Homeಕರ್ನಾಟಕಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

- Advertisement -
- Advertisement -

ರೈತರು ನಡೆಸುತ್ತಿರುವ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ರಾಜ್ಯದ ಹಿರಿಯ ಸಾಹಿತಿಗಳು, ಚಿಂತಕರು, ವಿಜ್ಞಾನಿಗಳು, ಸ್ವಾಮೀಜಿಗಳು, ಚಿತ್ರನಟರು ಮತ್ತು ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ರೈತರಿಂದ ಭೂಮಿಯನ್ನು ಕಿತ್ತುಕೊಳ್ಳಬಾರದು ಎಂದು ಆಗ್ರಹಿಸಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪ್ಪಟ್ಟಣದ ರೈತರು ಕಳೆದ 1000 ದಿನಗಳಿಗಿಂತಲೂ ಹೆಚ್ಚು ಕಾಲದಿಂದ ತಮ್ಮ ಭೂಮಿಯನ್ನು ಉಳಿಸಲು ಹೋರಾಟವನ್ನು ನಡೆಸುತ್ತಲೆ ಬಂದಿದ್ದಾರೆ. ಚನ್ನರಾಯಪಟ್ಟಣ ರೈತ ಹೋರಾಟ

ತುರ್ತು ವಿಚಾರವೊಂದನ್ನು ತಮ್ಮ ಗಮನಕ್ಕೆ ತರಲು ಈ ಬಹಿರಂಗ ಪತ್ರ ಬರಿಯುತ್ತಿದ್ದೇವೆ ಎಂದು ಮುಖ್ಯಮಂತ್ರಿಗೆ ಹೇಳಿರುವ ಅವರು, “ಚನ್ನರಾಯಪಟ್ಟಣದ ವಿಚಾರ ರೈತರು ಹಾಗೂ ಸರ್ಕಾರದ ನಡುವೆ, ಜನಪರ ಸಂಘಟನೆಗಳು ಹಾಗೂ ಸರ್ಕಾರದ ನಡುವೆ ಸಂಘರ್ಷದ ವಿಚಾರವಾಗಿ ಪರಿವರ್ತನೆಯಾಗುತ್ತಿರುವುದನ್ನು ಕಂಡು ನಾವು ಕಳವಳಗೊಂಡಿದ್ದೇವೆ. ಸರ್ಕಾರ ಏಕೆ ಈ ರೀತಿ ಹಟ ಹಿಡಿದಿದೆ ಎಂಬುದು ನಮಗೆ ಅರ್ಥವಾಗದಾಗಿದೆ.” ಎಂದು ಹೇಳಿದ್ದಾರೆ.

ಅಭಿವೃದ್ದಿ ಯೋಜನೆಗಳಿಗೆ ಭೂಮಿ ಬೇಕಾಗುತ್ತದೆ ಎಂಬುದನ್ನು ನಾವೂ ಒಪ್ಪುತ್ತೇವೆ. ಆದರೆ ಅದಕ್ಕೊಂದು ರೀತಿನೀತಿ ಇರಬೇಕಲ್ಲವೇ ಎಂದು ಪತ್ರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದೆ.

“ಚನ್ನರಾಯಪಟ್ಟಣದ ಭೂಮಿ ಫಲವತ್ತಾದ ಕೃಷಿ ಭೂಮಿಯಾಗಿದೆ, ಸಾವಿರಾರು ಜನ ಅದನ್ನು ನಂಬಿ ಬದುಕುತ್ತಿದ್ದಾರೆ. ಎಲ್ಲದಕ್ಕಿಂತ ಹೆಚ್ಚಾಗಿ ಅವರು ಈ ಭೂಮಿಯನ್ನು ಕಂಪನಿಗಳಿಗೆ ಕೊಡಲು ತಮಗೆ ಒಪ್ಪಿಗೆ ಇಲ್ಲ ಎಂದು ಸ್ಪಷ್ಟವಾಗಿ ಸರ್ಕಾರದ ಗಮನಕ್ಕೆ ತಂದಿದ್ದಾರೆ” ಎಂದು ಪತ್ರ ಹೇಳಿದೆ.

“ಕಳೆದ ಎರಡು ವರ್ಷಗಳಿಂದ ಸತತ ಹೋರಾಟ ನಡೆಸಿದ್ದಾರೆ. ರೈತರ ಕೂಗನ್ನು ಕೇಳಿಸಿಕೊಳ್ಳದೆ ಬಿಜೆಪಿ ಸರ್ಕಾರ ಈ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ಆಗ ನಿಮ್ಮ ಪಕ್ಷವೂ ಇದನ್ನು ವಿರೋಧಿಸಿತ್ತು. ನೀವೇ ಖುದ್ದು ಹೋರಾಟ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ನೀಡಿದ್ದಿರಿ. ಈಗ ಏಕೆ ಆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲೇಬೇಕು ಎಂದು ನಿಮ್ಮ ಸರ್ಕಾ ರ ಪಟ್ಟು ಹಿಡಿದಿದೆ ಅರ್ಥವಾಗುತ್ತಿಲ್ಲ” ಎಂದು ಅವರು ಮುಖ್ಯಮಂತ್ರಿಯನ್ನು ಕೇಳಿದ್ದಾರೆ.

“ರೈತರಿಗೀಗ ಅಂತಿಮ ಅಧಿಸೂಚನೆ ಹೋಗಿದೆ. ರೈತರು ಆತಂಕಿತರಾಗಿದ್ದಾರೆ. ಅವರ ಬೆಂಬಲಕ್ಕೆ ಕರ್ನಾಟಕದ ಸಮಸ್ತ ಸಂಘಟನೆಗಳೂ ನಿಂತಿವೆ. ಜೂನ್‌ 25ಕ್ಕೆ ದೇವನ ಹಳ್ಳಿ ಚಲೋಗೆ ಕರೆ ನೀಡಿವೆ. ಸರ್ಕಾರ ರೈತಪರ ನಿಲುವು ತೆಗೆದುಕೊಳ್ಳುವ ತನಕ ದೇವನಹಳ್ಳಿಯಿಂದ ವಾಪಾಸ್‌ ಬರುವುದಿಲ್ಲ ಎಂದು ಹೇಳುತ್ತಿದ್ದಾರೆ. ಈ ಸಂಘರ್ಷ ರೈತರಿಗಾಗಲೀ, ಸರ್ಕಾರಕ್ಕಾಗಲೀ, ರಾಜ್ಯಕ್ಕಾಗಲೀ ಒಳಿತನ್ನು ಮಾಡುವುದಿಲ್ಲ.” ಎಂದು ಪತ್ರವೂ ಹೇಳಿದೆ.

ನೀವು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಬಲ್ಲವರು ಎಂದು ಹೇಳಿರುವ ಪತ್ರವೂ, ಮುಖ್ಯಮಂತ್ರಿ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕು ಎಂದು ಕೋರಿದೆ. ಸಮಸ್ಯೆಯನ್ನು ಬಗೆಹರಿಸಿ ರಾಜ್ಯಕ್ಕೆ ಉತ್ತಮ ಸಂದೇಶ ನೀಡಬೇಕು ಎಂದು ಪತ್ರವೂ ಮನವಿ ಮಾಡಿದ್ದು, ಜೊತೆಗೆ ನೀವು ನಮ್ಮನ್ನು ನಿರಾಸೆಗೊಳಿಸುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದೆ.

ಹಿರಿಯ ಸಾಹಿತಿಗಳಾದ ಡಾ.ಬರಗೂರು ರಾಮಚಂದ್ರಪ್ಪ, ಡಾ.ಕೆ ಮರುಳಸಿದ್ದಪ್ಪ, ಬಾನು ಮುಷ್ತಾಕ್, ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಡಾ.ಹಿಂದೂಧರ ಹೊನ್ನಾಪುರ, ಡಾ.ಎಚ್.ಎಲ್ ಪುಷ್ಪ, ಡಾ.ವಿಜಯಮ್ಮ, ಡಾ. ಜಾಣಗೆರೆ ವೆಂಕಟರಾಮಯ್ಯ, ಎಲ್ ಎನ್ ಮುಕುಂದರಾಜ್, ಡಾ.ಎನ್ ಗಾಯತ್ರಿ, ಡಾ.ಕೆ.ನೀಲ, ಕೆ.‍ಷರೀಪ, ಚಿತ್ರನಟರಾದ ಪ್ರಕಾಶ್ ರಾಜ್, ಬಿ. ಸುರೇಶ್, ವಿಜ್ಞಾನಿಗಳಾದ ಪ್ರೋ. ಪ್ರಜ್ವಲ್ ಶಾಸ್ತ್ರಿ, ಡಾ.ಸವ್ಯಸಾಚಿ ಚಟರ್ಜಿ, ಡಾ.ವಾಣಿ ಚಾಟರ್ಜಿ ಮತ್ತು ಸಾಣೆಹಳ್ಳಿ ಮಠದ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮಿಜಿ ಅವರು ಪತ್ರಕ್ಕೆ ಸಹಿ ಹಾಕಿದ್ದಾರೆ. ಚನ್ನರಾಯಪಟ್ಟಣ ರೈತ ಹೋರಾಟ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ ರೈತರು

ದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...