Homeಕರ್ನಾಟಕ‘ಹಿಂದಿ ಮಾತನಾಡುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವಾಸ ಭಾಗ್ಯ’ - ಈ ನಿಯಮ ಕೇಂದ್ರ ಅಥವಾ ರಾಜ್ಯ...

‘ಹಿಂದಿ ಮಾತನಾಡುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವಾಸ ಭಾಗ್ಯ’ – ಈ ನಿಯಮ ಕೇಂದ್ರ ಅಥವಾ ರಾಜ್ಯ ಸರ್ಕಾರ ಮಾಡಿಲ್ಲ: ಸಚಿವ ನಾಗೇಶ್‌‌ ಸ್ಪಷ್ಟನೆ

- Advertisement -
- Advertisement -

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕದಿಂದ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಹಿಂದಿ ಹಾಗೂ ಇಂಗ್ಲೀಷ್ ಭಾಷೆ ಜ್ಞಾನ ಕಡ್ಡಾಯ ಎಂಬ ಸೂಚನೆಯನ್ನು ಒಕ್ಕೂಟ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ನೀಡಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಬುಧವಾರ ಸ್ಪಷ್ಟಪಡಿಸಿದ್ದಾರೆ.

ಒಕ್ಕೂಟ ಸರ್ಕಾರವು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ‘ಏಕ್‌ ಭಾರತ್‌ ಶ್ರೇಷ್ಠ ಭಾರತ್‌’ ಎಂಬ ಕಾರ್ಯಕ್ರಮದಡಿ ‘ಹೊರ ರಾಜ್ಯಗಳಿಗೆ ವಿದ್ಯಾರ್ಥಿಗಳ ಭೇಟಿ’ ಎಂಬ ಯೋಜನೆ ಹಾಕಿಕೊಂಡಿತ್ತು. ಈ ಯೋಜನೆಯ ಅನ್ವಯ ಕರ್ನಾಟಕದಿಂದ 50 ವಿದ್ಯಾರ್ಥಿಗಳು ಉತ್ತರಾಖಂಡ ರಾಜ್ಯ ಪ್ರವಾಸ ಮಾಡಲಿದ್ದಾರೆ. ಆದರೆ, ಈ ಪ್ರವಾಸಕ್ಕೆ ವಿದ್ಯಾರ್ಥಿಗಳು ಆಯ್ಕೆ ಆಗಬೇಕಾದರೆ ‘ಹಿಂದಿ ಭಾಷೆ’ ಮಾತನಾಡಲು ಬರಬೇಕು ಎಂದು ಶಿಕ್ಷಣ ಇಲಾಖೆ ಷರತ್ತನ್ನು ಇಟ್ಟು ಸುತ್ತೋಲೆ ಹೊರಡಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಲಾಖೆಯ ಸುತ್ತೋಲೆಯಲ್ಲಿ, “ಭಾರತ ಸರ್ಕಾರವು 75ನೇ ವರ್ಷದ ಆಜಾದಿ ಕಾ ಅಮೃತ‌ ಮಹೋತ್ಸವ್ ಅಂಗವಾಗಿ ಏಕ್‌ ಭಾರತ್‌ ಶ್ರೇಷ್ಠ ಭಾರತ್‌ ಎಂಬ ಕಾರ್ಯಕ್ರಮದಡಿ ಹೊರ ರಾಜ್ಯಗಳಿಗೆ ವಿದ್ಯಾರ್ಥಿಗಳ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ತಮ್ಮ ಕಾಲೇಜಿನಲ್ಲಿ ಪ್ರಸ್ತುತ ಪಿಯುಸಿ ಓದುತ್ತಿರುವವರ ಪೈಕಿ ‘ಹಿಂದಿ ಭಾಷೆ’ಯಲ್ಲಿ ಮಾತನಾಡುವ ಮತ್ತು ತಂತ್ರಜ್ಞಾನದ ತಿಳಿವಳಿಕೆ, ಸಾಂಸ್ಕೃತಿಕ, ಕ್ರೀಡಾಸ್ಫೂರ್ತಿ ಹೊಂದಿರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಕಳುಹಿಸಲು ತಿಳಿಸಿದೆ” ಎಂದು ಉಪನಿರ್ದೇಶಕರು ತಿಳಿಸಿದ್ದರು.

ಇದನ್ನೂ ಓದಿ: ಒಕ್ಕೂಟ ಸರ್ಕಾರದ ಯೋಜನೆ: ‘ಹಿಂದಿ’ ಮಾತನಾಡುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವಾಸ ಭಾಗ್ಯ!

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಬೆಂಗಳೂರು ದಕ್ಷಿಣ ಉಪನಿರ್ದೇಶಕ ಆನಂದ ರಾಜು ಅವರು,“ಪ್ರವಾಸಕ್ಕೆ ಆಯ್ಕೆ ಮಾಡುವಾಗ ಹಿಂದಿ ಅಥವಾ ಇಂಗ್ಲಿಷ್‌ ಮಾತನಾಡಲು ಬರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವಂತೆ ಸರ್ವಶಿಕ್ಷಾ ಅಭಿಯಾನದ ಸಭೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು ದಕ್ಷಿಣ ಮತ್ತು ಉತ್ತರದಿಂದ ತಲಾ ಇಬ್ಬರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು” ಎಂದು ಹೇಳಿದ್ದರು.

ಈ ಷರತ್ತಿನಿಂದಾಗಿ ಉತ್ತರ ಭಾರತದಿಂದ ಬಂದು ಇಲ್ಲಿ ನೆಲೆಸಿರುವ ಹಿಂದಿ ಭಾಷಿಕರು ಅಥವಾ ಇಂಗ್ಲಿಷ್‌ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳು ಮಾತ್ರ ಈ ಪ್ರವಾಸಕ್ಕೆ ಆಯ್ಕೆಯಾಗಿ ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುವುದಿಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರ, “ಹೌದು ಅಂತಹ ಮಕ್ಕಳು ವಂಚಿತರಾಗುತ್ತಾರೆ. ಆದರೆ ಸರ್ಕಾರದ ಆದೇಶ ಇದೆ” ಎಂದು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಬೆಂಗಳೂರು ದಕ್ಷಿಣ ಜಿಲ್ಲೆಯ ಉಪನಿರ್ದೇಶಕರು, ಪದವಿಪೂರ್ವ ಕಾಲೇಜಿಗೆ ಹೊರಡಿಸಿರುವ ಈ ಷರತ್ತು ರಾಜ್ಯದಾತ್ಯಂತ ಭಾರಿ ಚರ್ಚೆಗೆ ಒಳಪಟ್ಟಿದ್ದು, ಆಕ್ರೋಶ ವ್ಯಕ್ತವಾಗಿತ್ತು. ವಿವಾದದ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು, “ಹಿಂದಿ ಭಾಷೆ ಬಲ್ಲ ಮಕ್ಕಳಿಗೆ ಮಾತ್ರ ಪ್ರವಾಸ – ಕನ್ನಡಕ್ಕೆ ಬಗೆಯುವ ದ್ರೋಹ” ಎಂದು ಕಿಡಿ ಕಾರಿದ್ದರು.

ಇದನ್ನೂ ಓದಿ: ಹಿಂದಿ ಭಾಷೆ ಬಲ್ಲ ಮಕ್ಕಳಿಗೆ ಮಾತ್ರ ಪ್ರವಾಸ – ಕನ್ನಡಕ್ಕೆ ಬಗೆಯುವ ದ್ರೋಹ: ಎಚ್‌ಡಿಕೆ ಆಕ್ರೋಶ

ಇದೀಗ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌, “ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕದಿಂದ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಹಿಂದಿ/ಇಂಗ್ಲೀಷ್ ಭಾಷೆ ಜ್ಞಾನ ಕಡ್ಡಾಯ ಎಂಬ ಸೂಚನೆಯನ್ನು ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ನೀಡಿಲ್ಲ” ಎಂದು ಹೇಳಿದ್ದಾರೆ.

“ಈ ಗೊಂದಲಕ್ಕೆ ಕಾರಣವಾದ ಅಧಿಕಾರಿ/ಸಿಬ್ಬಂದಿ ವಿರುದ್ಧ ಇಲಾಖೆಯಿಂದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಭರವಸೆ ನೀಡಿದ್ದಾರೆ.

ರಾಜ್ಯದ ವಿದ್ಯಾರ್ಥಿಗಳನ್ನು ಉತ್ತರಾಖಂಡಕ್ಕೆ ಕಳುಹಿಸುವ ಜವಾಬ್ದಾರಿ ಹೊತ್ತಿರುವ ಆರ್‌ಎನ್‌ಎಸ್‌ ಕಾಲೇಜಿನ ಉಪನ್ಯಾಸಕಿ ಡಾ. ಪಲ್ಲವಿ ಅವರು ಮಾತನಾಡುತ್ತಾ, “ಜವಾಹರಲಾಲ್‌ ನೆಹರೂ ಕೇಂದ್ರೀಯ ವಿದ್ಯಾಲಯ, ನವೋದಯ ವಿದ್ಯಾಲಯಗಳಿಂದ ತಲಾ ಮೂರು ವಿದ್ಯಾರ್ಥಿಗಳು, ಸಿಬಿಎಸ್‌ಇ ಮತ್ತು ರಾಜ್ಯ ಪಠ್ಯಕ್ರಮದಿಂದ 19 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಿದ್ದೇವೆ. ವಿದ್ಯಾರ್ಥಿ, ವಿದ್ಯಾರ್ಥಿನಿ, ಎಸ್ಸಿ ಎಸ್ಟಿ ಇತರೆ ಹಿಂದುಳಿದ ವರ್ಗ ಹೀಗೆ ಎಲ್ಲರಿಗೂ ಅವಕಾಶ ಕಲ್ಪಿಸಲಾಗಿದೆ. ಆದರೆ, ಹಿಂದಿ ಭಾಷೆ ಬರುವ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಬೇಕು ಎಂಬ ನಿಯಮ ಇಲ್ಲ” ಎಂದು ಸುತ್ತೋಲೆಗೆ ವ್ಯತಿರಿಕ್ತ ಹೇಳಿಕೆ ನೀಡಿದ್ದರು.‌

ಇದನ್ನೂ ಓದಿ: ಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ

ಒಕ್ಕೂಟ ಸರ್ಕಾರದ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದಲ್ಲಿಯೂ ಹಿಂದಿ ಅಥವಾ ಇಂಗ್ಲಿಷ್‌ ಭಾಷೆ ಬಲ್ಲ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಬೇಕು ಎಂಬ ನಿರ್ದೇಶನ ನೀಡಿಲ್ಲ. ಹಾಗಿದ್ದರೆ ಕರ್ನಾಟಕ ಸರ್ಕಾರವೇ ಉದ್ದೇಶಪೂರ್ವಕವಾಗಿ ಹಿಂದಿ ಹೇರಲು ಹೊರಟಿದೆಯೇ ಎಂಬ ಅನುಮಾನವನ್ನು ಕೂಡಾ ಸಾಮಾಜಿಕ ಕಾರ್ಯಕರ್ತರು ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಾ ಅಯ್ಯೊಗ್ಯರೆಲ್ಲಾ ಶಿಕ್ಷಣ ಮಂತ್ರಿ,ಇದು ಈ ನಾಡಿನ ದುರ್ದೈವ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...