Homeಮುಖಪುಟಮಣಿಪುರದಲ್ಲಿ ಆಪರೇಷನ್ ಕಮಲ: ಐವರು ಜೆಡಿಯು ಶಾಸಕರು ಬಿಜೆಪಿ ತೆಕ್ಕೆಗೆ

ಮಣಿಪುರದಲ್ಲಿ ಆಪರೇಷನ್ ಕಮಲ: ಐವರು ಜೆಡಿಯು ಶಾಸಕರು ಬಿಜೆಪಿ ತೆಕ್ಕೆಗೆ

- Advertisement -
- Advertisement -

ಬಿಹಾರದಲ್ಲಿ ಎನ್‌ಡಿಎ ಜೊತೆಗಿನ ಮೈತ್ರಿ ಮುರಿದು ಮಹಾಘಟಬಂಧನ್‌ ಸೇರಿ ಸರ್ಕಾರ ರಚಿಸಿದ್ದ ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ರವರಿಗೆ ಮಣಿಪುರ ರಾಜ್ಯದ ರಾಜಕೀಯ ಬೆಳವಣಿಗೆಗಳು ನಿರಾಶೆ ತಂದಿವೆ. ತಮ್ಮದೇ ಪಕ್ಷದ ಐವರು ಶಾಸಕರು ಪಕ್ಷ ತೊರೆದು ಬಿಜೆಪಿ ಜೊತೆಗೆ ವಿಲೀನವಾಗಿದ್ದಾರೆ.

ಮಣಿಪುರದಲ್ಲಿ ಜೆಡಿಯು ಪಕ್ಷವು 6 ಶಾಸಕರನ್ನು ಹೊಂದಿತ್ತು. ಆದರೆ ಅದರಲ್ಲಿ 5 ಶಾಸಕರು ಬಿಜೆಪಿ ಜೊತೆ ವಿಲೀನವಾಗಿರುವುದರಿಂದ ಶಾಸಕರ ಬಲ 1ಕ್ಕೆ ಕುಸಿದಿದೆ. 5 ಶಾಸಕರು ಒಟ್ಟಿಗೆ ಪಕ್ಷಾಂತರ ಮಾಡಿರುವುದರಿಂದ, ಒಟ್ಟು ಶಾಸಕರಲ್ಲಿ ಮೂರನೇ ಎರಡಕ್ಕಿಂತ ಹೆಚ್ಚುಇರುವುದರಿಂದ ಆ ಪಕ್ಷಾಂತರ ಮಾನ್ಯವಾಗಿದೆ ಎಂದು ಮಣಿಪುರ ಅಸೆಂಬ್ಲಿ ಸ್ಪೀಕರ್ ತಿಳಿಸಿದ್ದಾರೆ.

ಈಶಾನ್ಯ ರಾಜ್ಯಗಳಲ್ಲಿ ಜೆಡಿಯು ಪಕ್ಷಕ್ಕೆ ಬೀಳುತ್ತಿರುವ ಎರಡನೇ ಹೊಡೆತ ಇದಾಗಿದೆ. ಪಕ್ಕದ ಅರುಣಾಚಲ ಪ್ರದೇಶದಲ್ಲಿ ಜೆಡಿಯು ಪಕ್ಷದಿಂದ 7 ಶಾಸಕರು ಆಯ್ಕೆಯಾಗಿದ್ದರು. ಆದರೆ 2020ರಲ್ಲಿ 6 ಶಾಸಕರು ಬಿಜೆಪಿ ಸೇರಿದ್ದರು. ಉಳಿದಿದ್ದ ಏಕೈಕ ಶಾಸಕ ಕೂಡ ಕಳೆದ ವಾರ ಬಿಜೆಪಿ ಸೇರಿದ್ದಾರೆ. ಅಲ್ಲಿಗೆ ಅರುಣಾಚಲದಲ್ಲಿ ಜೆಡಿಯು ಶಾಸಕರ ಸಂಖ್ಯೆ ಶೂನ್ಯಕ್ಕೆ ಕುಸಿದಿದೆ. ಒಂದು ಕಡೆ ರಾಷ್ಟ್ರೀಯ ನಾಯಕರಾಗಿ ಪ್ರಧಾನಿಯಾಗಬೇಕೆಂಬ ಹಂಬಲದಲ್ಲಿದ್ದ ನಿತೀಶ್‌ ಕುಮಾರ್‌ರವರ ಕನಸಿಗೆ ಈ ಬೆಳವಣಿಗೆಗಳು ತಣ್ಣೀರು ಎರಚಿವೆ.

ಮಣಿಪುರದಲ್ಲಿ ಈ ವರ್ಷ ಮಾರ್ಚ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಸ್ಪರ್ಧಿಸಿದ್ದ 38 ಕ್ಷೇತ್ರಗಳ ಪೈಕಿ 6ರಲ್ಲಿ ಗೆದ್ದಿತ್ತು. ಆದರೆ ಶಾಸಕರಾದ ಕೆ.ಎಚ್. ಜೋಯ್ಕಿಶನ್, ಎನ್.ಸನತೆ, ಎಂಡಿ ಅಚಾಬ್ ಉದ್ದೀನ್, ಮಾಜಿ ಡಿಜಿಪಿ ಎಲ್‌.ಎಂ ಖೌಟೆ ಮತ್ತು ತಂಗಜಮ್ ಅರುಣ್‌ಕುಮಾರ್ ಎಂಬ ಐವರು ಶಾಸಕರು ಬಿಜೆಪಿ ಸೇರಿದ್ದಾರೆ. ಮತ್ತೊಬ್ಬ ಜೆಡಿಯು ಶಾಸಕ ಅಬ್ದುಲ್ ನಾಸೀರ್ ಸಹ ಬಿಜೆಪಿ ಸೇರಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.

60 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ ಪಕ್ಷವು 37 ಶಾಸಕರೊಂದಿಗೆ ಅತಿದೊಡ್ಡ ಪಕ್ಷವಾಗಿದೆ. ಅದರ ಮಿತ್ರಪಕ್ಷ ಎನ್‌ಪಿಪಿ 7 ಸದಸ್ಯರನ್ನು ಹೊಂದಿದೆ.


ಇದನ್ನೂ ಓದಿ; ಮುರುಘಾ ಶರಣರ ಮೇಲೆ ಅತ್ಯಾಚಾರ ಆರೋಪ: ಬಸವಶ್ರೀ ಪ್ರಶಸ್ತಿ ಹಿಂದಿರುಗಿಸಿದ ಪಿ. ಸಾಯಿನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...