Homeಮುಖಪುಟಆಪರೇಷನ್ ಕಮಲ: ಬಿಜೆಪಿಯ ಮುಂದಿನ ಬೇಟೆ ಜಾರ್ಖಂಡ್?

ಆಪರೇಷನ್ ಕಮಲ: ಬಿಜೆಪಿಯ ಮುಂದಿನ ಬೇಟೆ ಜಾರ್ಖಂಡ್?

- Advertisement -
- Advertisement -

ಜಾರ್ಖಂಡ್‌ ಸಮ್ಮಿಶ್ರ ಸರ್ಕಾರದ ವಿರುದ್ಧ ಪಿತೂರಿ ನಡೆಸಿದ ಆರೋಪದ ಮೇಲೆ ಮೂರು ಜನರನ್ನು ಶನಿವಾರ ಬಂಧಿಸಲಾಗಿತ್ತು. ಇದಾಗಿ ಒಂದು ದಿನದ ನಂತರ ಭಾನುವಾರದಂದು, ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಕೆಲವು ಅಪರಿಚಿತ ವ್ಯಕ್ತಿಗಳು ಅನೇಕ ಬಾರಿ ತಮ್ಮನ್ನು ಸಂಪರ್ಕಿಸಿದ್ದು 1 ಕೋಟಿ ರೂ. ಮತ್ತು ಮಂತ್ರಿ ಪದವಿಯನ್ನು ನೀಡುವುದಾಗಿ ಹೇಳಿದ್ದಾರೆ ಎಂದು ಕಾಂಗ್ರೆಸ್ ಶಾಸಕರೊಬ್ಬರು ಆರೋಪಿಸಿದ್ದಾರೆ.

ದೇಶದ ಹಲವು ರಾಜ್ಯದಗಳಲ್ಲಿ ಆಪರೇಷನ್ ಕಮಲ ಮಾಡಿ ಅಧಿಕಾರ ಹಿಡಿದಿರುವ ಬಿಜೆಪಿಯ ಮುಂದಿನ ಗುರಿ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಸರ್ಕಾರವಿರುವ ಜಾರ್ಖಂಡ್‌ ಆಗಿದೆಯೆ ಎಂದು ಸಂಶಯ ಮೂಡತೊಡಗಿದೆ. 81 ಸದಸ್ಯ ಬಲವಿರುವ ರಾಜ್ಯದಲ್ಲಿ ಆಡಳಿತರೂಢ ಜೆಎಂಎಂಗೆ 30 ಸ್ಥಾನಗಳಿದ್ದರೆ, ಕಾಂಗ್ರೆಸ್‌ಗೆ 18 ಮತ್ತು ಆಜೆಡಿಗೆ 1 ಸ್ಥಾನವಿದೆ. ಬಿಜೆಪಿ 26 ಸ್ಥಾನಗಳನ್ನು ಹೊಂದಿದ್ದು, ಇತರೆ ಪಕ್ಷಗಳು ಏಳು ಸ್ಥಾನಗಳನ್ನು ಹೊಂದಿದೆ.

“ಮೂವರು ವ್ಯಕ್ತಿಗಳು ಕನಿಷ್ಠ ಆರು ಬಾರಿ ನನ್ನನ್ನು ಸಂಪರ್ಕಿಸಿದ್ದಾರೆ” ಎಂದು ಜಾರ್ಖಂಡ್‌ ನ ಕೋಲೆಬೀರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಮನ್ ಬಿಕ್ಸಲ್ ಕೊಂಗಾರಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಜಾರ್ಖಂಡ್‌: ಮಗನಿಗಾಗಿ ಸೈಕಲ್‌ನಲ್ಲಿ 400 ಕಿ.ಮೀ ಪ್ರಯಾಣ ಮಾಡುತ್ತಿದ್ದ ತಂದೆ, ನೆರವಾದ ಬೆಂಗಳೂರಿನ ಸಂಸ್ಥೆ

“ನನ್ನ ಪಕ್ಷದ ಕಾರ್ಯಕರ್ತರ ಮೂಲಕ ಮೂರು ಜನರು ನನ್ನನ್ನು ಸಂಪರ್ಕಿಸಿದ್ದರು, ಅವರು ಕೆಲವು ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ನಾನು ಅವರನ್ನು ನನ್ನನ್ನು ಸಂಪರ್ಕಿಸಬೇಡಿ ಎಂದು ಕೇಳಿದರೂ, ಅವರು ಮತ್ತೇ ಸಂಪರ್ಕಿಸಿದ್ದರು. ಒಮ್ಮೆ, ಅವರು ನನಗೆ 1 ಕೋಟಿ ರೂ.ಗಿಂತ ಹೆಚ್ಚಿನ ಹಣವನ್ನು ನೀಡುವುದಾಗಿ ಹೇಳಿದ್ದಾರೆ. ನಾನು ತಕ್ಷಣ ಸಿಎಲ್‌ಪಿ (ಕಾಂಗ್ರೆಸ್ ಶಾಸಕಾಂಗ ಪಕ್ಷ) ನಾಯಕ ಆಲಮ್‌ಗೀರ್ ಆಲಂ ಮತ್ತು ಕಾಂಗ್ರೆಸ್ ಜಾರ್ಖಂಡ್ ಉಸ್ತುವಾರಿ ಆರ್.ಪಿ.ಎನ್. ಸಿಂಗ್ ಅವರಿಗೆ ಮಾಹಿತಿ ನೀಡಿದ್ದೇನೆ. ನಾನು ಈ ಬಗ್ಗೆ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಮಾಹಿತಿ ನೀಡಿದ್ದೇನೆ” ಎಂದು ಶಾಸಕ ಹೇಳಿದ್ದಾರೆ.

ಆದರೆ ಈ ಬಗ್ಗೆ ಪತ್ರಿಕೆಗಳೊಂದಿಗೆ ಚರ್ಚಿಸಲು ಸಾಧ್ಯವಿಲ್ಲ ಎಂದು, ಆರ್.ಪಿ.ಎನ್. ಸಿಂಗ್ ಅವರು ಹೇಳಿದ್ದಾರೆಂದು ಪತ್ರಿಕೆ ವರದಿ ಮಾಡಿದೆ. ಈ ವಿಷಯದ ಬಗ್ಗೆ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂ‌ತ್‌ ಸೊರೆನ್ ಕೂಡಾ ಮೌನ ತಾಳಿದ್ದಾರೆ.

ನಮನ್ ಬಿಕ್ಸಲ್ ಕೊಂಗಾರಿ, “ಹಣದ ಹೊರತಾಗಿ, ಮಂತ್ರಿ ಸ್ಥಾನವನ್ನು ನೀಡುವುದಾಗಿ ಅವರು ನನ್ನನ್ನು ಸಂಪರ್ಕಿಸಿದ್ದರು. ಅವರು ಬಿಜೆಪಿಗಾಗಿ ಇದನ್ನು ಮಾಡುತ್ತಿದ್ದಾರೆ ಎಂದು ಅವರು ನನಗೆ ಹೇಳಿದ್ದಾರೆ. ಆದರೆ ಬಿಜೆಪಿ ಕಾರ್ಯಕರ್ತರು ಯಾರೂ ನನ್ನನ್ನು ಸಂಪರ್ಕಿಸಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ನಮ್ಮ ಮಾತನ್ನೂ ಕೇಳಿ’- ಪ್ರಧಾನಿ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಾರ್ಖಂಡ್ ಸಿಎಂ

ಶನಿವಾರ ಬಂಧನಕ್ಕೊಳಗಾದ ಮೂವರು ವ್ಯಕ್ತಿಗಳು ಅವರೆನಾ ಎಂದು ಖಚಿತಪಡಿಸಲು ಸಾಧ್ಯವಿಲ್ಲ, ಯಾಕೆಂದರೆ ಅವರ ಮುಖಗಳು ನನಗೆ ನೆನಪಿಲ್ಲ ಎಂದು ಶಾಸಕ ಹೇಳಿದ್ದಾರೆ.

ಬರ್ಮೋ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕುಮಾರ್ ಜೈಮಂಗಲ್‌ ನೀಡಿದ ದೂರಿನ ಮೇರೆಗೆ ರಾಂಚಿಯ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದಾಗಿ ಎರಡು ದಿನಗಳ ನಂತರ ಅಭಿಷೇಕ್ ದುಬೆ, ಅಮಿತ್ ಸಿಂಗ್ ಮತ್ತು ನಿವಾರನ್ ಪ್ರಸಾದ್ ಮಹತೋ ಅವರನ್ನು ಶನಿವಾರ ಬಂಧಿಸಲಾಯಿತು.

ಈ ಪ್ರಕರಣವನ್ನು ಐಪಿಸಿ ಸೆಕ್ಷನ್ 419 (ಕ್ರಿಮಿನಲ್ ಪಿತೂರಿ), 420 (ಮೋಸ), 124 ಎ (ದೇಶದ್ರೋಹ), 120 ಬಿ (ಕ್ರಿಮಿನಲ್ ಪಿತೂರಿ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಿಸಲಾಗಿದೆ.

ಇದನ್ನೂ ಓದಿ: 75% ಖಾಸಗಿ ವಲಯದ ಉದ್ಯೋಗ ಸ್ಥಳೀಯರಿಗೆ: ಜಾರ್ಖಂಡ್ ಸಚಿವ ಸಂಪುಟ ನಿರ್ಧಾರ

ಆರೋಪಿ ನಿವಾರನ್ ಪ್ರಸಾದ್ ಮಹತೋ ಅವರ ಫೇಸ್‌ಬುಕ್ ಪೇಜ್‌‌ನಲ್ಲಿ ಅವರು ಬಿಜೆಪಿಯ ಧನ್ಬಾದ್ ಸಂಸದ ಪಶುಪತಿ ನಾಥ್ ಮತ್ತು ಕೆಲವು ಸ್ಥಳೀಯ ನಾಯಕರೊಂದಿಗೆ ಇರುವ ಚಿತ್ರಗಳು ಬಹಿರಂಗವಾಗಿದೆ. ನಿವಾರನ್‌ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಜಾರ್ಖಂಡ್ ಬಿಜೆಪಿ ವಕ್ತಾರ ಪ್ರತುಲ್ ಶಹದೇವ್, “ನನಗೆ ತಿಳಿದ ಮಟ್ಟಿಗೆ ಅವರು ಬಿಜೆಪಿ ಸದಸ್ಯರಲ್ಲ” ಎಂದು ಹೇಳಿದ್ದಾರೆ.

ಪ್ರತುಲ್‌ ಶಹದೇವ್ ಪ್ರಕರಣವನ್ನು ಸಿಬಿಐ ನೀಡುವಂತೆ ಒತ್ತಾಯಿಸಿದರೆ, ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಾಬುಲಾಲ್ ಮರಂಡಿ ಅವರು ಪೊಲೀಸರು ಪತ್ರಿಕಾಗೋಷ್ಠಿ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಅಂಶಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜಾರ್ಖಂಡ್‌ ಪೊಲೀಸರು ಈ ಪ್ರಕರಣದ ಕಾರ್ಯವಿಧಾನವನ್ನು ಇಲ್ಲಿಯವರೆಗೆ ವಿವರಿಸಿಲ್ಲ. ಕೇವಲ ಮೂವರು ಆರೋಪಿಗಳು ತಾವು ಸರ್ಕಾರದ ವಿರುದ್ಧದ ಪಿತೂರಿಯಲ್ಲಿ ಭಾಗಿಯಾಗಿದ್ದೇವೆ ಮತ್ತು ಅದನ್ನು ಅಸ್ಥಿರಗೊಳಿಸಲು ಯೋಜಿಸುತ್ತಿದ್ದೇವೆ ಎಂದು ಹೇಳಿದ್ದಾರೆ ಎಂಬ ಪತ್ರಿಕಾ ಪ್ರಕಟಣೆಯನ್ನು ಮಾತ್ರ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಜಾರ್ಖಂಡ್: ಬಡತನದಿಂದ ಮದ್ಯ ಮಾರುವ ಸ್ಥಿತಿಗೆ ಬಂದ ನ್ಯಾಷನಲ್ ಕರಾಟೆ ಚಾಂಪಿಯನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...