Homeಮುಖಪುಟಹೆಣ್ಣುಮಕ್ಕಳ ಮದುವೆ ವಯಸ್ಸು ಹೆಚ್ಚಿಸುವ ಮಸೂದೆ ಪರಿಶೀಲಿಸುವ 31 ಸದಸ್ಯರ ಸಮಿತಿಯಲ್ಲಿ ಕೇವಲ ಒಬ್ಬರೇ ಮಹಿಳೆ!

ಹೆಣ್ಣುಮಕ್ಕಳ ಮದುವೆ ವಯಸ್ಸು ಹೆಚ್ಚಿಸುವ ಮಸೂದೆ ಪರಿಶೀಲಿಸುವ 31 ಸದಸ್ಯರ ಸಮಿತಿಯಲ್ಲಿ ಕೇವಲ ಒಬ್ಬರೇ ಮಹಿಳೆ!

- Advertisement -
- Advertisement -

ಮಹಿಳೆಯರ ಕಾನೂನುಬದ್ಧ ವಿವಾಹದ ವಯಸ್ಸನ್ನು 21 ವರ್ಷಕ್ಕೆ ಏರಿಸುವ ಮಹತ್ವದ ಮಸೂದೆಯನ್ನು ಪರಿಶೀಲಿಸಲು 31 ಸದಸ್ಯರಿರುವ ಸಂಸದೀಯ ಸಮಿತಿಯನ್ನು ನಿಯೋಜಿಸಲಾಗಿದೆ. ಮಹಿಳೆಯೇ ಕೇಂದ್ರ ಬಿಂದುವಾಗಿರುವ ಮಸೂದೆಯ ಪರಿಶೀಲನಾ ಸಮಿತಿಯಲ್ಲಿ ಕೇವಲ ಒಬ್ಬ ಮಹಿಳಾ ಸಂಸದೆ ಮಾತ್ರ ಇದ್ದಾರೆ.

ಸಮಾಜದ ಮೇಲೆ ವಿಶೇಷವಾಗಿ ಮಹಿಳೆಯರ ಮೇಲೆ ವ್ಯಾಪಕ ಪರಿಣಾಮ ಬೀರುವ ‘ಬಾಲ್ಯವಿವಾಹ ನಿಷೇಧ (ತಿದ್ದುಪಡಿ) ಮಸೂದೆ’ಯನ್ನು ಶಿಕ್ಷಣ, ಮಹಿಳೆ, ಮಕ್ಕಳು, ಯುವಜನ ಮತ್ತು ಕ್ರೀಡೆಗಳ ಸಂಸದೀಯ ಸ್ಥಾಯಿ ಸಮಿತಿಯನ್ನು ಉಲ್ಲೇಖಿಸಿ ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಮಂಡಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಪ್ರಾಯೋಗಿಕವಾಗಿ ರೂಪಿಸಿದ ಮಸೂದೆಯು ವಿವಾಹದ ಕಾನೂನುಬದ್ಧ ವಯಸ್ಸನ್ನು 18 ರಿಂದ 21 ಕ್ಕೆ ಹೆಚ್ಚಿಸಲು ಪ್ರಯತ್ನಿಸುತ್ತದೆ.

ಇದನ್ನೂ ಓದಿ:ಯುವತಿಯರ ವಿವಾಹ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಪ್ರಸ್ತಾಪಕ್ಕೆ ಸಂಪುಟ ಒಪ್ಪಿಗೆ: ವರದಿ

ರಾಜ್ಯಸಭಾ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯಂತೆ ಬಿಜೆಪಿಯ ಹಿರಿಯ ನಾಯಕ ವಿನಯ್ ಸಹಸ್ರಬುದ್ಧೆ ನೇತೃತ್ವದ ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರ ಪಟ್ಟಿಯ ಪ್ರಕಾರ, 31 ಸದಸ್ಯರಲ್ಲಿ ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಏಕೈಕ ಮಹಿಳೆಯಾಗಿದ್ದಾರೆ.

ಸಮಿತಿಯಲ್ಲಿ ಹೆಚ್ಚು ಮಹಿಳಾ ಸಂಸದರಿದ್ದರೆ ಉತ್ತಮವಾಗಿರುತ್ತಿತ್ತು ಎಂದು ಸುಶ್ಮಿತಾ ದೇವ್ ಹೇಳಿದ್ದಾರೆ.

“ಸಮಿತಿಯಲ್ಲಿ ಹೆಚ್ಚಿನ ಮಹಿಳಾ ಸಂಸದರು ಇರಬೇಕೆಂದು ನಾನು ಬಯಸುತ್ತೇನೆ. ಆದರೆ ನಾವು ಎಲ್ಲರ ಹಿತಾಸಕ್ತಿಗಳನ್ನು ಕೇಳುತ್ತೇವೆ ಎಂದು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಸುಸ್ಮಿತಾ ದೇವ್‌ ಹೇಳಿರುವುದಾಗಿ ಪಿಟಿಐ ಉಲ್ಲೇಖಿಸಿದೆ.

ಇದನ್ನೂ ಓದಿ:ವಿವಾಹೇತರ ಸಂಬಂಧ ಆರೋಪ; ಮಹಿಳೆಯನ್ನು ಕಂಬಕ್ಕೆ ಕಟ್ಟಿ ಚಿತ್ರಹಿಂಸೆ- ವಿಡಿಯೊ ವೈರಲ್‌, ಪ್ರಕರಣ ದಾಖಲು

ಇದೇ ರೀತಿಯಲ್ಲಿ ಮಾತನಾಡಿರುವ ಸಂಸದೆ ಸುಪ್ರಿಯಾ ಸುಳೆ, “ಮಹಿಳೆಯರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಚರ್ಚಿಸುವ ಸಮಿತಿಯಲ್ಲಿ ಹೆಚ್ಚಿನ ಮಹಿಳಾ ಸಂಸದರು ಇರಬೇಕಿತ್ತು” ಎಂದು ಹೇಳಿದ್ದಾರೆ. ಎನ್‌ಸಿಪಿಯ ಸಂಸದೆಯಾಗಿರುವ ಸುಪ್ರಿಯಾ ಸುಳೆ ಸಂಸತ್ತಿನಲ್ಲಿ ಮಹಿಳಾ ಕೇಂದ್ರಿತ ವಿಷಯಗಳನ್ನೇ ಹೆಚ್ಚಾಗಿ ಪ್ರಸ್ತಾಪಿಸುತ್ತಾರೆ.

ಆದಾಗ್ಯೂ, ಸಮಿತಿಯ ಮುಂದೆ ಜನರನ್ನು ಆಹ್ವಾನಿಸಲು ಅಧ್ಯಕ್ಷರಿಗೆ ಅಧಿಕಾರವಿದೆ ಎಂದು ಅವರು ಹೇಳಿದ್ದಾರೆ. ಆದ್ದರಿಂದ, ಹೆಚ್ಚಿನ ಚರ್ಚೆಗಳಿಗಾಗಿ ಅವರು ಇತರ ಮಹಿಳಾ ಸಂಸದರನ್ನು ಆಹ್ವಾನಿಸಬಹುದು ಎಂದು ಆಶಿಸಿದ್ದಾರೆ.

ಇಲಾಖೆ-ಸಂಬಂಧಿತ ಸ್ಥಾಯಿ ಸಮಿತಿಗಳು ಶಾಶ್ವತವಾಗಿದ್ದಾಗಿದ್ದು, ವಿವಿಧ ಸಚಿವಾಲಯಗಳ ಮಸೂದೆಗಳು ಮತ್ತು ಸಂಬಂಧಿತ ವಿಷಯಗಳನ್ನು ವ್ಯವಹರಿಸಲು ಜಂಟಿ ಮತ್ತು ಆಯ್ಕೆ ಸಮಿತಿಗಳನ್ನು ಕಾಲಕಾಲಕ್ಕೆ ರಚಿಸಲಾಗುತ್ತದೆ.

ಇದನ್ನೂ ಓದಿ:ದೆಹಲಿ ಹೈಕೋರ್ಟ್‌ನಲ್ಲಿ ಸಲಿಂಗ ವಿವಾಹವನ್ನು ವಿರೋಧಿಸಿದ ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...