Homeಕರ್ನಾಟಕರಾಜಿನಾಮೆ ನೀಡುವ ಮುನ್ನ ಯಡಿಯೂರಪ್ಪನವರ ಮನೆಗೆ ಹೋಗಿದ್ದೆ ಎಂದ ನಾರಾಯಣಗೌಡ: ವಿಡಿಯೋ ನೋಡಿ

ರಾಜಿನಾಮೆ ನೀಡುವ ಮುನ್ನ ಯಡಿಯೂರಪ್ಪನವರ ಮನೆಗೆ ಹೋಗಿದ್ದೆ ಎಂದ ನಾರಾಯಣಗೌಡ: ವಿಡಿಯೋ ನೋಡಿ

- Advertisement -
- Advertisement -

ಐದು ಗಂಟೆ ಸುಮಾರಿಗೆ ನಾನು ಅವರ ಮನೆಗೆ ಹೋದೆ. ಆಗ ಅವರು ಏನಪ್ಪ ಮುಖ್ಯಮಂತ್ರಿಯಾಗೊ ಅವಕಾಶ ಇದೆ ಬೆಂಬಲಿಸ್ತಿಯಾ ಎಂದರು. ನನ್ನ ತಂದೆ ಬೂಕನಕೆರೆಲೀ ವೀರಭದ್ರ ಸ್ವಾಮಿ ಪೂಜೆ ಮಾಡಿಕೊಂಡು ಬೆಳೆಸಿದ್ದಾರೆ. ಆದರೆ ಕೆ.ಆರ್.ಪೇಟೆ ತಾಲೂಕು ಅಭಿವೃದ್ಧಿಯಾಗಿಲ್ಲ ಎಂದು ಸ್ವಪ್ನದಲ್ಲಿ ಬಂದು ಕಾಡುತ್ತಿದ್ದಾರೆ. ನೀನು ಕೈ ಜೋಡಿಸಿದ್ರೆ ಕೆ.ಆರ್.ಪೇಟೆ ಅಭಿವೃದ್ಧಿ ಮಾಡೋಣ. ಏನಂತೀಯ ಎಂದ್ರು.

ಅದಕ್ಕೆ ನಾನು ತಾಲೂಕಿನ ಅಭಿವೃದ್ದಿಗಾಗಿ 7೦೦ ಕೋಟಿ ಅನುದಾನ ಕೇಳಿದ್ದೆ. ಆದ್ರೆ ಯಡಿಯೂರಪ್ಪನವರು ಸಾವಿರ ಕೋಟಿ ಕೊಡ್ತಿನಿ ಅಂದ್ರು. ಅದ್ರಂತೆ ನಮ್ಮ ತಾಲೂಕಿನ ಅಭಿವೃದ್ದಿಗೆ ಸಾವಿರ ಕೋಟಿ ಅನುದಾನ ಮಂಜೂರು ಮಾಡಿದ್ದಾರೆ ಹಾಗಾಗಿ ನಾನು ರಾಜಿನಾಮೆ ಕೊಟ್ಟೆ ಎಂದು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಅನರ್ಹ ಶಾಸಕ ನಾರಾಯಣಗೌಡ ಹೇಳಿದ್ದು ವಿಡಿಯೋ ಎಲ್ಲಾ ಕಡೆ ವೈರಲ್ ಆಗಿದೆ.

ವಿಡಿಯೋ ನೋಡಿ

ಆ ಮೂಲಕ ರಾಜೀನಾಮೆಗೂ ಮೊದಲು ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿರುವುದಾಗಿ ಹೇಳಿಕೊಂಡಿದ್ದಲ್ಲದೇ, ಆಪರೇಷನ್ ಕಮಲ ಮಾಡಿದ್ದು ಬಿ.ಎಸ್.ಯಡಿಯೂರಪ್ಪನವರೆ ಎಂದು ಜೆಡಿಎಸ್ ಅನರ್ಹ ಶಾಸಕ ನಾರಾಯಣಗೌಡ ಸಾರಿದ್ದಾರೆ.

ಮಂಡ್ಯದ ಬೂಕನಕೆರೆಯಲ್ಲಿ ಮಾತನಾಡಿರುವ ಅನರ್ಹಶಾಸಕ ನಾರಾಯಣಗೌಡ, ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ರಾಜಿನಾಮೆ ನೀಡಿದೆವು. ಹಾಗಾಗಿ ನಮ್ಮ ಕ್ಷೇತ್ರದ ಅಭಿವೃದ್ಧಿಗೆ 1 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ನನ್ನ ಕ್ಷೇತ್ರಕ್ಕೆ ಹಣ ಬಿಡುಗಡೆ ಮಾಡುವ ಭರವಸೆ ನೀಡಿ ದ್ರೋಹ ಬಗೆದರು ಎಂದು ಹೇಳಿದ್ದಾರೆ.

ಇನ್ನು ಮುಂದುವರೆದು ಎಚ್‌.ಡಿ ದೇವೇಗೌಡರು ಅವರ ಮನೆ ಚಪ್ಪಲಿ ಬಿಡುವಲ್ಲಿ ನಮ್ಮನ್ನು ನಿಲ್ಲಿಸುತ್ತಿದ್ದಾರೆ. ಈಗ ಸ್ವಾಭಿಮಾನಿಗಳಾಗಿದ್ದೇವೆ ಎಂದು ತಮ್ಮ ರಾಜಿನಾಮೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪು ಬರುವ ಮುನ್ನವೇ ಅನರ್ಹ ಶಾಸಕರು ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಅವರಿಂದ ಬರುತ್ತಿರುವ ಗೊಂದಲದ ಹೇಳಿಕೆಗಳಲ್ಲಿ ಯಾವುದು ಸತ್ಯ, ಯಾವುದು ಮಿಥ್ಯ ಎಂಬ ಗೊಂದಲವೂ ಜನರಲ್ಲಿ ಮೂಡತೊಡಗಿದೆ.

ಹಿರೇಕೆರೂರಿನಲ್ಲಿ ಮಾತನಾಡಿರುವ ಅನರ್ಹ ಶಾಸಕ ಬಿ.ಸಿ.ಪಾಟೀಲ್, ಕಾಂಗ್ರೆಸ್ ಜೆಡಿಎಸ್ ನಾಯಕರ ವಿರುದ್ಧ ಗರಂ ಆಗಿದ್ದಾರೆ. ಯಡಿಯೂರಪ್ಪಗೂ ನಮ್ಮ ರಾಜಿನಾಮೆಗೂ ಸಂಬಂಧವಿಲ್ಲ ಎಂದು ಮಾತು ಬದಲಿಸಿದ್ದಾರೆ. ಈವರೆಗೆ ಬೇರೆ ರೀತಿಯಲ್ಲೇ ಮಾತನಾಡುತ್ತಿದ್ದ ಅನರ್ಹ ಶಾಸಕರು ಇದೀಗ ರಾಗಬದಲಿಸಿದ್ದಾರೆ.

ನನಗೆ ಕಾಂಗ್ರೆಸ್ ನಲ್ಲಿ ಅನ್ಯಾಯವಾಗಿತ್ತು. ಹಾಗಾಗಿ ನಾನು ರಾಜಿನಾಮೆ ನೀಡಬೇಕಾಗಿ ಬಂತು. ಸಿದ್ದರಾಮಯ್ಯ ಮಾತುಗಳು ಮತ್ತು ಜೆಡಿಎಸ್, ಕಾಂಗ್ರೆಸ್ ಮುಖಂಡರ ನಡೆಯೂ ಕೂಡ ನಾವು ರಾಜಿನಾಮೆ ನೀಡಲು ಕಾರಣ ಎಂದು ಸಮಜಾಯಿಸಿ ಕೊಟ್ಟಿದ್ದಾರೆ.

ಡಿ.ಕೆ.ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರಿಗೆ ಗ್ರೌಂಡು ರಿಯಾಲಿಟಿ ಗೊತ್ತಿಲ್ಲ. ನಮ್ಮನ್ನು ಪಕ್ಷದಲ್ಲಿ ಕೂಲಿಗಳ ರೀತಿ ನಡೆಸಿಕೊಂಡರು. ಇದರಿಂದ ಬೇಸತ್ತು ರಾಜಿನಾಮೆ ನೀಡಬೇಕಾಯಿತು. ಕಾಂಗ್ರೆಸ್ ನಲ್ಲಿ ಲಿಂಗಾಯತರನ್ನು ಕಡೆಗಣಿಸಲಾಯಿತು. ಹಿರೇಕೆರೂರು ಕ್ಷೇತ್ರದಲ್ಲಿ ನಾನೊಬ್ಬನೇ ಶಾಸಕ. ನನಗೆ ಸರ್ಕಾರದಲ್ಲಿ ಸಚಿವ ಸ್ಥಾನ ನೀಡದೆ ದ್ರೋಹ ಬಗೆದರು ಎಂದು ಆರೋಪಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಧಿಕಾರ ದಾಹ. ಅವರು ಅಧಿಕಾರಕ್ಕಾಗಿ ಯಾರ ಜೊತೆ ಬೇಕಾದರೂ ಹೋಗುತ್ತಾರೆ. ಅದಕ್ಕಾಗಿ ಬಣ್ಣ ಬದಲಿಸುತ್ತಾರೆ. ಅವರೊಂದು ರೀತಿ ಊಸರವಳ್ಳಿ ಇದ್ದಂತೆ. ಅವರು ಜೋಕರ್ ಇದ್ದಂತೆ. ಆಟ ಯಾರ ಕಡೆ ಇರುತ್ತದೋ ಅವರ ಕಡೆ ಹೋಗುತ್ತಾರೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ಸುಧಾಕರ್ ಕೂಡ ನನ್ನ ಕ್ಷೇತ್ರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ  ಒಂದು ಸಾವಿರ ಕೋಟಿ ಬಿಡುಗಡೆ ಮಾಡಿದ್ದಾರೆ. ಅಭಿವೃದ್ಧಿಯ ಹಿನ್ನೆಲೆಯಲ್ಲಿ ರಾಜಿನಾಮೆ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...