Homeಮುಖಪುಟಆಪರೇಷನ್ ಕಮಲ: ಬಿಜೆಪಿಯ ಮುಂದಿನ ಬೇಟೆ ಜಾರ್ಖಂಡ್?

ಆಪರೇಷನ್ ಕಮಲ: ಬಿಜೆಪಿಯ ಮುಂದಿನ ಬೇಟೆ ಜಾರ್ಖಂಡ್?

- Advertisement -
- Advertisement -

ಜಾರ್ಖಂಡ್‌ ಸಮ್ಮಿಶ್ರ ಸರ್ಕಾರದ ವಿರುದ್ಧ ಪಿತೂರಿ ನಡೆಸಿದ ಆರೋಪದ ಮೇಲೆ ಮೂರು ಜನರನ್ನು ಶನಿವಾರ ಬಂಧಿಸಲಾಗಿತ್ತು. ಇದಾಗಿ ಒಂದು ದಿನದ ನಂತರ ಭಾನುವಾರದಂದು, ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಕೆಲವು ಅಪರಿಚಿತ ವ್ಯಕ್ತಿಗಳು ಅನೇಕ ಬಾರಿ ತಮ್ಮನ್ನು ಸಂಪರ್ಕಿಸಿದ್ದು 1 ಕೋಟಿ ರೂ. ಮತ್ತು ಮಂತ್ರಿ ಪದವಿಯನ್ನು ನೀಡುವುದಾಗಿ ಹೇಳಿದ್ದಾರೆ ಎಂದು ಕಾಂಗ್ರೆಸ್ ಶಾಸಕರೊಬ್ಬರು ಆರೋಪಿಸಿದ್ದಾರೆ.

ದೇಶದ ಹಲವು ರಾಜ್ಯದಗಳಲ್ಲಿ ಆಪರೇಷನ್ ಕಮಲ ಮಾಡಿ ಅಧಿಕಾರ ಹಿಡಿದಿರುವ ಬಿಜೆಪಿಯ ಮುಂದಿನ ಗುರಿ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಸರ್ಕಾರವಿರುವ ಜಾರ್ಖಂಡ್‌ ಆಗಿದೆಯೆ ಎಂದು ಸಂಶಯ ಮೂಡತೊಡಗಿದೆ. 81 ಸದಸ್ಯ ಬಲವಿರುವ ರಾಜ್ಯದಲ್ಲಿ ಆಡಳಿತರೂಢ ಜೆಎಂಎಂಗೆ 30 ಸ್ಥಾನಗಳಿದ್ದರೆ, ಕಾಂಗ್ರೆಸ್‌ಗೆ 18 ಮತ್ತು ಆಜೆಡಿಗೆ 1 ಸ್ಥಾನವಿದೆ. ಬಿಜೆಪಿ 26 ಸ್ಥಾನಗಳನ್ನು ಹೊಂದಿದ್ದು, ಇತರೆ ಪಕ್ಷಗಳು ಏಳು ಸ್ಥಾನಗಳನ್ನು ಹೊಂದಿದೆ.

“ಮೂವರು ವ್ಯಕ್ತಿಗಳು ಕನಿಷ್ಠ ಆರು ಬಾರಿ ನನ್ನನ್ನು ಸಂಪರ್ಕಿಸಿದ್ದಾರೆ” ಎಂದು ಜಾರ್ಖಂಡ್‌ ನ ಕೋಲೆಬೀರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಮನ್ ಬಿಕ್ಸಲ್ ಕೊಂಗಾರಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಜಾರ್ಖಂಡ್‌: ಮಗನಿಗಾಗಿ ಸೈಕಲ್‌ನಲ್ಲಿ 400 ಕಿ.ಮೀ ಪ್ರಯಾಣ ಮಾಡುತ್ತಿದ್ದ ತಂದೆ, ನೆರವಾದ ಬೆಂಗಳೂರಿನ ಸಂಸ್ಥೆ

“ನನ್ನ ಪಕ್ಷದ ಕಾರ್ಯಕರ್ತರ ಮೂಲಕ ಮೂರು ಜನರು ನನ್ನನ್ನು ಸಂಪರ್ಕಿಸಿದ್ದರು, ಅವರು ಕೆಲವು ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ನಾನು ಅವರನ್ನು ನನ್ನನ್ನು ಸಂಪರ್ಕಿಸಬೇಡಿ ಎಂದು ಕೇಳಿದರೂ, ಅವರು ಮತ್ತೇ ಸಂಪರ್ಕಿಸಿದ್ದರು. ಒಮ್ಮೆ, ಅವರು ನನಗೆ 1 ಕೋಟಿ ರೂ.ಗಿಂತ ಹೆಚ್ಚಿನ ಹಣವನ್ನು ನೀಡುವುದಾಗಿ ಹೇಳಿದ್ದಾರೆ. ನಾನು ತಕ್ಷಣ ಸಿಎಲ್‌ಪಿ (ಕಾಂಗ್ರೆಸ್ ಶಾಸಕಾಂಗ ಪಕ್ಷ) ನಾಯಕ ಆಲಮ್‌ಗೀರ್ ಆಲಂ ಮತ್ತು ಕಾಂಗ್ರೆಸ್ ಜಾರ್ಖಂಡ್ ಉಸ್ತುವಾರಿ ಆರ್.ಪಿ.ಎನ್. ಸಿಂಗ್ ಅವರಿಗೆ ಮಾಹಿತಿ ನೀಡಿದ್ದೇನೆ. ನಾನು ಈ ಬಗ್ಗೆ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಮಾಹಿತಿ ನೀಡಿದ್ದೇನೆ” ಎಂದು ಶಾಸಕ ಹೇಳಿದ್ದಾರೆ.

ಆದರೆ ಈ ಬಗ್ಗೆ ಪತ್ರಿಕೆಗಳೊಂದಿಗೆ ಚರ್ಚಿಸಲು ಸಾಧ್ಯವಿಲ್ಲ ಎಂದು, ಆರ್.ಪಿ.ಎನ್. ಸಿಂಗ್ ಅವರು ಹೇಳಿದ್ದಾರೆಂದು ಪತ್ರಿಕೆ ವರದಿ ಮಾಡಿದೆ. ಈ ವಿಷಯದ ಬಗ್ಗೆ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂ‌ತ್‌ ಸೊರೆನ್ ಕೂಡಾ ಮೌನ ತಾಳಿದ್ದಾರೆ.

ನಮನ್ ಬಿಕ್ಸಲ್ ಕೊಂಗಾರಿ, “ಹಣದ ಹೊರತಾಗಿ, ಮಂತ್ರಿ ಸ್ಥಾನವನ್ನು ನೀಡುವುದಾಗಿ ಅವರು ನನ್ನನ್ನು ಸಂಪರ್ಕಿಸಿದ್ದರು. ಅವರು ಬಿಜೆಪಿಗಾಗಿ ಇದನ್ನು ಮಾಡುತ್ತಿದ್ದಾರೆ ಎಂದು ಅವರು ನನಗೆ ಹೇಳಿದ್ದಾರೆ. ಆದರೆ ಬಿಜೆಪಿ ಕಾರ್ಯಕರ್ತರು ಯಾರೂ ನನ್ನನ್ನು ಸಂಪರ್ಕಿಸಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ನಮ್ಮ ಮಾತನ್ನೂ ಕೇಳಿ’- ಪ್ರಧಾನಿ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಾರ್ಖಂಡ್ ಸಿಎಂ

ಶನಿವಾರ ಬಂಧನಕ್ಕೊಳಗಾದ ಮೂವರು ವ್ಯಕ್ತಿಗಳು ಅವರೆನಾ ಎಂದು ಖಚಿತಪಡಿಸಲು ಸಾಧ್ಯವಿಲ್ಲ, ಯಾಕೆಂದರೆ ಅವರ ಮುಖಗಳು ನನಗೆ ನೆನಪಿಲ್ಲ ಎಂದು ಶಾಸಕ ಹೇಳಿದ್ದಾರೆ.

ಬರ್ಮೋ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕುಮಾರ್ ಜೈಮಂಗಲ್‌ ನೀಡಿದ ದೂರಿನ ಮೇರೆಗೆ ರಾಂಚಿಯ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದಾಗಿ ಎರಡು ದಿನಗಳ ನಂತರ ಅಭಿಷೇಕ್ ದುಬೆ, ಅಮಿತ್ ಸಿಂಗ್ ಮತ್ತು ನಿವಾರನ್ ಪ್ರಸಾದ್ ಮಹತೋ ಅವರನ್ನು ಶನಿವಾರ ಬಂಧಿಸಲಾಯಿತು.

ಈ ಪ್ರಕರಣವನ್ನು ಐಪಿಸಿ ಸೆಕ್ಷನ್ 419 (ಕ್ರಿಮಿನಲ್ ಪಿತೂರಿ), 420 (ಮೋಸ), 124 ಎ (ದೇಶದ್ರೋಹ), 120 ಬಿ (ಕ್ರಿಮಿನಲ್ ಪಿತೂರಿ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಿಸಲಾಗಿದೆ.

ಇದನ್ನೂ ಓದಿ: 75% ಖಾಸಗಿ ವಲಯದ ಉದ್ಯೋಗ ಸ್ಥಳೀಯರಿಗೆ: ಜಾರ್ಖಂಡ್ ಸಚಿವ ಸಂಪುಟ ನಿರ್ಧಾರ

ಆರೋಪಿ ನಿವಾರನ್ ಪ್ರಸಾದ್ ಮಹತೋ ಅವರ ಫೇಸ್‌ಬುಕ್ ಪೇಜ್‌‌ನಲ್ಲಿ ಅವರು ಬಿಜೆಪಿಯ ಧನ್ಬಾದ್ ಸಂಸದ ಪಶುಪತಿ ನಾಥ್ ಮತ್ತು ಕೆಲವು ಸ್ಥಳೀಯ ನಾಯಕರೊಂದಿಗೆ ಇರುವ ಚಿತ್ರಗಳು ಬಹಿರಂಗವಾಗಿದೆ. ನಿವಾರನ್‌ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಜಾರ್ಖಂಡ್ ಬಿಜೆಪಿ ವಕ್ತಾರ ಪ್ರತುಲ್ ಶಹದೇವ್, “ನನಗೆ ತಿಳಿದ ಮಟ್ಟಿಗೆ ಅವರು ಬಿಜೆಪಿ ಸದಸ್ಯರಲ್ಲ” ಎಂದು ಹೇಳಿದ್ದಾರೆ.

ಪ್ರತುಲ್‌ ಶಹದೇವ್ ಪ್ರಕರಣವನ್ನು ಸಿಬಿಐ ನೀಡುವಂತೆ ಒತ್ತಾಯಿಸಿದರೆ, ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಾಬುಲಾಲ್ ಮರಂಡಿ ಅವರು ಪೊಲೀಸರು ಪತ್ರಿಕಾಗೋಷ್ಠಿ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಅಂಶಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜಾರ್ಖಂಡ್‌ ಪೊಲೀಸರು ಈ ಪ್ರಕರಣದ ಕಾರ್ಯವಿಧಾನವನ್ನು ಇಲ್ಲಿಯವರೆಗೆ ವಿವರಿಸಿಲ್ಲ. ಕೇವಲ ಮೂವರು ಆರೋಪಿಗಳು ತಾವು ಸರ್ಕಾರದ ವಿರುದ್ಧದ ಪಿತೂರಿಯಲ್ಲಿ ಭಾಗಿಯಾಗಿದ್ದೇವೆ ಮತ್ತು ಅದನ್ನು ಅಸ್ಥಿರಗೊಳಿಸಲು ಯೋಜಿಸುತ್ತಿದ್ದೇವೆ ಎಂದು ಹೇಳಿದ್ದಾರೆ ಎಂಬ ಪತ್ರಿಕಾ ಪ್ರಕಟಣೆಯನ್ನು ಮಾತ್ರ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಜಾರ್ಖಂಡ್: ಬಡತನದಿಂದ ಮದ್ಯ ಮಾರುವ ಸ್ಥಿತಿಗೆ ಬಂದ ನ್ಯಾಷನಲ್ ಕರಾಟೆ ಚಾಂಪಿಯನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...