Homeಕರ್ನಾಟಕಅನರ್ಹ ಶಾಸಕರಿಗಿರುವುದು ಒಂದೇ ದಾರಿ- ವಿಧಾನಸಭೆ ವಿಸರ್ಜನೆ, ಆದರೆ ಯಡಿಯೂರಪ್ಪ ಒಪ್ಪುತ್ತಾರಾ?

ಅನರ್ಹ ಶಾಸಕರಿಗಿರುವುದು ಒಂದೇ ದಾರಿ- ವಿಧಾನಸಭೆ ವಿಸರ್ಜನೆ, ಆದರೆ ಯಡಿಯೂರಪ್ಪ ಒಪ್ಪುತ್ತಾರಾ?

- Advertisement -
- Advertisement -

ಅನರ್ಹ ಶಾಸಕರು ಈಗ ಇರುವುದು ಮೂರೇ ಜನ. ಆದರೆ, ಉಳಿದವರೂ ಅನರ್ಹರಾಗುವ ಸಾಧ್ಯತೆ ಇದ್ದೇ ಇದೆ. ಸ್ಪೀಕರ್ ರಮೇಶ್ ಕುಮಾರ್ ಅವರ ಆದೇಶದಂತೆ ಅವರು ಈಗ ಅನರ್ಹರಾಗುತ್ತಿರುವುದಷ್ಟೇ ಅಲ್ಲ, ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ, ಅಂದರೆ 2023ರವರೆಗೆ ಮತ್ತೆ ಚುನಾವಣೆಗೆ ನಿಲ್ಲುವಂತೆಯೂ ಇಲ್ಲ.

ಹೌದು, ಇದಕ್ಕೆ ಅವರಿಗೆ ಕೂಡಲೇ ಇರುವ ದಾರಿಯೆಂದರೆ ಸುಪ್ರೀಂಕೋರ್ಟಿಗೆ ಹೋಗುವುದು. ಆದರೆ ಸುಪ್ರೀಂಕೋರ್ಟು ಏನು ಹೇಳುತ್ತದೆಂದು ಊಹಿಸುವಂತಿಲ್ಲ. ಸ್ಪೀಕರ್ ಮಾತಾಡುತ್ತಿರುವ ಭಾಷೆ ಮತ್ತು ಕರ್ನಾಟಕದ ವಿಧಾನಸಭೆಯ ನಡಾವಳಿಗಳು ಪಕ್ಷಾಂತರ ನಿಷೇಧಕ್ಕೆ ಪ್ರೋತ್ಸಾಹ ಕೊಡುವುದು ನಾಚಿಕೆಗೇಡು ಎಂಬ ಸಂದೇಶವನ್ನು ಸಾರ್ವಜನಿಕವಾಗಿ ನೀಡಿಯಾಗಿದೆ. ಹಾಗಾಗಿಯೇ ವಾಚಾಮಗೋಚರವಾಗಿ ಆಡಳಿತ ಪಕ್ಷಗಳ ಸದಸ್ಯರು ಬಯ್ಯುತ್ತಿದ್ದರೂ, ಬಿಜೆಪಿಯ ಸದಸ್ಯರು ಬಾಯೇ ತೆರೆಯಲಿಲ್ಲ. ಗಲಾಟೆ ಆದರೆ ಅನಗತ್ಯವಾಗಿ ಸದನದ ಕಲಾಪ ಎಳೆಯಬಹುದು ಅಥವಾ ಗಲಾಟೆ ನೆಪದಲ್ಲಿ ಕೆಲವರನ್ನು ಅಮಾನತುಗೊಳಿಸಿದರೆ ಕಷ್ಟ ಎಂಬುದಷ್ಟೇ ಅದಕ್ಕೆ ಕಾರಣವಲ್ಲ.

ತಮ್ಮ ಆಪರೇಷನ್ ಕಮಲ ಎಂಬ ಅಸಹ್ಯವನ್ನು ಸಮರ್ಥಿಸಿಕೊಳ್ಳುವುದು ಬಿಜೆಪಿಗರಿಗೆ ಸುಲಭವಾಗಿರಲಿಲ್ಲ. ಹೀಗಿರುವಾಗ ಸುಪ್ರೀಂಕೋರ್ಟು ಅವರ ಸಮರ್ಥನೆಗೆ ಬರುತ್ತದೆ ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗದು. ಹಾಗಾಗಿ ಅನರ್ಹರಾಗಿರುವ ಮತ್ತು ಮುಂದೆ ಆಗಬಲ್ಲವರಿಗೆ ಇರುವುದು ಒಂದೇ ದಾರಿ. ಅದು ವಿಧಾನಸಭೆ ವಿಸರ್ಜನೆ ಆದರೆ ಮತ್ತೆ ಗೆದ್ದು ಬರುವುದು.

ಇದಕ್ಕೆ ವಿಸರ್ಜನೆಯೇ ಏಕಾಗಬೇಕು? ಏಕೆಂದರೆ ಅನರ್ಹತೆಗೊಂಡಿರುವುದು ಇಡೀ ಅವಧಿಗೆ. ಅಂದರೆ, ಒಂದು ವೇಳೆ ಮತ್ತೆ ಉಪಚುನಾವಣೆ ನಡೆದರೂ ಸ್ಪರ್ಧಿಸಬಾರದು ಎಂದಾಗಿಬಿಟ್ಟರೆ, ಬಿಜೆಪಿಯು ಅದೇ ಕ್ಷೇತ್ರದ ಬಿಜೆಪಿಯ ಸೋತ ಅಭ್ಯರ್ಥಿಗೆ ಟಿಕೆಟ್ ಕೊಡಲು ಮುಂದಾಗಬಹುದು. ಹಾಗೇನಾದರೂ ಆದರೆ, ಸದರಿ ಅನರ್ಹ ಶಾಸಕರಿಗೆ ಅದು ರಾಜಕೀಯ ಸಮಾಪ್ತಿಯಾಗಿಬಿಡುತ್ತದೆ.

ಆದರೆ, ಈಗಲೇ 76 ವರ್ಷವಾಗಿರುವುದರಿಂದ ಸಿಎಂ ಕುರ್ಚಿಯ ಕನಸಿಗೆ ಕಲ್ಲು ಹಾಕುತ್ತಿರುವ ಹೈಕಮ್ಯಾಂಡ್ ಮತ್ತೆ ಬಹುಮತ ಸಿಕ್ಕರೂ ತನ್ನನ್ನು ಮುಖ್ಯಮಂತ್ರಿ ಮಾಡದೇ ಹೋಗಬಹುದೆನ್ನುವ ಆತಂಕ ಯಡಿಯೂರಪ್ಪನವರದ್ದು. ಹೇಗೂ ಕೇಂದ್ರದಲ್ಲಿ ಅಧಿಕಾರ ಇರುವುದರಿಂದ ರಾಜ್ಯಪಾಲರಾಗಿ ಎಂದು ಹೇಳುವ ಸಾಧ್ಯತೆ ಇದೆ. ರಾಜ್ಯಪಾಲನಾಗಿ ಕೂರುವ ವ್ಯಕ್ತಿತ್ವ, ಮನಸ್ಥಿತಿ ಯಡಿಯೂರಪ್ಪನವರದ್ದಲ್ಲ. ಹಾಗಾಗಿ ವಿಧಾನಸಭೆ ವಿಸರ್ಜನೆಗೆ ಅವರು ಒಪ್ಪಲಿಕ್ಕಿಲ್ಲ.

ಒಟ್ಟಿನಲ್ಲಿ ಪಕ್ಕಾ ತ್ರಿಶಂಕು ಸ್ಥಿತಿ ಅನರ್ಹ ಶಾಸಕರಿಗೆ ಏರ್ಪಟ್ಟಿದೆ. ಇದು ಎಷ್ಟು ಬೇಗ ನಿವಾರಣೆಯಾಗಬಹುದು ಎಂಬುದನ್ನು ಯಾರೂ ಹೇಳುವ ಸ್ಥಿತಿಯಲ್ಲಿಲ್ಲ. ಈ ತ್ರಿಶಂಕು ಸ್ಥಿತಿ ಕೇವಲ ಅವರದ್ದಾಗಿರದೇ ರಾಜ್ಯ ಸರ್ಕಾರದ್ದು ಮತ್ತು ರಾಜ್ಯದ ಜನತೆಯದ್ದೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...