Homeಕರ್ನಾಟಕಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

- Advertisement -
- Advertisement -

ರೈತರು ನಡೆಸುತ್ತಿರುವ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ರಾಜ್ಯದ ಹಿರಿಯ ಸಾಹಿತಿಗಳು, ಚಿಂತಕರು, ವಿಜ್ಞಾನಿಗಳು, ಸ್ವಾಮೀಜಿಗಳು, ಚಿತ್ರನಟರು ಮತ್ತು ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ರೈತರಿಂದ ಭೂಮಿಯನ್ನು ಕಿತ್ತುಕೊಳ್ಳಬಾರದು ಎಂದು ಆಗ್ರಹಿಸಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪ್ಪಟ್ಟಣದ ರೈತರು ಕಳೆದ 1000 ದಿನಗಳಿಗಿಂತಲೂ ಹೆಚ್ಚು ಕಾಲದಿಂದ ತಮ್ಮ ಭೂಮಿಯನ್ನು ಉಳಿಸಲು ಹೋರಾಟವನ್ನು ನಡೆಸುತ್ತಲೆ ಬಂದಿದ್ದಾರೆ. ಚನ್ನರಾಯಪಟ್ಟಣ ರೈತ ಹೋರಾಟ

ತುರ್ತು ವಿಚಾರವೊಂದನ್ನು ತಮ್ಮ ಗಮನಕ್ಕೆ ತರಲು ಈ ಬಹಿರಂಗ ಪತ್ರ ಬರಿಯುತ್ತಿದ್ದೇವೆ ಎಂದು ಮುಖ್ಯಮಂತ್ರಿಗೆ ಹೇಳಿರುವ ಅವರು, “ಚನ್ನರಾಯಪಟ್ಟಣದ ವಿಚಾರ ರೈತರು ಹಾಗೂ ಸರ್ಕಾರದ ನಡುವೆ, ಜನಪರ ಸಂಘಟನೆಗಳು ಹಾಗೂ ಸರ್ಕಾರದ ನಡುವೆ ಸಂಘರ್ಷದ ವಿಚಾರವಾಗಿ ಪರಿವರ್ತನೆಯಾಗುತ್ತಿರುವುದನ್ನು ಕಂಡು ನಾವು ಕಳವಳಗೊಂಡಿದ್ದೇವೆ. ಸರ್ಕಾರ ಏಕೆ ಈ ರೀತಿ ಹಟ ಹಿಡಿದಿದೆ ಎಂಬುದು ನಮಗೆ ಅರ್ಥವಾಗದಾಗಿದೆ.” ಎಂದು ಹೇಳಿದ್ದಾರೆ.

ಅಭಿವೃದ್ದಿ ಯೋಜನೆಗಳಿಗೆ ಭೂಮಿ ಬೇಕಾಗುತ್ತದೆ ಎಂಬುದನ್ನು ನಾವೂ ಒಪ್ಪುತ್ತೇವೆ. ಆದರೆ ಅದಕ್ಕೊಂದು ರೀತಿನೀತಿ ಇರಬೇಕಲ್ಲವೇ ಎಂದು ಪತ್ರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದೆ.

“ಚನ್ನರಾಯಪಟ್ಟಣದ ಭೂಮಿ ಫಲವತ್ತಾದ ಕೃಷಿ ಭೂಮಿಯಾಗಿದೆ, ಸಾವಿರಾರು ಜನ ಅದನ್ನು ನಂಬಿ ಬದುಕುತ್ತಿದ್ದಾರೆ. ಎಲ್ಲದಕ್ಕಿಂತ ಹೆಚ್ಚಾಗಿ ಅವರು ಈ ಭೂಮಿಯನ್ನು ಕಂಪನಿಗಳಿಗೆ ಕೊಡಲು ತಮಗೆ ಒಪ್ಪಿಗೆ ಇಲ್ಲ ಎಂದು ಸ್ಪಷ್ಟವಾಗಿ ಸರ್ಕಾರದ ಗಮನಕ್ಕೆ ತಂದಿದ್ದಾರೆ” ಎಂದು ಪತ್ರ ಹೇಳಿದೆ.

“ಕಳೆದ ಎರಡು ವರ್ಷಗಳಿಂದ ಸತತ ಹೋರಾಟ ನಡೆಸಿದ್ದಾರೆ. ರೈತರ ಕೂಗನ್ನು ಕೇಳಿಸಿಕೊಳ್ಳದೆ ಬಿಜೆಪಿ ಸರ್ಕಾರ ಈ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ಆಗ ನಿಮ್ಮ ಪಕ್ಷವೂ ಇದನ್ನು ವಿರೋಧಿಸಿತ್ತು. ನೀವೇ ಖುದ್ದು ಹೋರಾಟ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ನೀಡಿದ್ದಿರಿ. ಈಗ ಏಕೆ ಆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲೇಬೇಕು ಎಂದು ನಿಮ್ಮ ಸರ್ಕಾ ರ ಪಟ್ಟು ಹಿಡಿದಿದೆ ಅರ್ಥವಾಗುತ್ತಿಲ್ಲ” ಎಂದು ಅವರು ಮುಖ್ಯಮಂತ್ರಿಯನ್ನು ಕೇಳಿದ್ದಾರೆ.

“ರೈತರಿಗೀಗ ಅಂತಿಮ ಅಧಿಸೂಚನೆ ಹೋಗಿದೆ. ರೈತರು ಆತಂಕಿತರಾಗಿದ್ದಾರೆ. ಅವರ ಬೆಂಬಲಕ್ಕೆ ಕರ್ನಾಟಕದ ಸಮಸ್ತ ಸಂಘಟನೆಗಳೂ ನಿಂತಿವೆ. ಜೂನ್‌ 25ಕ್ಕೆ ದೇವನ ಹಳ್ಳಿ ಚಲೋಗೆ ಕರೆ ನೀಡಿವೆ. ಸರ್ಕಾರ ರೈತಪರ ನಿಲುವು ತೆಗೆದುಕೊಳ್ಳುವ ತನಕ ದೇವನಹಳ್ಳಿಯಿಂದ ವಾಪಾಸ್‌ ಬರುವುದಿಲ್ಲ ಎಂದು ಹೇಳುತ್ತಿದ್ದಾರೆ. ಈ ಸಂಘರ್ಷ ರೈತರಿಗಾಗಲೀ, ಸರ್ಕಾರಕ್ಕಾಗಲೀ, ರಾಜ್ಯಕ್ಕಾಗಲೀ ಒಳಿತನ್ನು ಮಾಡುವುದಿಲ್ಲ.” ಎಂದು ಪತ್ರವೂ ಹೇಳಿದೆ.

ನೀವು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಬಲ್ಲವರು ಎಂದು ಹೇಳಿರುವ ಪತ್ರವೂ, ಮುಖ್ಯಮಂತ್ರಿ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕು ಎಂದು ಕೋರಿದೆ. ಸಮಸ್ಯೆಯನ್ನು ಬಗೆಹರಿಸಿ ರಾಜ್ಯಕ್ಕೆ ಉತ್ತಮ ಸಂದೇಶ ನೀಡಬೇಕು ಎಂದು ಪತ್ರವೂ ಮನವಿ ಮಾಡಿದ್ದು, ಜೊತೆಗೆ ನೀವು ನಮ್ಮನ್ನು ನಿರಾಸೆಗೊಳಿಸುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದೆ.

ಹಿರಿಯ ಸಾಹಿತಿಗಳಾದ ಡಾ.ಬರಗೂರು ರಾಮಚಂದ್ರಪ್ಪ, ಡಾ.ಕೆ ಮರುಳಸಿದ್ದಪ್ಪ, ಬಾನು ಮುಷ್ತಾಕ್, ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಡಾ.ಹಿಂದೂಧರ ಹೊನ್ನಾಪುರ, ಡಾ.ಎಚ್.ಎಲ್ ಪುಷ್ಪ, ಡಾ.ವಿಜಯಮ್ಮ, ಡಾ. ಜಾಣಗೆರೆ ವೆಂಕಟರಾಮಯ್ಯ, ಎಲ್ ಎನ್ ಮುಕುಂದರಾಜ್, ಡಾ.ಎನ್ ಗಾಯತ್ರಿ, ಡಾ.ಕೆ.ನೀಲ, ಕೆ.‍ಷರೀಪ, ಚಿತ್ರನಟರಾದ ಪ್ರಕಾಶ್ ರಾಜ್, ಬಿ. ಸುರೇಶ್, ವಿಜ್ಞಾನಿಗಳಾದ ಪ್ರೋ. ಪ್ರಜ್ವಲ್ ಶಾಸ್ತ್ರಿ, ಡಾ.ಸವ್ಯಸಾಚಿ ಚಟರ್ಜಿ, ಡಾ.ವಾಣಿ ಚಾಟರ್ಜಿ ಮತ್ತು ಸಾಣೆಹಳ್ಳಿ ಮಠದ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮಿಜಿ ಅವರು ಪತ್ರಕ್ಕೆ ಸಹಿ ಹಾಕಿದ್ದಾರೆ. ಚನ್ನರಾಯಪಟ್ಟಣ ರೈತ ಹೋರಾಟ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ ರೈತರು

ದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರದಲ್ಲಿ 5 ದಿನಗಳ ಕೆಲಸ ಜಾರಿಗೆ ಒತ್ತಾಯ: ಬ್ಯಾಂಕ್‌ ನೌಕರರಿಂದ ಇಂದು ಮುಷ್ಕರ

ಐದು ದಿನಗಳ ಕೆಲಸದ ವಾರವನ್ನು (ವಾರದಲ್ಲಿ 5 ದಿನ ಕೆಲಸ) ತಕ್ಷಣ ಜಾರಿಗೆ ತರುವಂತೆ ಒತ್ತಾಯಿಸಿ ಬ್ಯಾಂಕ್ ನೌಕರರು ಮಂಗಳವಾರ (ಜ.27) ರಾಷ್ಟ್ರವ್ಯಾಪಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಬ್ಯಾಂಕಿಂಗ್...

ಗ್ರೀನ್ ಕೇವ್ ನಿಂದ ಪ್ರವಾಸಿಗರನ್ನು ದೂರವಿಡಿ: ಛತ್ತೀಸ್‌ಗಢ ಸರ್ಕಾರಕ್ಕೆ ಪರಿಸರವಾದಿಗಳ ಎಚ್ಚರಿಕೆ

ರಾಯ್‌ಪುರ: ಒಂದು ಕಾಲದಲ್ಲಿ ಮಾವೋವಾದಿ ಪೀಡಿತ ಬಸ್ತಾರ್ ಜಿಲ್ಲೆಯ ಕಾಂಗರ್ ಕಣಿವೆ ರಾಷ್ಟ್ರೀಯ ಉದ್ಯಾನವನದಲ್ಲಿರುವ ಅಪರೂಪದ ಮತ್ತು ಪರಿಸರ ಸೂಕ್ಷ್ಮ 'ಹಸಿರು ಗುಹೆ'ಯನ್ನು ಪ್ರವಾಸಿಗರಿಗೆ ತೆರೆಯಲು ಛತ್ತೀಸ್‌ಗಢ ಸರ್ಕಾರ ನಿರ್ಧರಿಸಿದ್ದು, ಈ ಕ್ರಮಕ್ಕೆ...

ಅಹಮದಾಬಾದ್: ಅಮೃತಸರದಿಂದ ಮುಂಬೈಗೆ ಚಲಿಸುತ್ತಿದ್ದ ರೈಲಿನಲ್ಲಿ ಭಾರೀ ಮೌಲ್ಯದ ಕೊಕೇನ್ ಜಾಲ ಪತ್ತೆ

ಅಹಮದಾಬಾದ್: ಅಮೃತಸರ-ಮುಂಬೈ ಗೋಲ್ಡನ್ ಟೆಂಪಲ್ ಮೇಲ್ ರೈಲಿನ ಮೇಲೆ ತಡರಾತ್ರಿ ನಡೆದ ದಾಳಿಯಲ್ಲಿ ಮಿಜೋರಾಂ ಯುವಕನೊಬ್ಬ 2.19 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಕೊಕೇನ್ ಮತ್ತು ಮೆಥಾಂಫೆಟಮೈನ್‌ನೊಂದಿಗೆ ಸಿಕ್ಕಿಬಿದ್ದ ನಂತರ ಬಹು ನಗರ,...

ನಿಲುವು ಬದಲಿಸಿದ ಸಿಪಿಐ(ಎಂ) : ವಿಎಸ್ ಅಚ್ಯುತಾನಂದನ್ ಅವರ ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಲು ನಿರ್ಧಾರ

ತನ್ನ ದೀರ್ಘಕಾಲದ ಸೈದ್ಧಾಂತಿಕ ನಿಲುವಿಗಿಂತ ಭಿನ್ನಾಭಿಪ್ರಾಯ ವ್ಯಕ್ತಪಡಿಸಿರುವ ಸಿಪಿಐ(ಎಂ), ಪಕ್ಷದ ದಂತಕಥೆ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್ ಅಚ್ಯುತಾನಂದನ್ ಅವರಿಗೆ ಮರಣೋತ್ತರವಾಗಿ ನೀಡಲಾಗುವ ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸಲು ನಿರ್ಧರಿಸಿದೆ. ಕಮ್ಯುನಿಸ್ಟರು ಆಡಳಿತ ಅಥವಾ...

2024ರ ಪ್ರತಿಭಟನೆ ದಮನ ಪ್ರಕರಣ: ಬಾಂಗ್ಲಾದೇಶದ ಮಾಜಿ ಪೊಲೀಸ್ ಮುಖ್ಯಸ್ಥ ಹಬೀಬುರ್ ರೆಹಮಾನ್‌ಗೆ ಮರಣದಂಡನೆ

ಢಾಕಾ: ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಆಳ್ವಿಕೆಯಲ್ಲಿ ನಡೆದ ಮಾನವೀಯತೆಯ ವಿರುದ್ಧದ ಅಪರಾಧಗಳಿಗಾಗಿ ಬಾಂಗ್ಲಾದೇಶ ನ್ಯಾಯಾಲಯವು ಸೋಮವಾರ ಢಾಕಾದ ಮಾಜಿ ಪೊಲೀಸ್ ಮುಖ್ಯಸ್ಥ ಮತ್ತು ಇಬ್ಬರು ಹಿರಿಯ ಸಹೋದ್ಯೋಗಿಗಳಿಗೆ ಮರಣದಂಡನೆ ವಿಧಿಸಲಾಗಿದೆ.  ರಾಜಧಾನಿಯ...

ಕೇರಳ, ತಮಿಳುನಾಡು, ಪ. ಬಂಗಾಳದ 32 ಮಂದಿಗೆ ‘ಪದ್ಮ’ ಪ್ರಶಸ್ತಿ : ವಿಧಾನಸಭೆ ಚುನಾವಣೆ ಮೇಲೆ ಬಿಜೆಪಿ ಕಣ್ಣು?

ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾದ 131 'ಪದ್ಮ ಪ್ರಶಸ್ತಿ'ಗಳಲ್ಲಿ, 38 ಪ್ರಶಸ್ತಿಗಳು ಈ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯ ಪಾಲಾಗಿವೆ. ದೇಶದ ಎರಡನೇ ಅತ್ಯುನ್ನತ...

‘ಏಕರೂಪ ಭಾರತವನ್ನಲ್ಲ, ಏಕೀಕೃತ ಭಾರತವನ್ನ ಸಂಭ್ರಮಿಸೋಣ’: ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ 

ಚೆನ್ನೈ: ಗಣರಾಜ್ಯೋತ್ಸವವನ್ನು ಏಕರೂಪ ಭಾರತದಂತಲ್ಲದೇ ಏಕೀಕೃತ ಭಾರತವಾಗಿ ಆಚರಿಸಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ ನೀಡಿದ್ದಾರೆ.  ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಸ್ಟಾಲಿನ್, "ಏಕರೂಪದ ಭಾರತವಲ್ಲ, ಏಕೀಕೃತ ಭಾರತವನ್ನು...

ಗಣರಾಜ್ಯೋತ್ಸವ ಪರೇಡ್ : ಸಿಆರ್‌ಪಿಎಫ್ ಪುರುಷರ ತುಕಡಿ ಮುನ್ನಡೆಸಿ ಗಮನಸೆಳೆದ ಮಹಿಳಾ ಅಧಿಕಾರಿ ಸಿಮ್ರಾನ್ ಬಾಲಾ

ದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಸಿಆರ್‌ಪಿಎಫ್ ಸಹಾಯಕ ಕಮಾಂಡೆಂಟ್ ಸಿಮ್ರಾನ್ ಬಾಲಾ ಅವರು ಅರೆಸೈನಿಕ ಪಡೆಯ ಸಂಪೂರ್ಣ ಪುರುಷರ ತುಕಡಿಯನ್ನು ಮುನ್ನಡೆಸುವ ಮೂಲಕ ಇತಿಹಾಸ ನಿರ್ಮಿಸಿದರು. ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯವರಾದ...

ಉತ್ತರಾಖಂಡ: ಸೂಫಿ ಕವಿ ಬಾಬಾ ಬುಲ್ಲೆ ಶಾ ಅವರ ಮಂದಿರವನ್ನು ಧ್ವಂಸಗೊಳಿಸಿದ ಹಿಂದೂ ರಕ್ಷಣಾ ದಳದ ದುಷ್ಕರ್ಮಿಗಳು

ಉತ್ತರಾಖಂಡದ ಮಸ್ಸೂರಿಯಲ್ಲಿರುವ 18 ನೇ ಶತಮಾನದ ಸೂಫಿ ಕವಿ ಬಾಬಾ ಬುಲ್ಲೆಹ್ ಷಾ ಅವರ ದೇವಾಲಯವನ್ನು ಶುಕ್ರವಾರ ಹಿಂದೂ ರಕ್ಷಾ ದಳದೊಂದಿಗೆ ಸಂಪರ್ಕ ಹೊಂದಿರುವವರು ಧ್ವಂಸಗೊಳಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. "ಜೈ...

ಅಕ್ಷರಧಾಮ ದೇವಾಲಯ ದಾಳಿ ಪ್ರಕರಣ: 6 ವರ್ಷಗಳ ನಂತರ ಮೂವರ ಮುಸ್ಲಿಂ ವ್ಯಕ್ತಿಗಳನ್ನು ಖುಲಾಸೆಗೊಳಿಸಿದ ಅಹಮದಾಬಾದ್ ಪೋಟಾ ನ್ಯಾಯಾಲಯ

ಅಕ್ಷರಧಾಮ ದೇವಾಲಯದ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಮೂವರು ಮುಸ್ಲಿಂ ಪುರುಷರನ್ನು ಕಳೆದ ವಾರ ಅಹಮದಾಬಾದ್‌ನ ವಿಶೇಷ ಭಯೋತ್ಪಾದನಾ ತಡೆ ಕಾಯ್ದೆ (ಪೋಟಾ) ನ್ಯಾಯಾಲಯವು ಖುಲಾಸೆಗೊಳಿಸಿದ್ದು, ವರ್ಷಗಳ ಕಾನೂನು ಪ್ರಕ್ರಿಯೆಗಳ ನಂತರ...