Homeಕರ್ನಾಟಕಅನರ್ಹ ಶಾಸಕರಿಗಿರುವುದು ಒಂದೇ ದಾರಿ- ವಿಧಾನಸಭೆ ವಿಸರ್ಜನೆ, ಆದರೆ ಯಡಿಯೂರಪ್ಪ ಒಪ್ಪುತ್ತಾರಾ?

ಅನರ್ಹ ಶಾಸಕರಿಗಿರುವುದು ಒಂದೇ ದಾರಿ- ವಿಧಾನಸಭೆ ವಿಸರ್ಜನೆ, ಆದರೆ ಯಡಿಯೂರಪ್ಪ ಒಪ್ಪುತ್ತಾರಾ?

- Advertisement -
- Advertisement -

ಅನರ್ಹ ಶಾಸಕರು ಈಗ ಇರುವುದು ಮೂರೇ ಜನ. ಆದರೆ, ಉಳಿದವರೂ ಅನರ್ಹರಾಗುವ ಸಾಧ್ಯತೆ ಇದ್ದೇ ಇದೆ. ಸ್ಪೀಕರ್ ರಮೇಶ್ ಕುಮಾರ್ ಅವರ ಆದೇಶದಂತೆ ಅವರು ಈಗ ಅನರ್ಹರಾಗುತ್ತಿರುವುದಷ್ಟೇ ಅಲ್ಲ, ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ, ಅಂದರೆ 2023ರವರೆಗೆ ಮತ್ತೆ ಚುನಾವಣೆಗೆ ನಿಲ್ಲುವಂತೆಯೂ ಇಲ್ಲ.

ಹೌದು, ಇದಕ್ಕೆ ಅವರಿಗೆ ಕೂಡಲೇ ಇರುವ ದಾರಿಯೆಂದರೆ ಸುಪ್ರೀಂಕೋರ್ಟಿಗೆ ಹೋಗುವುದು. ಆದರೆ ಸುಪ್ರೀಂಕೋರ್ಟು ಏನು ಹೇಳುತ್ತದೆಂದು ಊಹಿಸುವಂತಿಲ್ಲ. ಸ್ಪೀಕರ್ ಮಾತಾಡುತ್ತಿರುವ ಭಾಷೆ ಮತ್ತು ಕರ್ನಾಟಕದ ವಿಧಾನಸಭೆಯ ನಡಾವಳಿಗಳು ಪಕ್ಷಾಂತರ ನಿಷೇಧಕ್ಕೆ ಪ್ರೋತ್ಸಾಹ ಕೊಡುವುದು ನಾಚಿಕೆಗೇಡು ಎಂಬ ಸಂದೇಶವನ್ನು ಸಾರ್ವಜನಿಕವಾಗಿ ನೀಡಿಯಾಗಿದೆ. ಹಾಗಾಗಿಯೇ ವಾಚಾಮಗೋಚರವಾಗಿ ಆಡಳಿತ ಪಕ್ಷಗಳ ಸದಸ್ಯರು ಬಯ್ಯುತ್ತಿದ್ದರೂ, ಬಿಜೆಪಿಯ ಸದಸ್ಯರು ಬಾಯೇ ತೆರೆಯಲಿಲ್ಲ. ಗಲಾಟೆ ಆದರೆ ಅನಗತ್ಯವಾಗಿ ಸದನದ ಕಲಾಪ ಎಳೆಯಬಹುದು ಅಥವಾ ಗಲಾಟೆ ನೆಪದಲ್ಲಿ ಕೆಲವರನ್ನು ಅಮಾನತುಗೊಳಿಸಿದರೆ ಕಷ್ಟ ಎಂಬುದಷ್ಟೇ ಅದಕ್ಕೆ ಕಾರಣವಲ್ಲ.

ತಮ್ಮ ಆಪರೇಷನ್ ಕಮಲ ಎಂಬ ಅಸಹ್ಯವನ್ನು ಸಮರ್ಥಿಸಿಕೊಳ್ಳುವುದು ಬಿಜೆಪಿಗರಿಗೆ ಸುಲಭವಾಗಿರಲಿಲ್ಲ. ಹೀಗಿರುವಾಗ ಸುಪ್ರೀಂಕೋರ್ಟು ಅವರ ಸಮರ್ಥನೆಗೆ ಬರುತ್ತದೆ ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗದು. ಹಾಗಾಗಿ ಅನರ್ಹರಾಗಿರುವ ಮತ್ತು ಮುಂದೆ ಆಗಬಲ್ಲವರಿಗೆ ಇರುವುದು ಒಂದೇ ದಾರಿ. ಅದು ವಿಧಾನಸಭೆ ವಿಸರ್ಜನೆ ಆದರೆ ಮತ್ತೆ ಗೆದ್ದು ಬರುವುದು.

ಇದಕ್ಕೆ ವಿಸರ್ಜನೆಯೇ ಏಕಾಗಬೇಕು? ಏಕೆಂದರೆ ಅನರ್ಹತೆಗೊಂಡಿರುವುದು ಇಡೀ ಅವಧಿಗೆ. ಅಂದರೆ, ಒಂದು ವೇಳೆ ಮತ್ತೆ ಉಪಚುನಾವಣೆ ನಡೆದರೂ ಸ್ಪರ್ಧಿಸಬಾರದು ಎಂದಾಗಿಬಿಟ್ಟರೆ, ಬಿಜೆಪಿಯು ಅದೇ ಕ್ಷೇತ್ರದ ಬಿಜೆಪಿಯ ಸೋತ ಅಭ್ಯರ್ಥಿಗೆ ಟಿಕೆಟ್ ಕೊಡಲು ಮುಂದಾಗಬಹುದು. ಹಾಗೇನಾದರೂ ಆದರೆ, ಸದರಿ ಅನರ್ಹ ಶಾಸಕರಿಗೆ ಅದು ರಾಜಕೀಯ ಸಮಾಪ್ತಿಯಾಗಿಬಿಡುತ್ತದೆ.

ಆದರೆ, ಈಗಲೇ 76 ವರ್ಷವಾಗಿರುವುದರಿಂದ ಸಿಎಂ ಕುರ್ಚಿಯ ಕನಸಿಗೆ ಕಲ್ಲು ಹಾಕುತ್ತಿರುವ ಹೈಕಮ್ಯಾಂಡ್ ಮತ್ತೆ ಬಹುಮತ ಸಿಕ್ಕರೂ ತನ್ನನ್ನು ಮುಖ್ಯಮಂತ್ರಿ ಮಾಡದೇ ಹೋಗಬಹುದೆನ್ನುವ ಆತಂಕ ಯಡಿಯೂರಪ್ಪನವರದ್ದು. ಹೇಗೂ ಕೇಂದ್ರದಲ್ಲಿ ಅಧಿಕಾರ ಇರುವುದರಿಂದ ರಾಜ್ಯಪಾಲರಾಗಿ ಎಂದು ಹೇಳುವ ಸಾಧ್ಯತೆ ಇದೆ. ರಾಜ್ಯಪಾಲನಾಗಿ ಕೂರುವ ವ್ಯಕ್ತಿತ್ವ, ಮನಸ್ಥಿತಿ ಯಡಿಯೂರಪ್ಪನವರದ್ದಲ್ಲ. ಹಾಗಾಗಿ ವಿಧಾನಸಭೆ ವಿಸರ್ಜನೆಗೆ ಅವರು ಒಪ್ಪಲಿಕ್ಕಿಲ್ಲ.

ಒಟ್ಟಿನಲ್ಲಿ ಪಕ್ಕಾ ತ್ರಿಶಂಕು ಸ್ಥಿತಿ ಅನರ್ಹ ಶಾಸಕರಿಗೆ ಏರ್ಪಟ್ಟಿದೆ. ಇದು ಎಷ್ಟು ಬೇಗ ನಿವಾರಣೆಯಾಗಬಹುದು ಎಂಬುದನ್ನು ಯಾರೂ ಹೇಳುವ ಸ್ಥಿತಿಯಲ್ಲಿಲ್ಲ. ಈ ತ್ರಿಶಂಕು ಸ್ಥಿತಿ ಕೇವಲ ಅವರದ್ದಾಗಿರದೇ ರಾಜ್ಯ ಸರ್ಕಾರದ್ದು ಮತ್ತು ರಾಜ್ಯದ ಜನತೆಯದ್ದೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...