Homeಚಳವಳಿರಾಜಸ್ಥಾನದಲ್ಲಿ ಜಾತಿ ದೌರ್ಜನ್ಯದ ವಿರುದ್ದ ’ಆಪರೇಷನ್ ಸಮಾನತಾ’: ದಲಿತರ ಮದುವೆಯಲ್ಲಿ ಕುದುರೆ ಸವಾರಿಗೆ ಆಡಳಿತದ ಸಾಥ್!

ರಾಜಸ್ಥಾನದಲ್ಲಿ ಜಾತಿ ದೌರ್ಜನ್ಯದ ವಿರುದ್ದ ’ಆಪರೇಷನ್ ಸಮಾನತಾ’: ದಲಿತರ ಮದುವೆಯಲ್ಲಿ ಕುದುರೆ ಸವಾರಿಗೆ ಆಡಳಿತದ ಸಾಥ್!

ಆಪರೇಷನ್ ಸಮಂತ ಆರಂಭವಾದಾಗಿನಿಂದ ಹತ್ತಕ್ಕೂ ಹೆಚ್ಚು ದಲಿತರ ವಿವಾಹಗಳು ಶಾಂತಿಯುತವಾಗಿ ನಡೆದಿವೆ- ಪೊಲೀಸ್ ವರಿಷ್ಠಾಧಿಕಾರಿ

- Advertisement -
- Advertisement -

ಜಾತಿ ದೌರ್ಜನ್ಯ, ಜಾತಿಯ ಅಡೆತಡೆಗಳನ್ನು ಮುರಿದು, ರಾಜಸ್ಥಾನದ ದಲಿತ ಯುವಕರೊಬ್ಬರು ತನ್ನ ಮದುವೆಯ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ್ದಾರೆ. ದಲಿತರು ಕುದುರೆ ಸವಾರಿ ಮಾಡಬಾರದು ಎಂದು ಮೇಲ್ಜಾತಿಯವರ ನಿರ್ಬಂಧವನ್ನು ಧಿಕ್ಕರಿಸಿರುವ ಅವರು ಕುದುರೆ ಸವಾರಿ ಮಾಡುವುದೂ ನಮ್ಮ ಹಕ್ಕು ಎಂದಿದ್ದಾರೆ. ಅವರ ಈ ಪ್ರಯತ್ನಕ್ಕೆ ಆಡಳಿತವು ಬೆಂಬಲ ನೀಡಿದೆ.

ದಲಿತರು ತಮ್ಮ ಮದುವೆಯಲ್ಲಿ ಕುದುರೆ ಮೇಲೆ ಸವಾರಿ ಮಾಡದಂತೆ ಮೇಲ್ಜಾತಿಯವರು ತಡೆಯುವುದು. ತಡೆದು ಹಲ್ಲೆ ನಡೆಸಿರುವ ಘಟನೆಗಳು ಸಾಕಷ್ಟು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಜಾತಿ ತಾರತಮ್ಯವನ್ನು ಮೀರಿ, ಅಂಚಿಗೆ ತಳ್ಳಲ್ಪಟ್ಟ ಜನರಿಗೆ ಅವರ ಹಕ್ಕುಗಳನ್ನು ಮರಳಿ ತರಲು ಬುಂದಿ ಜಿಲ್ಲೆಯಲ್ಲಿ ಪೋಲೀಸ್ ಮತ್ತು ಸ್ಥಳೀಯ ಆಡಳಿತವು ಪ್ರಾರಂಭಿಸಿದ ‘ಆಪರೇಷನ್ ಸಮಾನತಾ (ಸಮಾನತೆ)’ ಅಭಿಯಾನವು ಈ ವಿವಾದ ಮೂಲಕ ಒಂದು ಹಂತಕ್ಕೆ ಯಶಸ್ವಿಯಾಗಿದೆ. ಆ ಅಭಿಯಾನವು ದಲಿತ ಯುವಜನರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ದಲಿತರು ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಪಡೆದುಕೊಳ್ಳಲು. ಆ ಮೂಲಕ ತಮ್ಮ ಮದುವೆಯನ್ನು ಘನತೆಯಿಂದ ಮಾಡಿಕೊಳ್ಳಲು ಈ ಅಭಿಯಾನವು ಅನುವು ಮಾಡಿಕೊಟ್ಟಿದೆ. ಹಳ್ಳಿಗಳಲ್ಲಿನ ಪ್ರಭಾವಿ ಜನರನ್ನು ತಮ್ಮ ಸಹ ನಾಗರಿಕರನ್ನು ಗೌರವದಿಂದ ನಡೆಸಿಕೊಳ್ಳಬೇಕು ಮತ್ತು ಅವರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಮನವೊಲಿಸುವಲ್ಲಿಯೂ ಈ ಅಭಿಯಾನ ಜಿಲ್ಲೆಯ ಕೆಲವೆಡೆ ಯಶಸ್ವಿಯಾಗಿದೆ.

ಬುಂಡಿ ಜಿಲ್ಲೆಯ ಚಾಡಿ ಗ್ರಾಮದಲ್ಲಿ 27 ವರ್ಷದ ಶ್ರೀರಾಮ್ ಮೇಘವಾಲ್ ಅವರು ಮೇರ್ (ಕುದುರೆ) ಮೇಲೆ ಸವಾರಿ ಸೇರಿದಂತೆ ಎಲ್ಲಾ ವಿಧಿವಿಧಾನಗಳನ್ನು ಅನುಸರಿಸಿ, ಮದುವೆಯಾದ ಮೊದಲ ದಲಿತರಾಗಿದ್ದಾರೆ. ಮೇಲ್ಜಾತಿಗೆ ಸೇರಿದವರ ಮನೆಗಳ ಹಿಂದೆ ಸಾಗಿದ ಅವರ ಮದುವೆ ಮೆರವಣಿಗೆಯು ಪೋಲೀಸ್ ಪಡೆಯ ರಕ್ಷಣೆಯಲ್ಲಿತ್ತು. ಮಕ್ಕಳು ಮತ್ತು ಮಹಿಳೆಯರು ಸಂಗೀತವನ್ನು ಹಾಡುತ್ತಾ, ನೃತ್ಯ ಮಾಡುತ್ತಾ ಮೆರವಣಿಗೆಯನ್ನು ನಡೆಸಿದ್ದಾರೆ.

ನಂತರದಲ್ಲಿ, ಮನೋಜ್ ಬೈರ್ವಾ ಎಂಬುವವರು ನೀಮ್ ಕಾ ಖೇಡಾ ಗ್ರಾಮದ ಕಿರಿದಾದ ಹಾದಿಯಲ್ಲಿ ಮೇರ್ ಸವಾರಿ ಮಾಡಿ ತನ್ನ ಮದುವೆಯ ಮೆರವಣಿಗೆಯನ್ನು ನಡೆಸಿದ್ದಾರೆ. ಮೂರು ದಶಕಗಳ ಹಿಂದೆ ಆತನ ಚಿಕ್ಕಪ್ಪ ಅದೇ ಗ್ರಾಮದಲ್ಲಿ ತನ್ನ ಮದುವೆಯ ದಿನ ಕುದುರೆ (ಮೇರ್) ಸವಾರಿ ಮಾಡಲು ಮುಂದಾದಾಗ ಗ್ರಾಮದ ಮೇಲ್ಜಾತಿಯ ಜನರು ಅವರನ್ನು ಥಳಿಸಿದ್ದರು. ಇದೀಗ, ಆ ಹಳ್ಳಿಯ ದಲಿತರಲ್ಲಿ ಧೈರ್ಯ ಮತ್ತು ಮೇಲ್ಜಾತಿಯವರಲ್ಲಿ ಜಾಗೃತಿ ಬೆಳೆದಿದೆ. ಆ ಗ್ರಾಮದ ಗ್ರಾಮಸ್ಥರು ಜಾತಿ ಭೇದ ಮರೆತು ಮನೋಜ್‌ಗೆ ಹೂಮಾಲೆ ಹಾಕಿ ಸ್ವಾಗತಿಸಿದ್ದಾರೆ.

ಸ್ಥಳೀಯ ಆಡಳಿತದ ‘ಆಪರೇಷನ್ ಸಮಾನತಾ (ಸಮಾನತೆ)’ ಅಭಿಯಾನವು ದಲಿತರ ವಿರುದ್ಧ ತಾರತಮ್ಯದ ಇತಿಹಾಸವನ್ನು ಹೊಂದಿರುವ ಗ್ರಾಮಗಳನ್ನು ಗುರುತಿಸಿ, ಆ ಹಳ್ಳಿಗಳಲ್ಲಿ ಜಾಗೃತಿಯನ್ನು ಮೂಡಿಸಲು ಯೋಜಿಸಿತ್ತು. ಅದಕ್ಕಾಗಿ, ದಲಿತ ಮತ್ತು ಉನ್ನತ ಜಾತಿಗಳಿಗೆ ಸೇರಿದ ಜನರೊಂದಿಗೆ ಸಂವಹನ ನಡೆಸಲು ‘ಸಮನತಾ ಸಮಿತಿ’ಗಳನ್ನು ನೇಮಿಸಿತ್ತು. ಈ ಸಮಿತಿಗಳ ಸದಸ್ಯರಲ್ಲಿ ಸರಪಂಚ್, ಗ್ರಾಮಾಭಿವೃದ್ಧಿ ಅಧಿಕಾರಿ, ಸ್ಟೇಷನ್ ಹೌಸ್ ಆಫೀಸರ್ ಮತ್ತು ಪ್ರತಿ ಸಮುದಾಯದ ಇಬ್ಬರು ಹಿರಿಯರು ಇರುತ್ತಾರೆ ಎಂದು ಬುಂಡಿ ಪೊಲೀಸ್ ವರಿಷ್ಠಾಧಿಕಾರಿ ಜೈ ಯಾದವ್ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತ ವರನ ಕುದುರೆ ಸವಾರಿಗೆ ಅಡ್ಡಿಪಡಿಸಿದ್ದ 9 ಜನರಿಗೆ 5 ವರ್ಷ ಜೈಲು

“ಅಭಿಯಾನವು ನಾವು ಆರಂಭದಲ್ಲಿ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಸಮುದಾಯ ಬೆಂಬಲವನ್ನು ಪಡೆದುಕೊಂಡಿದೆ. ಸಾಮರಸ್ಯವನ್ನು ಸೃಷ್ಟಿಸುವ ಹಾದಿಯಲ್ಲಿ ಮೇಲ್ಜಾತಿಗೆ ಸೇರಿದ ಪ್ರಭಾವಿ ಗ್ರಾಮಸ್ಥರನ್ನು ಸದಸ್ಯರನ್ನಾಗಿ ಒಳಗೊಳ್ಳುವುದು ಅಭಿಯಾನದ ಯಶಸ್ವಿಗೆ ಮತ್ತೊಂದು ಮೆಟ್ಟಿಲಾಗಿದೆ” ಎಂದು ಯಾದವ್ ಹೇಳಿದ್ದಾರೆ.

ಸಮಿತಿಯ ಸದಸ್ಯರು ನಿಯಮಿತವಾಗಿ ದಲಿತ ಕುಟುಂಬಗಳನ್ನು ಭೇಟಿಯಾಗಿ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುತ್ತಾರೆ. ನಂತರ, ಮೇಲ್ಜಾತಿಗಳಿಗೆ ಸೇರಿದ ಜನರಿಗೆ ಕಾನೂನಿನ ನಿಬಂಧನೆಗಳನ್ನು ವಿವರಿಸುತ್ತಾರೆ ಮತ್ತು ಸಾಂಪ್ರದಾಯದ ಹೆಸರಿನಲ್ಲಿ ನಡೆಸು ಆಚರಣೆಗಳನ್ನು ನಿಲ್ಲಿಸುವಂತೆ ಮನವಿ ಮಾಡುತ್ತಾರೆ ಎಂದು ಜೈ ಯಾದವ್ ವಿವರಿಸಿದ್ದಾರೆ.

ದಲಿತ ಕುಟುಂಬಗಳ ಮದುವೆಯ ಸಂದರ್ಭದಲ್ಲಿ ಯಾರಾದರೂ ತೊಂದರೆ ಕೊಡಬಹುದು ಎಂದು ಕಂಡುಬಂದರೆ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳುತ್ತಾರೆ. ಆಪರೇಷನ್ ಸಮಾನತಾ ಆರಂಭವಾದಾಗಿನಿಂದ ಹತ್ತಕ್ಕೂ ಹೆಚ್ಚು ದಲಿತರ ವಿವಾಹ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆದಿವೆ ಎಂದೂ ಅವರು ಮಾಹಿತಿ ಮಾಡಿದ್ದಾರೆ.

ಆದರೂ ಇತ್ತ, ಜಲಾವರ್ ಜಿಲ್ಲೆಯ ಗುರಾಡಿಯಾ ಭರ್ತಾ ಗ್ರಾಮದಲ್ಲಿ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ 23 ವರ್ಷದ ದಲಿತ ಯುವಕನ ಮದುವೆಯ ಮೆರವಣಿಗೆ ನಡೆಸುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

ಮೇಲ್ಜಾತಿಗಳಲ್ಲಿರುವ ಊಳಿಗಮಾನ್ಯ ಮನೋಭಾವವನ್ನು ಬದಲಾಯಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವವರೆಗೂ ದಲಿತರ ಮೇಲಿನ ದಾಳಿಗಳು ನಡೆಯುತ್ತಲೇ ಇರುತ್ತವೆ. ಜಲವಾರ್ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳ ಒಕ್ಕೂಟವು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಮುಂದೆ ಅರ್ಜಿ ಸಲ್ಲಿಸಿದೆ ಎಂದು ರಾಜಸ್ಥಾನದ ಸೆಂಟರ್ ಆಫ್ ದಲಿತ್ ರೈಟ್ಸ್ (ದಲಿತ ಹಕ್ಕುಗಳ ಕೇಂದ್ರ)ದ ಸಂಚಾಲಕ ಸತೀಶ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ರಾಜಸ್ಥಾನ: ಪೊಲೀಸ್ ರಕ್ಷಣೆಯಲ್ಲಿ ದಲಿತ ಮಧುಮಗನ ಕುದುರೆ ಸವಾರಿ – ಮೊಳಗಿದ ಜೈಭೀಮ್ ಘೋಷಣೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....