Homeಕರ್ನಾಟಕರಾಜಿನಾಮೆ ನೀಡುವ ಮುನ್ನ ಯಡಿಯೂರಪ್ಪನವರ ಮನೆಗೆ ಹೋಗಿದ್ದೆ ಎಂದ ನಾರಾಯಣಗೌಡ: ವಿಡಿಯೋ ನೋಡಿ

ರಾಜಿನಾಮೆ ನೀಡುವ ಮುನ್ನ ಯಡಿಯೂರಪ್ಪನವರ ಮನೆಗೆ ಹೋಗಿದ್ದೆ ಎಂದ ನಾರಾಯಣಗೌಡ: ವಿಡಿಯೋ ನೋಡಿ

- Advertisement -
- Advertisement -

ಐದು ಗಂಟೆ ಸುಮಾರಿಗೆ ನಾನು ಅವರ ಮನೆಗೆ ಹೋದೆ. ಆಗ ಅವರು ಏನಪ್ಪ ಮುಖ್ಯಮಂತ್ರಿಯಾಗೊ ಅವಕಾಶ ಇದೆ ಬೆಂಬಲಿಸ್ತಿಯಾ ಎಂದರು. ನನ್ನ ತಂದೆ ಬೂಕನಕೆರೆಲೀ ವೀರಭದ್ರ ಸ್ವಾಮಿ ಪೂಜೆ ಮಾಡಿಕೊಂಡು ಬೆಳೆಸಿದ್ದಾರೆ. ಆದರೆ ಕೆ.ಆರ್.ಪೇಟೆ ತಾಲೂಕು ಅಭಿವೃದ್ಧಿಯಾಗಿಲ್ಲ ಎಂದು ಸ್ವಪ್ನದಲ್ಲಿ ಬಂದು ಕಾಡುತ್ತಿದ್ದಾರೆ. ನೀನು ಕೈ ಜೋಡಿಸಿದ್ರೆ ಕೆ.ಆರ್.ಪೇಟೆ ಅಭಿವೃದ್ಧಿ ಮಾಡೋಣ. ಏನಂತೀಯ ಎಂದ್ರು.

ಅದಕ್ಕೆ ನಾನು ತಾಲೂಕಿನ ಅಭಿವೃದ್ದಿಗಾಗಿ 7೦೦ ಕೋಟಿ ಅನುದಾನ ಕೇಳಿದ್ದೆ. ಆದ್ರೆ ಯಡಿಯೂರಪ್ಪನವರು ಸಾವಿರ ಕೋಟಿ ಕೊಡ್ತಿನಿ ಅಂದ್ರು. ಅದ್ರಂತೆ ನಮ್ಮ ತಾಲೂಕಿನ ಅಭಿವೃದ್ದಿಗೆ ಸಾವಿರ ಕೋಟಿ ಅನುದಾನ ಮಂಜೂರು ಮಾಡಿದ್ದಾರೆ ಹಾಗಾಗಿ ನಾನು ರಾಜಿನಾಮೆ ಕೊಟ್ಟೆ ಎಂದು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಅನರ್ಹ ಶಾಸಕ ನಾರಾಯಣಗೌಡ ಹೇಳಿದ್ದು ವಿಡಿಯೋ ಎಲ್ಲಾ ಕಡೆ ವೈರಲ್ ಆಗಿದೆ.

ವಿಡಿಯೋ ನೋಡಿ

ಆ ಮೂಲಕ ರಾಜೀನಾಮೆಗೂ ಮೊದಲು ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿರುವುದಾಗಿ ಹೇಳಿಕೊಂಡಿದ್ದಲ್ಲದೇ, ಆಪರೇಷನ್ ಕಮಲ ಮಾಡಿದ್ದು ಬಿ.ಎಸ್.ಯಡಿಯೂರಪ್ಪನವರೆ ಎಂದು ಜೆಡಿಎಸ್ ಅನರ್ಹ ಶಾಸಕ ನಾರಾಯಣಗೌಡ ಸಾರಿದ್ದಾರೆ.

ಮಂಡ್ಯದ ಬೂಕನಕೆರೆಯಲ್ಲಿ ಮಾತನಾಡಿರುವ ಅನರ್ಹಶಾಸಕ ನಾರಾಯಣಗೌಡ, ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ರಾಜಿನಾಮೆ ನೀಡಿದೆವು. ಹಾಗಾಗಿ ನಮ್ಮ ಕ್ಷೇತ್ರದ ಅಭಿವೃದ್ಧಿಗೆ 1 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ನನ್ನ ಕ್ಷೇತ್ರಕ್ಕೆ ಹಣ ಬಿಡುಗಡೆ ಮಾಡುವ ಭರವಸೆ ನೀಡಿ ದ್ರೋಹ ಬಗೆದರು ಎಂದು ಹೇಳಿದ್ದಾರೆ.

ಇನ್ನು ಮುಂದುವರೆದು ಎಚ್‌.ಡಿ ದೇವೇಗೌಡರು ಅವರ ಮನೆ ಚಪ್ಪಲಿ ಬಿಡುವಲ್ಲಿ ನಮ್ಮನ್ನು ನಿಲ್ಲಿಸುತ್ತಿದ್ದಾರೆ. ಈಗ ಸ್ವಾಭಿಮಾನಿಗಳಾಗಿದ್ದೇವೆ ಎಂದು ತಮ್ಮ ರಾಜಿನಾಮೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪು ಬರುವ ಮುನ್ನವೇ ಅನರ್ಹ ಶಾಸಕರು ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಅವರಿಂದ ಬರುತ್ತಿರುವ ಗೊಂದಲದ ಹೇಳಿಕೆಗಳಲ್ಲಿ ಯಾವುದು ಸತ್ಯ, ಯಾವುದು ಮಿಥ್ಯ ಎಂಬ ಗೊಂದಲವೂ ಜನರಲ್ಲಿ ಮೂಡತೊಡಗಿದೆ.

ಹಿರೇಕೆರೂರಿನಲ್ಲಿ ಮಾತನಾಡಿರುವ ಅನರ್ಹ ಶಾಸಕ ಬಿ.ಸಿ.ಪಾಟೀಲ್, ಕಾಂಗ್ರೆಸ್ ಜೆಡಿಎಸ್ ನಾಯಕರ ವಿರುದ್ಧ ಗರಂ ಆಗಿದ್ದಾರೆ. ಯಡಿಯೂರಪ್ಪಗೂ ನಮ್ಮ ರಾಜಿನಾಮೆಗೂ ಸಂಬಂಧವಿಲ್ಲ ಎಂದು ಮಾತು ಬದಲಿಸಿದ್ದಾರೆ. ಈವರೆಗೆ ಬೇರೆ ರೀತಿಯಲ್ಲೇ ಮಾತನಾಡುತ್ತಿದ್ದ ಅನರ್ಹ ಶಾಸಕರು ಇದೀಗ ರಾಗಬದಲಿಸಿದ್ದಾರೆ.

ನನಗೆ ಕಾಂಗ್ರೆಸ್ ನಲ್ಲಿ ಅನ್ಯಾಯವಾಗಿತ್ತು. ಹಾಗಾಗಿ ನಾನು ರಾಜಿನಾಮೆ ನೀಡಬೇಕಾಗಿ ಬಂತು. ಸಿದ್ದರಾಮಯ್ಯ ಮಾತುಗಳು ಮತ್ತು ಜೆಡಿಎಸ್, ಕಾಂಗ್ರೆಸ್ ಮುಖಂಡರ ನಡೆಯೂ ಕೂಡ ನಾವು ರಾಜಿನಾಮೆ ನೀಡಲು ಕಾರಣ ಎಂದು ಸಮಜಾಯಿಸಿ ಕೊಟ್ಟಿದ್ದಾರೆ.

ಡಿ.ಕೆ.ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರಿಗೆ ಗ್ರೌಂಡು ರಿಯಾಲಿಟಿ ಗೊತ್ತಿಲ್ಲ. ನಮ್ಮನ್ನು ಪಕ್ಷದಲ್ಲಿ ಕೂಲಿಗಳ ರೀತಿ ನಡೆಸಿಕೊಂಡರು. ಇದರಿಂದ ಬೇಸತ್ತು ರಾಜಿನಾಮೆ ನೀಡಬೇಕಾಯಿತು. ಕಾಂಗ್ರೆಸ್ ನಲ್ಲಿ ಲಿಂಗಾಯತರನ್ನು ಕಡೆಗಣಿಸಲಾಯಿತು. ಹಿರೇಕೆರೂರು ಕ್ಷೇತ್ರದಲ್ಲಿ ನಾನೊಬ್ಬನೇ ಶಾಸಕ. ನನಗೆ ಸರ್ಕಾರದಲ್ಲಿ ಸಚಿವ ಸ್ಥಾನ ನೀಡದೆ ದ್ರೋಹ ಬಗೆದರು ಎಂದು ಆರೋಪಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಧಿಕಾರ ದಾಹ. ಅವರು ಅಧಿಕಾರಕ್ಕಾಗಿ ಯಾರ ಜೊತೆ ಬೇಕಾದರೂ ಹೋಗುತ್ತಾರೆ. ಅದಕ್ಕಾಗಿ ಬಣ್ಣ ಬದಲಿಸುತ್ತಾರೆ. ಅವರೊಂದು ರೀತಿ ಊಸರವಳ್ಳಿ ಇದ್ದಂತೆ. ಅವರು ಜೋಕರ್ ಇದ್ದಂತೆ. ಆಟ ಯಾರ ಕಡೆ ಇರುತ್ತದೋ ಅವರ ಕಡೆ ಹೋಗುತ್ತಾರೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ಸುಧಾಕರ್ ಕೂಡ ನನ್ನ ಕ್ಷೇತ್ರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ  ಒಂದು ಸಾವಿರ ಕೋಟಿ ಬಿಡುಗಡೆ ಮಾಡಿದ್ದಾರೆ. ಅಭಿವೃದ್ಧಿಯ ಹಿನ್ನೆಲೆಯಲ್ಲಿ ರಾಜಿನಾಮೆ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...