Homeಮುಖಪುಟಆಪರೇಷನ್ ಕಮಲ: ಬಿಜೆಪಿಯ ಮುಂದಿನ ಬೇಟೆ ಜಾರ್ಖಂಡ್?

ಆಪರೇಷನ್ ಕಮಲ: ಬಿಜೆಪಿಯ ಮುಂದಿನ ಬೇಟೆ ಜಾರ್ಖಂಡ್?

- Advertisement -
- Advertisement -

ಜಾರ್ಖಂಡ್‌ ಸಮ್ಮಿಶ್ರ ಸರ್ಕಾರದ ವಿರುದ್ಧ ಪಿತೂರಿ ನಡೆಸಿದ ಆರೋಪದ ಮೇಲೆ ಮೂರು ಜನರನ್ನು ಶನಿವಾರ ಬಂಧಿಸಲಾಗಿತ್ತು. ಇದಾಗಿ ಒಂದು ದಿನದ ನಂತರ ಭಾನುವಾರದಂದು, ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಕೆಲವು ಅಪರಿಚಿತ ವ್ಯಕ್ತಿಗಳು ಅನೇಕ ಬಾರಿ ತಮ್ಮನ್ನು ಸಂಪರ್ಕಿಸಿದ್ದು 1 ಕೋಟಿ ರೂ. ಮತ್ತು ಮಂತ್ರಿ ಪದವಿಯನ್ನು ನೀಡುವುದಾಗಿ ಹೇಳಿದ್ದಾರೆ ಎಂದು ಕಾಂಗ್ರೆಸ್ ಶಾಸಕರೊಬ್ಬರು ಆರೋಪಿಸಿದ್ದಾರೆ.

ದೇಶದ ಹಲವು ರಾಜ್ಯದಗಳಲ್ಲಿ ಆಪರೇಷನ್ ಕಮಲ ಮಾಡಿ ಅಧಿಕಾರ ಹಿಡಿದಿರುವ ಬಿಜೆಪಿಯ ಮುಂದಿನ ಗುರಿ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಸರ್ಕಾರವಿರುವ ಜಾರ್ಖಂಡ್‌ ಆಗಿದೆಯೆ ಎಂದು ಸಂಶಯ ಮೂಡತೊಡಗಿದೆ. 81 ಸದಸ್ಯ ಬಲವಿರುವ ರಾಜ್ಯದಲ್ಲಿ ಆಡಳಿತರೂಢ ಜೆಎಂಎಂಗೆ 30 ಸ್ಥಾನಗಳಿದ್ದರೆ, ಕಾಂಗ್ರೆಸ್‌ಗೆ 18 ಮತ್ತು ಆಜೆಡಿಗೆ 1 ಸ್ಥಾನವಿದೆ. ಬಿಜೆಪಿ 26 ಸ್ಥಾನಗಳನ್ನು ಹೊಂದಿದ್ದು, ಇತರೆ ಪಕ್ಷಗಳು ಏಳು ಸ್ಥಾನಗಳನ್ನು ಹೊಂದಿದೆ.

“ಮೂವರು ವ್ಯಕ್ತಿಗಳು ಕನಿಷ್ಠ ಆರು ಬಾರಿ ನನ್ನನ್ನು ಸಂಪರ್ಕಿಸಿದ್ದಾರೆ” ಎಂದು ಜಾರ್ಖಂಡ್‌ ನ ಕೋಲೆಬೀರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಮನ್ ಬಿಕ್ಸಲ್ ಕೊಂಗಾರಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಜಾರ್ಖಂಡ್‌: ಮಗನಿಗಾಗಿ ಸೈಕಲ್‌ನಲ್ಲಿ 400 ಕಿ.ಮೀ ಪ್ರಯಾಣ ಮಾಡುತ್ತಿದ್ದ ತಂದೆ, ನೆರವಾದ ಬೆಂಗಳೂರಿನ ಸಂಸ್ಥೆ

“ನನ್ನ ಪಕ್ಷದ ಕಾರ್ಯಕರ್ತರ ಮೂಲಕ ಮೂರು ಜನರು ನನ್ನನ್ನು ಸಂಪರ್ಕಿಸಿದ್ದರು, ಅವರು ಕೆಲವು ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ನಾನು ಅವರನ್ನು ನನ್ನನ್ನು ಸಂಪರ್ಕಿಸಬೇಡಿ ಎಂದು ಕೇಳಿದರೂ, ಅವರು ಮತ್ತೇ ಸಂಪರ್ಕಿಸಿದ್ದರು. ಒಮ್ಮೆ, ಅವರು ನನಗೆ 1 ಕೋಟಿ ರೂ.ಗಿಂತ ಹೆಚ್ಚಿನ ಹಣವನ್ನು ನೀಡುವುದಾಗಿ ಹೇಳಿದ್ದಾರೆ. ನಾನು ತಕ್ಷಣ ಸಿಎಲ್‌ಪಿ (ಕಾಂಗ್ರೆಸ್ ಶಾಸಕಾಂಗ ಪಕ್ಷ) ನಾಯಕ ಆಲಮ್‌ಗೀರ್ ಆಲಂ ಮತ್ತು ಕಾಂಗ್ರೆಸ್ ಜಾರ್ಖಂಡ್ ಉಸ್ತುವಾರಿ ಆರ್.ಪಿ.ಎನ್. ಸಿಂಗ್ ಅವರಿಗೆ ಮಾಹಿತಿ ನೀಡಿದ್ದೇನೆ. ನಾನು ಈ ಬಗ್ಗೆ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಮಾಹಿತಿ ನೀಡಿದ್ದೇನೆ” ಎಂದು ಶಾಸಕ ಹೇಳಿದ್ದಾರೆ.

ಆದರೆ ಈ ಬಗ್ಗೆ ಪತ್ರಿಕೆಗಳೊಂದಿಗೆ ಚರ್ಚಿಸಲು ಸಾಧ್ಯವಿಲ್ಲ ಎಂದು, ಆರ್.ಪಿ.ಎನ್. ಸಿಂಗ್ ಅವರು ಹೇಳಿದ್ದಾರೆಂದು ಪತ್ರಿಕೆ ವರದಿ ಮಾಡಿದೆ. ಈ ವಿಷಯದ ಬಗ್ಗೆ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂ‌ತ್‌ ಸೊರೆನ್ ಕೂಡಾ ಮೌನ ತಾಳಿದ್ದಾರೆ.

ನಮನ್ ಬಿಕ್ಸಲ್ ಕೊಂಗಾರಿ, “ಹಣದ ಹೊರತಾಗಿ, ಮಂತ್ರಿ ಸ್ಥಾನವನ್ನು ನೀಡುವುದಾಗಿ ಅವರು ನನ್ನನ್ನು ಸಂಪರ್ಕಿಸಿದ್ದರು. ಅವರು ಬಿಜೆಪಿಗಾಗಿ ಇದನ್ನು ಮಾಡುತ್ತಿದ್ದಾರೆ ಎಂದು ಅವರು ನನಗೆ ಹೇಳಿದ್ದಾರೆ. ಆದರೆ ಬಿಜೆಪಿ ಕಾರ್ಯಕರ್ತರು ಯಾರೂ ನನ್ನನ್ನು ಸಂಪರ್ಕಿಸಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ನಮ್ಮ ಮಾತನ್ನೂ ಕೇಳಿ’- ಪ್ರಧಾನಿ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಾರ್ಖಂಡ್ ಸಿಎಂ

ಶನಿವಾರ ಬಂಧನಕ್ಕೊಳಗಾದ ಮೂವರು ವ್ಯಕ್ತಿಗಳು ಅವರೆನಾ ಎಂದು ಖಚಿತಪಡಿಸಲು ಸಾಧ್ಯವಿಲ್ಲ, ಯಾಕೆಂದರೆ ಅವರ ಮುಖಗಳು ನನಗೆ ನೆನಪಿಲ್ಲ ಎಂದು ಶಾಸಕ ಹೇಳಿದ್ದಾರೆ.

ಬರ್ಮೋ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕುಮಾರ್ ಜೈಮಂಗಲ್‌ ನೀಡಿದ ದೂರಿನ ಮೇರೆಗೆ ರಾಂಚಿಯ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದಾಗಿ ಎರಡು ದಿನಗಳ ನಂತರ ಅಭಿಷೇಕ್ ದುಬೆ, ಅಮಿತ್ ಸಿಂಗ್ ಮತ್ತು ನಿವಾರನ್ ಪ್ರಸಾದ್ ಮಹತೋ ಅವರನ್ನು ಶನಿವಾರ ಬಂಧಿಸಲಾಯಿತು.

ಈ ಪ್ರಕರಣವನ್ನು ಐಪಿಸಿ ಸೆಕ್ಷನ್ 419 (ಕ್ರಿಮಿನಲ್ ಪಿತೂರಿ), 420 (ಮೋಸ), 124 ಎ (ದೇಶದ್ರೋಹ), 120 ಬಿ (ಕ್ರಿಮಿನಲ್ ಪಿತೂರಿ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಿಸಲಾಗಿದೆ.

ಇದನ್ನೂ ಓದಿ: 75% ಖಾಸಗಿ ವಲಯದ ಉದ್ಯೋಗ ಸ್ಥಳೀಯರಿಗೆ: ಜಾರ್ಖಂಡ್ ಸಚಿವ ಸಂಪುಟ ನಿರ್ಧಾರ

ಆರೋಪಿ ನಿವಾರನ್ ಪ್ರಸಾದ್ ಮಹತೋ ಅವರ ಫೇಸ್‌ಬುಕ್ ಪೇಜ್‌‌ನಲ್ಲಿ ಅವರು ಬಿಜೆಪಿಯ ಧನ್ಬಾದ್ ಸಂಸದ ಪಶುಪತಿ ನಾಥ್ ಮತ್ತು ಕೆಲವು ಸ್ಥಳೀಯ ನಾಯಕರೊಂದಿಗೆ ಇರುವ ಚಿತ್ರಗಳು ಬಹಿರಂಗವಾಗಿದೆ. ನಿವಾರನ್‌ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಜಾರ್ಖಂಡ್ ಬಿಜೆಪಿ ವಕ್ತಾರ ಪ್ರತುಲ್ ಶಹದೇವ್, “ನನಗೆ ತಿಳಿದ ಮಟ್ಟಿಗೆ ಅವರು ಬಿಜೆಪಿ ಸದಸ್ಯರಲ್ಲ” ಎಂದು ಹೇಳಿದ್ದಾರೆ.

ಪ್ರತುಲ್‌ ಶಹದೇವ್ ಪ್ರಕರಣವನ್ನು ಸಿಬಿಐ ನೀಡುವಂತೆ ಒತ್ತಾಯಿಸಿದರೆ, ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಾಬುಲಾಲ್ ಮರಂಡಿ ಅವರು ಪೊಲೀಸರು ಪತ್ರಿಕಾಗೋಷ್ಠಿ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಅಂಶಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜಾರ್ಖಂಡ್‌ ಪೊಲೀಸರು ಈ ಪ್ರಕರಣದ ಕಾರ್ಯವಿಧಾನವನ್ನು ಇಲ್ಲಿಯವರೆಗೆ ವಿವರಿಸಿಲ್ಲ. ಕೇವಲ ಮೂವರು ಆರೋಪಿಗಳು ತಾವು ಸರ್ಕಾರದ ವಿರುದ್ಧದ ಪಿತೂರಿಯಲ್ಲಿ ಭಾಗಿಯಾಗಿದ್ದೇವೆ ಮತ್ತು ಅದನ್ನು ಅಸ್ಥಿರಗೊಳಿಸಲು ಯೋಜಿಸುತ್ತಿದ್ದೇವೆ ಎಂದು ಹೇಳಿದ್ದಾರೆ ಎಂಬ ಪತ್ರಿಕಾ ಪ್ರಕಟಣೆಯನ್ನು ಮಾತ್ರ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಜಾರ್ಖಂಡ್: ಬಡತನದಿಂದ ಮದ್ಯ ಮಾರುವ ಸ್ಥಿತಿಗೆ ಬಂದ ನ್ಯಾಷನಲ್ ಕರಾಟೆ ಚಾಂಪಿಯನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...