Homeಮುಖಪುಟತೆಲಂಗಾಣದಲ್ಲಿ ಮುಂದುವರಿದ 'ಆಪರೇಷನ್ ಹಸ್ತ'; ಬಿಆರ್‌ಎಸ್‌ನ ಆರು ಎಂಎಲ್‌ಸಿಗಳು ಕಾಂಗ್ರೆಸ್ ಸೇರ್ಪಡೆ

ತೆಲಂಗಾಣದಲ್ಲಿ ಮುಂದುವರಿದ ‘ಆಪರೇಷನ್ ಹಸ್ತ’; ಬಿಆರ್‌ಎಸ್‌ನ ಆರು ಎಂಎಲ್‌ಸಿಗಳು ಕಾಂಗ್ರೆಸ್ ಸೇರ್ಪಡೆ

- Advertisement -
- Advertisement -

ತೆಲಂಗಾಣದಲ್ಲಿ ಪ್ರತಿಪಕ್ಷ ಬಿಆರ್‌ಎಸ್‌ಗೆ ಭಾರಿ ಹಿನ್ನಡೆಯಾಗಿದ್ದು, ಗುರುವಾರ ತಡರಾತ್ರಿ ರಾಜ್ಯದ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಸಮ್ಮುಖದಲ್ಲಿ ಪಕ್ಷದ ಆರು ಜನ ಎಂಎಲ್‌ಸಿಗಳು ಆಡಳಿತಾರೂಢ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಭಾರತ್ ರಾಷ್ಟ್ರ ಸಮಿತಿಯು ಆರು ಶಾಸಕರು ಸೇರಿದಂತೆ ಹಲವಾರು ನಾಯಕರು ಪಕ್ಷವನ್ನು ತೊರೆದಿದ್ದು, ಆಪರೇಷನ್ ಹಸ್ತದಿಂದ ಪಕ್ಷದ ನಾಯಕರು ಆಘಾತಕ್ಕೆ ಒಳಗಾಗಿದ್ದಾರೆ.

ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ ಆರು ಎಂಎಲ್‌ಸಿಗಳೆಂದರೆ, ದಂಡೆ ವಿಠಲ್, ಭಾನು ಪ್ರಸಾದ್ ರಾವ್, ಎಂಎಸ್ ಪ್ರಭಾಕರ್, ಬೊಗ್ಗರಪು ದಯಾನಂದ್, ಯೆಗ್ಗೆ ಮಲ್ಲೇಶಂ ಮತ್ತು ಬಸ್ವರಾಜು ಸರಯ್ಯ ಎಂದು ಮೂಲಗಳು ತಿಳಿಸಿವೆ.

ಟಿಪಿಸಿಸಿ ಅಧ್ಯಕ್ಷರೂ ಆಗಿರುವ ಸಿಎಂ ರೇವಂತ್ ರೆಡ್ಡಿ ಅವರ ನಿವಾಸದಲ್ಲಿ ಬಿಆರ್‌ಎಸ್ ಎಂಎಲ್‌ಸಿಗಳು ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಸಂದರ್ಭದಲ್ಲಿ ತೆಲಂಗಾಣದಲ್ಲಿ ಎಐಸಿಸಿ ಪಕ್ಷದ ವ್ಯವಹಾರಗಳ ಉಸ್ತುವಾರಿ ದೀಪಾ ದಾಸ್ಮುನ್ಸಿ ಮತ್ತು ಇತರ ಮುಖಂಡರು ಉಪಸ್ಥಿತರಿದ್ದರು.

ತೆಲಂಗಾಣ ಲೆಜಿಸ್ಲೇಟ್ ಕೌನ್ಸಿಲ್ ವೆಬ್‌ಸೈಟ್ ಪ್ರಕಾರ, ಬಿಆರ್‌ಎಸ್ 25 ಮತ್ತು ಕಾಂಗ್ರೆಸ್ ನಾಲ್ಕು ಸದಸ್ಯರನ್ನು ಹೊಂದಿದೆ. ನಾಲ್ಕು ನಾಮನಿರ್ದೇಶಿತ ಎಂಎಲ್‌ಸಿಗಳು, ಎಐಎಂಐಎಂನಿಂದ ಇಬ್ಬರು ಸದಸ್ಯರು, ಬಿಜೆಪಿ, ಪಿಆರ್‌ಟಿಯುನಿಂದ ತಲಾ ಒಬ್ಬರು ಮತ್ತು ಸ್ವತಂತ್ರ ಒಬ್ಬರು, 40 ಸದಸ್ಯರ ಸದನದಲ್ಲಿ ಎರಡು ಸ್ಥಾನಗಳು ಖಾಲಿ ಇವೆ.

ರೇವಂತ್ ರೆಡ್ಡಿ ಎರಡು ದಿನಗಳ ಪ್ರವಾಸದಿಂದ ಗುರುವಾರ ರಾತ್ರಿ ರಾಷ್ಟ್ರ ರಾಜಧಾನಿಗೆ ಹಿಂದಿರುಗಿದ ಕೂಡಲೇ ಎಂಎಲ್‌ಸಿಗಳು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಹೊಸ ಪಕ್ಷಾಂತರದಿಂದ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಬಲ 10ಕ್ಕೆ ಏರಲಿದೆ.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯ ನಂತರ ಆರು ಬಿಆರ್‌ಎಸ್ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿ ಆಡಳಿತ ಪಕ್ಷದತ್ತ ಮುಖ ಮಾಡುತ್ತಾರೆ ಎಂಬ ಊಹಾಪೋಹಗಳು ಹಬ್ಬಿವೆ.

ಕಳೆದ ವರ್ಷ ನಡೆದ ಚುನಾವಣೆಯಲ್ಲಿ ಒಟ್ಟು 119 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಆರ್‌ಎಸ್ 39 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದರೆ, ಕಾಂಗ್ರೆಸ್ 64 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಿತ್ತು.

ಆದಾಗ್ಯೂ, ಸಿಕಂದರಾಬಾದ್ ಕಂಟೋನ್ಮೆಂಟ್‌ನ ಬಿಆರ್‌ಎಸ್ ಶಾಸಕಿ ಜಿ ಲಾಸ್ಯ ನಂದಿತಾ ಈ ವರ್ಷದ ಆರಂಭದಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಸಿಕಂದರಾಬಾದ್ ಕಂಟೋನ್ಮೆಂಟ್ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇದು ಅದರ ಬಲವನ್ನು 65 ಕ್ಕೆ ಹೆಚ್ಚಿಸಲು ಕಾರಣವಾಯಿತು.

‘ಇದು ಯಾವ ರೀತಿಯ ನ್ಯಾಯ ಪತ್ರ..’; ರಾಹುಲ್ ಗಾಂಧಿಯನ್ನು ಪ್ರಶ್ನಿಸಿದ ಕೆಟಿಆರ್

ಸಾಲುಸಾಲು ಬಿಆರ್‌ಎಸ್ ಶಾಸಕರು ಮತ್ತು ನಾಯಕರು ಕಾಂಗ್ರೆಸ್ ಸೇರುತ್ತಿರುವ ಬಗ್ಗೆ ಆಕ್ರೋಶ ಹೊರಹಾಕಿರುವ ಪಕ್ಷದ ಮುಖಂಡ ಕೆಟಿ ರಾಮ್‌ ರಾವ್, ಇದು ಯಾವ ರೀತಿಯ ನ್ಯಾಯ ಪತ್ರ ಎಂದು ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಬಿಆರ್‌ಎಸ್ ಸಂಸದ ಕೇಶವ ರಾವ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ನಂತರ ರಾಜೀನಾಮೆ ನೀಡಿದ್ದಾರೆ. ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಪಕ್ಷಾಂತರ ಮಾಡಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಲೋಕಸಭೆಗೆ ಸ್ಪರ್ಧಿಸಿದ ಬಿಆರ್‌ಎಸ್ ಶಾಸಕರ ಬಗ್ಗೆ ಎನು ಹೇಳುತ್ತೀರಾ? ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ ಅರ್ಧ ಡಜನ್ ಇತರ ಬಿಆರ್‌ಎಸ್ ಶಾಸಕರ ಬಗ್ಗೆ ಏನು ಹೇಳುತ್ತೀರಾ? ರಾಹುಲ್ ಗಾಂಧಿಯವರೆ, ನೀವು ಸಂವಿಧಾನವನ್ನು ಎತ್ತಿ ಹಿಡಿಯಲು ಹೊರಟಿರುವುದು ಹೀಗೆಯೇ” ಎಂದು ಪ್ರಶ್ನಿಸಿದ್ದಾರೆ.

“ನೀವು ಬಿಆರ್‌ಎಸ್ ಶಾಸಕರನ್ನು ರಾಜೀನಾಮೆ ನೀಡಲು ಸಾಧ್ಯವಾಗದಿದ್ದರೆ, ಕಾಂಗ್ರೆಸ್ ಪ್ರಣಾಳಿಕೆಯಂತೆ 10 ತಿದ್ದುಪಡಿಗಳನ್ನು ನಿಗದಿಪಡಿಸಲು ನೀವು ಬದ್ಧರಾಗಿದ್ದೀರಿ ಎಂದು ರಾಷ್ಟ್ರವು ಹೇಗೆ ನಂಬುತ್ತದೆ? ಯೇ ಕೈಸಾ ನ್ಯಾಯ ಪತ್ರ ಹೈಂ? (ಇದು ಯಾವ ರೀತಿಯ ನ್ಯಾಯ ಪತ್ರ) ” ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ; ಲೋಕಸಭಾ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಅಮೃತಪಾಲ್, ರಶೀದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...