Homeಕರ್ನಾಟಕಅನರ್ಹ ಶಾಸಕರಿಗಿರುವುದು ಒಂದೇ ದಾರಿ- ವಿಧಾನಸಭೆ ವಿಸರ್ಜನೆ, ಆದರೆ ಯಡಿಯೂರಪ್ಪ ಒಪ್ಪುತ್ತಾರಾ?

ಅನರ್ಹ ಶಾಸಕರಿಗಿರುವುದು ಒಂದೇ ದಾರಿ- ವಿಧಾನಸಭೆ ವಿಸರ್ಜನೆ, ಆದರೆ ಯಡಿಯೂರಪ್ಪ ಒಪ್ಪುತ್ತಾರಾ?

- Advertisement -
- Advertisement -

ಅನರ್ಹ ಶಾಸಕರು ಈಗ ಇರುವುದು ಮೂರೇ ಜನ. ಆದರೆ, ಉಳಿದವರೂ ಅನರ್ಹರಾಗುವ ಸಾಧ್ಯತೆ ಇದ್ದೇ ಇದೆ. ಸ್ಪೀಕರ್ ರಮೇಶ್ ಕುಮಾರ್ ಅವರ ಆದೇಶದಂತೆ ಅವರು ಈಗ ಅನರ್ಹರಾಗುತ್ತಿರುವುದಷ್ಟೇ ಅಲ್ಲ, ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ, ಅಂದರೆ 2023ರವರೆಗೆ ಮತ್ತೆ ಚುನಾವಣೆಗೆ ನಿಲ್ಲುವಂತೆಯೂ ಇಲ್ಲ.

ಹೌದು, ಇದಕ್ಕೆ ಅವರಿಗೆ ಕೂಡಲೇ ಇರುವ ದಾರಿಯೆಂದರೆ ಸುಪ್ರೀಂಕೋರ್ಟಿಗೆ ಹೋಗುವುದು. ಆದರೆ ಸುಪ್ರೀಂಕೋರ್ಟು ಏನು ಹೇಳುತ್ತದೆಂದು ಊಹಿಸುವಂತಿಲ್ಲ. ಸ್ಪೀಕರ್ ಮಾತಾಡುತ್ತಿರುವ ಭಾಷೆ ಮತ್ತು ಕರ್ನಾಟಕದ ವಿಧಾನಸಭೆಯ ನಡಾವಳಿಗಳು ಪಕ್ಷಾಂತರ ನಿಷೇಧಕ್ಕೆ ಪ್ರೋತ್ಸಾಹ ಕೊಡುವುದು ನಾಚಿಕೆಗೇಡು ಎಂಬ ಸಂದೇಶವನ್ನು ಸಾರ್ವಜನಿಕವಾಗಿ ನೀಡಿಯಾಗಿದೆ. ಹಾಗಾಗಿಯೇ ವಾಚಾಮಗೋಚರವಾಗಿ ಆಡಳಿತ ಪಕ್ಷಗಳ ಸದಸ್ಯರು ಬಯ್ಯುತ್ತಿದ್ದರೂ, ಬಿಜೆಪಿಯ ಸದಸ್ಯರು ಬಾಯೇ ತೆರೆಯಲಿಲ್ಲ. ಗಲಾಟೆ ಆದರೆ ಅನಗತ್ಯವಾಗಿ ಸದನದ ಕಲಾಪ ಎಳೆಯಬಹುದು ಅಥವಾ ಗಲಾಟೆ ನೆಪದಲ್ಲಿ ಕೆಲವರನ್ನು ಅಮಾನತುಗೊಳಿಸಿದರೆ ಕಷ್ಟ ಎಂಬುದಷ್ಟೇ ಅದಕ್ಕೆ ಕಾರಣವಲ್ಲ.

ತಮ್ಮ ಆಪರೇಷನ್ ಕಮಲ ಎಂಬ ಅಸಹ್ಯವನ್ನು ಸಮರ್ಥಿಸಿಕೊಳ್ಳುವುದು ಬಿಜೆಪಿಗರಿಗೆ ಸುಲಭವಾಗಿರಲಿಲ್ಲ. ಹೀಗಿರುವಾಗ ಸುಪ್ರೀಂಕೋರ್ಟು ಅವರ ಸಮರ್ಥನೆಗೆ ಬರುತ್ತದೆ ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗದು. ಹಾಗಾಗಿ ಅನರ್ಹರಾಗಿರುವ ಮತ್ತು ಮುಂದೆ ಆಗಬಲ್ಲವರಿಗೆ ಇರುವುದು ಒಂದೇ ದಾರಿ. ಅದು ವಿಧಾನಸಭೆ ವಿಸರ್ಜನೆ ಆದರೆ ಮತ್ತೆ ಗೆದ್ದು ಬರುವುದು.

ಇದಕ್ಕೆ ವಿಸರ್ಜನೆಯೇ ಏಕಾಗಬೇಕು? ಏಕೆಂದರೆ ಅನರ್ಹತೆಗೊಂಡಿರುವುದು ಇಡೀ ಅವಧಿಗೆ. ಅಂದರೆ, ಒಂದು ವೇಳೆ ಮತ್ತೆ ಉಪಚುನಾವಣೆ ನಡೆದರೂ ಸ್ಪರ್ಧಿಸಬಾರದು ಎಂದಾಗಿಬಿಟ್ಟರೆ, ಬಿಜೆಪಿಯು ಅದೇ ಕ್ಷೇತ್ರದ ಬಿಜೆಪಿಯ ಸೋತ ಅಭ್ಯರ್ಥಿಗೆ ಟಿಕೆಟ್ ಕೊಡಲು ಮುಂದಾಗಬಹುದು. ಹಾಗೇನಾದರೂ ಆದರೆ, ಸದರಿ ಅನರ್ಹ ಶಾಸಕರಿಗೆ ಅದು ರಾಜಕೀಯ ಸಮಾಪ್ತಿಯಾಗಿಬಿಡುತ್ತದೆ.

ಆದರೆ, ಈಗಲೇ 76 ವರ್ಷವಾಗಿರುವುದರಿಂದ ಸಿಎಂ ಕುರ್ಚಿಯ ಕನಸಿಗೆ ಕಲ್ಲು ಹಾಕುತ್ತಿರುವ ಹೈಕಮ್ಯಾಂಡ್ ಮತ್ತೆ ಬಹುಮತ ಸಿಕ್ಕರೂ ತನ್ನನ್ನು ಮುಖ್ಯಮಂತ್ರಿ ಮಾಡದೇ ಹೋಗಬಹುದೆನ್ನುವ ಆತಂಕ ಯಡಿಯೂರಪ್ಪನವರದ್ದು. ಹೇಗೂ ಕೇಂದ್ರದಲ್ಲಿ ಅಧಿಕಾರ ಇರುವುದರಿಂದ ರಾಜ್ಯಪಾಲರಾಗಿ ಎಂದು ಹೇಳುವ ಸಾಧ್ಯತೆ ಇದೆ. ರಾಜ್ಯಪಾಲನಾಗಿ ಕೂರುವ ವ್ಯಕ್ತಿತ್ವ, ಮನಸ್ಥಿತಿ ಯಡಿಯೂರಪ್ಪನವರದ್ದಲ್ಲ. ಹಾಗಾಗಿ ವಿಧಾನಸಭೆ ವಿಸರ್ಜನೆಗೆ ಅವರು ಒಪ್ಪಲಿಕ್ಕಿಲ್ಲ.

ಒಟ್ಟಿನಲ್ಲಿ ಪಕ್ಕಾ ತ್ರಿಶಂಕು ಸ್ಥಿತಿ ಅನರ್ಹ ಶಾಸಕರಿಗೆ ಏರ್ಪಟ್ಟಿದೆ. ಇದು ಎಷ್ಟು ಬೇಗ ನಿವಾರಣೆಯಾಗಬಹುದು ಎಂಬುದನ್ನು ಯಾರೂ ಹೇಳುವ ಸ್ಥಿತಿಯಲ್ಲಿಲ್ಲ. ಈ ತ್ರಿಶಂಕು ಸ್ಥಿತಿ ಕೇವಲ ಅವರದ್ದಾಗಿರದೇ ರಾಜ್ಯ ಸರ್ಕಾರದ್ದು ಮತ್ತು ರಾಜ್ಯದ ಜನತೆಯದ್ದೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...