Homeಚಳವಳಿರಾಜಸ್ಥಾನದಲ್ಲಿ ಜಾತಿ ದೌರ್ಜನ್ಯದ ವಿರುದ್ದ ’ಆಪರೇಷನ್ ಸಮಾನತಾ’: ದಲಿತರ ಮದುವೆಯಲ್ಲಿ ಕುದುರೆ ಸವಾರಿಗೆ ಆಡಳಿತದ ಸಾಥ್!

ರಾಜಸ್ಥಾನದಲ್ಲಿ ಜಾತಿ ದೌರ್ಜನ್ಯದ ವಿರುದ್ದ ’ಆಪರೇಷನ್ ಸಮಾನತಾ’: ದಲಿತರ ಮದುವೆಯಲ್ಲಿ ಕುದುರೆ ಸವಾರಿಗೆ ಆಡಳಿತದ ಸಾಥ್!

ಆಪರೇಷನ್ ಸಮಂತ ಆರಂಭವಾದಾಗಿನಿಂದ ಹತ್ತಕ್ಕೂ ಹೆಚ್ಚು ದಲಿತರ ವಿವಾಹಗಳು ಶಾಂತಿಯುತವಾಗಿ ನಡೆದಿವೆ- ಪೊಲೀಸ್ ವರಿಷ್ಠಾಧಿಕಾರಿ

- Advertisement -
- Advertisement -

ಜಾತಿ ದೌರ್ಜನ್ಯ, ಜಾತಿಯ ಅಡೆತಡೆಗಳನ್ನು ಮುರಿದು, ರಾಜಸ್ಥಾನದ ದಲಿತ ಯುವಕರೊಬ್ಬರು ತನ್ನ ಮದುವೆಯ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ್ದಾರೆ. ದಲಿತರು ಕುದುರೆ ಸವಾರಿ ಮಾಡಬಾರದು ಎಂದು ಮೇಲ್ಜಾತಿಯವರ ನಿರ್ಬಂಧವನ್ನು ಧಿಕ್ಕರಿಸಿರುವ ಅವರು ಕುದುರೆ ಸವಾರಿ ಮಾಡುವುದೂ ನಮ್ಮ ಹಕ್ಕು ಎಂದಿದ್ದಾರೆ. ಅವರ ಈ ಪ್ರಯತ್ನಕ್ಕೆ ಆಡಳಿತವು ಬೆಂಬಲ ನೀಡಿದೆ.

ದಲಿತರು ತಮ್ಮ ಮದುವೆಯಲ್ಲಿ ಕುದುರೆ ಮೇಲೆ ಸವಾರಿ ಮಾಡದಂತೆ ಮೇಲ್ಜಾತಿಯವರು ತಡೆಯುವುದು. ತಡೆದು ಹಲ್ಲೆ ನಡೆಸಿರುವ ಘಟನೆಗಳು ಸಾಕಷ್ಟು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಜಾತಿ ತಾರತಮ್ಯವನ್ನು ಮೀರಿ, ಅಂಚಿಗೆ ತಳ್ಳಲ್ಪಟ್ಟ ಜನರಿಗೆ ಅವರ ಹಕ್ಕುಗಳನ್ನು ಮರಳಿ ತರಲು ಬುಂದಿ ಜಿಲ್ಲೆಯಲ್ಲಿ ಪೋಲೀಸ್ ಮತ್ತು ಸ್ಥಳೀಯ ಆಡಳಿತವು ಪ್ರಾರಂಭಿಸಿದ ‘ಆಪರೇಷನ್ ಸಮಾನತಾ (ಸಮಾನತೆ)’ ಅಭಿಯಾನವು ಈ ವಿವಾದ ಮೂಲಕ ಒಂದು ಹಂತಕ್ಕೆ ಯಶಸ್ವಿಯಾಗಿದೆ. ಆ ಅಭಿಯಾನವು ದಲಿತ ಯುವಜನರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ದಲಿತರು ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಪಡೆದುಕೊಳ್ಳಲು. ಆ ಮೂಲಕ ತಮ್ಮ ಮದುವೆಯನ್ನು ಘನತೆಯಿಂದ ಮಾಡಿಕೊಳ್ಳಲು ಈ ಅಭಿಯಾನವು ಅನುವು ಮಾಡಿಕೊಟ್ಟಿದೆ. ಹಳ್ಳಿಗಳಲ್ಲಿನ ಪ್ರಭಾವಿ ಜನರನ್ನು ತಮ್ಮ ಸಹ ನಾಗರಿಕರನ್ನು ಗೌರವದಿಂದ ನಡೆಸಿಕೊಳ್ಳಬೇಕು ಮತ್ತು ಅವರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಮನವೊಲಿಸುವಲ್ಲಿಯೂ ಈ ಅಭಿಯಾನ ಜಿಲ್ಲೆಯ ಕೆಲವೆಡೆ ಯಶಸ್ವಿಯಾಗಿದೆ.

ಬುಂಡಿ ಜಿಲ್ಲೆಯ ಚಾಡಿ ಗ್ರಾಮದಲ್ಲಿ 27 ವರ್ಷದ ಶ್ರೀರಾಮ್ ಮೇಘವಾಲ್ ಅವರು ಮೇರ್ (ಕುದುರೆ) ಮೇಲೆ ಸವಾರಿ ಸೇರಿದಂತೆ ಎಲ್ಲಾ ವಿಧಿವಿಧಾನಗಳನ್ನು ಅನುಸರಿಸಿ, ಮದುವೆಯಾದ ಮೊದಲ ದಲಿತರಾಗಿದ್ದಾರೆ. ಮೇಲ್ಜಾತಿಗೆ ಸೇರಿದವರ ಮನೆಗಳ ಹಿಂದೆ ಸಾಗಿದ ಅವರ ಮದುವೆ ಮೆರವಣಿಗೆಯು ಪೋಲೀಸ್ ಪಡೆಯ ರಕ್ಷಣೆಯಲ್ಲಿತ್ತು. ಮಕ್ಕಳು ಮತ್ತು ಮಹಿಳೆಯರು ಸಂಗೀತವನ್ನು ಹಾಡುತ್ತಾ, ನೃತ್ಯ ಮಾಡುತ್ತಾ ಮೆರವಣಿಗೆಯನ್ನು ನಡೆಸಿದ್ದಾರೆ.

ನಂತರದಲ್ಲಿ, ಮನೋಜ್ ಬೈರ್ವಾ ಎಂಬುವವರು ನೀಮ್ ಕಾ ಖೇಡಾ ಗ್ರಾಮದ ಕಿರಿದಾದ ಹಾದಿಯಲ್ಲಿ ಮೇರ್ ಸವಾರಿ ಮಾಡಿ ತನ್ನ ಮದುವೆಯ ಮೆರವಣಿಗೆಯನ್ನು ನಡೆಸಿದ್ದಾರೆ. ಮೂರು ದಶಕಗಳ ಹಿಂದೆ ಆತನ ಚಿಕ್ಕಪ್ಪ ಅದೇ ಗ್ರಾಮದಲ್ಲಿ ತನ್ನ ಮದುವೆಯ ದಿನ ಕುದುರೆ (ಮೇರ್) ಸವಾರಿ ಮಾಡಲು ಮುಂದಾದಾಗ ಗ್ರಾಮದ ಮೇಲ್ಜಾತಿಯ ಜನರು ಅವರನ್ನು ಥಳಿಸಿದ್ದರು. ಇದೀಗ, ಆ ಹಳ್ಳಿಯ ದಲಿತರಲ್ಲಿ ಧೈರ್ಯ ಮತ್ತು ಮೇಲ್ಜಾತಿಯವರಲ್ಲಿ ಜಾಗೃತಿ ಬೆಳೆದಿದೆ. ಆ ಗ್ರಾಮದ ಗ್ರಾಮಸ್ಥರು ಜಾತಿ ಭೇದ ಮರೆತು ಮನೋಜ್‌ಗೆ ಹೂಮಾಲೆ ಹಾಕಿ ಸ್ವಾಗತಿಸಿದ್ದಾರೆ.

ಸ್ಥಳೀಯ ಆಡಳಿತದ ‘ಆಪರೇಷನ್ ಸಮಾನತಾ (ಸಮಾನತೆ)’ ಅಭಿಯಾನವು ದಲಿತರ ವಿರುದ್ಧ ತಾರತಮ್ಯದ ಇತಿಹಾಸವನ್ನು ಹೊಂದಿರುವ ಗ್ರಾಮಗಳನ್ನು ಗುರುತಿಸಿ, ಆ ಹಳ್ಳಿಗಳಲ್ಲಿ ಜಾಗೃತಿಯನ್ನು ಮೂಡಿಸಲು ಯೋಜಿಸಿತ್ತು. ಅದಕ್ಕಾಗಿ, ದಲಿತ ಮತ್ತು ಉನ್ನತ ಜಾತಿಗಳಿಗೆ ಸೇರಿದ ಜನರೊಂದಿಗೆ ಸಂವಹನ ನಡೆಸಲು ‘ಸಮನತಾ ಸಮಿತಿ’ಗಳನ್ನು ನೇಮಿಸಿತ್ತು. ಈ ಸಮಿತಿಗಳ ಸದಸ್ಯರಲ್ಲಿ ಸರಪಂಚ್, ಗ್ರಾಮಾಭಿವೃದ್ಧಿ ಅಧಿಕಾರಿ, ಸ್ಟೇಷನ್ ಹೌಸ್ ಆಫೀಸರ್ ಮತ್ತು ಪ್ರತಿ ಸಮುದಾಯದ ಇಬ್ಬರು ಹಿರಿಯರು ಇರುತ್ತಾರೆ ಎಂದು ಬುಂಡಿ ಪೊಲೀಸ್ ವರಿಷ್ಠಾಧಿಕಾರಿ ಜೈ ಯಾದವ್ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತ ವರನ ಕುದುರೆ ಸವಾರಿಗೆ ಅಡ್ಡಿಪಡಿಸಿದ್ದ 9 ಜನರಿಗೆ 5 ವರ್ಷ ಜೈಲು

“ಅಭಿಯಾನವು ನಾವು ಆರಂಭದಲ್ಲಿ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಸಮುದಾಯ ಬೆಂಬಲವನ್ನು ಪಡೆದುಕೊಂಡಿದೆ. ಸಾಮರಸ್ಯವನ್ನು ಸೃಷ್ಟಿಸುವ ಹಾದಿಯಲ್ಲಿ ಮೇಲ್ಜಾತಿಗೆ ಸೇರಿದ ಪ್ರಭಾವಿ ಗ್ರಾಮಸ್ಥರನ್ನು ಸದಸ್ಯರನ್ನಾಗಿ ಒಳಗೊಳ್ಳುವುದು ಅಭಿಯಾನದ ಯಶಸ್ವಿಗೆ ಮತ್ತೊಂದು ಮೆಟ್ಟಿಲಾಗಿದೆ” ಎಂದು ಯಾದವ್ ಹೇಳಿದ್ದಾರೆ.

ಸಮಿತಿಯ ಸದಸ್ಯರು ನಿಯಮಿತವಾಗಿ ದಲಿತ ಕುಟುಂಬಗಳನ್ನು ಭೇಟಿಯಾಗಿ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುತ್ತಾರೆ. ನಂತರ, ಮೇಲ್ಜಾತಿಗಳಿಗೆ ಸೇರಿದ ಜನರಿಗೆ ಕಾನೂನಿನ ನಿಬಂಧನೆಗಳನ್ನು ವಿವರಿಸುತ್ತಾರೆ ಮತ್ತು ಸಾಂಪ್ರದಾಯದ ಹೆಸರಿನಲ್ಲಿ ನಡೆಸು ಆಚರಣೆಗಳನ್ನು ನಿಲ್ಲಿಸುವಂತೆ ಮನವಿ ಮಾಡುತ್ತಾರೆ ಎಂದು ಜೈ ಯಾದವ್ ವಿವರಿಸಿದ್ದಾರೆ.

ದಲಿತ ಕುಟುಂಬಗಳ ಮದುವೆಯ ಸಂದರ್ಭದಲ್ಲಿ ಯಾರಾದರೂ ತೊಂದರೆ ಕೊಡಬಹುದು ಎಂದು ಕಂಡುಬಂದರೆ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳುತ್ತಾರೆ. ಆಪರೇಷನ್ ಸಮಾನತಾ ಆರಂಭವಾದಾಗಿನಿಂದ ಹತ್ತಕ್ಕೂ ಹೆಚ್ಚು ದಲಿತರ ವಿವಾಹ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆದಿವೆ ಎಂದೂ ಅವರು ಮಾಹಿತಿ ಮಾಡಿದ್ದಾರೆ.

ಆದರೂ ಇತ್ತ, ಜಲಾವರ್ ಜಿಲ್ಲೆಯ ಗುರಾಡಿಯಾ ಭರ್ತಾ ಗ್ರಾಮದಲ್ಲಿ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ 23 ವರ್ಷದ ದಲಿತ ಯುವಕನ ಮದುವೆಯ ಮೆರವಣಿಗೆ ನಡೆಸುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

ಮೇಲ್ಜಾತಿಗಳಲ್ಲಿರುವ ಊಳಿಗಮಾನ್ಯ ಮನೋಭಾವವನ್ನು ಬದಲಾಯಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವವರೆಗೂ ದಲಿತರ ಮೇಲಿನ ದಾಳಿಗಳು ನಡೆಯುತ್ತಲೇ ಇರುತ್ತವೆ. ಜಲವಾರ್ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳ ಒಕ್ಕೂಟವು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಮುಂದೆ ಅರ್ಜಿ ಸಲ್ಲಿಸಿದೆ ಎಂದು ರಾಜಸ್ಥಾನದ ಸೆಂಟರ್ ಆಫ್ ದಲಿತ್ ರೈಟ್ಸ್ (ದಲಿತ ಹಕ್ಕುಗಳ ಕೇಂದ್ರ)ದ ಸಂಚಾಲಕ ಸತೀಶ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ರಾಜಸ್ಥಾನ: ಪೊಲೀಸ್ ರಕ್ಷಣೆಯಲ್ಲಿ ದಲಿತ ಮಧುಮಗನ ಕುದುರೆ ಸವಾರಿ – ಮೊಳಗಿದ ಜೈಭೀಮ್ ಘೋಷಣೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....