Homeಕರ್ನಾಟಕಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

- Advertisement -
- Advertisement -

ರೈತರು ನಡೆಸುತ್ತಿರುವ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ರಾಜ್ಯದ ಹಿರಿಯ ಸಾಹಿತಿಗಳು, ಚಿಂತಕರು, ವಿಜ್ಞಾನಿಗಳು, ಸ್ವಾಮೀಜಿಗಳು, ಚಿತ್ರನಟರು ಮತ್ತು ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ರೈತರಿಂದ ಭೂಮಿಯನ್ನು ಕಿತ್ತುಕೊಳ್ಳಬಾರದು ಎಂದು ಆಗ್ರಹಿಸಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪ್ಪಟ್ಟಣದ ರೈತರು ಕಳೆದ 1000 ದಿನಗಳಿಗಿಂತಲೂ ಹೆಚ್ಚು ಕಾಲದಿಂದ ತಮ್ಮ ಭೂಮಿಯನ್ನು ಉಳಿಸಲು ಹೋರಾಟವನ್ನು ನಡೆಸುತ್ತಲೆ ಬಂದಿದ್ದಾರೆ. ಚನ್ನರಾಯಪಟ್ಟಣ ರೈತ ಹೋರಾಟ

ತುರ್ತು ವಿಚಾರವೊಂದನ್ನು ತಮ್ಮ ಗಮನಕ್ಕೆ ತರಲು ಈ ಬಹಿರಂಗ ಪತ್ರ ಬರಿಯುತ್ತಿದ್ದೇವೆ ಎಂದು ಮುಖ್ಯಮಂತ್ರಿಗೆ ಹೇಳಿರುವ ಅವರು, “ಚನ್ನರಾಯಪಟ್ಟಣದ ವಿಚಾರ ರೈತರು ಹಾಗೂ ಸರ್ಕಾರದ ನಡುವೆ, ಜನಪರ ಸಂಘಟನೆಗಳು ಹಾಗೂ ಸರ್ಕಾರದ ನಡುವೆ ಸಂಘರ್ಷದ ವಿಚಾರವಾಗಿ ಪರಿವರ್ತನೆಯಾಗುತ್ತಿರುವುದನ್ನು ಕಂಡು ನಾವು ಕಳವಳಗೊಂಡಿದ್ದೇವೆ. ಸರ್ಕಾರ ಏಕೆ ಈ ರೀತಿ ಹಟ ಹಿಡಿದಿದೆ ಎಂಬುದು ನಮಗೆ ಅರ್ಥವಾಗದಾಗಿದೆ.” ಎಂದು ಹೇಳಿದ್ದಾರೆ.

ಅಭಿವೃದ್ದಿ ಯೋಜನೆಗಳಿಗೆ ಭೂಮಿ ಬೇಕಾಗುತ್ತದೆ ಎಂಬುದನ್ನು ನಾವೂ ಒಪ್ಪುತ್ತೇವೆ. ಆದರೆ ಅದಕ್ಕೊಂದು ರೀತಿನೀತಿ ಇರಬೇಕಲ್ಲವೇ ಎಂದು ಪತ್ರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದೆ.

“ಚನ್ನರಾಯಪಟ್ಟಣದ ಭೂಮಿ ಫಲವತ್ತಾದ ಕೃಷಿ ಭೂಮಿಯಾಗಿದೆ, ಸಾವಿರಾರು ಜನ ಅದನ್ನು ನಂಬಿ ಬದುಕುತ್ತಿದ್ದಾರೆ. ಎಲ್ಲದಕ್ಕಿಂತ ಹೆಚ್ಚಾಗಿ ಅವರು ಈ ಭೂಮಿಯನ್ನು ಕಂಪನಿಗಳಿಗೆ ಕೊಡಲು ತಮಗೆ ಒಪ್ಪಿಗೆ ಇಲ್ಲ ಎಂದು ಸ್ಪಷ್ಟವಾಗಿ ಸರ್ಕಾರದ ಗಮನಕ್ಕೆ ತಂದಿದ್ದಾರೆ” ಎಂದು ಪತ್ರ ಹೇಳಿದೆ.

“ಕಳೆದ ಎರಡು ವರ್ಷಗಳಿಂದ ಸತತ ಹೋರಾಟ ನಡೆಸಿದ್ದಾರೆ. ರೈತರ ಕೂಗನ್ನು ಕೇಳಿಸಿಕೊಳ್ಳದೆ ಬಿಜೆಪಿ ಸರ್ಕಾರ ಈ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ಆಗ ನಿಮ್ಮ ಪಕ್ಷವೂ ಇದನ್ನು ವಿರೋಧಿಸಿತ್ತು. ನೀವೇ ಖುದ್ದು ಹೋರಾಟ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ನೀಡಿದ್ದಿರಿ. ಈಗ ಏಕೆ ಆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲೇಬೇಕು ಎಂದು ನಿಮ್ಮ ಸರ್ಕಾ ರ ಪಟ್ಟು ಹಿಡಿದಿದೆ ಅರ್ಥವಾಗುತ್ತಿಲ್ಲ” ಎಂದು ಅವರು ಮುಖ್ಯಮಂತ್ರಿಯನ್ನು ಕೇಳಿದ್ದಾರೆ.

“ರೈತರಿಗೀಗ ಅಂತಿಮ ಅಧಿಸೂಚನೆ ಹೋಗಿದೆ. ರೈತರು ಆತಂಕಿತರಾಗಿದ್ದಾರೆ. ಅವರ ಬೆಂಬಲಕ್ಕೆ ಕರ್ನಾಟಕದ ಸಮಸ್ತ ಸಂಘಟನೆಗಳೂ ನಿಂತಿವೆ. ಜೂನ್‌ 25ಕ್ಕೆ ದೇವನ ಹಳ್ಳಿ ಚಲೋಗೆ ಕರೆ ನೀಡಿವೆ. ಸರ್ಕಾರ ರೈತಪರ ನಿಲುವು ತೆಗೆದುಕೊಳ್ಳುವ ತನಕ ದೇವನಹಳ್ಳಿಯಿಂದ ವಾಪಾಸ್‌ ಬರುವುದಿಲ್ಲ ಎಂದು ಹೇಳುತ್ತಿದ್ದಾರೆ. ಈ ಸಂಘರ್ಷ ರೈತರಿಗಾಗಲೀ, ಸರ್ಕಾರಕ್ಕಾಗಲೀ, ರಾಜ್ಯಕ್ಕಾಗಲೀ ಒಳಿತನ್ನು ಮಾಡುವುದಿಲ್ಲ.” ಎಂದು ಪತ್ರವೂ ಹೇಳಿದೆ.

ನೀವು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಬಲ್ಲವರು ಎಂದು ಹೇಳಿರುವ ಪತ್ರವೂ, ಮುಖ್ಯಮಂತ್ರಿ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕು ಎಂದು ಕೋರಿದೆ. ಸಮಸ್ಯೆಯನ್ನು ಬಗೆಹರಿಸಿ ರಾಜ್ಯಕ್ಕೆ ಉತ್ತಮ ಸಂದೇಶ ನೀಡಬೇಕು ಎಂದು ಪತ್ರವೂ ಮನವಿ ಮಾಡಿದ್ದು, ಜೊತೆಗೆ ನೀವು ನಮ್ಮನ್ನು ನಿರಾಸೆಗೊಳಿಸುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದೆ.

ಹಿರಿಯ ಸಾಹಿತಿಗಳಾದ ಡಾ.ಬರಗೂರು ರಾಮಚಂದ್ರಪ್ಪ, ಡಾ.ಕೆ ಮರುಳಸಿದ್ದಪ್ಪ, ಬಾನು ಮುಷ್ತಾಕ್, ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಡಾ.ಹಿಂದೂಧರ ಹೊನ್ನಾಪುರ, ಡಾ.ಎಚ್.ಎಲ್ ಪುಷ್ಪ, ಡಾ.ವಿಜಯಮ್ಮ, ಡಾ. ಜಾಣಗೆರೆ ವೆಂಕಟರಾಮಯ್ಯ, ಎಲ್ ಎನ್ ಮುಕುಂದರಾಜ್, ಡಾ.ಎನ್ ಗಾಯತ್ರಿ, ಡಾ.ಕೆ.ನೀಲ, ಕೆ.‍ಷರೀಪ, ಚಿತ್ರನಟರಾದ ಪ್ರಕಾಶ್ ರಾಜ್, ಬಿ. ಸುರೇಶ್, ವಿಜ್ಞಾನಿಗಳಾದ ಪ್ರೋ. ಪ್ರಜ್ವಲ್ ಶಾಸ್ತ್ರಿ, ಡಾ.ಸವ್ಯಸಾಚಿ ಚಟರ್ಜಿ, ಡಾ.ವಾಣಿ ಚಾಟರ್ಜಿ ಮತ್ತು ಸಾಣೆಹಳ್ಳಿ ಮಠದ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮಿಜಿ ಅವರು ಪತ್ರಕ್ಕೆ ಸಹಿ ಹಾಕಿದ್ದಾರೆ. ಚನ್ನರಾಯಪಟ್ಟಣ ರೈತ ಹೋರಾಟ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ ರೈತರು

ದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...