Homeಕರ್ನಾಟಕಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

- Advertisement -
- Advertisement -

ರೈತರು ನಡೆಸುತ್ತಿರುವ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ರಾಜ್ಯದ ಹಿರಿಯ ಸಾಹಿತಿಗಳು, ಚಿಂತಕರು, ವಿಜ್ಞಾನಿಗಳು, ಸ್ವಾಮೀಜಿಗಳು, ಚಿತ್ರನಟರು ಮತ್ತು ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ರೈತರಿಂದ ಭೂಮಿಯನ್ನು ಕಿತ್ತುಕೊಳ್ಳಬಾರದು ಎಂದು ಆಗ್ರಹಿಸಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪ್ಪಟ್ಟಣದ ರೈತರು ಕಳೆದ 1000 ದಿನಗಳಿಗಿಂತಲೂ ಹೆಚ್ಚು ಕಾಲದಿಂದ ತಮ್ಮ ಭೂಮಿಯನ್ನು ಉಳಿಸಲು ಹೋರಾಟವನ್ನು ನಡೆಸುತ್ತಲೆ ಬಂದಿದ್ದಾರೆ. ಚನ್ನರಾಯಪಟ್ಟಣ ರೈತ ಹೋರಾಟ

ತುರ್ತು ವಿಚಾರವೊಂದನ್ನು ತಮ್ಮ ಗಮನಕ್ಕೆ ತರಲು ಈ ಬಹಿರಂಗ ಪತ್ರ ಬರಿಯುತ್ತಿದ್ದೇವೆ ಎಂದು ಮುಖ್ಯಮಂತ್ರಿಗೆ ಹೇಳಿರುವ ಅವರು, “ಚನ್ನರಾಯಪಟ್ಟಣದ ವಿಚಾರ ರೈತರು ಹಾಗೂ ಸರ್ಕಾರದ ನಡುವೆ, ಜನಪರ ಸಂಘಟನೆಗಳು ಹಾಗೂ ಸರ್ಕಾರದ ನಡುವೆ ಸಂಘರ್ಷದ ವಿಚಾರವಾಗಿ ಪರಿವರ್ತನೆಯಾಗುತ್ತಿರುವುದನ್ನು ಕಂಡು ನಾವು ಕಳವಳಗೊಂಡಿದ್ದೇವೆ. ಸರ್ಕಾರ ಏಕೆ ಈ ರೀತಿ ಹಟ ಹಿಡಿದಿದೆ ಎಂಬುದು ನಮಗೆ ಅರ್ಥವಾಗದಾಗಿದೆ.” ಎಂದು ಹೇಳಿದ್ದಾರೆ.

ಅಭಿವೃದ್ದಿ ಯೋಜನೆಗಳಿಗೆ ಭೂಮಿ ಬೇಕಾಗುತ್ತದೆ ಎಂಬುದನ್ನು ನಾವೂ ಒಪ್ಪುತ್ತೇವೆ. ಆದರೆ ಅದಕ್ಕೊಂದು ರೀತಿನೀತಿ ಇರಬೇಕಲ್ಲವೇ ಎಂದು ಪತ್ರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದೆ.

“ಚನ್ನರಾಯಪಟ್ಟಣದ ಭೂಮಿ ಫಲವತ್ತಾದ ಕೃಷಿ ಭೂಮಿಯಾಗಿದೆ, ಸಾವಿರಾರು ಜನ ಅದನ್ನು ನಂಬಿ ಬದುಕುತ್ತಿದ್ದಾರೆ. ಎಲ್ಲದಕ್ಕಿಂತ ಹೆಚ್ಚಾಗಿ ಅವರು ಈ ಭೂಮಿಯನ್ನು ಕಂಪನಿಗಳಿಗೆ ಕೊಡಲು ತಮಗೆ ಒಪ್ಪಿಗೆ ಇಲ್ಲ ಎಂದು ಸ್ಪಷ್ಟವಾಗಿ ಸರ್ಕಾರದ ಗಮನಕ್ಕೆ ತಂದಿದ್ದಾರೆ” ಎಂದು ಪತ್ರ ಹೇಳಿದೆ.

“ಕಳೆದ ಎರಡು ವರ್ಷಗಳಿಂದ ಸತತ ಹೋರಾಟ ನಡೆಸಿದ್ದಾರೆ. ರೈತರ ಕೂಗನ್ನು ಕೇಳಿಸಿಕೊಳ್ಳದೆ ಬಿಜೆಪಿ ಸರ್ಕಾರ ಈ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ಆಗ ನಿಮ್ಮ ಪಕ್ಷವೂ ಇದನ್ನು ವಿರೋಧಿಸಿತ್ತು. ನೀವೇ ಖುದ್ದು ಹೋರಾಟ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ನೀಡಿದ್ದಿರಿ. ಈಗ ಏಕೆ ಆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲೇಬೇಕು ಎಂದು ನಿಮ್ಮ ಸರ್ಕಾ ರ ಪಟ್ಟು ಹಿಡಿದಿದೆ ಅರ್ಥವಾಗುತ್ತಿಲ್ಲ” ಎಂದು ಅವರು ಮುಖ್ಯಮಂತ್ರಿಯನ್ನು ಕೇಳಿದ್ದಾರೆ.

“ರೈತರಿಗೀಗ ಅಂತಿಮ ಅಧಿಸೂಚನೆ ಹೋಗಿದೆ. ರೈತರು ಆತಂಕಿತರಾಗಿದ್ದಾರೆ. ಅವರ ಬೆಂಬಲಕ್ಕೆ ಕರ್ನಾಟಕದ ಸಮಸ್ತ ಸಂಘಟನೆಗಳೂ ನಿಂತಿವೆ. ಜೂನ್‌ 25ಕ್ಕೆ ದೇವನ ಹಳ್ಳಿ ಚಲೋಗೆ ಕರೆ ನೀಡಿವೆ. ಸರ್ಕಾರ ರೈತಪರ ನಿಲುವು ತೆಗೆದುಕೊಳ್ಳುವ ತನಕ ದೇವನಹಳ್ಳಿಯಿಂದ ವಾಪಾಸ್‌ ಬರುವುದಿಲ್ಲ ಎಂದು ಹೇಳುತ್ತಿದ್ದಾರೆ. ಈ ಸಂಘರ್ಷ ರೈತರಿಗಾಗಲೀ, ಸರ್ಕಾರಕ್ಕಾಗಲೀ, ರಾಜ್ಯಕ್ಕಾಗಲೀ ಒಳಿತನ್ನು ಮಾಡುವುದಿಲ್ಲ.” ಎಂದು ಪತ್ರವೂ ಹೇಳಿದೆ.

ನೀವು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಬಲ್ಲವರು ಎಂದು ಹೇಳಿರುವ ಪತ್ರವೂ, ಮುಖ್ಯಮಂತ್ರಿ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕು ಎಂದು ಕೋರಿದೆ. ಸಮಸ್ಯೆಯನ್ನು ಬಗೆಹರಿಸಿ ರಾಜ್ಯಕ್ಕೆ ಉತ್ತಮ ಸಂದೇಶ ನೀಡಬೇಕು ಎಂದು ಪತ್ರವೂ ಮನವಿ ಮಾಡಿದ್ದು, ಜೊತೆಗೆ ನೀವು ನಮ್ಮನ್ನು ನಿರಾಸೆಗೊಳಿಸುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದೆ.

ಹಿರಿಯ ಸಾಹಿತಿಗಳಾದ ಡಾ.ಬರಗೂರು ರಾಮಚಂದ್ರಪ್ಪ, ಡಾ.ಕೆ ಮರುಳಸಿದ್ದಪ್ಪ, ಬಾನು ಮುಷ್ತಾಕ್, ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಡಾ.ಹಿಂದೂಧರ ಹೊನ್ನಾಪುರ, ಡಾ.ಎಚ್.ಎಲ್ ಪುಷ್ಪ, ಡಾ.ವಿಜಯಮ್ಮ, ಡಾ. ಜಾಣಗೆರೆ ವೆಂಕಟರಾಮಯ್ಯ, ಎಲ್ ಎನ್ ಮುಕುಂದರಾಜ್, ಡಾ.ಎನ್ ಗಾಯತ್ರಿ, ಡಾ.ಕೆ.ನೀಲ, ಕೆ.‍ಷರೀಪ, ಚಿತ್ರನಟರಾದ ಪ್ರಕಾಶ್ ರಾಜ್, ಬಿ. ಸುರೇಶ್, ವಿಜ್ಞಾನಿಗಳಾದ ಪ್ರೋ. ಪ್ರಜ್ವಲ್ ಶಾಸ್ತ್ರಿ, ಡಾ.ಸವ್ಯಸಾಚಿ ಚಟರ್ಜಿ, ಡಾ.ವಾಣಿ ಚಾಟರ್ಜಿ ಮತ್ತು ಸಾಣೆಹಳ್ಳಿ ಮಠದ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮಿಜಿ ಅವರು ಪತ್ರಕ್ಕೆ ಸಹಿ ಹಾಕಿದ್ದಾರೆ. ಚನ್ನರಾಯಪಟ್ಟಣ ರೈತ ಹೋರಾಟ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ ರೈತರು

ದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...