Homeಕರ್ನಾಟಕಅನರ್ಹ ಶಾಸಕರಿಗಿರುವುದು ಒಂದೇ ದಾರಿ- ವಿಧಾನಸಭೆ ವಿಸರ್ಜನೆ, ಆದರೆ ಯಡಿಯೂರಪ್ಪ ಒಪ್ಪುತ್ತಾರಾ?

ಅನರ್ಹ ಶಾಸಕರಿಗಿರುವುದು ಒಂದೇ ದಾರಿ- ವಿಧಾನಸಭೆ ವಿಸರ್ಜನೆ, ಆದರೆ ಯಡಿಯೂರಪ್ಪ ಒಪ್ಪುತ್ತಾರಾ?

- Advertisement -
- Advertisement -

ಅನರ್ಹ ಶಾಸಕರು ಈಗ ಇರುವುದು ಮೂರೇ ಜನ. ಆದರೆ, ಉಳಿದವರೂ ಅನರ್ಹರಾಗುವ ಸಾಧ್ಯತೆ ಇದ್ದೇ ಇದೆ. ಸ್ಪೀಕರ್ ರಮೇಶ್ ಕುಮಾರ್ ಅವರ ಆದೇಶದಂತೆ ಅವರು ಈಗ ಅನರ್ಹರಾಗುತ್ತಿರುವುದಷ್ಟೇ ಅಲ್ಲ, ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ, ಅಂದರೆ 2023ರವರೆಗೆ ಮತ್ತೆ ಚುನಾವಣೆಗೆ ನಿಲ್ಲುವಂತೆಯೂ ಇಲ್ಲ.

ಹೌದು, ಇದಕ್ಕೆ ಅವರಿಗೆ ಕೂಡಲೇ ಇರುವ ದಾರಿಯೆಂದರೆ ಸುಪ್ರೀಂಕೋರ್ಟಿಗೆ ಹೋಗುವುದು. ಆದರೆ ಸುಪ್ರೀಂಕೋರ್ಟು ಏನು ಹೇಳುತ್ತದೆಂದು ಊಹಿಸುವಂತಿಲ್ಲ. ಸ್ಪೀಕರ್ ಮಾತಾಡುತ್ತಿರುವ ಭಾಷೆ ಮತ್ತು ಕರ್ನಾಟಕದ ವಿಧಾನಸಭೆಯ ನಡಾವಳಿಗಳು ಪಕ್ಷಾಂತರ ನಿಷೇಧಕ್ಕೆ ಪ್ರೋತ್ಸಾಹ ಕೊಡುವುದು ನಾಚಿಕೆಗೇಡು ಎಂಬ ಸಂದೇಶವನ್ನು ಸಾರ್ವಜನಿಕವಾಗಿ ನೀಡಿಯಾಗಿದೆ. ಹಾಗಾಗಿಯೇ ವಾಚಾಮಗೋಚರವಾಗಿ ಆಡಳಿತ ಪಕ್ಷಗಳ ಸದಸ್ಯರು ಬಯ್ಯುತ್ತಿದ್ದರೂ, ಬಿಜೆಪಿಯ ಸದಸ್ಯರು ಬಾಯೇ ತೆರೆಯಲಿಲ್ಲ. ಗಲಾಟೆ ಆದರೆ ಅನಗತ್ಯವಾಗಿ ಸದನದ ಕಲಾಪ ಎಳೆಯಬಹುದು ಅಥವಾ ಗಲಾಟೆ ನೆಪದಲ್ಲಿ ಕೆಲವರನ್ನು ಅಮಾನತುಗೊಳಿಸಿದರೆ ಕಷ್ಟ ಎಂಬುದಷ್ಟೇ ಅದಕ್ಕೆ ಕಾರಣವಲ್ಲ.

ತಮ್ಮ ಆಪರೇಷನ್ ಕಮಲ ಎಂಬ ಅಸಹ್ಯವನ್ನು ಸಮರ್ಥಿಸಿಕೊಳ್ಳುವುದು ಬಿಜೆಪಿಗರಿಗೆ ಸುಲಭವಾಗಿರಲಿಲ್ಲ. ಹೀಗಿರುವಾಗ ಸುಪ್ರೀಂಕೋರ್ಟು ಅವರ ಸಮರ್ಥನೆಗೆ ಬರುತ್ತದೆ ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗದು. ಹಾಗಾಗಿ ಅನರ್ಹರಾಗಿರುವ ಮತ್ತು ಮುಂದೆ ಆಗಬಲ್ಲವರಿಗೆ ಇರುವುದು ಒಂದೇ ದಾರಿ. ಅದು ವಿಧಾನಸಭೆ ವಿಸರ್ಜನೆ ಆದರೆ ಮತ್ತೆ ಗೆದ್ದು ಬರುವುದು.

ಇದಕ್ಕೆ ವಿಸರ್ಜನೆಯೇ ಏಕಾಗಬೇಕು? ಏಕೆಂದರೆ ಅನರ್ಹತೆಗೊಂಡಿರುವುದು ಇಡೀ ಅವಧಿಗೆ. ಅಂದರೆ, ಒಂದು ವೇಳೆ ಮತ್ತೆ ಉಪಚುನಾವಣೆ ನಡೆದರೂ ಸ್ಪರ್ಧಿಸಬಾರದು ಎಂದಾಗಿಬಿಟ್ಟರೆ, ಬಿಜೆಪಿಯು ಅದೇ ಕ್ಷೇತ್ರದ ಬಿಜೆಪಿಯ ಸೋತ ಅಭ್ಯರ್ಥಿಗೆ ಟಿಕೆಟ್ ಕೊಡಲು ಮುಂದಾಗಬಹುದು. ಹಾಗೇನಾದರೂ ಆದರೆ, ಸದರಿ ಅನರ್ಹ ಶಾಸಕರಿಗೆ ಅದು ರಾಜಕೀಯ ಸಮಾಪ್ತಿಯಾಗಿಬಿಡುತ್ತದೆ.

ಆದರೆ, ಈಗಲೇ 76 ವರ್ಷವಾಗಿರುವುದರಿಂದ ಸಿಎಂ ಕುರ್ಚಿಯ ಕನಸಿಗೆ ಕಲ್ಲು ಹಾಕುತ್ತಿರುವ ಹೈಕಮ್ಯಾಂಡ್ ಮತ್ತೆ ಬಹುಮತ ಸಿಕ್ಕರೂ ತನ್ನನ್ನು ಮುಖ್ಯಮಂತ್ರಿ ಮಾಡದೇ ಹೋಗಬಹುದೆನ್ನುವ ಆತಂಕ ಯಡಿಯೂರಪ್ಪನವರದ್ದು. ಹೇಗೂ ಕೇಂದ್ರದಲ್ಲಿ ಅಧಿಕಾರ ಇರುವುದರಿಂದ ರಾಜ್ಯಪಾಲರಾಗಿ ಎಂದು ಹೇಳುವ ಸಾಧ್ಯತೆ ಇದೆ. ರಾಜ್ಯಪಾಲನಾಗಿ ಕೂರುವ ವ್ಯಕ್ತಿತ್ವ, ಮನಸ್ಥಿತಿ ಯಡಿಯೂರಪ್ಪನವರದ್ದಲ್ಲ. ಹಾಗಾಗಿ ವಿಧಾನಸಭೆ ವಿಸರ್ಜನೆಗೆ ಅವರು ಒಪ್ಪಲಿಕ್ಕಿಲ್ಲ.

ಒಟ್ಟಿನಲ್ಲಿ ಪಕ್ಕಾ ತ್ರಿಶಂಕು ಸ್ಥಿತಿ ಅನರ್ಹ ಶಾಸಕರಿಗೆ ಏರ್ಪಟ್ಟಿದೆ. ಇದು ಎಷ್ಟು ಬೇಗ ನಿವಾರಣೆಯಾಗಬಹುದು ಎಂಬುದನ್ನು ಯಾರೂ ಹೇಳುವ ಸ್ಥಿತಿಯಲ್ಲಿಲ್ಲ. ಈ ತ್ರಿಶಂಕು ಸ್ಥಿತಿ ಕೇವಲ ಅವರದ್ದಾಗಿರದೇ ರಾಜ್ಯ ಸರ್ಕಾರದ್ದು ಮತ್ತು ರಾಜ್ಯದ ಜನತೆಯದ್ದೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...