Homeಮುಖಪುಟಕರ್ನಾಟಕದ ಪೂರ್ಣಾವಧಿ ಸಿಎಂ ಆದವರು ಮೂರು ಜನ ಮಾತ್ರ: ಹೆಚ್ಚು ದಿನ ಅಧಿಕಾರ ನಡೆಸಿದವರು ದೇವರಾಜ...

ಕರ್ನಾಟಕದ ಪೂರ್ಣಾವಧಿ ಸಿಎಂ ಆದವರು ಮೂರು ಜನ ಮಾತ್ರ: ಹೆಚ್ಚು ದಿನ ಅಧಿಕಾರ ನಡೆಸಿದವರು ದೇವರಾಜ ಅರಸು

- Advertisement -
- Advertisement -

ಕರ್ನಾಟಕದ ಸಿಎಂ ಆಯ್ಕೆ ಕಗ್ಗಂಟು ಮುಗಿದಿದ್ದು ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ. ಈ ನಡುವೆ ಮುಂದಿನ ಐದು ವರ್ಷ ಅವರೇ ಮುಖ್ಯಮಂತ್ರಿ ಎಂಬ ಎಂ.ಬಿ ಪಾಟೀಲ್‌ರವರ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಒಂದು ವೇಳೆ ಸಿದ್ದರಾಮಯ್ಯನವರು ಈ ಬಾರಿಯೂ ಪೂರ್ಣಾವಧಿ ಸಿಎಂ ಆದಲ್ಲಿ ಹಲವಾರು ದಾಖಲೆಗಳಿಗೆ ಪಾತ್ರರಾಗಲಿದ್ದಾರೆ. ಏಕೆಂದರೆ ಇದುವರೆಗೂ ಪೂರ್ಣಾವಧಿಗೆ ಮುಖ್ಯಮಂತ್ರಿಯಾದವರು ಮೂರು ಜನ ಮಾತ್ರ. ಸಿದ್ದರಾಮಯ್ಯ ಎರಡನೇ ಬಾರಿಗೆ ಪೂರ್ಣಾವಧಿ ಮುಖ್ಯಮಂತ್ರಿಯಾದ ವಿಶಿಷ್ಟ ದಾಖಲೆ ಮಾಡಬಹುದು.

ಪೂರ್ಣಾವಧಿ ಸಿಎಂಗಳು

ಎಸ್‌ ನಿಜಲಿಂಗಪ್ಪನವರು 1962ರಿಂದ 1967ರವರೆಗೆ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿದ್ದರು. ಅವರ ನಂತರ ದೇವರಾಜ ಅರಸುರವರು 1972 ರಿಂದ 1977ರವರೆಗೆ ಪೂರ್ಣಾವಧಿ ಸಿಎಂ ಆಗಿದ್ದರು. ಆದಾದ ನಂತರ 2013ರಲ್ಲಿ ಸಿಎಂ ಆದ ಸಿದ್ದರಾಮಯ್ಯನವರು 2018ರವರೆಗೂ ಪೂರ್ಣಾವಧಿ ಪೂರೈಸಿದ್ದರು.

1999ರ ಅಕ್ಟೋಬರ್​ನಲ್ಲಿ ರಾಜ್ಯದಲ್ಲಿ ಎಸ್.ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್ ಪಕ್ಷ ಬಹುಮತ ಗಳಿಸಿ ಅಧಿಕಾರ ಹಿಡಿದಿತ್ತು. ಆದರೆ ಇನ್ನೇನು ಪೂರ್ಣಾವಧಿ ಮುಗಿಸಲು ಕೇವಲ 5 ತಿಂಗಳು ಇದೆ ಎನ್ನುವಾಗಲೇ ಲೋಕಸಭಾ ಚುನಾವಣೆ ಎದುರಾಗಿತ್ತು. ಹೀಗಾಗಿ ವಿಧಾನಸಭೆ ಚುನಾವಣೆಯೂ ಒಟ್ಟಿಗೇ ನಡೆಯಲಿ ಎನ್ನುವ ಉದ್ದೇಶದಿಂದ ಮಾಜಿ ಸಿಎಂ ಎಸ್.ಎಂ ಕೃಷ್ಣ ವಿಧಾನಸಭೆಯನ್ನು ವಿಸರ್ಜಿಸಿದ್ದರು. ಹೀಗಾಗಿ ಪೂರ್ಣಾವಧಿ ಸಿಎಂ ಪಟ್ಟಿಗೆ ಅವರ ಹೆಸರು ಸೇರ್ಪಡೆಯಾಗಲಿಲ್ಲ.

ಹೆಚ್ಚು ದಿನ ಕರ್ನಾಟಕದ ಸಿಎಂ ಆದವರು 

  1. ಎಸ್. ನಿಜಲಿಂಗಪ್ಪ: 2,729 ದಿನಗಳು
  2. ದೇವರಾಜ ಅರಸು: 2,790 ದಿನಗಳು
  3. ರಾಮಕೃಷ್ಣ ಹೆಗ್ಡೆ: 1,967 ದಿನಗಳು
  4. ಸಿದ್ದರಾಮಯ್ಯ*: 1,828+++ ದಿನಗಳು

ಕಡಿದಾಳು ಮಂಜಪ್ಪನವರು ಅತಿ ಕಡಿಮೆ ಅವಧಿಗೆ ಮುಖ್ಯಮಂತ್ರಿಯಾಗಿದ್ದಾರೆ. ಅವರು ಕೇವಲ 73 ದಿನಗಳ ಕಾಲ ಅಧಿಕಾರದಲ್ಲಿದ್ದರು.

ವರ್ಷಗಳ ಕಾಲ ಅಧಿಕಾರ ನಡೆಸಿದ ಮುಖ್ಯಮಂತ್ರಿಗಳ ಸಂಖ್ಯೆ

1 ವರ್ಷದವರೆಗೆ ಅಧಿಕಾರದಲ್ಲಿದ್ದವರು: 09
2 ವರ್ಷದವರೆಗೆ ಅಧಿಕಾರದಲ್ಲಿದ್ದವರು: 08
3 ವರ್ಷದವರೆಗೆ ಅಧಿಕಾರದಲ್ಲಿದ್ದವರು: 06
4 ವರ್ಷದವರೆಗೆ ಅಧಿಕಾರದಲ್ಲಿದ್ದವರು: 3
5 ವರ್ಷದವರೆಗೆ ಅಧಿಕಾರದಲ್ಲಿದ್ದವರು: 3
5 ವರ್ಷ ಮೇಲ್ಪಟ್ಟು ಅಧಿಕಾರದಲ್ಲಿದ್ದವರು: 3

ಇದನ್ನೂ ಓದಿ: ಇದುವರೆಗಿನ ಕರ್ನಾಟಕದ ಮುಖ್ಯಮಂತ್ರಿಗಳು ಮತ್ತು ಜಾತಿ ಪ್ರಾತಿನಿಧ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...