ ಸದಸ್ಯರು ಬಯ್ಯುತ್ತಿದ್ದರೂ, ಬಿಜೆಪಿಯ ಸದಸ್ಯರು ಬಾಯೇ ತೆರೆಯಲಿಲ್ಲ. ಗಲಾಟೆ ಆದರೆ ಅನಗತ್ಯವಾಗಿ ಸದನದ ಕಲಾಪ ಎಳೆಯಬಹುದು ಅಥವಾ ಗಲಾಟೆ ನೆಪದಲ್ಲಿ ಕೆಲವರನ್ನು ಅಮಾನತುಗೊಳಿಸಿದರೆ ಕಷ್ಟ ಎಂಬುದಷ್ಟೇ ಅದಕ್ಕೆ ಕಾರಣವಲ್ಲ.

ತಮ್ಮ ಆಪರೇಷನ್ ಕಮಲ ಎಂಬ ಅಸಹ್ಯವನ್ನು ಸಮರ್ಥಿಸಿಕೊಳ್ಳುವುದು ಬಿಜೆಪಿಗರಿಗೆ ಸುಲಭವಾಗಿರಲಿಲ್ಲ. ಹೀಗಿರುವಾಗ ಸುಪ್ರೀಂಕೋರ್ಟು ಅವರ ಸಮರ್ಥನೆಗೆ ಬರುತ್ತದೆ ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗದು. ಹಾಗಾಗಿ ಅನರ್ಹರಾಗಿರುವ ಮತ್ತು ಮುಂದೆ ಆಗಬಲ್ಲವರಿಗೆ ಇರುವುದು ಒಂದೇ ದಾರಿ. ಅದು ವಿಧಾನಸಭೆ ವಿಸರ್ಜನೆ ಆದರೆ ಮತ್ತೆ ಗೆದ್ದು ಬರುವುದು.

ಇದಕ್ಕೆ ವಿಸರ್ಜನೆಯೇ ಏಕಾಗಬೇಕು? ಏಕೆಂದರೆ ಅನರ್ಹತೆಗೊಂಡಿರುವುದು ಇಡೀ ಅವಧಿಗೆ. ಅಂದರೆ, ಒಂದು ವೇಳೆ ಮತ್ತೆ ಉಪಚುನಾವಣೆ ನಡೆದರೂ ಸ್ಪರ್ಧಿಸಬಾರದು ಎಂದಾಗಿಬಿಟ್ಟರೆ, ಬಿಜೆಪಿಯು ಅದೇ ಕ್ಷೇತ್ರದ ಬಿಜೆಪಿಯ ಸೋತ ಅಭ್ಯರ್ಥಿಗೆ ಟಿಕೆಟ್ ಕೊಡಲು ಮುಂದಾಗಬಹುದು. ಹಾಗೇನಾದರೂ ಆದರೆ, ಸದರಿ ಅನರ್ಹ ಶಾಸಕರಿಗೆ ಅದು ರಾಜಕೀಯ ಸಮಾಪ್ತಿಯಾಗಿಬಿಡುತ್ತದೆ.

ಆದರೆ, ಈಗಲೇ 76 ವರ್ಷವಾಗಿರುವುದರಿಂದ ಸಿಎಂ ಕುರ್ಚಿಯ ಕನಸಿಗೆ ಕಲ್ಲು ಹಾಕುತ್ತಿರುವ ಹೈಕಮ್ಯಾಂಡ್ ಮತ್ತೆ ಬಹುಮತ ಸಿಕ್ಕರೂ ತನ್ನನ್ನು ಮುಖ್ಯಮಂತ್ರಿ ಮಾಡದೇ ಹೋಗಬಹುದೆನ್ನುವ ಆತಂಕ ಯಡಿಯೂರಪ್ಪನವರದ್ದು. ಹೇಗೂ ಕೇಂದ್ರದಲ್ಲಿ ಅಧಿಕಾರ ಇರುವುದರಿಂದ ರಾಜ್ಯಪಾಲರಾಗಿ ಎಂದು ಹೇಳುವ ಸಾಧ್ಯತೆ ಇದೆ. ರಾಜ್ಯಪಾಲನಾಗಿ ಕೂರುವ ವ್ಯಕ್ತಿತ್ವ, ಮನಸ್ಥಿತಿ ಯಡಿಯೂರಪ್ಪನವರದ್ದಲ್ಲ. ಹಾಗಾಗಿ ವಿಧಾನಸಭೆ ವಿಸರ್ಜನೆಗೆ ಅವರು ಒಪ್ಪಲಿಕ್ಕಿಲ್ಲ.

ಒಟ್ಟಿನಲ್ಲಿ ಪಕ್ಕಾ ತ್ರಿಶಂಕು ಸ್ಥಿತಿ ಅನರ್ಹ ಶಾಸಕರಿಗೆ ಏರ್ಪಟ್ಟಿದೆ. ಇದು ಎಷ್ಟು ಬೇಗ ನಿವಾರಣೆಯಾಗಬಹುದು ಎಂಬುದನ್ನು ಯಾರೂ ಹೇಳುವ ಸ್ಥಿತಿಯಲ್ಲಿಲ್ಲ. ಈ ತ್ರಿಶಂಕು ಸ್ಥಿತಿ ಕೇವಲ ಅವರದ್ದಾಗಿರದೇ ರಾಜ್ಯ ಸರ್ಕಾರದ್ದು ಮತ್ತು ರಾಜ್ಯದ ಜನತೆಯದ್ದೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...