Homeಮುಖಪುಟತೆಲಂಗಾಣದಲ್ಲಿ ಮುಂದುವರಿದ 'ಆಪರೇಷನ್ ಹಸ್ತ'; ಬಿಆರ್‌ಎಸ್‌ನ ಆರು ಎಂಎಲ್‌ಸಿಗಳು ಕಾಂಗ್ರೆಸ್ ಸೇರ್ಪಡೆ

ತೆಲಂಗಾಣದಲ್ಲಿ ಮುಂದುವರಿದ ‘ಆಪರೇಷನ್ ಹಸ್ತ’; ಬಿಆರ್‌ಎಸ್‌ನ ಆರು ಎಂಎಲ್‌ಸಿಗಳು ಕಾಂಗ್ರೆಸ್ ಸೇರ್ಪಡೆ

- Advertisement -
- Advertisement -

ತೆಲಂಗಾಣದಲ್ಲಿ ಪ್ರತಿಪಕ್ಷ ಬಿಆರ್‌ಎಸ್‌ಗೆ ಭಾರಿ ಹಿನ್ನಡೆಯಾಗಿದ್ದು, ಗುರುವಾರ ತಡರಾತ್ರಿ ರಾಜ್ಯದ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಸಮ್ಮುಖದಲ್ಲಿ ಪಕ್ಷದ ಆರು ಜನ ಎಂಎಲ್‌ಸಿಗಳು ಆಡಳಿತಾರೂಢ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಭಾರತ್ ರಾಷ್ಟ್ರ ಸಮಿತಿಯು ಆರು ಶಾಸಕರು ಸೇರಿದಂತೆ ಹಲವಾರು ನಾಯಕರು ಪಕ್ಷವನ್ನು ತೊರೆದಿದ್ದು, ಆಪರೇಷನ್ ಹಸ್ತದಿಂದ ಪಕ್ಷದ ನಾಯಕರು ಆಘಾತಕ್ಕೆ ಒಳಗಾಗಿದ್ದಾರೆ.

ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ ಆರು ಎಂಎಲ್‌ಸಿಗಳೆಂದರೆ, ದಂಡೆ ವಿಠಲ್, ಭಾನು ಪ್ರಸಾದ್ ರಾವ್, ಎಂಎಸ್ ಪ್ರಭಾಕರ್, ಬೊಗ್ಗರಪು ದಯಾನಂದ್, ಯೆಗ್ಗೆ ಮಲ್ಲೇಶಂ ಮತ್ತು ಬಸ್ವರಾಜು ಸರಯ್ಯ ಎಂದು ಮೂಲಗಳು ತಿಳಿಸಿವೆ.

ಟಿಪಿಸಿಸಿ ಅಧ್ಯಕ್ಷರೂ ಆಗಿರುವ ಸಿಎಂ ರೇವಂತ್ ರೆಡ್ಡಿ ಅವರ ನಿವಾಸದಲ್ಲಿ ಬಿಆರ್‌ಎಸ್ ಎಂಎಲ್‌ಸಿಗಳು ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಸಂದರ್ಭದಲ್ಲಿ ತೆಲಂಗಾಣದಲ್ಲಿ ಎಐಸಿಸಿ ಪಕ್ಷದ ವ್ಯವಹಾರಗಳ ಉಸ್ತುವಾರಿ ದೀಪಾ ದಾಸ್ಮುನ್ಸಿ ಮತ್ತು ಇತರ ಮುಖಂಡರು ಉಪಸ್ಥಿತರಿದ್ದರು.

ತೆಲಂಗಾಣ ಲೆಜಿಸ್ಲೇಟ್ ಕೌನ್ಸಿಲ್ ವೆಬ್‌ಸೈಟ್ ಪ್ರಕಾರ, ಬಿಆರ್‌ಎಸ್ 25 ಮತ್ತು ಕಾಂಗ್ರೆಸ್ ನಾಲ್ಕು ಸದಸ್ಯರನ್ನು ಹೊಂದಿದೆ. ನಾಲ್ಕು ನಾಮನಿರ್ದೇಶಿತ ಎಂಎಲ್‌ಸಿಗಳು, ಎಐಎಂಐಎಂನಿಂದ ಇಬ್ಬರು ಸದಸ್ಯರು, ಬಿಜೆಪಿ, ಪಿಆರ್‌ಟಿಯುನಿಂದ ತಲಾ ಒಬ್ಬರು ಮತ್ತು ಸ್ವತಂತ್ರ ಒಬ್ಬರು, 40 ಸದಸ್ಯರ ಸದನದಲ್ಲಿ ಎರಡು ಸ್ಥಾನಗಳು ಖಾಲಿ ಇವೆ.

ರೇವಂತ್ ರೆಡ್ಡಿ ಎರಡು ದಿನಗಳ ಪ್ರವಾಸದಿಂದ ಗುರುವಾರ ರಾತ್ರಿ ರಾಷ್ಟ್ರ ರಾಜಧಾನಿಗೆ ಹಿಂದಿರುಗಿದ ಕೂಡಲೇ ಎಂಎಲ್‌ಸಿಗಳು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಹೊಸ ಪಕ್ಷಾಂತರದಿಂದ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಬಲ 10ಕ್ಕೆ ಏರಲಿದೆ.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯ ನಂತರ ಆರು ಬಿಆರ್‌ಎಸ್ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿ ಆಡಳಿತ ಪಕ್ಷದತ್ತ ಮುಖ ಮಾಡುತ್ತಾರೆ ಎಂಬ ಊಹಾಪೋಹಗಳು ಹಬ್ಬಿವೆ.

ಕಳೆದ ವರ್ಷ ನಡೆದ ಚುನಾವಣೆಯಲ್ಲಿ ಒಟ್ಟು 119 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಆರ್‌ಎಸ್ 39 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದರೆ, ಕಾಂಗ್ರೆಸ್ 64 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಿತ್ತು.

ಆದಾಗ್ಯೂ, ಸಿಕಂದರಾಬಾದ್ ಕಂಟೋನ್ಮೆಂಟ್‌ನ ಬಿಆರ್‌ಎಸ್ ಶಾಸಕಿ ಜಿ ಲಾಸ್ಯ ನಂದಿತಾ ಈ ವರ್ಷದ ಆರಂಭದಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಸಿಕಂದರಾಬಾದ್ ಕಂಟೋನ್ಮೆಂಟ್ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇದು ಅದರ ಬಲವನ್ನು 65 ಕ್ಕೆ ಹೆಚ್ಚಿಸಲು ಕಾರಣವಾಯಿತು.

‘ಇದು ಯಾವ ರೀತಿಯ ನ್ಯಾಯ ಪತ್ರ..’; ರಾಹುಲ್ ಗಾಂಧಿಯನ್ನು ಪ್ರಶ್ನಿಸಿದ ಕೆಟಿಆರ್

ಸಾಲುಸಾಲು ಬಿಆರ್‌ಎಸ್ ಶಾಸಕರು ಮತ್ತು ನಾಯಕರು ಕಾಂಗ್ರೆಸ್ ಸೇರುತ್ತಿರುವ ಬಗ್ಗೆ ಆಕ್ರೋಶ ಹೊರಹಾಕಿರುವ ಪಕ್ಷದ ಮುಖಂಡ ಕೆಟಿ ರಾಮ್‌ ರಾವ್, ಇದು ಯಾವ ರೀತಿಯ ನ್ಯಾಯ ಪತ್ರ ಎಂದು ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಬಿಆರ್‌ಎಸ್ ಸಂಸದ ಕೇಶವ ರಾವ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ನಂತರ ರಾಜೀನಾಮೆ ನೀಡಿದ್ದಾರೆ. ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಪಕ್ಷಾಂತರ ಮಾಡಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಲೋಕಸಭೆಗೆ ಸ್ಪರ್ಧಿಸಿದ ಬಿಆರ್‌ಎಸ್ ಶಾಸಕರ ಬಗ್ಗೆ ಎನು ಹೇಳುತ್ತೀರಾ? ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ ಅರ್ಧ ಡಜನ್ ಇತರ ಬಿಆರ್‌ಎಸ್ ಶಾಸಕರ ಬಗ್ಗೆ ಏನು ಹೇಳುತ್ತೀರಾ? ರಾಹುಲ್ ಗಾಂಧಿಯವರೆ, ನೀವು ಸಂವಿಧಾನವನ್ನು ಎತ್ತಿ ಹಿಡಿಯಲು ಹೊರಟಿರುವುದು ಹೀಗೆಯೇ” ಎಂದು ಪ್ರಶ್ನಿಸಿದ್ದಾರೆ.

“ನೀವು ಬಿಆರ್‌ಎಸ್ ಶಾಸಕರನ್ನು ರಾಜೀನಾಮೆ ನೀಡಲು ಸಾಧ್ಯವಾಗದಿದ್ದರೆ, ಕಾಂಗ್ರೆಸ್ ಪ್ರಣಾಳಿಕೆಯಂತೆ 10 ತಿದ್ದುಪಡಿಗಳನ್ನು ನಿಗದಿಪಡಿಸಲು ನೀವು ಬದ್ಧರಾಗಿದ್ದೀರಿ ಎಂದು ರಾಷ್ಟ್ರವು ಹೇಗೆ ನಂಬುತ್ತದೆ? ಯೇ ಕೈಸಾ ನ್ಯಾಯ ಪತ್ರ ಹೈಂ? (ಇದು ಯಾವ ರೀತಿಯ ನ್ಯಾಯ ಪತ್ರ) ” ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ; ಲೋಕಸಭಾ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಅಮೃತಪಾಲ್, ರಶೀದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...