Homeಕರ್ನಾಟಕಆಪರೇಷನ್ ಕಮಲ ಆರಂಭವಾಗುತ್ತದೆ, ಬೇಕಿದ್ದರೆ ಕಾದು ನೋಡಿ: ಪ್ರಿಯಾಂಕ್ ಖರ್ಗೆಗೆ ಈಶ್ವರಪ್ಪ ತಿರುಗೇಟು

ಆಪರೇಷನ್ ಕಮಲ ಆರಂಭವಾಗುತ್ತದೆ, ಬೇಕಿದ್ದರೆ ಕಾದು ನೋಡಿ: ಪ್ರಿಯಾಂಕ್ ಖರ್ಗೆಗೆ ಈಶ್ವರಪ್ಪ ತಿರುಗೇಟು

- Advertisement -
- Advertisement -

ಕಾಂಗ್ರೆಸ್‌ಗೆ ಒಂದು ತಿಂಗಳು ಸಮಯ ಕೊಡುತ್ತೇವೆ. ಬಿಜೆಪಿಯಿಂದ ಒಬ್ಬ ಶಾಸಕರನ್ನು ಕರೆದೊಯ್ದು ತೋರಿಸಲಿ. ಕಾಂಗ್ರೆಸ್‌ ಸರ್ಕಾರ ಬೀಳಿಸುವ ವಿಚಾರದಲ್ಲಿ ಮತ್ತೆ ಆಪರೇಷನ್ ಕಮಲ ಆರಂಭವಾಗಲಿದೆ. ಬೇಕಿದ್ದರೆ ಸಚಿವ ಪ್ರಿಯಾಂಕ್ ಖರ್ಗೆ ಕಾದು ನೋಡಲಿ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಿರುಗೇಟು ನೀಡಿದರು.

ಸಚಿವ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್ ಮೂಲಕ ಬಿಎಲ್ ಸಂತೋಷ್ ಅವರಿಗೆ ಸವಾಲು ಹಾಕಿದ್ದಾರೆ. ”ಬಿಎಲ್ ಸಂತೋಷ್ ಅವರಿಗೆ ಒಂದು ಸವಾಲು. ಒಂದು ದಿನವಲ್ಲ, ಒಂದು ತಿಂಗಳು ಸಮಯ ನೀಡುತ್ತೇವೆ. ನಮ್ಮ ಸರ್ಕಾರವನ್ನು ಬೀಳಿಸುವುದಿರಲಿ, ಅಲ್ಲಾಡಿಸಲು ಸಾಧ್ಯವಾ ಎಂದು ತೋರಿಸಲಿ” ಎಂದಿದ್ದರು.

ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಈಶ್ವರಪ್ಪ, ”ನೂರಕ್ಕೆ ನೂರು ಆಪರೇಷನ್ ಕಮಲ ಆಗುತ್ತದೆ. ಈ ದೇಶದಲ್ಲಿ ಕಾಂಗ್ರೆಸ್ ಗೆ ಭವಿಷ್ಯ ಇಲ್ಲ. ಈಗಾಗಿ ಎಲ್ಲಾ ನಾಯಕರು ಬಿಜೆಪಿಗೆ ಬರುತ್ತಾರೆ” ಎಂದು ಹೇಳಿದರು.

”ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಭಾರಿ ದೊಡ್ಡ ಸುದ್ದಿ ಮಾಡುತ್ತಿದೆ. ಬಿಜೆಪಿ ಒಪ್ಪಿಗೆ ಕೊಟ್ಟರೆ ಅರ್ಧ ಶಾಸಕರು ನಮ್ಮ ಪಕ್ಷಕ್ಕೆ ಬರುತ್ತಾರೆ ಎನ್ನುತ್ತಿದ್ದಾರೆ. ಆದರೆ ಒಬ್ಬನೇ ಒಬ್ಬ ಶಾಸಕ ಕಾಂಗ್ರೆಸ್ ಗೆ ಹೋಗಿಲ್ಲ. ಪಾರ್ಲಿಮೆಂಟ್ ಚುನಾವಣೆ ಹಿಂದೆ ಅಥವಾ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವೇ ಇರಲ್ಲ” ಎಂದಿದ್ದಾರೆ.

”17 ಜನ ಶಾಸಕರು ಸಮಾಧಾನ ಇಲ್ಲವೆಂದು ನಮ್ಮ ಪಕ್ಷಕ್ಕೆ ಬಂದರು. ರಾಯರೆಡ್ಡಿ ಅವರು ಯಾರೋ ಪಕ್ಷ ಕಟ್ಟಿದ್ದರು, ಯಾರೋ ಅಧಿಕಾರಕ್ಕೆ ಬಂದರು ಅಂದಿದ್ದಾರೆ. ಮುನಿಯಪ್ಪನವರು ಎಲ್ಲಾ ಹಿರಿಯರು ರಾಜೀನಾಮೆ ಕೊಡಬೇಕು ಎಂದಿದ್ದಾರೆ. ಹೀಗಾದ್ರೆ ಸರಕಾರ ಉಳಿಯುತ್ತದಾ. ಎಂ.ಬಿ.ಪಾಟೀಲ್ ಅವರು ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ ಎನ್ನುತ್ತಾರೆ. ಸರಕಾರದ ಬಗ್ಗೆ ಕೆಲವು ಶಾಸಕರ ಅಸಮಾಧಾನವಿದೆ ಎನ್ನುತ್ತಾರೆ. ಡಿಕೆಶಿ ಹೌದು ಅಸಮಾಧಾನ ಇದೆ ನಾವು ಸರಿ ಮಾಡಿಕೊಳ್ಳುತ್ತೇವೆ ಎನ್ನುತ್ತಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಾತಿಗೆ ಒಂದಕ್ಕೊಂದು ಅರ್ಥವೇ ಇಲ್ಲ” ಎಂದರು.

”ಪ್ರಿಯಾಂಕ ಖರ್ಗೆಗೆ ಅಭಿವೃದ್ಧಿ ಮಾಡಲು ಆಗುತ್ತಿಲ್ಲ . ಅಭಿವೃದ್ಧಿ ಮಾಡಲಾಗದಿದ್ದರೆ ಯಾಕಿದ್ದೀರಿ? ರಾಜೀನಾಮೆ ಕೊಟ್ಟು ಹೋಗಿ. ಒಂದೇ ಒಂದು ಇಲಾಖೆಗೆ ಅಭಿವೃದ್ಧಿಗೆ ಹಣ ಕೊಟ್ಟಿಲ್ಲ. ಇದನ್ನು ಸರಕಾರ ಎಂದು ಕರೆಯಬೇಕೆ?” ಎಂದು ಪ್ರಶ್ನಿಸಿದರು.

”ಕಳೆದ ಸರಕಾರದಲ್ಲಿ ನಡೆದ ಕಾಮಗಾರಿಗೆ ಇನ್ನೂ ಹಣ ಬಿಡುಗಡೆ ಆಗಿಲ್ಲ. ಕೆಲಸ ಪೂರ್ಣವಾಗಿದೆ ಆದರೂ ಹಣ ಬಿಡುಗಡೆಯಾಗಿಲ್ಲ. ಈ ಸರಕಾರ ಪೂರ್ಣ ಭ್ರಷ್ಟಾಚಾರದಿಂದ ಕೂಡಿದೆ. ಬಡವರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದು ಲೋಡ್ ಶೆಡ್ಡಿಂಗ್ ಮಾಡುತ್ತಿದ್ದಾರೆ” ಎಂದರು.

”ವಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಯಾವಾಗ ಮಾಡಬೇಕು ಎಂಬುದು ನಮಗೆ ಗೊತ್ತಿದೆ. ನಾವು ಮಾಡಿಕೊಳ್ಳುತ್ತೇವೆ. ನಿಮ್ಮ ಪಕ್ಷಕ್ಕೆ ಎರಡು ವರ್ಷ ಎಐಸಿಸಿಗೆ ಅಧ್ಯಕ್ಷರೇ ಇರಲಿಲ್ಲ. ಇನ್ನು ಸರಕಾರ ಬಂದು ಮೂರು ತಿಂಗಳಾಗಿದೆ. ವಿಪಕ್ಷ ನಾಯಕ, ಅಧ್ಯಕ್ಷರಾಗಿ ಮಾಡುತ್ತೇವೆ. ನಮ್ಮ ಎಲ್ಲಾ ಶಾಸಕರು ವಿಪಕ್ಷದ ನಾಯಕರೇ, ಯಾರು ಯಾರಿಗೂ ಕಡಿಮೆಯಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದ ಬಿಎಲ್ ಸಂತೋಷ್‌ಗೆ ಪ್ರಿಯಾಂಕ್ ಖರ್ಗೆ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...