Homeಮುಖಪುಟ2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಖುಲಾಸೆ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು 'ಎಲ್ಲರಿಗೂ ಮುಕ್ತ ಅವಕಾಶವಿಲ್ಲ':...

2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಖುಲಾಸೆ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ‘ಎಲ್ಲರಿಗೂ ಮುಕ್ತ ಅವಕಾಶವಿಲ್ಲ’: ಬಾಂಬೆ ಹೈಕೋರ್ಟ್

- Advertisement -
- Advertisement -

ಮುಂಬೈ: 2008 ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ ವಿರುದ್ಧ ಮೇಲ್ಮನವಿ ಸಲ್ಲಿಸಲುಎಲ್ಲರಿಗೂ ಮುಕ್ತ ಅವಕಾಶವಿಲ್ಲ’ ಎಂದು ಮಂಗಳವಾರ ಬಾಂಬೆ ಹೈಕೋರ್ಟ್ ಹೇಳಿದ್ದು, ಸಂತ್ರಸ್ತರ ಕುಟುಂಬದ ಸದಸ್ಯರನ್ನು ವಿಚಾರಣೆಯಲ್ಲಿ ಸಾಕ್ಷಿಗಳಾಗಿ ಪರಿಶೀಲಿಸಲಾಗಿದೆಯೇ ಎಂಬ ಬಗ್ಗೆ ವಿವರಗಳನ್ನು ಕೇಳಿದೆ.

ಸ್ಫೋಟದಲ್ಲಿ ಸಾವನ್ನಪ್ಪಿದ ಆರು ಜನರ ಕುಟುಂಬ ಸದಸ್ಯರು ಸಲ್ಲಿಸಿದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ಗೌತಮ್ ಅನ್ಖಡ್ ಅವರ ಪೀಠವು ಆಲಿಸಿತು. ಮೇಲ್ಮನವಿಯಲ್ಲಿ, ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಪ್ರಕರಣದ ಏಳು ಆರೋಪಿಗಳನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಲಾಗಿದೆ.

ಮಂಗಳವಾರ ಹೈಕೋರ್ಟ್ ಪೀಠವು, ಕುಟುಂಬದ ಸದಸ್ಯರನ್ನು ವಿಚಾರಣೆಯಲ್ಲಿ ಸಾಕ್ಷಿಗಳಾಗಿ ಪರಿಶೀಲಿಸಲಾಗಿದೆಯೇ ಎಂದು ತಿಳಿದುಕೊಳ್ಳಲು ಬಯಸಿತು. ಕುಟುಂಬ ಸದಸ್ಯರ ವಕೀಲರು, ಮೇಲ್ಮನವಿ ಸಲ್ಲಿಸಿದ ಮೊದಲ ವ್ಯಕ್ತಿ ನಿಸಾರ್ ಅಹ್ಮದ್, ಅವರ ಮಗ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಅವರು ವಿಚಾರಣೆಯಲ್ಲಿ ಸಾಕ್ಷಿಯಾಗಿರಲಿಲ್ಲ, ಇದರ ಬಗ್ಗೆ ಬುಧವಾರ ವಿವರಗಳನ್ನು ಸಲ್ಲಿಸುವುದಾಗಿ ಹೇಳಿದರು.

ಪೀಠವು, ಮೇಲ್ಮನವಿದಾರನ ಮಗ ಸ್ಫೋಟದಲ್ಲಿ ಸಾವನ್ನಪ್ಪಿದ್ದರೆ, ಅವರು (ನಿಸಾರ್ ಅಹ್ಮದ್) ಸಾಕ್ಷಿಯಾಗಬೇಕಿತ್ತು ಎಂದು ಹೇಳಿತು.

ನೀವು (ಅರ್ಜಿದಾರರು) ಸಾಕ್ಷಿಗಳಾಗಿದ್ದೀರಾ ಅಥವಾ ಇಲ್ಲವೇ ಎಂದು ಸೂಚಿಸಬೇಕು. ನಮಗೆ ವಿವರಗಳನ್ನು ನೀಡಿ. ಇದು ಎಲ್ಲರಿಗೂ ಮುಕ್ತ ಅವಕಾಶವಲ್ಲಎಂದು ಹೈಕೋರ್ಟ್ ಹೇಳಿದೆ.

ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ಕಳೆದ ವಾರ ಸಲ್ಲಿಸಲಾದ ಮೇಲ್ಮನವಿಯಲ್ಲಿ, ದೋಷಪೂರಿತ ತನಿಖೆ ಅಥವಾ ತನಿಖೆಯಲ್ಲಿನ ಕೆಲವು ದೋಷಗಳು ಆರೋಪಿಗಳನ್ನು ಖುಲಾಸೆಗೊಳಿಸಲು ಆಧಾರವಾಗುವುದಿಲ್ಲ ಎಂದು ಹೇಳಲಾಗಿದೆ. ಅಲ್ಲದೆ, ಸ್ಫೋಟದ ಸಂಚು ರಹಸ್ಯವಾಗಿ ರೂಪಿಸಲಾಗಿದೆ, ಆದ್ದರಿಂದ ನೇರ ಸಾಕ್ಷ್ಯ ಇರಲು ಸಾಧ್ಯವಿಲ್ಲ ಎಂದು ಮೇಲ್ಮನವಿದಾರರು ಪ್ರತಿಪಾದಿಸಿದ್ದಾರೆ.

ಜುಲೈ 31ರಂದು ಏಳು ಆರೋಪಿಗಳನ್ನು ಖುಲಾಸೆಗೊಳಿಸಿ ವಿಶೇಷ ಎನ್ಐಎ ನ್ಯಾಯಾಲಯ ನೀಡಿದ ಆದೇಶವು ತಪ್ಪು ಮತ್ತು ಕಾನೂನಿಗೆ ವಿರುದ್ಧವಾಗಿದೆ, ಆದ್ದರಿಂದ ಅದನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರು ಹೇಳಿದ್ದಾರೆ.

ಸೆಪ್ಟೆಂಬರ್ 29, 2008ರಂದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿರುವ ಮುಂಬೈನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ಮಾಲೆಗಾಂವ್ ಪಟ್ಟಣದ ಮಸೀದಿಯ ಸಮೀಪ ಒಂದು ಮೋಟಾರ್ಸೈಕಲ್ಗೆ ಜೋಡಿಸಲಾದ ಸ್ಫೋಟಕ ಸಾಧನವು ಸ್ಫೋಟಗೊಂಡಿತ್ತು. ಘಟನೆಯಲ್ಲಿ ಆರು ಜನರು ಸಾವನ್ನಪ್ಪಿ 101 ಜನರು ಗಾಯಗೊಂಡಿದ್ದರು.

ಕ್ರಿಮಿನಲ್ ವಿಚಾರಣೆಯಲ್ಲಿ ವಿಚಾರಣಾ ನ್ಯಾಯಾಧೀಶರುಪೋಸ್ಟ್ಮನ್ ಅಥವಾ ಮೂಕ ಪ್ರೇಕ್ಷಕನಂತೆ ವರ್ತಿಸಬಾರದು ಎಂದು ಮೇಲ್ಮನವಿ ಹೇಳಿದೆ. ಪ್ರಾಸಿಕ್ಯೂಷನ್ ಸತ್ಯಗಳನ್ನು ಹೊರತೆಗೆಯಲು ವಿಫಲವಾದಾಗ, ವಿಚಾರಣಾ ನ್ಯಾಯಾಲಯವು ಪ್ರಶ್ನೆಗಳನ್ನು ಕೇಳಬಹುದು ಮತ್ತು/ಅಥವಾ ಸಾಕ್ಷಿಗಳಿಗೆ ಸಮನ್ಸ್ ನೀಡಬಹುದು ಎಂದು ಮೇಲ್ಮನವಿದಾರರು ಸೇರಿಸಿದ್ದಾರೆ.

ವಿಚಾರಣಾ ನ್ಯಾಯಾಲಯವು ದುರದೃಷ್ಟವಶಾತ್ ಕೇವಲ ಅಂಚೆ ಕಚೇರಿಯಂತೆ ವರ್ತಿಸಿದೆ ಮತ್ತು ದೋಷಪೂರಿತ ಪ್ರಾಸಿಕ್ಯೂಷನ್ ಆರೋಪಿಗಳಿಗೆ ಲಾಭವಾಗಲು ಅವಕಾಶ ಮಾಡಿಕೊಟ್ಟಿದೆಎಂದು ಮೇಲ್ಮನವಿ ಹೇಳಿದೆ. ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನಿಖೆ ಮತ್ತು ವಿಚಾರಣೆ ನಡೆಸಿದ ರೀತಿ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದು, ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಕೋರಿದೆ.

ರಾಜ್ಯ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಏಳು ಜನರನ್ನು ಬಂಧಿಸುವ ಮೂಲಕ ದೊಡ್ಡ ಸಂಚನ್ನು ಭೇದಿಸಿತು ಮತ್ತು ಅಂದಿನಿಂದ ಅಲ್ಪಸಂಖ್ಯಾತ ಸಮುದಾಯದವರು ವಾಸಿಸುವ ಪ್ರದೇಶಗಳಲ್ಲಿ ಯಾವುದೇ ಸ್ಫೋಟ ಸಂಭವಿಸಿಲ್ಲ ಎಂದು ಮೇಲ್ಮನವಿ ಹೇಳಿದೆ.

ಎನ್ಐಎ ಪ್ರಕರಣವನ್ನು ಕೈಗೆತ್ತಿಕೊಂಡ ನಂತರ ಆರೋಪಿಗಳ ಮೇಲಿನ ಆರೋಪಗಳನ್ನು ದುರ್ಬಲಗೊಳಿಸಿದೆ ಎಂದು ಅದು ಹೇಳಿಕೊಂಡಿದೆ.

ತನ್ನ ತೀರ್ಪಿನಲ್ಲಿ ವಿಶೇಷ ನ್ಯಾಯಾಲಯವು ಕೇವಲ ಅನುಮಾನವು ನಿಜವಾದ ಪುರಾವೆಯನ್ನು ಬದಲಾಯಿಸಲು ಸಾಧ್ಯವಿಲ್ಲ ಮತ್ತು ಅಪರಾಧ ಸಾಬೀತುಪಡಿಸಲು ಯಾವುದೇ ವಿಶ್ವಾಸಾರ್ಹ ಅಥವಾ ಸ್ಪಷ್ಟ ಸಾಕ್ಷ್ಯ ಇಲ್ಲ ಎಂದು ಹೇಳಿತ್ತು.

ಎನ್ಐಎ ನ್ಯಾಯಾಲಯದ ವಿಶೇಷ ನ್ಯಾಯಾಧೀಶ .ಕೆ. ಲಹೋತಿ, ಸಮಂಜಸವಾದ ಅನುಮಾನವನ್ನು ಮೀರಿ ಪ್ರಕರಣವನ್ನು ಸಾಬೀತುಪಡಿಸುವ ಯಾವುದೇವಿಶ್ವಾಸಾರ್ಹ ಮತ್ತು ಸ್ಪಷ್ಟ ಸಾಕ್ಷ್ಯಆರೋಪಿಗಳ ವಿರುದ್ಧ ಇಲ್ಲ ಎಂದು ಹೇಳಿದ್ದರು.

ಕೋಮು ಸೂಕ್ಷ್ಮ ಪ್ರದೇಶವಾದ ಮಾಲೆಗಾಂವ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯವನ್ನು ಭಯಭೀತಗೊಳಿಸುವ ಉದ್ದೇಶದಿಂದ ಬಲಪಂಥೀಯ ಉಗ್ರಗಾಮಿಗಳು ಸ್ಫೋಟ ನಡೆಸಿದ್ದಾರೆ ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು.

ಎನ್ಐಎ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಪ್ರಾಸಿಕ್ಯೂಷನ್ ಪ್ರಕರಣ ಮತ್ತು ತನಿಖೆಯಲ್ಲಿನ ಹಲವಾರು ಲೋಪದೋಷಗಳನ್ನು ಗಮನಸೆಳೆದಿದೆ ಮತ್ತು ಆರೋಪಿಗಳು ಅನುಮಾನದ ಲಾಭ ಪಡೆಯಲು ಅರ್ಹರು ಎಂದು ಹೇಳಿದೆ.

ಠಾಕೂರ್ ಮತ್ತು ಪುರೋಹಿತ್ ಜೊತೆಗೆ, ಮೇಜರ್ ರಮೇಶ್ ಉಪಾಧ್ಯಾಯ (ನಿವೃತ್ತ), ಅಜಯ್ ರಾಹೀರ್ಕರ್, ಸುಧಾಕರ್ ದ್ವಿವೇದಿ, ಸುಧಾಕರ್ ಚತುರ್ವೇದಿ ಮತ್ತು ಸಮೀರ್ ಕುಲಕರ್ಣಿ ಕೂಡ ಆರೋಪಿಗಳಾಗಿದ್ದರು.

ಪ್ರಕರಣದ ಹಿನ್ನೆಲೆ ಮತ್ತು ದೋಷಮುಕ್ತಿ

2008ರ ಸೆಪ್ಟೆಂಬರ್ 29ರಂದು ಮಹಾರಾಷ್ಟ್ರದ ಕೋಮು ಸೂಕ್ಷ್ಮ ಪ್ರದೇಶವಾದ ಮಾಲೆಗಾಂವ್‌ನ ಭಿಕ್ಕು ಚೌಕ್ ಮಸೀದಿ ಬಳಿ ಈ ಬಾಂಬ್ ಸ್ಫೋಟ ಸಂಭವಿಸಿತ್ತು. ರಂಜಾನ್ ತಿಂಗಳಿನಲ್ಲಿ ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ನಡೆದ ಈ ದಾಳಿಯಲ್ಲಿ ಆರು ಜನರು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದವು. ಆರಂಭದಲ್ಲಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ATS) ಈ ಪ್ರಕರಣದ ತನಿಖೆ ನಡೆಸಿತ್ತು.

2011ರಲ್ಲಿ, ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವರ್ಗಾಯಿಸಲಾಯಿತು. ವರ್ಷಗಳ ಕಾನೂನು ಪ್ರಕ್ರಿಯೆ, ವಾದ ವಿವಾದಗಳು ಮತ್ತು ಸಾಕ್ಷಿಗಳ ವಿಚಾರಣೆಯ ನಂತರ, ವಿಶೇಷ NIA ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಾಲಯವು ಏಪ್ರಿಲ್ 19ರಂದು ತೀರ್ಪನ್ನು ಕಾಯ್ದಿರಿಸಿತ್ತು. ಸುಮಾರು ಒಂದು ಲಕ್ಷ ಪುಟಗಳ ದಾಖಲೆಗಳು ಮತ್ತು 323 ಸಾಕ್ಷಿಗಳನ್ನು ನ್ಯಾಯಾಲಯವು ಪರಿಶೀಲಿಸಿತ್ತು.

ಈ ಸಾಕ್ಷಿಗಳಲ್ಲಿ 34 ಮಂದಿ ತಮ್ಮ ಹೇಳಿಕೆಗಳಿಂದ ಹಿಂದೆ ಸರಿದಿದ್ದರು.ನ್ಯಾಯಾಲಯದ ತೀರ್ಪು ಭಾರತದ ಅತ್ಯಂತ ವಿವಾದಾತ್ಮಕ ಭಯೋತ್ಪಾದನಾ ಪ್ರಕರಣಗಳಲ್ಲಿ ಒಂದನ್ನು ಕೊನೆಗೊಳಿಸಿದೆ. ತೀರ್ಪಿನಲ್ಲಿ ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಮತ್ತು ಇತರ ಐವರನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA), ಶಸ್ತ್ರಾಸ್ತ್ರ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ (IPC) ಅಡಿಯಲ್ಲಿನ ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ.

ಆರೋಪ ಸಾಬೀತುಪಡಿಸಲು ಸಾಕಷ್ಟು ಸಾಕ್ಷ್ಯಾಧಾರಗಳ ಕೊರತೆಯಿದೆ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ. ಈ ತೀರ್ಪು ಸಂತ್ರಸ್ತರ ಕುಟುಂಬಗಳಲ್ಲಿ ಮತ್ತು ಮಾಲೆಗಾಂವ್‌ನ ಜನರಲ್ಲಿ ಆಘಾತ ಮತ್ತು ಅಸಮಾಧಾನವನ್ನು ಉಂಟುಮಾಡಿದೆ.

ಗುಜರಾತ್‌ ಡಿಸ್ಟರ್ಬ್ಡ್‌ ಏರಿಯಾಸ್ ಆ್ಯಕ್ಟ್‌: 15ರ ಮುಸ್ಲಿಂ ಬಾಲಕಿ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...