Homeಮುಖಪುಟಆಪರೇಷನ್ ಕಮಲ ಭೀತಿ - ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳನ್ನು ವಿದೇಶಕ್ಕೆ ಕಳುಹಿಸಿದ ಬಿಪಿಎಫ್‌!

ಆಪರೇಷನ್ ಕಮಲ ಭೀತಿ – ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳನ್ನು ವಿದೇಶಕ್ಕೆ ಕಳುಹಿಸಿದ ಬಿಪಿಎಫ್‌!

ವಿಶೇಷವೆಂದರೆ ಬಿಪಿಎಫ್ ಪಕ್ಷವು ಬಿಜೆಪಿಯ ಮೈತ್ರಿಪಕ್ಷವಾಗಿದೆ.

- Advertisement -
- Advertisement -

ಆಡಳಿತಾರೂಢ ಬಿಜೆಪಿಯ ‘ಆಪರೇಷನ್ ಕಮಲ’ ಭೀತಿಗೆ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ಪಕ್ಷವು ಅಸ್ಸಾಂ ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ಚುನಾವಣೆಗೆ ಸ್ಪರ್ಧಿಸಿದ್ದ 11 ಅಭ್ಯರ್ಥಿಗಳಲ್ಲಿ 10 ಜನರನ್ನು ವಿದೇಶಕ್ಕೆ ಸ್ಥಳಾಂತರಿಸಿದೆ ಎಂದು ಭಾನುವಾರ ವರದಿಯಾಗಿದೆ. ವಿಶೇಷವೆಂದರೆ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ ಪಕ್ಷವು ಅಸ್ಸಾಂನಲ್ಲಿ ಬಿಜೆಪಿಯ ಮೈತ್ರಿಪಕ್ಷವಾಗಿದೆ.

ಎರಡು ದಿನಗಳ ಹಿಂದೆಯಷ್ಟೇ ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಹಾಗೂ ಕಾಂಗ್ರೆಸ್ ಕ್ರಮವಾಗಿ ತಮ್ಮ 18 ಮತ್ತು ಇಬ್ಬರು ಅಭ್ಯರ್ಥಿಗಳನ್ನು ರಾಜಸ್ಥಾನಕ್ಕೆ ಕಳುಹಿಸಿತ್ತು.

ಅಸ್ಸಾಂನಲ್ಲೇ ಉಳಿದಿರುವ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್‌ನ ಏಕೈಕ ಅಭ್ಯರ್ಥಿ ಸಚಿವೆ ಪ್ರಮಿಲಾ ರಾಣಿ ಬ್ರಹ್ಮ ಅವರು ತಮ್ಮ ಪಕ್ಷದ ಸುತ್ತ ನಡೆಯುತ್ತಿರುವ ಬೆಳವಣಿಯನ್ನು ದೃಡಪಡಿಸಿದ್ದಾರೆ.

ಇದನ್ನೂ ಓದಿ: ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು “ಹೌದು, ಅವರು ಶನಿವಾರ ಹೊರಟುಹೋದರು ಆದರೆ ಅವರು ನಿಖರವಾಗಿ ಯಾವ ದೇಶಕ್ಕೆ ಭೇಟಿ ನೀಡುತ್ತಿದ್ದಾರೆಂದು ನನಗೆ ತಿಳಿದಿಲ್ಲ. ನಾನು ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ, ” ಎಂದು ತಿಳಿಸಿದ್ದಾರೆ.

ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್‌ ಅಭ್ಯರ್ಥಿಗಳು ಸಿಂಗಾಪುರಕ್ಕೆ ತೆರಳಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ. ಅವರೊಂದಿಗೆ ನಾಲ್ಕು ಜಿಲ್ಲೆಗಳನ್ನು ನಿರ್ವಹಿಸುವ ಸ್ವಾಯತ್ತ ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಯ ಕೌನ್ಸಿಲ್ ವಿಧಾನಸಭೆಯ (ಎಂಸಿಎಲ್ಎ) ಹದಿನಾರು ಸದಸ್ಯರು ಕೂಡಾ ತೆರಳಿದ್ದಾರೆ ಎನ್ನಲಾಗಿದೆ.

ಬಿಜೆಪಿಯಿಂದ ಆಪರೇಷನ್ ಕಮಲದ ಪ್ರಯತ್ನಗಳನ್ನು ತಡೆಯಲು ಬೇಕಾಗಿ ಅಭ್ಯರ್ಥಿಗಳನ್ನು ವಿದೇಶಕ್ಕೆ ಕಳುಹಿಸಲಾಗಿದೆಯೆ ಎಂಬ ಪ್ರಶ್ನೆಗೆ ಉತ್ತರಿಸಿದ ಬ್ರಹ್ಮ ಅವರು, “ಕುದುರೆ ವ್ಯಾಪಾರದ ಸಾಧ್ಯತೆಯನ್ನು ನಾವು ತಳ್ಳಿಹಾಕುವಂತಿಲ್ಲ” ಎಂದು ತಿಳಿಸಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಬಿಜೆಪಿಯಿಂದ ‘ಆಪರೇಷನ್ ಕಮಲ’ ನಡೆಯುತ್ತದೆ ಎಂಬ ಭೀತಿಗೆ ಚುಣಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದ ಸುಮಾರು 20 ಅಭ್ಯರ್ಥಿಗಳನ್ನು ಜೈಪುರಕ್ಕೆ ಸ್ಥಳಾಂತರಿಸಲಾಗಿತ್ತು.

ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ಹಂಚಿದ ಬಿಜೆಪಿಗರು!

ವಿದ್ಯಾರ್ಥಿಗಳಿಬ್ಬರ ನೃತ್ಯಕ್ಕೆ ಕೋಮು ಬಣ್ಣ ಹಚ್ಚಿದ ಬಲಪಂಥೀಯರಿಗೆ ಕೇರಳ ಪ್ರತಿರೋಧಿಸಿದ್ದು ಹೇಗೆ ಗೊತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...