Homeಮುಖಪುಟತೆಲಂಗಾಣದಲ್ಲಿ ಮುಂದುವರಿದ 'ಆಪರೇಷನ್ ಹಸ್ತ'; ಬಿಆರ್‌ಎಸ್‌ನ ಆರು ಎಂಎಲ್‌ಸಿಗಳು ಕಾಂಗ್ರೆಸ್ ಸೇರ್ಪಡೆ

ತೆಲಂಗಾಣದಲ್ಲಿ ಮುಂದುವರಿದ ‘ಆಪರೇಷನ್ ಹಸ್ತ’; ಬಿಆರ್‌ಎಸ್‌ನ ಆರು ಎಂಎಲ್‌ಸಿಗಳು ಕಾಂಗ್ರೆಸ್ ಸೇರ್ಪಡೆ

- Advertisement -
- Advertisement -

ತೆಲಂಗಾಣದಲ್ಲಿ ಪ್ರತಿಪಕ್ಷ ಬಿಆರ್‌ಎಸ್‌ಗೆ ಭಾರಿ ಹಿನ್ನಡೆಯಾಗಿದ್ದು, ಗುರುವಾರ ತಡರಾತ್ರಿ ರಾಜ್ಯದ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಸಮ್ಮುಖದಲ್ಲಿ ಪಕ್ಷದ ಆರು ಜನ ಎಂಎಲ್‌ಸಿಗಳು ಆಡಳಿತಾರೂಢ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಭಾರತ್ ರಾಷ್ಟ್ರ ಸಮಿತಿಯು ಆರು ಶಾಸಕರು ಸೇರಿದಂತೆ ಹಲವಾರು ನಾಯಕರು ಪಕ್ಷವನ್ನು ತೊರೆದಿದ್ದು, ಆಪರೇಷನ್ ಹಸ್ತದಿಂದ ಪಕ್ಷದ ನಾಯಕರು ಆಘಾತಕ್ಕೆ ಒಳಗಾಗಿದ್ದಾರೆ.

ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ ಆರು ಎಂಎಲ್‌ಸಿಗಳೆಂದರೆ, ದಂಡೆ ವಿಠಲ್, ಭಾನು ಪ್ರಸಾದ್ ರಾವ್, ಎಂಎಸ್ ಪ್ರಭಾಕರ್, ಬೊಗ್ಗರಪು ದಯಾನಂದ್, ಯೆಗ್ಗೆ ಮಲ್ಲೇಶಂ ಮತ್ತು ಬಸ್ವರಾಜು ಸರಯ್ಯ ಎಂದು ಮೂಲಗಳು ತಿಳಿಸಿವೆ.

ಟಿಪಿಸಿಸಿ ಅಧ್ಯಕ್ಷರೂ ಆಗಿರುವ ಸಿಎಂ ರೇವಂತ್ ರೆಡ್ಡಿ ಅವರ ನಿವಾಸದಲ್ಲಿ ಬಿಆರ್‌ಎಸ್ ಎಂಎಲ್‌ಸಿಗಳು ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಸಂದರ್ಭದಲ್ಲಿ ತೆಲಂಗಾಣದಲ್ಲಿ ಎಐಸಿಸಿ ಪಕ್ಷದ ವ್ಯವಹಾರಗಳ ಉಸ್ತುವಾರಿ ದೀಪಾ ದಾಸ್ಮುನ್ಸಿ ಮತ್ತು ಇತರ ಮುಖಂಡರು ಉಪಸ್ಥಿತರಿದ್ದರು.

ತೆಲಂಗಾಣ ಲೆಜಿಸ್ಲೇಟ್ ಕೌನ್ಸಿಲ್ ವೆಬ್‌ಸೈಟ್ ಪ್ರಕಾರ, ಬಿಆರ್‌ಎಸ್ 25 ಮತ್ತು ಕಾಂಗ್ರೆಸ್ ನಾಲ್ಕು ಸದಸ್ಯರನ್ನು ಹೊಂದಿದೆ. ನಾಲ್ಕು ನಾಮನಿರ್ದೇಶಿತ ಎಂಎಲ್‌ಸಿಗಳು, ಎಐಎಂಐಎಂನಿಂದ ಇಬ್ಬರು ಸದಸ್ಯರು, ಬಿಜೆಪಿ, ಪಿಆರ್‌ಟಿಯುನಿಂದ ತಲಾ ಒಬ್ಬರು ಮತ್ತು ಸ್ವತಂತ್ರ ಒಬ್ಬರು, 40 ಸದಸ್ಯರ ಸದನದಲ್ಲಿ ಎರಡು ಸ್ಥಾನಗಳು ಖಾಲಿ ಇವೆ.

ರೇವಂತ್ ರೆಡ್ಡಿ ಎರಡು ದಿನಗಳ ಪ್ರವಾಸದಿಂದ ಗುರುವಾರ ರಾತ್ರಿ ರಾಷ್ಟ್ರ ರಾಜಧಾನಿಗೆ ಹಿಂದಿರುಗಿದ ಕೂಡಲೇ ಎಂಎಲ್‌ಸಿಗಳು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಹೊಸ ಪಕ್ಷಾಂತರದಿಂದ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಬಲ 10ಕ್ಕೆ ಏರಲಿದೆ.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯ ನಂತರ ಆರು ಬಿಆರ್‌ಎಸ್ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿ ಆಡಳಿತ ಪಕ್ಷದತ್ತ ಮುಖ ಮಾಡುತ್ತಾರೆ ಎಂಬ ಊಹಾಪೋಹಗಳು ಹಬ್ಬಿವೆ.

ಕಳೆದ ವರ್ಷ ನಡೆದ ಚುನಾವಣೆಯಲ್ಲಿ ಒಟ್ಟು 119 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಆರ್‌ಎಸ್ 39 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದರೆ, ಕಾಂಗ್ರೆಸ್ 64 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಿತ್ತು.

ಆದಾಗ್ಯೂ, ಸಿಕಂದರಾಬಾದ್ ಕಂಟೋನ್ಮೆಂಟ್‌ನ ಬಿಆರ್‌ಎಸ್ ಶಾಸಕಿ ಜಿ ಲಾಸ್ಯ ನಂದಿತಾ ಈ ವರ್ಷದ ಆರಂಭದಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಸಿಕಂದರಾಬಾದ್ ಕಂಟೋನ್ಮೆಂಟ್ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇದು ಅದರ ಬಲವನ್ನು 65 ಕ್ಕೆ ಹೆಚ್ಚಿಸಲು ಕಾರಣವಾಯಿತು.

‘ಇದು ಯಾವ ರೀತಿಯ ನ್ಯಾಯ ಪತ್ರ..’; ರಾಹುಲ್ ಗಾಂಧಿಯನ್ನು ಪ್ರಶ್ನಿಸಿದ ಕೆಟಿಆರ್

ಸಾಲುಸಾಲು ಬಿಆರ್‌ಎಸ್ ಶಾಸಕರು ಮತ್ತು ನಾಯಕರು ಕಾಂಗ್ರೆಸ್ ಸೇರುತ್ತಿರುವ ಬಗ್ಗೆ ಆಕ್ರೋಶ ಹೊರಹಾಕಿರುವ ಪಕ್ಷದ ಮುಖಂಡ ಕೆಟಿ ರಾಮ್‌ ರಾವ್, ಇದು ಯಾವ ರೀತಿಯ ನ್ಯಾಯ ಪತ್ರ ಎಂದು ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಬಿಆರ್‌ಎಸ್ ಸಂಸದ ಕೇಶವ ರಾವ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ನಂತರ ರಾಜೀನಾಮೆ ನೀಡಿದ್ದಾರೆ. ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಪಕ್ಷಾಂತರ ಮಾಡಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಲೋಕಸಭೆಗೆ ಸ್ಪರ್ಧಿಸಿದ ಬಿಆರ್‌ಎಸ್ ಶಾಸಕರ ಬಗ್ಗೆ ಎನು ಹೇಳುತ್ತೀರಾ? ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ ಅರ್ಧ ಡಜನ್ ಇತರ ಬಿಆರ್‌ಎಸ್ ಶಾಸಕರ ಬಗ್ಗೆ ಏನು ಹೇಳುತ್ತೀರಾ? ರಾಹುಲ್ ಗಾಂಧಿಯವರೆ, ನೀವು ಸಂವಿಧಾನವನ್ನು ಎತ್ತಿ ಹಿಡಿಯಲು ಹೊರಟಿರುವುದು ಹೀಗೆಯೇ” ಎಂದು ಪ್ರಶ್ನಿಸಿದ್ದಾರೆ.

“ನೀವು ಬಿಆರ್‌ಎಸ್ ಶಾಸಕರನ್ನು ರಾಜೀನಾಮೆ ನೀಡಲು ಸಾಧ್ಯವಾಗದಿದ್ದರೆ, ಕಾಂಗ್ರೆಸ್ ಪ್ರಣಾಳಿಕೆಯಂತೆ 10 ತಿದ್ದುಪಡಿಗಳನ್ನು ನಿಗದಿಪಡಿಸಲು ನೀವು ಬದ್ಧರಾಗಿದ್ದೀರಿ ಎಂದು ರಾಷ್ಟ್ರವು ಹೇಗೆ ನಂಬುತ್ತದೆ? ಯೇ ಕೈಸಾ ನ್ಯಾಯ ಪತ್ರ ಹೈಂ? (ಇದು ಯಾವ ರೀತಿಯ ನ್ಯಾಯ ಪತ್ರ) ” ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ; ಲೋಕಸಭಾ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಅಮೃತಪಾಲ್, ರಶೀದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...