Homeಕರ್ನಾಟಕಆಪರೇಷನ್ ಕಮಲ ಆರಂಭವಾಗುತ್ತದೆ, ಬೇಕಿದ್ದರೆ ಕಾದು ನೋಡಿ: ಪ್ರಿಯಾಂಕ್ ಖರ್ಗೆಗೆ ಈಶ್ವರಪ್ಪ ತಿರುಗೇಟು

ಆಪರೇಷನ್ ಕಮಲ ಆರಂಭವಾಗುತ್ತದೆ, ಬೇಕಿದ್ದರೆ ಕಾದು ನೋಡಿ: ಪ್ರಿಯಾಂಕ್ ಖರ್ಗೆಗೆ ಈಶ್ವರಪ್ಪ ತಿರುಗೇಟು

- Advertisement -
- Advertisement -

ಕಾಂಗ್ರೆಸ್‌ಗೆ ಒಂದು ತಿಂಗಳು ಸಮಯ ಕೊಡುತ್ತೇವೆ. ಬಿಜೆಪಿಯಿಂದ ಒಬ್ಬ ಶಾಸಕರನ್ನು ಕರೆದೊಯ್ದು ತೋರಿಸಲಿ. ಕಾಂಗ್ರೆಸ್‌ ಸರ್ಕಾರ ಬೀಳಿಸುವ ವಿಚಾರದಲ್ಲಿ ಮತ್ತೆ ಆಪರೇಷನ್ ಕಮಲ ಆರಂಭವಾಗಲಿದೆ. ಬೇಕಿದ್ದರೆ ಸಚಿವ ಪ್ರಿಯಾಂಕ್ ಖರ್ಗೆ ಕಾದು ನೋಡಲಿ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಿರುಗೇಟು ನೀಡಿದರು.

ಸಚಿವ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್ ಮೂಲಕ ಬಿಎಲ್ ಸಂತೋಷ್ ಅವರಿಗೆ ಸವಾಲು ಹಾಕಿದ್ದಾರೆ. ”ಬಿಎಲ್ ಸಂತೋಷ್ ಅವರಿಗೆ ಒಂದು ಸವಾಲು. ಒಂದು ದಿನವಲ್ಲ, ಒಂದು ತಿಂಗಳು ಸಮಯ ನೀಡುತ್ತೇವೆ. ನಮ್ಮ ಸರ್ಕಾರವನ್ನು ಬೀಳಿಸುವುದಿರಲಿ, ಅಲ್ಲಾಡಿಸಲು ಸಾಧ್ಯವಾ ಎಂದು ತೋರಿಸಲಿ” ಎಂದಿದ್ದರು.

ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಈಶ್ವರಪ್ಪ, ”ನೂರಕ್ಕೆ ನೂರು ಆಪರೇಷನ್ ಕಮಲ ಆಗುತ್ತದೆ. ಈ ದೇಶದಲ್ಲಿ ಕಾಂಗ್ರೆಸ್ ಗೆ ಭವಿಷ್ಯ ಇಲ್ಲ. ಈಗಾಗಿ ಎಲ್ಲಾ ನಾಯಕರು ಬಿಜೆಪಿಗೆ ಬರುತ್ತಾರೆ” ಎಂದು ಹೇಳಿದರು.

”ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಭಾರಿ ದೊಡ್ಡ ಸುದ್ದಿ ಮಾಡುತ್ತಿದೆ. ಬಿಜೆಪಿ ಒಪ್ಪಿಗೆ ಕೊಟ್ಟರೆ ಅರ್ಧ ಶಾಸಕರು ನಮ್ಮ ಪಕ್ಷಕ್ಕೆ ಬರುತ್ತಾರೆ ಎನ್ನುತ್ತಿದ್ದಾರೆ. ಆದರೆ ಒಬ್ಬನೇ ಒಬ್ಬ ಶಾಸಕ ಕಾಂಗ್ರೆಸ್ ಗೆ ಹೋಗಿಲ್ಲ. ಪಾರ್ಲಿಮೆಂಟ್ ಚುನಾವಣೆ ಹಿಂದೆ ಅಥವಾ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವೇ ಇರಲ್ಲ” ಎಂದಿದ್ದಾರೆ.

”17 ಜನ ಶಾಸಕರು ಸಮಾಧಾನ ಇಲ್ಲವೆಂದು ನಮ್ಮ ಪಕ್ಷಕ್ಕೆ ಬಂದರು. ರಾಯರೆಡ್ಡಿ ಅವರು ಯಾರೋ ಪಕ್ಷ ಕಟ್ಟಿದ್ದರು, ಯಾರೋ ಅಧಿಕಾರಕ್ಕೆ ಬಂದರು ಅಂದಿದ್ದಾರೆ. ಮುನಿಯಪ್ಪನವರು ಎಲ್ಲಾ ಹಿರಿಯರು ರಾಜೀನಾಮೆ ಕೊಡಬೇಕು ಎಂದಿದ್ದಾರೆ. ಹೀಗಾದ್ರೆ ಸರಕಾರ ಉಳಿಯುತ್ತದಾ. ಎಂ.ಬಿ.ಪಾಟೀಲ್ ಅವರು ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ ಎನ್ನುತ್ತಾರೆ. ಸರಕಾರದ ಬಗ್ಗೆ ಕೆಲವು ಶಾಸಕರ ಅಸಮಾಧಾನವಿದೆ ಎನ್ನುತ್ತಾರೆ. ಡಿಕೆಶಿ ಹೌದು ಅಸಮಾಧಾನ ಇದೆ ನಾವು ಸರಿ ಮಾಡಿಕೊಳ್ಳುತ್ತೇವೆ ಎನ್ನುತ್ತಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಾತಿಗೆ ಒಂದಕ್ಕೊಂದು ಅರ್ಥವೇ ಇಲ್ಲ” ಎಂದರು.

”ಪ್ರಿಯಾಂಕ ಖರ್ಗೆಗೆ ಅಭಿವೃದ್ಧಿ ಮಾಡಲು ಆಗುತ್ತಿಲ್ಲ . ಅಭಿವೃದ್ಧಿ ಮಾಡಲಾಗದಿದ್ದರೆ ಯಾಕಿದ್ದೀರಿ? ರಾಜೀನಾಮೆ ಕೊಟ್ಟು ಹೋಗಿ. ಒಂದೇ ಒಂದು ಇಲಾಖೆಗೆ ಅಭಿವೃದ್ಧಿಗೆ ಹಣ ಕೊಟ್ಟಿಲ್ಲ. ಇದನ್ನು ಸರಕಾರ ಎಂದು ಕರೆಯಬೇಕೆ?” ಎಂದು ಪ್ರಶ್ನಿಸಿದರು.

”ಕಳೆದ ಸರಕಾರದಲ್ಲಿ ನಡೆದ ಕಾಮಗಾರಿಗೆ ಇನ್ನೂ ಹಣ ಬಿಡುಗಡೆ ಆಗಿಲ್ಲ. ಕೆಲಸ ಪೂರ್ಣವಾಗಿದೆ ಆದರೂ ಹಣ ಬಿಡುಗಡೆಯಾಗಿಲ್ಲ. ಈ ಸರಕಾರ ಪೂರ್ಣ ಭ್ರಷ್ಟಾಚಾರದಿಂದ ಕೂಡಿದೆ. ಬಡವರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದು ಲೋಡ್ ಶೆಡ್ಡಿಂಗ್ ಮಾಡುತ್ತಿದ್ದಾರೆ” ಎಂದರು.

”ವಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಯಾವಾಗ ಮಾಡಬೇಕು ಎಂಬುದು ನಮಗೆ ಗೊತ್ತಿದೆ. ನಾವು ಮಾಡಿಕೊಳ್ಳುತ್ತೇವೆ. ನಿಮ್ಮ ಪಕ್ಷಕ್ಕೆ ಎರಡು ವರ್ಷ ಎಐಸಿಸಿಗೆ ಅಧ್ಯಕ್ಷರೇ ಇರಲಿಲ್ಲ. ಇನ್ನು ಸರಕಾರ ಬಂದು ಮೂರು ತಿಂಗಳಾಗಿದೆ. ವಿಪಕ್ಷ ನಾಯಕ, ಅಧ್ಯಕ್ಷರಾಗಿ ಮಾಡುತ್ತೇವೆ. ನಮ್ಮ ಎಲ್ಲಾ ಶಾಸಕರು ವಿಪಕ್ಷದ ನಾಯಕರೇ, ಯಾರು ಯಾರಿಗೂ ಕಡಿಮೆಯಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದ ಬಿಎಲ್ ಸಂತೋಷ್‌ಗೆ ಪ್ರಿಯಾಂಕ್ ಖರ್ಗೆ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....