Homeಕರ್ನಾಟಕಅನರ್ಹ ಶಾಸಕರಿಗಿರುವುದು ಒಂದೇ ದಾರಿ- ವಿಧಾನಸಭೆ ವಿಸರ್ಜನೆ, ಆದರೆ ಯಡಿಯೂರಪ್ಪ ಒಪ್ಪುತ್ತಾರಾ?

ಅನರ್ಹ ಶಾಸಕರಿಗಿರುವುದು ಒಂದೇ ದಾರಿ- ವಿಧಾನಸಭೆ ವಿಸರ್ಜನೆ, ಆದರೆ ಯಡಿಯೂರಪ್ಪ ಒಪ್ಪುತ್ತಾರಾ?

- Advertisement -
- Advertisement -

ಅನರ್ಹ ಶಾಸಕರು ಈಗ ಇರುವುದು ಮೂರೇ ಜನ. ಆದರೆ, ಉಳಿದವರೂ ಅನರ್ಹರಾಗುವ ಸಾಧ್ಯತೆ ಇದ್ದೇ ಇದೆ. ಸ್ಪೀಕರ್ ರಮೇಶ್ ಕುಮಾರ್ ಅವರ ಆದೇಶದಂತೆ ಅವರು ಈಗ ಅನರ್ಹರಾಗುತ್ತಿರುವುದಷ್ಟೇ ಅಲ್ಲ, ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ, ಅಂದರೆ 2023ರವರೆಗೆ ಮತ್ತೆ ಚುನಾವಣೆಗೆ ನಿಲ್ಲುವಂತೆಯೂ ಇಲ್ಲ.

ಹೌದು, ಇದಕ್ಕೆ ಅವರಿಗೆ ಕೂಡಲೇ ಇರುವ ದಾರಿಯೆಂದರೆ ಸುಪ್ರೀಂಕೋರ್ಟಿಗೆ ಹೋಗುವುದು. ಆದರೆ ಸುಪ್ರೀಂಕೋರ್ಟು ಏನು ಹೇಳುತ್ತದೆಂದು ಊಹಿಸುವಂತಿಲ್ಲ. ಸ್ಪೀಕರ್ ಮಾತಾಡುತ್ತಿರುವ ಭಾಷೆ ಮತ್ತು ಕರ್ನಾಟಕದ ವಿಧಾನಸಭೆಯ ನಡಾವಳಿಗಳು ಪಕ್ಷಾಂತರ ನಿಷೇಧಕ್ಕೆ ಪ್ರೋತ್ಸಾಹ ಕೊಡುವುದು ನಾಚಿಕೆಗೇಡು ಎಂಬ ಸಂದೇಶವನ್ನು ಸಾರ್ವಜನಿಕವಾಗಿ ನೀಡಿಯಾಗಿದೆ. ಹಾಗಾಗಿಯೇ ವಾಚಾಮಗೋಚರವಾಗಿ ಆಡಳಿತ ಪಕ್ಷಗಳ ಸದಸ್ಯರು ಬಯ್ಯುತ್ತಿದ್ದರೂ, ಬಿಜೆಪಿಯ ಸದಸ್ಯರು ಬಾಯೇ ತೆರೆಯಲಿಲ್ಲ. ಗಲಾಟೆ ಆದರೆ ಅನಗತ್ಯವಾಗಿ ಸದನದ ಕಲಾಪ ಎಳೆಯಬಹುದು ಅಥವಾ ಗಲಾಟೆ ನೆಪದಲ್ಲಿ ಕೆಲವರನ್ನು ಅಮಾನತುಗೊಳಿಸಿದರೆ ಕಷ್ಟ ಎಂಬುದಷ್ಟೇ ಅದಕ್ಕೆ ಕಾರಣವಲ್ಲ.

ತಮ್ಮ ಆಪರೇಷನ್ ಕಮಲ ಎಂಬ ಅಸಹ್ಯವನ್ನು ಸಮರ್ಥಿಸಿಕೊಳ್ಳುವುದು ಬಿಜೆಪಿಗರಿಗೆ ಸುಲಭವಾಗಿರಲಿಲ್ಲ. ಹೀಗಿರುವಾಗ ಸುಪ್ರೀಂಕೋರ್ಟು ಅವರ ಸಮರ್ಥನೆಗೆ ಬರುತ್ತದೆ ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗದು. ಹಾಗಾಗಿ ಅನರ್ಹರಾಗಿರುವ ಮತ್ತು ಮುಂದೆ ಆಗಬಲ್ಲವರಿಗೆ ಇರುವುದು ಒಂದೇ ದಾರಿ. ಅದು ವಿಧಾನಸಭೆ ವಿಸರ್ಜನೆ ಆದರೆ ಮತ್ತೆ ಗೆದ್ದು ಬರುವುದು.

ಇದಕ್ಕೆ ವಿಸರ್ಜನೆಯೇ ಏಕಾಗಬೇಕು? ಏಕೆಂದರೆ ಅನರ್ಹತೆಗೊಂಡಿರುವುದು ಇಡೀ ಅವಧಿಗೆ. ಅಂದರೆ, ಒಂದು ವೇಳೆ ಮತ್ತೆ ಉಪಚುನಾವಣೆ ನಡೆದರೂ ಸ್ಪರ್ಧಿಸಬಾರದು ಎಂದಾಗಿಬಿಟ್ಟರೆ, ಬಿಜೆಪಿಯು ಅದೇ ಕ್ಷೇತ್ರದ ಬಿಜೆಪಿಯ ಸೋತ ಅಭ್ಯರ್ಥಿಗೆ ಟಿಕೆಟ್ ಕೊಡಲು ಮುಂದಾಗಬಹುದು. ಹಾಗೇನಾದರೂ ಆದರೆ, ಸದರಿ ಅನರ್ಹ ಶಾಸಕರಿಗೆ ಅದು ರಾಜಕೀಯ ಸಮಾಪ್ತಿಯಾಗಿಬಿಡುತ್ತದೆ.

ಆದರೆ, ಈಗಲೇ 76 ವರ್ಷವಾಗಿರುವುದರಿಂದ ಸಿಎಂ ಕುರ್ಚಿಯ ಕನಸಿಗೆ ಕಲ್ಲು ಹಾಕುತ್ತಿರುವ ಹೈಕಮ್ಯಾಂಡ್ ಮತ್ತೆ ಬಹುಮತ ಸಿಕ್ಕರೂ ತನ್ನನ್ನು ಮುಖ್ಯಮಂತ್ರಿ ಮಾಡದೇ ಹೋಗಬಹುದೆನ್ನುವ ಆತಂಕ ಯಡಿಯೂರಪ್ಪನವರದ್ದು. ಹೇಗೂ ಕೇಂದ್ರದಲ್ಲಿ ಅಧಿಕಾರ ಇರುವುದರಿಂದ ರಾಜ್ಯಪಾಲರಾಗಿ ಎಂದು ಹೇಳುವ ಸಾಧ್ಯತೆ ಇದೆ. ರಾಜ್ಯಪಾಲನಾಗಿ ಕೂರುವ ವ್ಯಕ್ತಿತ್ವ, ಮನಸ್ಥಿತಿ ಯಡಿಯೂರಪ್ಪನವರದ್ದಲ್ಲ. ಹಾಗಾಗಿ ವಿಧಾನಸಭೆ ವಿಸರ್ಜನೆಗೆ ಅವರು ಒಪ್ಪಲಿಕ್ಕಿಲ್ಲ.

ಒಟ್ಟಿನಲ್ಲಿ ಪಕ್ಕಾ ತ್ರಿಶಂಕು ಸ್ಥಿತಿ ಅನರ್ಹ ಶಾಸಕರಿಗೆ ಏರ್ಪಟ್ಟಿದೆ. ಇದು ಎಷ್ಟು ಬೇಗ ನಿವಾರಣೆಯಾಗಬಹುದು ಎಂಬುದನ್ನು ಯಾರೂ ಹೇಳುವ ಸ್ಥಿತಿಯಲ್ಲಿಲ್ಲ. ಈ ತ್ರಿಶಂಕು ಸ್ಥಿತಿ ಕೇವಲ ಅವರದ್ದಾಗಿರದೇ ರಾಜ್ಯ ಸರ್ಕಾರದ್ದು ಮತ್ತು ರಾಜ್ಯದ ಜನತೆಯದ್ದೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...