Homeಮುಖಪುಟ‘ಆಫರೇಷನ್‌ ಕಮಲ ವಿಫಲ’: ದೆಹಲಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಿರುವ ಸಿಎಂ ಕೇಜ್ರಿವಾಲ್‌

‘ಆಫರೇಷನ್‌ ಕಮಲ ವಿಫಲ’: ದೆಹಲಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಿರುವ ಸಿಎಂ ಕೇಜ್ರಿವಾಲ್‌

- Advertisement -
- Advertisement -

ತಮ್ಮ ಪಕ್ಷವನ್ನು ಒಡೆಯಲು ಮತ್ತು ಸರ್ಕಾರವನ್ನು ಕಿತ್ತೊಗೆಯಲು ಬಿಜೆಪಿಯ ಪ್ರಯತ್ನಗಳ ಹೊರತಾಗಿಯೂ ಎಲ್ಲಾ ಎಎಪಿ ಶಾಸಕರು ತಮ್ಮೊಂದಿಗೆ ಇದ್ದಾರೆ ಎಂಬುದನ್ನು ಸಾಬೀತುಪಡಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಸದನದಲ್ಲಿ ವಿಶ್ವಾಸ ಯಾಚನೆ ಮಾಡಲಿದ್ದಾರೆ. ತಮ್ಮ ಪಕ್ಷದ ಶಾಸಕರು ಯಾವುದೆ ಪ್ರಲೋಭನೆಗೆ ಒಳಗಾಗುವುದಿಲ್ಲ ಎಂಬುದನ್ನು ಸಾಬೀತುಪಡಿಸಲು ಬಹುಮತದ ಸಾಬೀತು ಮಾಡುತ್ತಿದ್ದೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

‘ಆಪರೇಷನ್ ಕಮಲ’ದ ಭಾಗವಾಗಿ ಎಎಪಿ ಶಾಸಕರಿಗೆ ತಲಾ 20 ಕೋಟಿ ರೂ.ಗಳನ್ನು ನೀಡುವುದಾಗಿ ಬಿಜೆಪಿ ಆಫರ್‌ ನೀಡಿದೆ ಎಂದು ಅವರು ಆರೋಪಿಸಿದ್ದಾರೆ. ಕಳೆದ ವಾರ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮನೆಯಲ್ಲಿ ನಡೆದ ಸಭೆಯಲ್ಲಿ ದೆಹಲಿ ಸರ್ಕಾರದ 62 ಎಎಪಿ ಶಾಸಕರಲ್ಲಿ 53 ಮಂದಿ ಭಾಗವಹಿಸಿದ್ದರು. ಉಳಿದವರು ಆನ್‌ಲೈನ್‌ ಮುಖಾಂತರ ಸಭೆಗೆ ಸೇರಿಕೊಂಡಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮ್ಮ ನಿವಾಸದಲ್ಲಿ ನಡೆದ ಸಭೆಯ ನಂತರ ತಮ್ಮ ಶಾಸಕರೊಂದಿಗೆ ಮಹಾತ್ಮ ಗಾಂಧಿ ಸ್ಮಾರಕ ರಾಜ್‌ಘಾಟ್‌ಗೆ ತೆರಳಿ ಅಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ರಾಜ್‌ಘಾಟ್‌‌ ಭೇಟಿ ನಂತರ ಮಾತನಾಡಿದ ಕೇಜ್ರಿವಾಲ್, ‘‘ಅವರು ಎಎಪಿಯ 40 ಶಾಸಕರಿಗೆ ಲಂಚ ನೀಡಲು ಪ್ರಯತ್ನಿಸುತ್ತಿದ್ದಾರೆಂದು ನನಗೆ ತಿಳಿಯಿತು. ಆದರೆ ಒಬ್ಬನೇ ಒಬ್ಬ ಶಾಸಕ ಮಣಿಯದಿರುವುದು ನನಗೆ ಸಂತೋಷವಾಗಿದೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: `ಬಿಜೆಪಿ ಸೇರುವುದಾದರೆ CBI & ED ಪ್ರಕರಣ ಮುಕ್ತಾಯ’: ಬಿಜೆಪಿಯಿಂದ ಆಫರ್‌ ಬಂದಿದೆ ಎಂದ ದೆಹಲಿ ಉಪಮುಖ್ಯಮಂತ್ರಿ

ಬಿಜೆಪಿಯ ಆಪರೇಷನ್ ಕಮಲ ವಿಫಲವಾಗಲಿ ಎಂದು ಪ್ರಾರ್ಥಿಸಲು ರಾಜ್‌ಘಾಟ್‌ಗೆ ಹೋಗಿದ್ದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದ ಮಾದರಿಯಲ್ಲಿ ಬಿಜೆಪಿ ತಮ್ಮ ಸರ್ಕಾರವನ್ನು ಉರುಳಿಸಲು ಆಪರೇಷನ್ ಕಮಲದ ಸಂಚು ರೂಪಿಸುತ್ತಿದೆ ಎಂದು ಎಎಪಿ ಆರೋಪಿಸಿದೆ.

ದೆಹಲಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರು ಎಎಪಿ ತೊರೆದರೆ ಅವರ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಮುಚ್ಚಿಹಾಕುವುದಾಗಿ ಬಿಜೆಪಿ ಅವರಿಗೆ ಆಫರ್‌ ನೀಡಿದ್ದಾಗಿ ಸಿಸೋಡಿಯಾ ಹೇಳಿಕೊಂಡಿದ್ದರು.

ಈ ವರ್ಷದ ಆರಂಭದಲ್ಲಿ ಪರಿಚಯಿಸಲಾದ ದೆಹಲಿಯ ಮದ್ಯ ನೀತಿಯಲ್ಲಿನ ಅಕ್ರಮಗಳು ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಿಸೋಡಿಯಾ ಅವರ ಮೇಲೆ ಇತ್ತೀಚೆಗೆ ಸಿಬಿಐ ದಾಳಿ ನಡೆಸಿತ್ತು. ಈ ನೀತಿಯನ್ನು ಸರ್ಕಾರವು ನಂತರ ಹಿಂಪಡೆದಿತ್ತು. ಮದ್ಯದ ನೀತಿ ಉಲ್ಲಂಘನೆಯ ಕುರಿತ ಸಿಬಿಐ ಎಫ್‌ಐಆರ್‌ನಲ್ಲಿ ಹೆಸರಿಸಲಾದ 15 ಆರೋಪಿಗಳ ಪಟ್ಟಿಯಲ್ಲಿ ಸಿಸೋಡಿಯಾ ಅವರ ಹೆಸರು ಮೊದಲ ಸ್ಥಾನದಲ್ಲಿದ್ದಾರೆ. ಅವರ ವಿರುದ್ಧ ಜಾರಿ ನಿರ್ದೇಶನಾಲಯ ಕೂಡಾ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ.

ಇದನ್ನೂ ಓದಿ: ದೆಹಲಿ ಸರ್ಕಾರ ಉರುಳಿಸಲು ಬಿಜೆಪಿ ಯತ್ನ: ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಶಾಸಕರ ಸಭೆ

70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಎಎಪಿ 62 ಶಾಸಕರನ್ನು ಹೊಂದಿದೆ. ಬಿಜೆಪಿಗೆ ಎಂಟು ಸ್ಥಾನಗಳಷ್ಟೆ ಇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...