Homeಚಳವಳಿರಾಜಸ್ಥಾನದಲ್ಲಿ ಜಾತಿ ದೌರ್ಜನ್ಯದ ವಿರುದ್ದ ’ಆಪರೇಷನ್ ಸಮಾನತಾ’: ದಲಿತರ ಮದುವೆಯಲ್ಲಿ ಕುದುರೆ ಸವಾರಿಗೆ ಆಡಳಿತದ ಸಾಥ್!

ರಾಜಸ್ಥಾನದಲ್ಲಿ ಜಾತಿ ದೌರ್ಜನ್ಯದ ವಿರುದ್ದ ’ಆಪರೇಷನ್ ಸಮಾನತಾ’: ದಲಿತರ ಮದುವೆಯಲ್ಲಿ ಕುದುರೆ ಸವಾರಿಗೆ ಆಡಳಿತದ ಸಾಥ್!

ಆಪರೇಷನ್ ಸಮಂತ ಆರಂಭವಾದಾಗಿನಿಂದ ಹತ್ತಕ್ಕೂ ಹೆಚ್ಚು ದಲಿತರ ವಿವಾಹಗಳು ಶಾಂತಿಯುತವಾಗಿ ನಡೆದಿವೆ- ಪೊಲೀಸ್ ವರಿಷ್ಠಾಧಿಕಾರಿ

- Advertisement -
- Advertisement -

ಜಾತಿ ದೌರ್ಜನ್ಯ, ಜಾತಿಯ ಅಡೆತಡೆಗಳನ್ನು ಮುರಿದು, ರಾಜಸ್ಥಾನದ ದಲಿತ ಯುವಕರೊಬ್ಬರು ತನ್ನ ಮದುವೆಯ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ್ದಾರೆ. ದಲಿತರು ಕುದುರೆ ಸವಾರಿ ಮಾಡಬಾರದು ಎಂದು ಮೇಲ್ಜಾತಿಯವರ ನಿರ್ಬಂಧವನ್ನು ಧಿಕ್ಕರಿಸಿರುವ ಅವರು ಕುದುರೆ ಸವಾರಿ ಮಾಡುವುದೂ ನಮ್ಮ ಹಕ್ಕು ಎಂದಿದ್ದಾರೆ. ಅವರ ಈ ಪ್ರಯತ್ನಕ್ಕೆ ಆಡಳಿತವು ಬೆಂಬಲ ನೀಡಿದೆ.

ದಲಿತರು ತಮ್ಮ ಮದುವೆಯಲ್ಲಿ ಕುದುರೆ ಮೇಲೆ ಸವಾರಿ ಮಾಡದಂತೆ ಮೇಲ್ಜಾತಿಯವರು ತಡೆಯುವುದು. ತಡೆದು ಹಲ್ಲೆ ನಡೆಸಿರುವ ಘಟನೆಗಳು ಸಾಕಷ್ಟು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಜಾತಿ ತಾರತಮ್ಯವನ್ನು ಮೀರಿ, ಅಂಚಿಗೆ ತಳ್ಳಲ್ಪಟ್ಟ ಜನರಿಗೆ ಅವರ ಹಕ್ಕುಗಳನ್ನು ಮರಳಿ ತರಲು ಬುಂದಿ ಜಿಲ್ಲೆಯಲ್ಲಿ ಪೋಲೀಸ್ ಮತ್ತು ಸ್ಥಳೀಯ ಆಡಳಿತವು ಪ್ರಾರಂಭಿಸಿದ ‘ಆಪರೇಷನ್ ಸಮಾನತಾ (ಸಮಾನತೆ)’ ಅಭಿಯಾನವು ಈ ವಿವಾದ ಮೂಲಕ ಒಂದು ಹಂತಕ್ಕೆ ಯಶಸ್ವಿಯಾಗಿದೆ. ಆ ಅಭಿಯಾನವು ದಲಿತ ಯುವಜನರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ದಲಿತರು ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಪಡೆದುಕೊಳ್ಳಲು. ಆ ಮೂಲಕ ತಮ್ಮ ಮದುವೆಯನ್ನು ಘನತೆಯಿಂದ ಮಾಡಿಕೊಳ್ಳಲು ಈ ಅಭಿಯಾನವು ಅನುವು ಮಾಡಿಕೊಟ್ಟಿದೆ. ಹಳ್ಳಿಗಳಲ್ಲಿನ ಪ್ರಭಾವಿ ಜನರನ್ನು ತಮ್ಮ ಸಹ ನಾಗರಿಕರನ್ನು ಗೌರವದಿಂದ ನಡೆಸಿಕೊಳ್ಳಬೇಕು ಮತ್ತು ಅವರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಮನವೊಲಿಸುವಲ್ಲಿಯೂ ಈ ಅಭಿಯಾನ ಜಿಲ್ಲೆಯ ಕೆಲವೆಡೆ ಯಶಸ್ವಿಯಾಗಿದೆ.

ಬುಂಡಿ ಜಿಲ್ಲೆಯ ಚಾಡಿ ಗ್ರಾಮದಲ್ಲಿ 27 ವರ್ಷದ ಶ್ರೀರಾಮ್ ಮೇಘವಾಲ್ ಅವರು ಮೇರ್ (ಕುದುರೆ) ಮೇಲೆ ಸವಾರಿ ಸೇರಿದಂತೆ ಎಲ್ಲಾ ವಿಧಿವಿಧಾನಗಳನ್ನು ಅನುಸರಿಸಿ, ಮದುವೆಯಾದ ಮೊದಲ ದಲಿತರಾಗಿದ್ದಾರೆ. ಮೇಲ್ಜಾತಿಗೆ ಸೇರಿದವರ ಮನೆಗಳ ಹಿಂದೆ ಸಾಗಿದ ಅವರ ಮದುವೆ ಮೆರವಣಿಗೆಯು ಪೋಲೀಸ್ ಪಡೆಯ ರಕ್ಷಣೆಯಲ್ಲಿತ್ತು. ಮಕ್ಕಳು ಮತ್ತು ಮಹಿಳೆಯರು ಸಂಗೀತವನ್ನು ಹಾಡುತ್ತಾ, ನೃತ್ಯ ಮಾಡುತ್ತಾ ಮೆರವಣಿಗೆಯನ್ನು ನಡೆಸಿದ್ದಾರೆ.

ನಂತರದಲ್ಲಿ, ಮನೋಜ್ ಬೈರ್ವಾ ಎಂಬುವವರು ನೀಮ್ ಕಾ ಖೇಡಾ ಗ್ರಾಮದ ಕಿರಿದಾದ ಹಾದಿಯಲ್ಲಿ ಮೇರ್ ಸವಾರಿ ಮಾಡಿ ತನ್ನ ಮದುವೆಯ ಮೆರವಣಿಗೆಯನ್ನು ನಡೆಸಿದ್ದಾರೆ. ಮೂರು ದಶಕಗಳ ಹಿಂದೆ ಆತನ ಚಿಕ್ಕಪ್ಪ ಅದೇ ಗ್ರಾಮದಲ್ಲಿ ತನ್ನ ಮದುವೆಯ ದಿನ ಕುದುರೆ (ಮೇರ್) ಸವಾರಿ ಮಾಡಲು ಮುಂದಾದಾಗ ಗ್ರಾಮದ ಮೇಲ್ಜಾತಿಯ ಜನರು ಅವರನ್ನು ಥಳಿಸಿದ್ದರು. ಇದೀಗ, ಆ ಹಳ್ಳಿಯ ದಲಿತರಲ್ಲಿ ಧೈರ್ಯ ಮತ್ತು ಮೇಲ್ಜಾತಿಯವರಲ್ಲಿ ಜಾಗೃತಿ ಬೆಳೆದಿದೆ. ಆ ಗ್ರಾಮದ ಗ್ರಾಮಸ್ಥರು ಜಾತಿ ಭೇದ ಮರೆತು ಮನೋಜ್‌ಗೆ ಹೂಮಾಲೆ ಹಾಕಿ ಸ್ವಾಗತಿಸಿದ್ದಾರೆ.

ಸ್ಥಳೀಯ ಆಡಳಿತದ ‘ಆಪರೇಷನ್ ಸಮಾನತಾ (ಸಮಾನತೆ)’ ಅಭಿಯಾನವು ದಲಿತರ ವಿರುದ್ಧ ತಾರತಮ್ಯದ ಇತಿಹಾಸವನ್ನು ಹೊಂದಿರುವ ಗ್ರಾಮಗಳನ್ನು ಗುರುತಿಸಿ, ಆ ಹಳ್ಳಿಗಳಲ್ಲಿ ಜಾಗೃತಿಯನ್ನು ಮೂಡಿಸಲು ಯೋಜಿಸಿತ್ತು. ಅದಕ್ಕಾಗಿ, ದಲಿತ ಮತ್ತು ಉನ್ನತ ಜಾತಿಗಳಿಗೆ ಸೇರಿದ ಜನರೊಂದಿಗೆ ಸಂವಹನ ನಡೆಸಲು ‘ಸಮನತಾ ಸಮಿತಿ’ಗಳನ್ನು ನೇಮಿಸಿತ್ತು. ಈ ಸಮಿತಿಗಳ ಸದಸ್ಯರಲ್ಲಿ ಸರಪಂಚ್, ಗ್ರಾಮಾಭಿವೃದ್ಧಿ ಅಧಿಕಾರಿ, ಸ್ಟೇಷನ್ ಹೌಸ್ ಆಫೀಸರ್ ಮತ್ತು ಪ್ರತಿ ಸಮುದಾಯದ ಇಬ್ಬರು ಹಿರಿಯರು ಇರುತ್ತಾರೆ ಎಂದು ಬುಂಡಿ ಪೊಲೀಸ್ ವರಿಷ್ಠಾಧಿಕಾರಿ ಜೈ ಯಾದವ್ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತ ವರನ ಕುದುರೆ ಸವಾರಿಗೆ ಅಡ್ಡಿಪಡಿಸಿದ್ದ 9 ಜನರಿಗೆ 5 ವರ್ಷ ಜೈಲು

“ಅಭಿಯಾನವು ನಾವು ಆರಂಭದಲ್ಲಿ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಸಮುದಾಯ ಬೆಂಬಲವನ್ನು ಪಡೆದುಕೊಂಡಿದೆ. ಸಾಮರಸ್ಯವನ್ನು ಸೃಷ್ಟಿಸುವ ಹಾದಿಯಲ್ಲಿ ಮೇಲ್ಜಾತಿಗೆ ಸೇರಿದ ಪ್ರಭಾವಿ ಗ್ರಾಮಸ್ಥರನ್ನು ಸದಸ್ಯರನ್ನಾಗಿ ಒಳಗೊಳ್ಳುವುದು ಅಭಿಯಾನದ ಯಶಸ್ವಿಗೆ ಮತ್ತೊಂದು ಮೆಟ್ಟಿಲಾಗಿದೆ” ಎಂದು ಯಾದವ್ ಹೇಳಿದ್ದಾರೆ.

ಸಮಿತಿಯ ಸದಸ್ಯರು ನಿಯಮಿತವಾಗಿ ದಲಿತ ಕುಟುಂಬಗಳನ್ನು ಭೇಟಿಯಾಗಿ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುತ್ತಾರೆ. ನಂತರ, ಮೇಲ್ಜಾತಿಗಳಿಗೆ ಸೇರಿದ ಜನರಿಗೆ ಕಾನೂನಿನ ನಿಬಂಧನೆಗಳನ್ನು ವಿವರಿಸುತ್ತಾರೆ ಮತ್ತು ಸಾಂಪ್ರದಾಯದ ಹೆಸರಿನಲ್ಲಿ ನಡೆಸು ಆಚರಣೆಗಳನ್ನು ನಿಲ್ಲಿಸುವಂತೆ ಮನವಿ ಮಾಡುತ್ತಾರೆ ಎಂದು ಜೈ ಯಾದವ್ ವಿವರಿಸಿದ್ದಾರೆ.

ದಲಿತ ಕುಟುಂಬಗಳ ಮದುವೆಯ ಸಂದರ್ಭದಲ್ಲಿ ಯಾರಾದರೂ ತೊಂದರೆ ಕೊಡಬಹುದು ಎಂದು ಕಂಡುಬಂದರೆ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳುತ್ತಾರೆ. ಆಪರೇಷನ್ ಸಮಾನತಾ ಆರಂಭವಾದಾಗಿನಿಂದ ಹತ್ತಕ್ಕೂ ಹೆಚ್ಚು ದಲಿತರ ವಿವಾಹ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆದಿವೆ ಎಂದೂ ಅವರು ಮಾಹಿತಿ ಮಾಡಿದ್ದಾರೆ.

ಆದರೂ ಇತ್ತ, ಜಲಾವರ್ ಜಿಲ್ಲೆಯ ಗುರಾಡಿಯಾ ಭರ್ತಾ ಗ್ರಾಮದಲ್ಲಿ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ 23 ವರ್ಷದ ದಲಿತ ಯುವಕನ ಮದುವೆಯ ಮೆರವಣಿಗೆ ನಡೆಸುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

ಮೇಲ್ಜಾತಿಗಳಲ್ಲಿರುವ ಊಳಿಗಮಾನ್ಯ ಮನೋಭಾವವನ್ನು ಬದಲಾಯಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವವರೆಗೂ ದಲಿತರ ಮೇಲಿನ ದಾಳಿಗಳು ನಡೆಯುತ್ತಲೇ ಇರುತ್ತವೆ. ಜಲವಾರ್ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳ ಒಕ್ಕೂಟವು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಮುಂದೆ ಅರ್ಜಿ ಸಲ್ಲಿಸಿದೆ ಎಂದು ರಾಜಸ್ಥಾನದ ಸೆಂಟರ್ ಆಫ್ ದಲಿತ್ ರೈಟ್ಸ್ (ದಲಿತ ಹಕ್ಕುಗಳ ಕೇಂದ್ರ)ದ ಸಂಚಾಲಕ ಸತೀಶ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ರಾಜಸ್ಥಾನ: ಪೊಲೀಸ್ ರಕ್ಷಣೆಯಲ್ಲಿ ದಲಿತ ಮಧುಮಗನ ಕುದುರೆ ಸವಾರಿ – ಮೊಳಗಿದ ಜೈಭೀಮ್ ಘೋಷಣೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...