Homeಕರ್ನಾಟಕಅನರ್ಹ ಶಾಸಕರಿಗಿರುವುದು ಒಂದೇ ದಾರಿ- ವಿಧಾನಸಭೆ ವಿಸರ್ಜನೆ, ಆದರೆ ಯಡಿಯೂರಪ್ಪ ಒಪ್ಪುತ್ತಾರಾ?

ಅನರ್ಹ ಶಾಸಕರಿಗಿರುವುದು ಒಂದೇ ದಾರಿ- ವಿಧಾನಸಭೆ ವಿಸರ್ಜನೆ, ಆದರೆ ಯಡಿಯೂರಪ್ಪ ಒಪ್ಪುತ್ತಾರಾ?

- Advertisement -
- Advertisement -

ಅನರ್ಹ ಶಾಸಕರು ಈಗ ಇರುವುದು ಮೂರೇ ಜನ. ಆದರೆ, ಉಳಿದವರೂ ಅನರ್ಹರಾಗುವ ಸಾಧ್ಯತೆ ಇದ್ದೇ ಇದೆ. ಸ್ಪೀಕರ್ ರಮೇಶ್ ಕುಮಾರ್ ಅವರ ಆದೇಶದಂತೆ ಅವರು ಈಗ ಅನರ್ಹರಾಗುತ್ತಿರುವುದಷ್ಟೇ ಅಲ್ಲ, ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ, ಅಂದರೆ 2023ರವರೆಗೆ ಮತ್ತೆ ಚುನಾವಣೆಗೆ ನಿಲ್ಲುವಂತೆಯೂ ಇಲ್ಲ.

ಹೌದು, ಇದಕ್ಕೆ ಅವರಿಗೆ ಕೂಡಲೇ ಇರುವ ದಾರಿಯೆಂದರೆ ಸುಪ್ರೀಂಕೋರ್ಟಿಗೆ ಹೋಗುವುದು. ಆದರೆ ಸುಪ್ರೀಂಕೋರ್ಟು ಏನು ಹೇಳುತ್ತದೆಂದು ಊಹಿಸುವಂತಿಲ್ಲ. ಸ್ಪೀಕರ್ ಮಾತಾಡುತ್ತಿರುವ ಭಾಷೆ ಮತ್ತು ಕರ್ನಾಟಕದ ವಿಧಾನಸಭೆಯ ನಡಾವಳಿಗಳು ಪಕ್ಷಾಂತರ ನಿಷೇಧಕ್ಕೆ ಪ್ರೋತ್ಸಾಹ ಕೊಡುವುದು ನಾಚಿಕೆಗೇಡು ಎಂಬ ಸಂದೇಶವನ್ನು ಸಾರ್ವಜನಿಕವಾಗಿ ನೀಡಿಯಾಗಿದೆ. ಹಾಗಾಗಿಯೇ ವಾಚಾಮಗೋಚರವಾಗಿ ಆಡಳಿತ ಪಕ್ಷಗಳ ಸದಸ್ಯರು ಬಯ್ಯುತ್ತಿದ್ದರೂ, ಬಿಜೆಪಿಯ ಸದಸ್ಯರು ಬಾಯೇ ತೆರೆಯಲಿಲ್ಲ. ಗಲಾಟೆ ಆದರೆ ಅನಗತ್ಯವಾಗಿ ಸದನದ ಕಲಾಪ ಎಳೆಯಬಹುದು ಅಥವಾ ಗಲಾಟೆ ನೆಪದಲ್ಲಿ ಕೆಲವರನ್ನು ಅಮಾನತುಗೊಳಿಸಿದರೆ ಕಷ್ಟ ಎಂಬುದಷ್ಟೇ ಅದಕ್ಕೆ ಕಾರಣವಲ್ಲ.

ತಮ್ಮ ಆಪರೇಷನ್ ಕಮಲ ಎಂಬ ಅಸಹ್ಯವನ್ನು ಸಮರ್ಥಿಸಿಕೊಳ್ಳುವುದು ಬಿಜೆಪಿಗರಿಗೆ ಸುಲಭವಾಗಿರಲಿಲ್ಲ. ಹೀಗಿರುವಾಗ ಸುಪ್ರೀಂಕೋರ್ಟು ಅವರ ಸಮರ್ಥನೆಗೆ ಬರುತ್ತದೆ ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗದು. ಹಾಗಾಗಿ ಅನರ್ಹರಾಗಿರುವ ಮತ್ತು ಮುಂದೆ ಆಗಬಲ್ಲವರಿಗೆ ಇರುವುದು ಒಂದೇ ದಾರಿ. ಅದು ವಿಧಾನಸಭೆ ವಿಸರ್ಜನೆ ಆದರೆ ಮತ್ತೆ ಗೆದ್ದು ಬರುವುದು.

ಇದಕ್ಕೆ ವಿಸರ್ಜನೆಯೇ ಏಕಾಗಬೇಕು? ಏಕೆಂದರೆ ಅನರ್ಹತೆಗೊಂಡಿರುವುದು ಇಡೀ ಅವಧಿಗೆ. ಅಂದರೆ, ಒಂದು ವೇಳೆ ಮತ್ತೆ ಉಪಚುನಾವಣೆ ನಡೆದರೂ ಸ್ಪರ್ಧಿಸಬಾರದು ಎಂದಾಗಿಬಿಟ್ಟರೆ, ಬಿಜೆಪಿಯು ಅದೇ ಕ್ಷೇತ್ರದ ಬಿಜೆಪಿಯ ಸೋತ ಅಭ್ಯರ್ಥಿಗೆ ಟಿಕೆಟ್ ಕೊಡಲು ಮುಂದಾಗಬಹುದು. ಹಾಗೇನಾದರೂ ಆದರೆ, ಸದರಿ ಅನರ್ಹ ಶಾಸಕರಿಗೆ ಅದು ರಾಜಕೀಯ ಸಮಾಪ್ತಿಯಾಗಿಬಿಡುತ್ತದೆ.

ಆದರೆ, ಈಗಲೇ 76 ವರ್ಷವಾಗಿರುವುದರಿಂದ ಸಿಎಂ ಕುರ್ಚಿಯ ಕನಸಿಗೆ ಕಲ್ಲು ಹಾಕುತ್ತಿರುವ ಹೈಕಮ್ಯಾಂಡ್ ಮತ್ತೆ ಬಹುಮತ ಸಿಕ್ಕರೂ ತನ್ನನ್ನು ಮುಖ್ಯಮಂತ್ರಿ ಮಾಡದೇ ಹೋಗಬಹುದೆನ್ನುವ ಆತಂಕ ಯಡಿಯೂರಪ್ಪನವರದ್ದು. ಹೇಗೂ ಕೇಂದ್ರದಲ್ಲಿ ಅಧಿಕಾರ ಇರುವುದರಿಂದ ರಾಜ್ಯಪಾಲರಾಗಿ ಎಂದು ಹೇಳುವ ಸಾಧ್ಯತೆ ಇದೆ. ರಾಜ್ಯಪಾಲನಾಗಿ ಕೂರುವ ವ್ಯಕ್ತಿತ್ವ, ಮನಸ್ಥಿತಿ ಯಡಿಯೂರಪ್ಪನವರದ್ದಲ್ಲ. ಹಾಗಾಗಿ ವಿಧಾನಸಭೆ ವಿಸರ್ಜನೆಗೆ ಅವರು ಒಪ್ಪಲಿಕ್ಕಿಲ್ಲ.

ಒಟ್ಟಿನಲ್ಲಿ ಪಕ್ಕಾ ತ್ರಿಶಂಕು ಸ್ಥಿತಿ ಅನರ್ಹ ಶಾಸಕರಿಗೆ ಏರ್ಪಟ್ಟಿದೆ. ಇದು ಎಷ್ಟು ಬೇಗ ನಿವಾರಣೆಯಾಗಬಹುದು ಎಂಬುದನ್ನು ಯಾರೂ ಹೇಳುವ ಸ್ಥಿತಿಯಲ್ಲಿಲ್ಲ. ಈ ತ್ರಿಶಂಕು ಸ್ಥಿತಿ ಕೇವಲ ಅವರದ್ದಾಗಿರದೇ ರಾಜ್ಯ ಸರ್ಕಾರದ್ದು ಮತ್ತು ರಾಜ್ಯದ ಜನತೆಯದ್ದೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...