Homeಚಳವಳಿರಾಜಸ್ಥಾನದಲ್ಲಿ ಜಾತಿ ದೌರ್ಜನ್ಯದ ವಿರುದ್ದ ’ಆಪರೇಷನ್ ಸಮಾನತಾ’: ದಲಿತರ ಮದುವೆಯಲ್ಲಿ ಕುದುರೆ ಸವಾರಿಗೆ ಆಡಳಿತದ ಸಾಥ್!

ರಾಜಸ್ಥಾನದಲ್ಲಿ ಜಾತಿ ದೌರ್ಜನ್ಯದ ವಿರುದ್ದ ’ಆಪರೇಷನ್ ಸಮಾನತಾ’: ದಲಿತರ ಮದುವೆಯಲ್ಲಿ ಕುದುರೆ ಸವಾರಿಗೆ ಆಡಳಿತದ ಸಾಥ್!

ಆಪರೇಷನ್ ಸಮಂತ ಆರಂಭವಾದಾಗಿನಿಂದ ಹತ್ತಕ್ಕೂ ಹೆಚ್ಚು ದಲಿತರ ವಿವಾಹಗಳು ಶಾಂತಿಯುತವಾಗಿ ನಡೆದಿವೆ- ಪೊಲೀಸ್ ವರಿಷ್ಠಾಧಿಕಾರಿ

- Advertisement -
- Advertisement -

ಜಾತಿ ದೌರ್ಜನ್ಯ, ಜಾತಿಯ ಅಡೆತಡೆಗಳನ್ನು ಮುರಿದು, ರಾಜಸ್ಥಾನದ ದಲಿತ ಯುವಕರೊಬ್ಬರು ತನ್ನ ಮದುವೆಯ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ್ದಾರೆ. ದಲಿತರು ಕುದುರೆ ಸವಾರಿ ಮಾಡಬಾರದು ಎಂದು ಮೇಲ್ಜಾತಿಯವರ ನಿರ್ಬಂಧವನ್ನು ಧಿಕ್ಕರಿಸಿರುವ ಅವರು ಕುದುರೆ ಸವಾರಿ ಮಾಡುವುದೂ ನಮ್ಮ ಹಕ್ಕು ಎಂದಿದ್ದಾರೆ. ಅವರ ಈ ಪ್ರಯತ್ನಕ್ಕೆ ಆಡಳಿತವು ಬೆಂಬಲ ನೀಡಿದೆ.

ದಲಿತರು ತಮ್ಮ ಮದುವೆಯಲ್ಲಿ ಕುದುರೆ ಮೇಲೆ ಸವಾರಿ ಮಾಡದಂತೆ ಮೇಲ್ಜಾತಿಯವರು ತಡೆಯುವುದು. ತಡೆದು ಹಲ್ಲೆ ನಡೆಸಿರುವ ಘಟನೆಗಳು ಸಾಕಷ್ಟು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಜಾತಿ ತಾರತಮ್ಯವನ್ನು ಮೀರಿ, ಅಂಚಿಗೆ ತಳ್ಳಲ್ಪಟ್ಟ ಜನರಿಗೆ ಅವರ ಹಕ್ಕುಗಳನ್ನು ಮರಳಿ ತರಲು ಬುಂದಿ ಜಿಲ್ಲೆಯಲ್ಲಿ ಪೋಲೀಸ್ ಮತ್ತು ಸ್ಥಳೀಯ ಆಡಳಿತವು ಪ್ರಾರಂಭಿಸಿದ ‘ಆಪರೇಷನ್ ಸಮಾನತಾ (ಸಮಾನತೆ)’ ಅಭಿಯಾನವು ಈ ವಿವಾದ ಮೂಲಕ ಒಂದು ಹಂತಕ್ಕೆ ಯಶಸ್ವಿಯಾಗಿದೆ. ಆ ಅಭಿಯಾನವು ದಲಿತ ಯುವಜನರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ದಲಿತರು ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಪಡೆದುಕೊಳ್ಳಲು. ಆ ಮೂಲಕ ತಮ್ಮ ಮದುವೆಯನ್ನು ಘನತೆಯಿಂದ ಮಾಡಿಕೊಳ್ಳಲು ಈ ಅಭಿಯಾನವು ಅನುವು ಮಾಡಿಕೊಟ್ಟಿದೆ. ಹಳ್ಳಿಗಳಲ್ಲಿನ ಪ್ರಭಾವಿ ಜನರನ್ನು ತಮ್ಮ ಸಹ ನಾಗರಿಕರನ್ನು ಗೌರವದಿಂದ ನಡೆಸಿಕೊಳ್ಳಬೇಕು ಮತ್ತು ಅವರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಮನವೊಲಿಸುವಲ್ಲಿಯೂ ಈ ಅಭಿಯಾನ ಜಿಲ್ಲೆಯ ಕೆಲವೆಡೆ ಯಶಸ್ವಿಯಾಗಿದೆ.

ಬುಂಡಿ ಜಿಲ್ಲೆಯ ಚಾಡಿ ಗ್ರಾಮದಲ್ಲಿ 27 ವರ್ಷದ ಶ್ರೀರಾಮ್ ಮೇಘವಾಲ್ ಅವರು ಮೇರ್ (ಕುದುರೆ) ಮೇಲೆ ಸವಾರಿ ಸೇರಿದಂತೆ ಎಲ್ಲಾ ವಿಧಿವಿಧಾನಗಳನ್ನು ಅನುಸರಿಸಿ, ಮದುವೆಯಾದ ಮೊದಲ ದಲಿತರಾಗಿದ್ದಾರೆ. ಮೇಲ್ಜಾತಿಗೆ ಸೇರಿದವರ ಮನೆಗಳ ಹಿಂದೆ ಸಾಗಿದ ಅವರ ಮದುವೆ ಮೆರವಣಿಗೆಯು ಪೋಲೀಸ್ ಪಡೆಯ ರಕ್ಷಣೆಯಲ್ಲಿತ್ತು. ಮಕ್ಕಳು ಮತ್ತು ಮಹಿಳೆಯರು ಸಂಗೀತವನ್ನು ಹಾಡುತ್ತಾ, ನೃತ್ಯ ಮಾಡುತ್ತಾ ಮೆರವಣಿಗೆಯನ್ನು ನಡೆಸಿದ್ದಾರೆ.

ನಂತರದಲ್ಲಿ, ಮನೋಜ್ ಬೈರ್ವಾ ಎಂಬುವವರು ನೀಮ್ ಕಾ ಖೇಡಾ ಗ್ರಾಮದ ಕಿರಿದಾದ ಹಾದಿಯಲ್ಲಿ ಮೇರ್ ಸವಾರಿ ಮಾಡಿ ತನ್ನ ಮದುವೆಯ ಮೆರವಣಿಗೆಯನ್ನು ನಡೆಸಿದ್ದಾರೆ. ಮೂರು ದಶಕಗಳ ಹಿಂದೆ ಆತನ ಚಿಕ್ಕಪ್ಪ ಅದೇ ಗ್ರಾಮದಲ್ಲಿ ತನ್ನ ಮದುವೆಯ ದಿನ ಕುದುರೆ (ಮೇರ್) ಸವಾರಿ ಮಾಡಲು ಮುಂದಾದಾಗ ಗ್ರಾಮದ ಮೇಲ್ಜಾತಿಯ ಜನರು ಅವರನ್ನು ಥಳಿಸಿದ್ದರು. ಇದೀಗ, ಆ ಹಳ್ಳಿಯ ದಲಿತರಲ್ಲಿ ಧೈರ್ಯ ಮತ್ತು ಮೇಲ್ಜಾತಿಯವರಲ್ಲಿ ಜಾಗೃತಿ ಬೆಳೆದಿದೆ. ಆ ಗ್ರಾಮದ ಗ್ರಾಮಸ್ಥರು ಜಾತಿ ಭೇದ ಮರೆತು ಮನೋಜ್‌ಗೆ ಹೂಮಾಲೆ ಹಾಕಿ ಸ್ವಾಗತಿಸಿದ್ದಾರೆ.

ಸ್ಥಳೀಯ ಆಡಳಿತದ ‘ಆಪರೇಷನ್ ಸಮಾನತಾ (ಸಮಾನತೆ)’ ಅಭಿಯಾನವು ದಲಿತರ ವಿರುದ್ಧ ತಾರತಮ್ಯದ ಇತಿಹಾಸವನ್ನು ಹೊಂದಿರುವ ಗ್ರಾಮಗಳನ್ನು ಗುರುತಿಸಿ, ಆ ಹಳ್ಳಿಗಳಲ್ಲಿ ಜಾಗೃತಿಯನ್ನು ಮೂಡಿಸಲು ಯೋಜಿಸಿತ್ತು. ಅದಕ್ಕಾಗಿ, ದಲಿತ ಮತ್ತು ಉನ್ನತ ಜಾತಿಗಳಿಗೆ ಸೇರಿದ ಜನರೊಂದಿಗೆ ಸಂವಹನ ನಡೆಸಲು ‘ಸಮನತಾ ಸಮಿತಿ’ಗಳನ್ನು ನೇಮಿಸಿತ್ತು. ಈ ಸಮಿತಿಗಳ ಸದಸ್ಯರಲ್ಲಿ ಸರಪಂಚ್, ಗ್ರಾಮಾಭಿವೃದ್ಧಿ ಅಧಿಕಾರಿ, ಸ್ಟೇಷನ್ ಹೌಸ್ ಆಫೀಸರ್ ಮತ್ತು ಪ್ರತಿ ಸಮುದಾಯದ ಇಬ್ಬರು ಹಿರಿಯರು ಇರುತ್ತಾರೆ ಎಂದು ಬುಂಡಿ ಪೊಲೀಸ್ ವರಿಷ್ಠಾಧಿಕಾರಿ ಜೈ ಯಾದವ್ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತ ವರನ ಕುದುರೆ ಸವಾರಿಗೆ ಅಡ್ಡಿಪಡಿಸಿದ್ದ 9 ಜನರಿಗೆ 5 ವರ್ಷ ಜೈಲು

“ಅಭಿಯಾನವು ನಾವು ಆರಂಭದಲ್ಲಿ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಸಮುದಾಯ ಬೆಂಬಲವನ್ನು ಪಡೆದುಕೊಂಡಿದೆ. ಸಾಮರಸ್ಯವನ್ನು ಸೃಷ್ಟಿಸುವ ಹಾದಿಯಲ್ಲಿ ಮೇಲ್ಜಾತಿಗೆ ಸೇರಿದ ಪ್ರಭಾವಿ ಗ್ರಾಮಸ್ಥರನ್ನು ಸದಸ್ಯರನ್ನಾಗಿ ಒಳಗೊಳ್ಳುವುದು ಅಭಿಯಾನದ ಯಶಸ್ವಿಗೆ ಮತ್ತೊಂದು ಮೆಟ್ಟಿಲಾಗಿದೆ” ಎಂದು ಯಾದವ್ ಹೇಳಿದ್ದಾರೆ.

ಸಮಿತಿಯ ಸದಸ್ಯರು ನಿಯಮಿತವಾಗಿ ದಲಿತ ಕುಟುಂಬಗಳನ್ನು ಭೇಟಿಯಾಗಿ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುತ್ತಾರೆ. ನಂತರ, ಮೇಲ್ಜಾತಿಗಳಿಗೆ ಸೇರಿದ ಜನರಿಗೆ ಕಾನೂನಿನ ನಿಬಂಧನೆಗಳನ್ನು ವಿವರಿಸುತ್ತಾರೆ ಮತ್ತು ಸಾಂಪ್ರದಾಯದ ಹೆಸರಿನಲ್ಲಿ ನಡೆಸು ಆಚರಣೆಗಳನ್ನು ನಿಲ್ಲಿಸುವಂತೆ ಮನವಿ ಮಾಡುತ್ತಾರೆ ಎಂದು ಜೈ ಯಾದವ್ ವಿವರಿಸಿದ್ದಾರೆ.

ದಲಿತ ಕುಟುಂಬಗಳ ಮದುವೆಯ ಸಂದರ್ಭದಲ್ಲಿ ಯಾರಾದರೂ ತೊಂದರೆ ಕೊಡಬಹುದು ಎಂದು ಕಂಡುಬಂದರೆ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳುತ್ತಾರೆ. ಆಪರೇಷನ್ ಸಮಾನತಾ ಆರಂಭವಾದಾಗಿನಿಂದ ಹತ್ತಕ್ಕೂ ಹೆಚ್ಚು ದಲಿತರ ವಿವಾಹ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆದಿವೆ ಎಂದೂ ಅವರು ಮಾಹಿತಿ ಮಾಡಿದ್ದಾರೆ.

ಆದರೂ ಇತ್ತ, ಜಲಾವರ್ ಜಿಲ್ಲೆಯ ಗುರಾಡಿಯಾ ಭರ್ತಾ ಗ್ರಾಮದಲ್ಲಿ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ 23 ವರ್ಷದ ದಲಿತ ಯುವಕನ ಮದುವೆಯ ಮೆರವಣಿಗೆ ನಡೆಸುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

ಮೇಲ್ಜಾತಿಗಳಲ್ಲಿರುವ ಊಳಿಗಮಾನ್ಯ ಮನೋಭಾವವನ್ನು ಬದಲಾಯಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವವರೆಗೂ ದಲಿತರ ಮೇಲಿನ ದಾಳಿಗಳು ನಡೆಯುತ್ತಲೇ ಇರುತ್ತವೆ. ಜಲವಾರ್ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳ ಒಕ್ಕೂಟವು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಮುಂದೆ ಅರ್ಜಿ ಸಲ್ಲಿಸಿದೆ ಎಂದು ರಾಜಸ್ಥಾನದ ಸೆಂಟರ್ ಆಫ್ ದಲಿತ್ ರೈಟ್ಸ್ (ದಲಿತ ಹಕ್ಕುಗಳ ಕೇಂದ್ರ)ದ ಸಂಚಾಲಕ ಸತೀಶ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ರಾಜಸ್ಥಾನ: ಪೊಲೀಸ್ ರಕ್ಷಣೆಯಲ್ಲಿ ದಲಿತ ಮಧುಮಗನ ಕುದುರೆ ಸವಾರಿ – ಮೊಳಗಿದ ಜೈಭೀಮ್ ಘೋಷಣೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...