Homeಕರ್ನಾಟಕರಾಜಿನಾಮೆ ನೀಡುವ ಮುನ್ನ ಯಡಿಯೂರಪ್ಪನವರ ಮನೆಗೆ ಹೋಗಿದ್ದೆ ಎಂದ ನಾರಾಯಣಗೌಡ: ವಿಡಿಯೋ ನೋಡಿ

ರಾಜಿನಾಮೆ ನೀಡುವ ಮುನ್ನ ಯಡಿಯೂರಪ್ಪನವರ ಮನೆಗೆ ಹೋಗಿದ್ದೆ ಎಂದ ನಾರಾಯಣಗೌಡ: ವಿಡಿಯೋ ನೋಡಿ

- Advertisement -
- Advertisement -

ಐದು ಗಂಟೆ ಸುಮಾರಿಗೆ ನಾನು ಅವರ ಮನೆಗೆ ಹೋದೆ. ಆಗ ಅವರು ಏನಪ್ಪ ಮುಖ್ಯಮಂತ್ರಿಯಾಗೊ ಅವಕಾಶ ಇದೆ ಬೆಂಬಲಿಸ್ತಿಯಾ ಎಂದರು. ನನ್ನ ತಂದೆ ಬೂಕನಕೆರೆಲೀ ವೀರಭದ್ರ ಸ್ವಾಮಿ ಪೂಜೆ ಮಾಡಿಕೊಂಡು ಬೆಳೆಸಿದ್ದಾರೆ. ಆದರೆ ಕೆ.ಆರ್.ಪೇಟೆ ತಾಲೂಕು ಅಭಿವೃದ್ಧಿಯಾಗಿಲ್ಲ ಎಂದು ಸ್ವಪ್ನದಲ್ಲಿ ಬಂದು ಕಾಡುತ್ತಿದ್ದಾರೆ. ನೀನು ಕೈ ಜೋಡಿಸಿದ್ರೆ ಕೆ.ಆರ್.ಪೇಟೆ ಅಭಿವೃದ್ಧಿ ಮಾಡೋಣ. ಏನಂತೀಯ ಎಂದ್ರು.

ಅದಕ್ಕೆ ನಾನು ತಾಲೂಕಿನ ಅಭಿವೃದ್ದಿಗಾಗಿ 7೦೦ ಕೋಟಿ ಅನುದಾನ ಕೇಳಿದ್ದೆ. ಆದ್ರೆ ಯಡಿಯೂರಪ್ಪನವರು ಸಾವಿರ ಕೋಟಿ ಕೊಡ್ತಿನಿ ಅಂದ್ರು. ಅದ್ರಂತೆ ನಮ್ಮ ತಾಲೂಕಿನ ಅಭಿವೃದ್ದಿಗೆ ಸಾವಿರ ಕೋಟಿ ಅನುದಾನ ಮಂಜೂರು ಮಾಡಿದ್ದಾರೆ ಹಾಗಾಗಿ ನಾನು ರಾಜಿನಾಮೆ ಕೊಟ್ಟೆ ಎಂದು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಅನರ್ಹ ಶಾಸಕ ನಾರಾಯಣಗೌಡ ಹೇಳಿದ್ದು ವಿಡಿಯೋ ಎಲ್ಲಾ ಕಡೆ ವೈರಲ್ ಆಗಿದೆ.

ವಿಡಿಯೋ ನೋಡಿ

ಆ ಮೂಲಕ ರಾಜೀನಾಮೆಗೂ ಮೊದಲು ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿರುವುದಾಗಿ ಹೇಳಿಕೊಂಡಿದ್ದಲ್ಲದೇ, ಆಪರೇಷನ್ ಕಮಲ ಮಾಡಿದ್ದು ಬಿ.ಎಸ್.ಯಡಿಯೂರಪ್ಪನವರೆ ಎಂದು ಜೆಡಿಎಸ್ ಅನರ್ಹ ಶಾಸಕ ನಾರಾಯಣಗೌಡ ಸಾರಿದ್ದಾರೆ.

ಮಂಡ್ಯದ ಬೂಕನಕೆರೆಯಲ್ಲಿ ಮಾತನಾಡಿರುವ ಅನರ್ಹಶಾಸಕ ನಾರಾಯಣಗೌಡ, ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ರಾಜಿನಾಮೆ ನೀಡಿದೆವು. ಹಾಗಾಗಿ ನಮ್ಮ ಕ್ಷೇತ್ರದ ಅಭಿವೃದ್ಧಿಗೆ 1 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ನನ್ನ ಕ್ಷೇತ್ರಕ್ಕೆ ಹಣ ಬಿಡುಗಡೆ ಮಾಡುವ ಭರವಸೆ ನೀಡಿ ದ್ರೋಹ ಬಗೆದರು ಎಂದು ಹೇಳಿದ್ದಾರೆ.

ಇನ್ನು ಮುಂದುವರೆದು ಎಚ್‌.ಡಿ ದೇವೇಗೌಡರು ಅವರ ಮನೆ ಚಪ್ಪಲಿ ಬಿಡುವಲ್ಲಿ ನಮ್ಮನ್ನು ನಿಲ್ಲಿಸುತ್ತಿದ್ದಾರೆ. ಈಗ ಸ್ವಾಭಿಮಾನಿಗಳಾಗಿದ್ದೇವೆ ಎಂದು ತಮ್ಮ ರಾಜಿನಾಮೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪು ಬರುವ ಮುನ್ನವೇ ಅನರ್ಹ ಶಾಸಕರು ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಅವರಿಂದ ಬರುತ್ತಿರುವ ಗೊಂದಲದ ಹೇಳಿಕೆಗಳಲ್ಲಿ ಯಾವುದು ಸತ್ಯ, ಯಾವುದು ಮಿಥ್ಯ ಎಂಬ ಗೊಂದಲವೂ ಜನರಲ್ಲಿ ಮೂಡತೊಡಗಿದೆ.

ಹಿರೇಕೆರೂರಿನಲ್ಲಿ ಮಾತನಾಡಿರುವ ಅನರ್ಹ ಶಾಸಕ ಬಿ.ಸಿ.ಪಾಟೀಲ್, ಕಾಂಗ್ರೆಸ್ ಜೆಡಿಎಸ್ ನಾಯಕರ ವಿರುದ್ಧ ಗರಂ ಆಗಿದ್ದಾರೆ. ಯಡಿಯೂರಪ್ಪಗೂ ನಮ್ಮ ರಾಜಿನಾಮೆಗೂ ಸಂಬಂಧವಿಲ್ಲ ಎಂದು ಮಾತು ಬದಲಿಸಿದ್ದಾರೆ. ಈವರೆಗೆ ಬೇರೆ ರೀತಿಯಲ್ಲೇ ಮಾತನಾಡುತ್ತಿದ್ದ ಅನರ್ಹ ಶಾಸಕರು ಇದೀಗ ರಾಗಬದಲಿಸಿದ್ದಾರೆ.

ನನಗೆ ಕಾಂಗ್ರೆಸ್ ನಲ್ಲಿ ಅನ್ಯಾಯವಾಗಿತ್ತು. ಹಾಗಾಗಿ ನಾನು ರಾಜಿನಾಮೆ ನೀಡಬೇಕಾಗಿ ಬಂತು. ಸಿದ್ದರಾಮಯ್ಯ ಮಾತುಗಳು ಮತ್ತು ಜೆಡಿಎಸ್, ಕಾಂಗ್ರೆಸ್ ಮುಖಂಡರ ನಡೆಯೂ ಕೂಡ ನಾವು ರಾಜಿನಾಮೆ ನೀಡಲು ಕಾರಣ ಎಂದು ಸಮಜಾಯಿಸಿ ಕೊಟ್ಟಿದ್ದಾರೆ.

ಡಿ.ಕೆ.ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರಿಗೆ ಗ್ರೌಂಡು ರಿಯಾಲಿಟಿ ಗೊತ್ತಿಲ್ಲ. ನಮ್ಮನ್ನು ಪಕ್ಷದಲ್ಲಿ ಕೂಲಿಗಳ ರೀತಿ ನಡೆಸಿಕೊಂಡರು. ಇದರಿಂದ ಬೇಸತ್ತು ರಾಜಿನಾಮೆ ನೀಡಬೇಕಾಯಿತು. ಕಾಂಗ್ರೆಸ್ ನಲ್ಲಿ ಲಿಂಗಾಯತರನ್ನು ಕಡೆಗಣಿಸಲಾಯಿತು. ಹಿರೇಕೆರೂರು ಕ್ಷೇತ್ರದಲ್ಲಿ ನಾನೊಬ್ಬನೇ ಶಾಸಕ. ನನಗೆ ಸರ್ಕಾರದಲ್ಲಿ ಸಚಿವ ಸ್ಥಾನ ನೀಡದೆ ದ್ರೋಹ ಬಗೆದರು ಎಂದು ಆರೋಪಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಧಿಕಾರ ದಾಹ. ಅವರು ಅಧಿಕಾರಕ್ಕಾಗಿ ಯಾರ ಜೊತೆ ಬೇಕಾದರೂ ಹೋಗುತ್ತಾರೆ. ಅದಕ್ಕಾಗಿ ಬಣ್ಣ ಬದಲಿಸುತ್ತಾರೆ. ಅವರೊಂದು ರೀತಿ ಊಸರವಳ್ಳಿ ಇದ್ದಂತೆ. ಅವರು ಜೋಕರ್ ಇದ್ದಂತೆ. ಆಟ ಯಾರ ಕಡೆ ಇರುತ್ತದೋ ಅವರ ಕಡೆ ಹೋಗುತ್ತಾರೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ಸುಧಾಕರ್ ಕೂಡ ನನ್ನ ಕ್ಷೇತ್ರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ  ಒಂದು ಸಾವಿರ ಕೋಟಿ ಬಿಡುಗಡೆ ಮಾಡಿದ್ದಾರೆ. ಅಭಿವೃದ್ಧಿಯ ಹಿನ್ನೆಲೆಯಲ್ಲಿ ರಾಜಿನಾಮೆ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...