Homeಕರ್ನಾಟಕರಾಜಿನಾಮೆ ನೀಡುವ ಮುನ್ನ ಯಡಿಯೂರಪ್ಪನವರ ಮನೆಗೆ ಹೋಗಿದ್ದೆ ಎಂದ ನಾರಾಯಣಗೌಡ: ವಿಡಿಯೋ ನೋಡಿ

ರಾಜಿನಾಮೆ ನೀಡುವ ಮುನ್ನ ಯಡಿಯೂರಪ್ಪನವರ ಮನೆಗೆ ಹೋಗಿದ್ದೆ ಎಂದ ನಾರಾಯಣಗೌಡ: ವಿಡಿಯೋ ನೋಡಿ

- Advertisement -
- Advertisement -

ಐದು ಗಂಟೆ ಸುಮಾರಿಗೆ ನಾನು ಅವರ ಮನೆಗೆ ಹೋದೆ. ಆಗ ಅವರು ಏನಪ್ಪ ಮುಖ್ಯಮಂತ್ರಿಯಾಗೊ ಅವಕಾಶ ಇದೆ ಬೆಂಬಲಿಸ್ತಿಯಾ ಎಂದರು. ನನ್ನ ತಂದೆ ಬೂಕನಕೆರೆಲೀ ವೀರಭದ್ರ ಸ್ವಾಮಿ ಪೂಜೆ ಮಾಡಿಕೊಂಡು ಬೆಳೆಸಿದ್ದಾರೆ. ಆದರೆ ಕೆ.ಆರ್.ಪೇಟೆ ತಾಲೂಕು ಅಭಿವೃದ್ಧಿಯಾಗಿಲ್ಲ ಎಂದು ಸ್ವಪ್ನದಲ್ಲಿ ಬಂದು ಕಾಡುತ್ತಿದ್ದಾರೆ. ನೀನು ಕೈ ಜೋಡಿಸಿದ್ರೆ ಕೆ.ಆರ್.ಪೇಟೆ ಅಭಿವೃದ್ಧಿ ಮಾಡೋಣ. ಏನಂತೀಯ ಎಂದ್ರು.

ಅದಕ್ಕೆ ನಾನು ತಾಲೂಕಿನ ಅಭಿವೃದ್ದಿಗಾಗಿ 7೦೦ ಕೋಟಿ ಅನುದಾನ ಕೇಳಿದ್ದೆ. ಆದ್ರೆ ಯಡಿಯೂರಪ್ಪನವರು ಸಾವಿರ ಕೋಟಿ ಕೊಡ್ತಿನಿ ಅಂದ್ರು. ಅದ್ರಂತೆ ನಮ್ಮ ತಾಲೂಕಿನ ಅಭಿವೃದ್ದಿಗೆ ಸಾವಿರ ಕೋಟಿ ಅನುದಾನ ಮಂಜೂರು ಮಾಡಿದ್ದಾರೆ ಹಾಗಾಗಿ ನಾನು ರಾಜಿನಾಮೆ ಕೊಟ್ಟೆ ಎಂದು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಅನರ್ಹ ಶಾಸಕ ನಾರಾಯಣಗೌಡ ಹೇಳಿದ್ದು ವಿಡಿಯೋ ಎಲ್ಲಾ ಕಡೆ ವೈರಲ್ ಆಗಿದೆ.

ವಿಡಿಯೋ ನೋಡಿ

ಆ ಮೂಲಕ ರಾಜೀನಾಮೆಗೂ ಮೊದಲು ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿರುವುದಾಗಿ ಹೇಳಿಕೊಂಡಿದ್ದಲ್ಲದೇ, ಆಪರೇಷನ್ ಕಮಲ ಮಾಡಿದ್ದು ಬಿ.ಎಸ್.ಯಡಿಯೂರಪ್ಪನವರೆ ಎಂದು ಜೆಡಿಎಸ್ ಅನರ್ಹ ಶಾಸಕ ನಾರಾಯಣಗೌಡ ಸಾರಿದ್ದಾರೆ.

ಮಂಡ್ಯದ ಬೂಕನಕೆರೆಯಲ್ಲಿ ಮಾತನಾಡಿರುವ ಅನರ್ಹಶಾಸಕ ನಾರಾಯಣಗೌಡ, ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ರಾಜಿನಾಮೆ ನೀಡಿದೆವು. ಹಾಗಾಗಿ ನಮ್ಮ ಕ್ಷೇತ್ರದ ಅಭಿವೃದ್ಧಿಗೆ 1 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ನನ್ನ ಕ್ಷೇತ್ರಕ್ಕೆ ಹಣ ಬಿಡುಗಡೆ ಮಾಡುವ ಭರವಸೆ ನೀಡಿ ದ್ರೋಹ ಬಗೆದರು ಎಂದು ಹೇಳಿದ್ದಾರೆ.

ಇನ್ನು ಮುಂದುವರೆದು ಎಚ್‌.ಡಿ ದೇವೇಗೌಡರು ಅವರ ಮನೆ ಚಪ್ಪಲಿ ಬಿಡುವಲ್ಲಿ ನಮ್ಮನ್ನು ನಿಲ್ಲಿಸುತ್ತಿದ್ದಾರೆ. ಈಗ ಸ್ವಾಭಿಮಾನಿಗಳಾಗಿದ್ದೇವೆ ಎಂದು ತಮ್ಮ ರಾಜಿನಾಮೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪು ಬರುವ ಮುನ್ನವೇ ಅನರ್ಹ ಶಾಸಕರು ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಅವರಿಂದ ಬರುತ್ತಿರುವ ಗೊಂದಲದ ಹೇಳಿಕೆಗಳಲ್ಲಿ ಯಾವುದು ಸತ್ಯ, ಯಾವುದು ಮಿಥ್ಯ ಎಂಬ ಗೊಂದಲವೂ ಜನರಲ್ಲಿ ಮೂಡತೊಡಗಿದೆ.

ಹಿರೇಕೆರೂರಿನಲ್ಲಿ ಮಾತನಾಡಿರುವ ಅನರ್ಹ ಶಾಸಕ ಬಿ.ಸಿ.ಪಾಟೀಲ್, ಕಾಂಗ್ರೆಸ್ ಜೆಡಿಎಸ್ ನಾಯಕರ ವಿರುದ್ಧ ಗರಂ ಆಗಿದ್ದಾರೆ. ಯಡಿಯೂರಪ್ಪಗೂ ನಮ್ಮ ರಾಜಿನಾಮೆಗೂ ಸಂಬಂಧವಿಲ್ಲ ಎಂದು ಮಾತು ಬದಲಿಸಿದ್ದಾರೆ. ಈವರೆಗೆ ಬೇರೆ ರೀತಿಯಲ್ಲೇ ಮಾತನಾಡುತ್ತಿದ್ದ ಅನರ್ಹ ಶಾಸಕರು ಇದೀಗ ರಾಗಬದಲಿಸಿದ್ದಾರೆ.

ನನಗೆ ಕಾಂಗ್ರೆಸ್ ನಲ್ಲಿ ಅನ್ಯಾಯವಾಗಿತ್ತು. ಹಾಗಾಗಿ ನಾನು ರಾಜಿನಾಮೆ ನೀಡಬೇಕಾಗಿ ಬಂತು. ಸಿದ್ದರಾಮಯ್ಯ ಮಾತುಗಳು ಮತ್ತು ಜೆಡಿಎಸ್, ಕಾಂಗ್ರೆಸ್ ಮುಖಂಡರ ನಡೆಯೂ ಕೂಡ ನಾವು ರಾಜಿನಾಮೆ ನೀಡಲು ಕಾರಣ ಎಂದು ಸಮಜಾಯಿಸಿ ಕೊಟ್ಟಿದ್ದಾರೆ.

ಡಿ.ಕೆ.ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರಿಗೆ ಗ್ರೌಂಡು ರಿಯಾಲಿಟಿ ಗೊತ್ತಿಲ್ಲ. ನಮ್ಮನ್ನು ಪಕ್ಷದಲ್ಲಿ ಕೂಲಿಗಳ ರೀತಿ ನಡೆಸಿಕೊಂಡರು. ಇದರಿಂದ ಬೇಸತ್ತು ರಾಜಿನಾಮೆ ನೀಡಬೇಕಾಯಿತು. ಕಾಂಗ್ರೆಸ್ ನಲ್ಲಿ ಲಿಂಗಾಯತರನ್ನು ಕಡೆಗಣಿಸಲಾಯಿತು. ಹಿರೇಕೆರೂರು ಕ್ಷೇತ್ರದಲ್ಲಿ ನಾನೊಬ್ಬನೇ ಶಾಸಕ. ನನಗೆ ಸರ್ಕಾರದಲ್ಲಿ ಸಚಿವ ಸ್ಥಾನ ನೀಡದೆ ದ್ರೋಹ ಬಗೆದರು ಎಂದು ಆರೋಪಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಧಿಕಾರ ದಾಹ. ಅವರು ಅಧಿಕಾರಕ್ಕಾಗಿ ಯಾರ ಜೊತೆ ಬೇಕಾದರೂ ಹೋಗುತ್ತಾರೆ. ಅದಕ್ಕಾಗಿ ಬಣ್ಣ ಬದಲಿಸುತ್ತಾರೆ. ಅವರೊಂದು ರೀತಿ ಊಸರವಳ್ಳಿ ಇದ್ದಂತೆ. ಅವರು ಜೋಕರ್ ಇದ್ದಂತೆ. ಆಟ ಯಾರ ಕಡೆ ಇರುತ್ತದೋ ಅವರ ಕಡೆ ಹೋಗುತ್ತಾರೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ಸುಧಾಕರ್ ಕೂಡ ನನ್ನ ಕ್ಷೇತ್ರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ  ಒಂದು ಸಾವಿರ ಕೋಟಿ ಬಿಡುಗಡೆ ಮಾಡಿದ್ದಾರೆ. ಅಭಿವೃದ್ಧಿಯ ಹಿನ್ನೆಲೆಯಲ್ಲಿ ರಾಜಿನಾಮೆ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...