Homeಮುಖಪುಟಆಪರೇಷನ್ ಕಮಲ: ಬಿಜೆಪಿಯ ಮುಂದಿನ ಬೇಟೆ ಜಾರ್ಖಂಡ್?

ಆಪರೇಷನ್ ಕಮಲ: ಬಿಜೆಪಿಯ ಮುಂದಿನ ಬೇಟೆ ಜಾರ್ಖಂಡ್?

- Advertisement -
- Advertisement -

ಜಾರ್ಖಂಡ್‌ ಸಮ್ಮಿಶ್ರ ಸರ್ಕಾರದ ವಿರುದ್ಧ ಪಿತೂರಿ ನಡೆಸಿದ ಆರೋಪದ ಮೇಲೆ ಮೂರು ಜನರನ್ನು ಶನಿವಾರ ಬಂಧಿಸಲಾಗಿತ್ತು. ಇದಾಗಿ ಒಂದು ದಿನದ ನಂತರ ಭಾನುವಾರದಂದು, ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಕೆಲವು ಅಪರಿಚಿತ ವ್ಯಕ್ತಿಗಳು ಅನೇಕ ಬಾರಿ ತಮ್ಮನ್ನು ಸಂಪರ್ಕಿಸಿದ್ದು 1 ಕೋಟಿ ರೂ. ಮತ್ತು ಮಂತ್ರಿ ಪದವಿಯನ್ನು ನೀಡುವುದಾಗಿ ಹೇಳಿದ್ದಾರೆ ಎಂದು ಕಾಂಗ್ರೆಸ್ ಶಾಸಕರೊಬ್ಬರು ಆರೋಪಿಸಿದ್ದಾರೆ.

ದೇಶದ ಹಲವು ರಾಜ್ಯದಗಳಲ್ಲಿ ಆಪರೇಷನ್ ಕಮಲ ಮಾಡಿ ಅಧಿಕಾರ ಹಿಡಿದಿರುವ ಬಿಜೆಪಿಯ ಮುಂದಿನ ಗುರಿ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಸರ್ಕಾರವಿರುವ ಜಾರ್ಖಂಡ್‌ ಆಗಿದೆಯೆ ಎಂದು ಸಂಶಯ ಮೂಡತೊಡಗಿದೆ. 81 ಸದಸ್ಯ ಬಲವಿರುವ ರಾಜ್ಯದಲ್ಲಿ ಆಡಳಿತರೂಢ ಜೆಎಂಎಂಗೆ 30 ಸ್ಥಾನಗಳಿದ್ದರೆ, ಕಾಂಗ್ರೆಸ್‌ಗೆ 18 ಮತ್ತು ಆಜೆಡಿಗೆ 1 ಸ್ಥಾನವಿದೆ. ಬಿಜೆಪಿ 26 ಸ್ಥಾನಗಳನ್ನು ಹೊಂದಿದ್ದು, ಇತರೆ ಪಕ್ಷಗಳು ಏಳು ಸ್ಥಾನಗಳನ್ನು ಹೊಂದಿದೆ.

“ಮೂವರು ವ್ಯಕ್ತಿಗಳು ಕನಿಷ್ಠ ಆರು ಬಾರಿ ನನ್ನನ್ನು ಸಂಪರ್ಕಿಸಿದ್ದಾರೆ” ಎಂದು ಜಾರ್ಖಂಡ್‌ ನ ಕೋಲೆಬೀರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಮನ್ ಬಿಕ್ಸಲ್ ಕೊಂಗಾರಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಜಾರ್ಖಂಡ್‌: ಮಗನಿಗಾಗಿ ಸೈಕಲ್‌ನಲ್ಲಿ 400 ಕಿ.ಮೀ ಪ್ರಯಾಣ ಮಾಡುತ್ತಿದ್ದ ತಂದೆ, ನೆರವಾದ ಬೆಂಗಳೂರಿನ ಸಂಸ್ಥೆ

“ನನ್ನ ಪಕ್ಷದ ಕಾರ್ಯಕರ್ತರ ಮೂಲಕ ಮೂರು ಜನರು ನನ್ನನ್ನು ಸಂಪರ್ಕಿಸಿದ್ದರು, ಅವರು ಕೆಲವು ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ನಾನು ಅವರನ್ನು ನನ್ನನ್ನು ಸಂಪರ್ಕಿಸಬೇಡಿ ಎಂದು ಕೇಳಿದರೂ, ಅವರು ಮತ್ತೇ ಸಂಪರ್ಕಿಸಿದ್ದರು. ಒಮ್ಮೆ, ಅವರು ನನಗೆ 1 ಕೋಟಿ ರೂ.ಗಿಂತ ಹೆಚ್ಚಿನ ಹಣವನ್ನು ನೀಡುವುದಾಗಿ ಹೇಳಿದ್ದಾರೆ. ನಾನು ತಕ್ಷಣ ಸಿಎಲ್‌ಪಿ (ಕಾಂಗ್ರೆಸ್ ಶಾಸಕಾಂಗ ಪಕ್ಷ) ನಾಯಕ ಆಲಮ್‌ಗೀರ್ ಆಲಂ ಮತ್ತು ಕಾಂಗ್ರೆಸ್ ಜಾರ್ಖಂಡ್ ಉಸ್ತುವಾರಿ ಆರ್.ಪಿ.ಎನ್. ಸಿಂಗ್ ಅವರಿಗೆ ಮಾಹಿತಿ ನೀಡಿದ್ದೇನೆ. ನಾನು ಈ ಬಗ್ಗೆ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಮಾಹಿತಿ ನೀಡಿದ್ದೇನೆ” ಎಂದು ಶಾಸಕ ಹೇಳಿದ್ದಾರೆ.

ಆದರೆ ಈ ಬಗ್ಗೆ ಪತ್ರಿಕೆಗಳೊಂದಿಗೆ ಚರ್ಚಿಸಲು ಸಾಧ್ಯವಿಲ್ಲ ಎಂದು, ಆರ್.ಪಿ.ಎನ್. ಸಿಂಗ್ ಅವರು ಹೇಳಿದ್ದಾರೆಂದು ಪತ್ರಿಕೆ ವರದಿ ಮಾಡಿದೆ. ಈ ವಿಷಯದ ಬಗ್ಗೆ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂ‌ತ್‌ ಸೊರೆನ್ ಕೂಡಾ ಮೌನ ತಾಳಿದ್ದಾರೆ.

ನಮನ್ ಬಿಕ್ಸಲ್ ಕೊಂಗಾರಿ, “ಹಣದ ಹೊರತಾಗಿ, ಮಂತ್ರಿ ಸ್ಥಾನವನ್ನು ನೀಡುವುದಾಗಿ ಅವರು ನನ್ನನ್ನು ಸಂಪರ್ಕಿಸಿದ್ದರು. ಅವರು ಬಿಜೆಪಿಗಾಗಿ ಇದನ್ನು ಮಾಡುತ್ತಿದ್ದಾರೆ ಎಂದು ಅವರು ನನಗೆ ಹೇಳಿದ್ದಾರೆ. ಆದರೆ ಬಿಜೆಪಿ ಕಾರ್ಯಕರ್ತರು ಯಾರೂ ನನ್ನನ್ನು ಸಂಪರ್ಕಿಸಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ನಮ್ಮ ಮಾತನ್ನೂ ಕೇಳಿ’- ಪ್ರಧಾನಿ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಾರ್ಖಂಡ್ ಸಿಎಂ

ಶನಿವಾರ ಬಂಧನಕ್ಕೊಳಗಾದ ಮೂವರು ವ್ಯಕ್ತಿಗಳು ಅವರೆನಾ ಎಂದು ಖಚಿತಪಡಿಸಲು ಸಾಧ್ಯವಿಲ್ಲ, ಯಾಕೆಂದರೆ ಅವರ ಮುಖಗಳು ನನಗೆ ನೆನಪಿಲ್ಲ ಎಂದು ಶಾಸಕ ಹೇಳಿದ್ದಾರೆ.

ಬರ್ಮೋ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕುಮಾರ್ ಜೈಮಂಗಲ್‌ ನೀಡಿದ ದೂರಿನ ಮೇರೆಗೆ ರಾಂಚಿಯ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದಾಗಿ ಎರಡು ದಿನಗಳ ನಂತರ ಅಭಿಷೇಕ್ ದುಬೆ, ಅಮಿತ್ ಸಿಂಗ್ ಮತ್ತು ನಿವಾರನ್ ಪ್ರಸಾದ್ ಮಹತೋ ಅವರನ್ನು ಶನಿವಾರ ಬಂಧಿಸಲಾಯಿತು.

ಈ ಪ್ರಕರಣವನ್ನು ಐಪಿಸಿ ಸೆಕ್ಷನ್ 419 (ಕ್ರಿಮಿನಲ್ ಪಿತೂರಿ), 420 (ಮೋಸ), 124 ಎ (ದೇಶದ್ರೋಹ), 120 ಬಿ (ಕ್ರಿಮಿನಲ್ ಪಿತೂರಿ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಿಸಲಾಗಿದೆ.

ಇದನ್ನೂ ಓದಿ: 75% ಖಾಸಗಿ ವಲಯದ ಉದ್ಯೋಗ ಸ್ಥಳೀಯರಿಗೆ: ಜಾರ್ಖಂಡ್ ಸಚಿವ ಸಂಪುಟ ನಿರ್ಧಾರ

ಆರೋಪಿ ನಿವಾರನ್ ಪ್ರಸಾದ್ ಮಹತೋ ಅವರ ಫೇಸ್‌ಬುಕ್ ಪೇಜ್‌‌ನಲ್ಲಿ ಅವರು ಬಿಜೆಪಿಯ ಧನ್ಬಾದ್ ಸಂಸದ ಪಶುಪತಿ ನಾಥ್ ಮತ್ತು ಕೆಲವು ಸ್ಥಳೀಯ ನಾಯಕರೊಂದಿಗೆ ಇರುವ ಚಿತ್ರಗಳು ಬಹಿರಂಗವಾಗಿದೆ. ನಿವಾರನ್‌ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಜಾರ್ಖಂಡ್ ಬಿಜೆಪಿ ವಕ್ತಾರ ಪ್ರತುಲ್ ಶಹದೇವ್, “ನನಗೆ ತಿಳಿದ ಮಟ್ಟಿಗೆ ಅವರು ಬಿಜೆಪಿ ಸದಸ್ಯರಲ್ಲ” ಎಂದು ಹೇಳಿದ್ದಾರೆ.

ಪ್ರತುಲ್‌ ಶಹದೇವ್ ಪ್ರಕರಣವನ್ನು ಸಿಬಿಐ ನೀಡುವಂತೆ ಒತ್ತಾಯಿಸಿದರೆ, ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಾಬುಲಾಲ್ ಮರಂಡಿ ಅವರು ಪೊಲೀಸರು ಪತ್ರಿಕಾಗೋಷ್ಠಿ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಅಂಶಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜಾರ್ಖಂಡ್‌ ಪೊಲೀಸರು ಈ ಪ್ರಕರಣದ ಕಾರ್ಯವಿಧಾನವನ್ನು ಇಲ್ಲಿಯವರೆಗೆ ವಿವರಿಸಿಲ್ಲ. ಕೇವಲ ಮೂವರು ಆರೋಪಿಗಳು ತಾವು ಸರ್ಕಾರದ ವಿರುದ್ಧದ ಪಿತೂರಿಯಲ್ಲಿ ಭಾಗಿಯಾಗಿದ್ದೇವೆ ಮತ್ತು ಅದನ್ನು ಅಸ್ಥಿರಗೊಳಿಸಲು ಯೋಜಿಸುತ್ತಿದ್ದೇವೆ ಎಂದು ಹೇಳಿದ್ದಾರೆ ಎಂಬ ಪತ್ರಿಕಾ ಪ್ರಕಟಣೆಯನ್ನು ಮಾತ್ರ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಜಾರ್ಖಂಡ್: ಬಡತನದಿಂದ ಮದ್ಯ ಮಾರುವ ಸ್ಥಿತಿಗೆ ಬಂದ ನ್ಯಾಷನಲ್ ಕರಾಟೆ ಚಾಂಪಿಯನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....