Homeಮುಖಪುಟಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಖಾಸಗಿ ವಲಯಕ್ಕೆ ಮುಕ್ತ ಅವಕಾಶ: ಪ್ರಧಾನಿ ಮೋದಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಖಾಸಗಿ ವಲಯಕ್ಕೆ ಮುಕ್ತ ಅವಕಾಶ: ಪ್ರಧಾನಿ ಮೋದಿ

- Advertisement -
- Advertisement -

ಇನ್ನುಮುಂದೆ ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ವಲಯವೂ ಭಾಗವಹಿಸಬಹುದು ಎಂಬ ನಿರ್ಣಯಕ್ಕೆ ಜೂನ್‌ ತಿಂಗಳಿನಲ್ಲಿಯೇ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕ್ಷೇತ್ರದಲ್ಲಿ ಖಾಸಗಿ ವಲಯದ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಪ್ರಧಾನಿ ಇಂದು ಬಾಹ್ಯಾಕಾಶ ಕ್ಷೇತ್ರದ ಪ್ರಮುಖ ಕೈಗಾರಿಕೆಗಳು, ಉದ್ಯಮಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸಿದರು.

ಇದನ್ನೂ ಓದಿ: ಮುಷ್ಕರ ವಾಪಸ್ ಪಡೆದ ಸಾರಿಗೆ ನೌಕರರು: ಇಂದು ಸಂಜೆಯಿಂದಲೇ ಬಸ್‌ಗಳ ಸಂಚಾರ ಆರಂಭ

ಈ ಕುರಿತು ಟ್ವೀಟ್ ಮಾಡಿರುವ ಎಎನ್‌ಐ,”ಖಾಸಗಿ ವಲಯದವರು ಬಾಹ್ಯಾಕಾಶ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಉತ್ತೇಜಿಸಲು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬಾಹ್ಯಾಕಾಶ ಕ್ಷೇತ್ರದ ಪ್ರಮುಖ ಕೈಗಾರಿಕೆಗಳು, ಉದ್ಯಮಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ಇಂದು ಸಂವಹನ ನಡೆಸಿದರು. 2020 ರ ಜೂನ್‌ನಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಭಾರತೀಯ ಖಾಸಗಿ ವಲಯವನ್ನು ಬಾಹ್ಯಾಕಾಶ ಕ್ಷೇತ್ರದ ಚಟುವಟಿಕೆಗಳಿಗೆ ಪಾಲುದಾರರನ್ನಾಗಿ ಮಾಡುವ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ” ಎಂದು ವರದಿ ಮಾಡಿದೆ.

ಇದನ್ನೂ ಓದಿ: ‘ಶೂದ್ರ’ ಪದಬಳಕೆ: ಪ್ರಗ್ಯಾ ಠಾಕೂರ್‌ಗೆ ತಿರುಗೇಟು ಕೊಟ್ಟ ಮೀನಾ ಕಂದಸಾಮಿ

ಇದನ್ನೂ ಓದಿ: ಭಾರತದ ಆರ್ಥಿಕತೆ ಕುಸಿಯುತ್ತಿದ್ದರೂ ಅದಾನಿ ಕಂಪನಿ ಮಾತ್ರ ಬೆಳೆಯುತ್ತಿರುವುದು ಹೇಗೆ?

ಭಾರತದ ಸರ್ಕಾರಿ ಸ್ವಾಮ್ಯದಲ್ಲಿರುವ ಬಹುತೇಕ ಎಲ್ಲಾ ವಲಯಗಳನ್ನು ಖಾಸಗಿಯವರಿಗೆ ಬಿಟ್ಟುಕೊಡುತ್ತಿರುವ ಮೋದಿ ಸರ್ಕಾರದ ಮತ್ತೊಂದು ನಿರ್ಧಾರವಿದು. ಈಗಾಗಲೇ ಖಾಸಗೀಕರಣದ ಕರಾಳ ಪರಿಣಾಮಗಳನ್ನು ಎದುರಿಸುತ್ತಿರುವ ಭಾರತ, ಕೇಂದ್ರ ಸರ್ಕಾರದ ಈ ಕ್ರಮದಿಂದ ಏನೆಲ್ಲಾ ಸಕಾರಾತ್ಮಕ ಮತ್ತು ನಕಾರಾತ್ಮಕ ಪರಿಣಾಗಳನ್ನು ಎದುರಿಸಬೇಕಾಗಬಹುದು ಎಂಬುದನ್ನು ಕಾದು ನೋಡಬೇಕಿದೆ.

ಈಗಾಗಲೇ ರೈತ ಬೆಳೆಯುವ ತರಕಾರಿಯಿಂದ ಹಿಡಿದು ವಿಮಾನಯಾನ, ವಿಮಾನ ನಿಲ್ದಾಣದವರೆಗೆ ಎಲ್ಲವೂ ಅಂಬಾನಿ-ಅದಾನಿಯ ಪಾಲಾಗಿದೆ. ಇದೀಗ ಬಾಹ್ಯಾಕಾಶ ಕ್ಷೇತ್ರವನ್ನು ಖಾಸಗಿ ವಲಯಕ್ಕೆ ಮುಕ್ತಗೊಳಿಸಿರುವುದರಿಂದ ಉಪಗ್ರಹ ಉಡಾವಣೆ, ರಾಕೆಟ್ ತಯಾರಿಕೆ ಸೇರಿದಂತೆ ಮುಂತಾದ ತಾಂತ್ರಿಕ ಉಪಕರಣಗಳನ್ನು ತಯಾರಿಸುವ ಜವಾಬ್ದಾರಿಗಳು ಅಂಬಾನಿ-ಅದಾನಿಯ ಹೆಗಲ ಮೇಲೆ ಬೀಳಬಹುದು. ಹಾಗಾಗಿ ಇನ್ನುಮುಂದೆ ಉಪಗ್ರಹ ತಯಾರಿಕೆ ಮತ್ತು ಉಡಾವಣೆಗೆ ಸಂಬಂಧಿಸಿದ ಎಲ್ಲಾ ಉತ್ಪನ್ನಗಳನ್ನು ಇವರ ಕಂಪನಿಯಿಂದಲೇ ತಯಾರಾಗಬಹುದು? ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಸಂಸ್ಥೆಗಳು ನೆಲಕಚ್ಚಬಹುದು? ಇನ್ನು ಇಲ್ಲಿನ ನೌಕರರ ಪರಿಸ್ಥಿತಿ?

ಸರ್ಕಾರವೇ ಎಷ್ಟು ಭಾರವನ್ನು ಹೊರಲು ಸಾಧ್ಯ! ಹಾಗಾಗಿಯೇ ಅಂಬಾನಿ-ಅದಾನಿಯೂ ಸ್ವಲ್ಪ ಭಾರ ಹೊರಲಿ ಎಂದು ಅವರಿಗೆ ಸರ್ಕಾರಿ ಸ್ವಾಮ್ಯದಲ್ಲಿರುವ ಪ್ರಮುಖ ಉದ್ಯಮಗಳನ್ನು ಮಾರಲಾಗುತ್ತಿದೆ ಅಷ್ಟೆ!


ಇದನ್ನೂ ಓದಿ: ರೈತರು ವಿಷ ಸೇವಿಸಿದಾಗ ಕಾಳಜಿ ವಹಿಸದವರು ಪಿಜ್ಜಾ ತಿನ್ನುವಾಗ ಟೀಕೆ ಮಾಡುತ್ತಾರೆ – ದಿಲ್ಜಿತ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...