Homeಕರ್ನಾಟಕಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

- Advertisement -
- Advertisement -

ರೈತರು ನಡೆಸುತ್ತಿರುವ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ರಾಜ್ಯದ ಹಿರಿಯ ಸಾಹಿತಿಗಳು, ಚಿಂತಕರು, ವಿಜ್ಞಾನಿಗಳು, ಸ್ವಾಮೀಜಿಗಳು, ಚಿತ್ರನಟರು ಮತ್ತು ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ರೈತರಿಂದ ಭೂಮಿಯನ್ನು ಕಿತ್ತುಕೊಳ್ಳಬಾರದು ಎಂದು ಆಗ್ರಹಿಸಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪ್ಪಟ್ಟಣದ ರೈತರು ಕಳೆದ 1000 ದಿನಗಳಿಗಿಂತಲೂ ಹೆಚ್ಚು ಕಾಲದಿಂದ ತಮ್ಮ ಭೂಮಿಯನ್ನು ಉಳಿಸಲು ಹೋರಾಟವನ್ನು ನಡೆಸುತ್ತಲೆ ಬಂದಿದ್ದಾರೆ. ಚನ್ನರಾಯಪಟ್ಟಣ ರೈತ ಹೋರಾಟ

ತುರ್ತು ವಿಚಾರವೊಂದನ್ನು ತಮ್ಮ ಗಮನಕ್ಕೆ ತರಲು ಈ ಬಹಿರಂಗ ಪತ್ರ ಬರಿಯುತ್ತಿದ್ದೇವೆ ಎಂದು ಮುಖ್ಯಮಂತ್ರಿಗೆ ಹೇಳಿರುವ ಅವರು, “ಚನ್ನರಾಯಪಟ್ಟಣದ ವಿಚಾರ ರೈತರು ಹಾಗೂ ಸರ್ಕಾರದ ನಡುವೆ, ಜನಪರ ಸಂಘಟನೆಗಳು ಹಾಗೂ ಸರ್ಕಾರದ ನಡುವೆ ಸಂಘರ್ಷದ ವಿಚಾರವಾಗಿ ಪರಿವರ್ತನೆಯಾಗುತ್ತಿರುವುದನ್ನು ಕಂಡು ನಾವು ಕಳವಳಗೊಂಡಿದ್ದೇವೆ. ಸರ್ಕಾರ ಏಕೆ ಈ ರೀತಿ ಹಟ ಹಿಡಿದಿದೆ ಎಂಬುದು ನಮಗೆ ಅರ್ಥವಾಗದಾಗಿದೆ.” ಎಂದು ಹೇಳಿದ್ದಾರೆ.

ಅಭಿವೃದ್ದಿ ಯೋಜನೆಗಳಿಗೆ ಭೂಮಿ ಬೇಕಾಗುತ್ತದೆ ಎಂಬುದನ್ನು ನಾವೂ ಒಪ್ಪುತ್ತೇವೆ. ಆದರೆ ಅದಕ್ಕೊಂದು ರೀತಿನೀತಿ ಇರಬೇಕಲ್ಲವೇ ಎಂದು ಪತ್ರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದೆ.

“ಚನ್ನರಾಯಪಟ್ಟಣದ ಭೂಮಿ ಫಲವತ್ತಾದ ಕೃಷಿ ಭೂಮಿಯಾಗಿದೆ, ಸಾವಿರಾರು ಜನ ಅದನ್ನು ನಂಬಿ ಬದುಕುತ್ತಿದ್ದಾರೆ. ಎಲ್ಲದಕ್ಕಿಂತ ಹೆಚ್ಚಾಗಿ ಅವರು ಈ ಭೂಮಿಯನ್ನು ಕಂಪನಿಗಳಿಗೆ ಕೊಡಲು ತಮಗೆ ಒಪ್ಪಿಗೆ ಇಲ್ಲ ಎಂದು ಸ್ಪಷ್ಟವಾಗಿ ಸರ್ಕಾರದ ಗಮನಕ್ಕೆ ತಂದಿದ್ದಾರೆ” ಎಂದು ಪತ್ರ ಹೇಳಿದೆ.

“ಕಳೆದ ಎರಡು ವರ್ಷಗಳಿಂದ ಸತತ ಹೋರಾಟ ನಡೆಸಿದ್ದಾರೆ. ರೈತರ ಕೂಗನ್ನು ಕೇಳಿಸಿಕೊಳ್ಳದೆ ಬಿಜೆಪಿ ಸರ್ಕಾರ ಈ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ಆಗ ನಿಮ್ಮ ಪಕ್ಷವೂ ಇದನ್ನು ವಿರೋಧಿಸಿತ್ತು. ನೀವೇ ಖುದ್ದು ಹೋರಾಟ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ನೀಡಿದ್ದಿರಿ. ಈಗ ಏಕೆ ಆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲೇಬೇಕು ಎಂದು ನಿಮ್ಮ ಸರ್ಕಾ ರ ಪಟ್ಟು ಹಿಡಿದಿದೆ ಅರ್ಥವಾಗುತ್ತಿಲ್ಲ” ಎಂದು ಅವರು ಮುಖ್ಯಮಂತ್ರಿಯನ್ನು ಕೇಳಿದ್ದಾರೆ.

“ರೈತರಿಗೀಗ ಅಂತಿಮ ಅಧಿಸೂಚನೆ ಹೋಗಿದೆ. ರೈತರು ಆತಂಕಿತರಾಗಿದ್ದಾರೆ. ಅವರ ಬೆಂಬಲಕ್ಕೆ ಕರ್ನಾಟಕದ ಸಮಸ್ತ ಸಂಘಟನೆಗಳೂ ನಿಂತಿವೆ. ಜೂನ್‌ 25ಕ್ಕೆ ದೇವನ ಹಳ್ಳಿ ಚಲೋಗೆ ಕರೆ ನೀಡಿವೆ. ಸರ್ಕಾರ ರೈತಪರ ನಿಲುವು ತೆಗೆದುಕೊಳ್ಳುವ ತನಕ ದೇವನಹಳ್ಳಿಯಿಂದ ವಾಪಾಸ್‌ ಬರುವುದಿಲ್ಲ ಎಂದು ಹೇಳುತ್ತಿದ್ದಾರೆ. ಈ ಸಂಘರ್ಷ ರೈತರಿಗಾಗಲೀ, ಸರ್ಕಾರಕ್ಕಾಗಲೀ, ರಾಜ್ಯಕ್ಕಾಗಲೀ ಒಳಿತನ್ನು ಮಾಡುವುದಿಲ್ಲ.” ಎಂದು ಪತ್ರವೂ ಹೇಳಿದೆ.

ನೀವು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಬಲ್ಲವರು ಎಂದು ಹೇಳಿರುವ ಪತ್ರವೂ, ಮುಖ್ಯಮಂತ್ರಿ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕು ಎಂದು ಕೋರಿದೆ. ಸಮಸ್ಯೆಯನ್ನು ಬಗೆಹರಿಸಿ ರಾಜ್ಯಕ್ಕೆ ಉತ್ತಮ ಸಂದೇಶ ನೀಡಬೇಕು ಎಂದು ಪತ್ರವೂ ಮನವಿ ಮಾಡಿದ್ದು, ಜೊತೆಗೆ ನೀವು ನಮ್ಮನ್ನು ನಿರಾಸೆಗೊಳಿಸುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದೆ.

ಹಿರಿಯ ಸಾಹಿತಿಗಳಾದ ಡಾ.ಬರಗೂರು ರಾಮಚಂದ್ರಪ್ಪ, ಡಾ.ಕೆ ಮರುಳಸಿದ್ದಪ್ಪ, ಬಾನು ಮುಷ್ತಾಕ್, ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಡಾ.ಹಿಂದೂಧರ ಹೊನ್ನಾಪುರ, ಡಾ.ಎಚ್.ಎಲ್ ಪುಷ್ಪ, ಡಾ.ವಿಜಯಮ್ಮ, ಡಾ. ಜಾಣಗೆರೆ ವೆಂಕಟರಾಮಯ್ಯ, ಎಲ್ ಎನ್ ಮುಕುಂದರಾಜ್, ಡಾ.ಎನ್ ಗಾಯತ್ರಿ, ಡಾ.ಕೆ.ನೀಲ, ಕೆ.‍ಷರೀಪ, ಚಿತ್ರನಟರಾದ ಪ್ರಕಾಶ್ ರಾಜ್, ಬಿ. ಸುರೇಶ್, ವಿಜ್ಞಾನಿಗಳಾದ ಪ್ರೋ. ಪ್ರಜ್ವಲ್ ಶಾಸ್ತ್ರಿ, ಡಾ.ಸವ್ಯಸಾಚಿ ಚಟರ್ಜಿ, ಡಾ.ವಾಣಿ ಚಾಟರ್ಜಿ ಮತ್ತು ಸಾಣೆಹಳ್ಳಿ ಮಠದ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮಿಜಿ ಅವರು ಪತ್ರಕ್ಕೆ ಸಹಿ ಹಾಕಿದ್ದಾರೆ. ಚನ್ನರಾಯಪಟ್ಟಣ ರೈತ ಹೋರಾಟ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ ರೈತರು

ದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...