Homeಕರ್ನಾಟಕ‘ಹಿಂದಿ ಮಾತನಾಡುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವಾಸ ಭಾಗ್ಯ’ - ಈ ನಿಯಮ ಕೇಂದ್ರ ಅಥವಾ ರಾಜ್ಯ...

‘ಹಿಂದಿ ಮಾತನಾಡುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವಾಸ ಭಾಗ್ಯ’ – ಈ ನಿಯಮ ಕೇಂದ್ರ ಅಥವಾ ರಾಜ್ಯ ಸರ್ಕಾರ ಮಾಡಿಲ್ಲ: ಸಚಿವ ನಾಗೇಶ್‌‌ ಸ್ಪಷ್ಟನೆ

- Advertisement -
- Advertisement -

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕದಿಂದ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಹಿಂದಿ ಹಾಗೂ ಇಂಗ್ಲೀಷ್ ಭಾಷೆ ಜ್ಞಾನ ಕಡ್ಡಾಯ ಎಂಬ ಸೂಚನೆಯನ್ನು ಒಕ್ಕೂಟ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ನೀಡಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಬುಧವಾರ ಸ್ಪಷ್ಟಪಡಿಸಿದ್ದಾರೆ.

ಒಕ್ಕೂಟ ಸರ್ಕಾರವು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ‘ಏಕ್‌ ಭಾರತ್‌ ಶ್ರೇಷ್ಠ ಭಾರತ್‌’ ಎಂಬ ಕಾರ್ಯಕ್ರಮದಡಿ ‘ಹೊರ ರಾಜ್ಯಗಳಿಗೆ ವಿದ್ಯಾರ್ಥಿಗಳ ಭೇಟಿ’ ಎಂಬ ಯೋಜನೆ ಹಾಕಿಕೊಂಡಿತ್ತು. ಈ ಯೋಜನೆಯ ಅನ್ವಯ ಕರ್ನಾಟಕದಿಂದ 50 ವಿದ್ಯಾರ್ಥಿಗಳು ಉತ್ತರಾಖಂಡ ರಾಜ್ಯ ಪ್ರವಾಸ ಮಾಡಲಿದ್ದಾರೆ. ಆದರೆ, ಈ ಪ್ರವಾಸಕ್ಕೆ ವಿದ್ಯಾರ್ಥಿಗಳು ಆಯ್ಕೆ ಆಗಬೇಕಾದರೆ ‘ಹಿಂದಿ ಭಾಷೆ’ ಮಾತನಾಡಲು ಬರಬೇಕು ಎಂದು ಶಿಕ್ಷಣ ಇಲಾಖೆ ಷರತ್ತನ್ನು ಇಟ್ಟು ಸುತ್ತೋಲೆ ಹೊರಡಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಲಾಖೆಯ ಸುತ್ತೋಲೆಯಲ್ಲಿ, “ಭಾರತ ಸರ್ಕಾರವು 75ನೇ ವರ್ಷದ ಆಜಾದಿ ಕಾ ಅಮೃತ‌ ಮಹೋತ್ಸವ್ ಅಂಗವಾಗಿ ಏಕ್‌ ಭಾರತ್‌ ಶ್ರೇಷ್ಠ ಭಾರತ್‌ ಎಂಬ ಕಾರ್ಯಕ್ರಮದಡಿ ಹೊರ ರಾಜ್ಯಗಳಿಗೆ ವಿದ್ಯಾರ್ಥಿಗಳ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ತಮ್ಮ ಕಾಲೇಜಿನಲ್ಲಿ ಪ್ರಸ್ತುತ ಪಿಯುಸಿ ಓದುತ್ತಿರುವವರ ಪೈಕಿ ‘ಹಿಂದಿ ಭಾಷೆ’ಯಲ್ಲಿ ಮಾತನಾಡುವ ಮತ್ತು ತಂತ್ರಜ್ಞಾನದ ತಿಳಿವಳಿಕೆ, ಸಾಂಸ್ಕೃತಿಕ, ಕ್ರೀಡಾಸ್ಫೂರ್ತಿ ಹೊಂದಿರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಕಳುಹಿಸಲು ತಿಳಿಸಿದೆ” ಎಂದು ಉಪನಿರ್ದೇಶಕರು ತಿಳಿಸಿದ್ದರು.

ಇದನ್ನೂ ಓದಿ: ಒಕ್ಕೂಟ ಸರ್ಕಾರದ ಯೋಜನೆ: ‘ಹಿಂದಿ’ ಮಾತನಾಡುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವಾಸ ಭಾಗ್ಯ!

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಬೆಂಗಳೂರು ದಕ್ಷಿಣ ಉಪನಿರ್ದೇಶಕ ಆನಂದ ರಾಜು ಅವರು,“ಪ್ರವಾಸಕ್ಕೆ ಆಯ್ಕೆ ಮಾಡುವಾಗ ಹಿಂದಿ ಅಥವಾ ಇಂಗ್ಲಿಷ್‌ ಮಾತನಾಡಲು ಬರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವಂತೆ ಸರ್ವಶಿಕ್ಷಾ ಅಭಿಯಾನದ ಸಭೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು ದಕ್ಷಿಣ ಮತ್ತು ಉತ್ತರದಿಂದ ತಲಾ ಇಬ್ಬರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು” ಎಂದು ಹೇಳಿದ್ದರು.

ಈ ಷರತ್ತಿನಿಂದಾಗಿ ಉತ್ತರ ಭಾರತದಿಂದ ಬಂದು ಇಲ್ಲಿ ನೆಲೆಸಿರುವ ಹಿಂದಿ ಭಾಷಿಕರು ಅಥವಾ ಇಂಗ್ಲಿಷ್‌ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳು ಮಾತ್ರ ಈ ಪ್ರವಾಸಕ್ಕೆ ಆಯ್ಕೆಯಾಗಿ ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುವುದಿಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರ, “ಹೌದು ಅಂತಹ ಮಕ್ಕಳು ವಂಚಿತರಾಗುತ್ತಾರೆ. ಆದರೆ ಸರ್ಕಾರದ ಆದೇಶ ಇದೆ” ಎಂದು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಬೆಂಗಳೂರು ದಕ್ಷಿಣ ಜಿಲ್ಲೆಯ ಉಪನಿರ್ದೇಶಕರು, ಪದವಿಪೂರ್ವ ಕಾಲೇಜಿಗೆ ಹೊರಡಿಸಿರುವ ಈ ಷರತ್ತು ರಾಜ್ಯದಾತ್ಯಂತ ಭಾರಿ ಚರ್ಚೆಗೆ ಒಳಪಟ್ಟಿದ್ದು, ಆಕ್ರೋಶ ವ್ಯಕ್ತವಾಗಿತ್ತು. ವಿವಾದದ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು, “ಹಿಂದಿ ಭಾಷೆ ಬಲ್ಲ ಮಕ್ಕಳಿಗೆ ಮಾತ್ರ ಪ್ರವಾಸ – ಕನ್ನಡಕ್ಕೆ ಬಗೆಯುವ ದ್ರೋಹ” ಎಂದು ಕಿಡಿ ಕಾರಿದ್ದರು.

ಇದನ್ನೂ ಓದಿ: ಹಿಂದಿ ಭಾಷೆ ಬಲ್ಲ ಮಕ್ಕಳಿಗೆ ಮಾತ್ರ ಪ್ರವಾಸ – ಕನ್ನಡಕ್ಕೆ ಬಗೆಯುವ ದ್ರೋಹ: ಎಚ್‌ಡಿಕೆ ಆಕ್ರೋಶ

ಇದೀಗ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌, “ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕದಿಂದ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಹಿಂದಿ/ಇಂಗ್ಲೀಷ್ ಭಾಷೆ ಜ್ಞಾನ ಕಡ್ಡಾಯ ಎಂಬ ಸೂಚನೆಯನ್ನು ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ನೀಡಿಲ್ಲ” ಎಂದು ಹೇಳಿದ್ದಾರೆ.

“ಈ ಗೊಂದಲಕ್ಕೆ ಕಾರಣವಾದ ಅಧಿಕಾರಿ/ಸಿಬ್ಬಂದಿ ವಿರುದ್ಧ ಇಲಾಖೆಯಿಂದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಭರವಸೆ ನೀಡಿದ್ದಾರೆ.

ರಾಜ್ಯದ ವಿದ್ಯಾರ್ಥಿಗಳನ್ನು ಉತ್ತರಾಖಂಡಕ್ಕೆ ಕಳುಹಿಸುವ ಜವಾಬ್ದಾರಿ ಹೊತ್ತಿರುವ ಆರ್‌ಎನ್‌ಎಸ್‌ ಕಾಲೇಜಿನ ಉಪನ್ಯಾಸಕಿ ಡಾ. ಪಲ್ಲವಿ ಅವರು ಮಾತನಾಡುತ್ತಾ, “ಜವಾಹರಲಾಲ್‌ ನೆಹರೂ ಕೇಂದ್ರೀಯ ವಿದ್ಯಾಲಯ, ನವೋದಯ ವಿದ್ಯಾಲಯಗಳಿಂದ ತಲಾ ಮೂರು ವಿದ್ಯಾರ್ಥಿಗಳು, ಸಿಬಿಎಸ್‌ಇ ಮತ್ತು ರಾಜ್ಯ ಪಠ್ಯಕ್ರಮದಿಂದ 19 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಿದ್ದೇವೆ. ವಿದ್ಯಾರ್ಥಿ, ವಿದ್ಯಾರ್ಥಿನಿ, ಎಸ್ಸಿ ಎಸ್ಟಿ ಇತರೆ ಹಿಂದುಳಿದ ವರ್ಗ ಹೀಗೆ ಎಲ್ಲರಿಗೂ ಅವಕಾಶ ಕಲ್ಪಿಸಲಾಗಿದೆ. ಆದರೆ, ಹಿಂದಿ ಭಾಷೆ ಬರುವ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಬೇಕು ಎಂಬ ನಿಯಮ ಇಲ್ಲ” ಎಂದು ಸುತ್ತೋಲೆಗೆ ವ್ಯತಿರಿಕ್ತ ಹೇಳಿಕೆ ನೀಡಿದ್ದರು.‌

ಇದನ್ನೂ ಓದಿ: ಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ

ಒಕ್ಕೂಟ ಸರ್ಕಾರದ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದಲ್ಲಿಯೂ ಹಿಂದಿ ಅಥವಾ ಇಂಗ್ಲಿಷ್‌ ಭಾಷೆ ಬಲ್ಲ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಬೇಕು ಎಂಬ ನಿರ್ದೇಶನ ನೀಡಿಲ್ಲ. ಹಾಗಿದ್ದರೆ ಕರ್ನಾಟಕ ಸರ್ಕಾರವೇ ಉದ್ದೇಶಪೂರ್ವಕವಾಗಿ ಹಿಂದಿ ಹೇರಲು ಹೊರಟಿದೆಯೇ ಎಂಬ ಅನುಮಾನವನ್ನು ಕೂಡಾ ಸಾಮಾಜಿಕ ಕಾರ್ಯಕರ್ತರು ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಾ ಅಯ್ಯೊಗ್ಯರೆಲ್ಲಾ ಶಿಕ್ಷಣ ಮಂತ್ರಿ,ಇದು ಈ ನಾಡಿನ ದುರ್ದೈವ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...