Homeಚಳವಳಿರಾಜಸ್ಥಾನದಲ್ಲಿ ಜಾತಿ ದೌರ್ಜನ್ಯದ ವಿರುದ್ದ ’ಆಪರೇಷನ್ ಸಮಾನತಾ’: ದಲಿತರ ಮದುವೆಯಲ್ಲಿ ಕುದುರೆ ಸವಾರಿಗೆ ಆಡಳಿತದ ಸಾಥ್!

ರಾಜಸ್ಥಾನದಲ್ಲಿ ಜಾತಿ ದೌರ್ಜನ್ಯದ ವಿರುದ್ದ ’ಆಪರೇಷನ್ ಸಮಾನತಾ’: ದಲಿತರ ಮದುವೆಯಲ್ಲಿ ಕುದುರೆ ಸವಾರಿಗೆ ಆಡಳಿತದ ಸಾಥ್!

ಆಪರೇಷನ್ ಸಮಂತ ಆರಂಭವಾದಾಗಿನಿಂದ ಹತ್ತಕ್ಕೂ ಹೆಚ್ಚು ದಲಿತರ ವಿವಾಹಗಳು ಶಾಂತಿಯುತವಾಗಿ ನಡೆದಿವೆ- ಪೊಲೀಸ್ ವರಿಷ್ಠಾಧಿಕಾರಿ

- Advertisement -
- Advertisement -

ಜಾತಿ ದೌರ್ಜನ್ಯ, ಜಾತಿಯ ಅಡೆತಡೆಗಳನ್ನು ಮುರಿದು, ರಾಜಸ್ಥಾನದ ದಲಿತ ಯುವಕರೊಬ್ಬರು ತನ್ನ ಮದುವೆಯ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ್ದಾರೆ. ದಲಿತರು ಕುದುರೆ ಸವಾರಿ ಮಾಡಬಾರದು ಎಂದು ಮೇಲ್ಜಾತಿಯವರ ನಿರ್ಬಂಧವನ್ನು ಧಿಕ್ಕರಿಸಿರುವ ಅವರು ಕುದುರೆ ಸವಾರಿ ಮಾಡುವುದೂ ನಮ್ಮ ಹಕ್ಕು ಎಂದಿದ್ದಾರೆ. ಅವರ ಈ ಪ್ರಯತ್ನಕ್ಕೆ ಆಡಳಿತವು ಬೆಂಬಲ ನೀಡಿದೆ.

ದಲಿತರು ತಮ್ಮ ಮದುವೆಯಲ್ಲಿ ಕುದುರೆ ಮೇಲೆ ಸವಾರಿ ಮಾಡದಂತೆ ಮೇಲ್ಜಾತಿಯವರು ತಡೆಯುವುದು. ತಡೆದು ಹಲ್ಲೆ ನಡೆಸಿರುವ ಘಟನೆಗಳು ಸಾಕಷ್ಟು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಜಾತಿ ತಾರತಮ್ಯವನ್ನು ಮೀರಿ, ಅಂಚಿಗೆ ತಳ್ಳಲ್ಪಟ್ಟ ಜನರಿಗೆ ಅವರ ಹಕ್ಕುಗಳನ್ನು ಮರಳಿ ತರಲು ಬುಂದಿ ಜಿಲ್ಲೆಯಲ್ಲಿ ಪೋಲೀಸ್ ಮತ್ತು ಸ್ಥಳೀಯ ಆಡಳಿತವು ಪ್ರಾರಂಭಿಸಿದ ‘ಆಪರೇಷನ್ ಸಮಾನತಾ (ಸಮಾನತೆ)’ ಅಭಿಯಾನವು ಈ ವಿವಾದ ಮೂಲಕ ಒಂದು ಹಂತಕ್ಕೆ ಯಶಸ್ವಿಯಾಗಿದೆ. ಆ ಅಭಿಯಾನವು ದಲಿತ ಯುವಜನರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ದಲಿತರು ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಪಡೆದುಕೊಳ್ಳಲು. ಆ ಮೂಲಕ ತಮ್ಮ ಮದುವೆಯನ್ನು ಘನತೆಯಿಂದ ಮಾಡಿಕೊಳ್ಳಲು ಈ ಅಭಿಯಾನವು ಅನುವು ಮಾಡಿಕೊಟ್ಟಿದೆ. ಹಳ್ಳಿಗಳಲ್ಲಿನ ಪ್ರಭಾವಿ ಜನರನ್ನು ತಮ್ಮ ಸಹ ನಾಗರಿಕರನ್ನು ಗೌರವದಿಂದ ನಡೆಸಿಕೊಳ್ಳಬೇಕು ಮತ್ತು ಅವರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಮನವೊಲಿಸುವಲ್ಲಿಯೂ ಈ ಅಭಿಯಾನ ಜಿಲ್ಲೆಯ ಕೆಲವೆಡೆ ಯಶಸ್ವಿಯಾಗಿದೆ.

ಬುಂಡಿ ಜಿಲ್ಲೆಯ ಚಾಡಿ ಗ್ರಾಮದಲ್ಲಿ 27 ವರ್ಷದ ಶ್ರೀರಾಮ್ ಮೇಘವಾಲ್ ಅವರು ಮೇರ್ (ಕುದುರೆ) ಮೇಲೆ ಸವಾರಿ ಸೇರಿದಂತೆ ಎಲ್ಲಾ ವಿಧಿವಿಧಾನಗಳನ್ನು ಅನುಸರಿಸಿ, ಮದುವೆಯಾದ ಮೊದಲ ದಲಿತರಾಗಿದ್ದಾರೆ. ಮೇಲ್ಜಾತಿಗೆ ಸೇರಿದವರ ಮನೆಗಳ ಹಿಂದೆ ಸಾಗಿದ ಅವರ ಮದುವೆ ಮೆರವಣಿಗೆಯು ಪೋಲೀಸ್ ಪಡೆಯ ರಕ್ಷಣೆಯಲ್ಲಿತ್ತು. ಮಕ್ಕಳು ಮತ್ತು ಮಹಿಳೆಯರು ಸಂಗೀತವನ್ನು ಹಾಡುತ್ತಾ, ನೃತ್ಯ ಮಾಡುತ್ತಾ ಮೆರವಣಿಗೆಯನ್ನು ನಡೆಸಿದ್ದಾರೆ.

ನಂತರದಲ್ಲಿ, ಮನೋಜ್ ಬೈರ್ವಾ ಎಂಬುವವರು ನೀಮ್ ಕಾ ಖೇಡಾ ಗ್ರಾಮದ ಕಿರಿದಾದ ಹಾದಿಯಲ್ಲಿ ಮೇರ್ ಸವಾರಿ ಮಾಡಿ ತನ್ನ ಮದುವೆಯ ಮೆರವಣಿಗೆಯನ್ನು ನಡೆಸಿದ್ದಾರೆ. ಮೂರು ದಶಕಗಳ ಹಿಂದೆ ಆತನ ಚಿಕ್ಕಪ್ಪ ಅದೇ ಗ್ರಾಮದಲ್ಲಿ ತನ್ನ ಮದುವೆಯ ದಿನ ಕುದುರೆ (ಮೇರ್) ಸವಾರಿ ಮಾಡಲು ಮುಂದಾದಾಗ ಗ್ರಾಮದ ಮೇಲ್ಜಾತಿಯ ಜನರು ಅವರನ್ನು ಥಳಿಸಿದ್ದರು. ಇದೀಗ, ಆ ಹಳ್ಳಿಯ ದಲಿತರಲ್ಲಿ ಧೈರ್ಯ ಮತ್ತು ಮೇಲ್ಜಾತಿಯವರಲ್ಲಿ ಜಾಗೃತಿ ಬೆಳೆದಿದೆ. ಆ ಗ್ರಾಮದ ಗ್ರಾಮಸ್ಥರು ಜಾತಿ ಭೇದ ಮರೆತು ಮನೋಜ್‌ಗೆ ಹೂಮಾಲೆ ಹಾಕಿ ಸ್ವಾಗತಿಸಿದ್ದಾರೆ.

ಸ್ಥಳೀಯ ಆಡಳಿತದ ‘ಆಪರೇಷನ್ ಸಮಾನತಾ (ಸಮಾನತೆ)’ ಅಭಿಯಾನವು ದಲಿತರ ವಿರುದ್ಧ ತಾರತಮ್ಯದ ಇತಿಹಾಸವನ್ನು ಹೊಂದಿರುವ ಗ್ರಾಮಗಳನ್ನು ಗುರುತಿಸಿ, ಆ ಹಳ್ಳಿಗಳಲ್ಲಿ ಜಾಗೃತಿಯನ್ನು ಮೂಡಿಸಲು ಯೋಜಿಸಿತ್ತು. ಅದಕ್ಕಾಗಿ, ದಲಿತ ಮತ್ತು ಉನ್ನತ ಜಾತಿಗಳಿಗೆ ಸೇರಿದ ಜನರೊಂದಿಗೆ ಸಂವಹನ ನಡೆಸಲು ‘ಸಮನತಾ ಸಮಿತಿ’ಗಳನ್ನು ನೇಮಿಸಿತ್ತು. ಈ ಸಮಿತಿಗಳ ಸದಸ್ಯರಲ್ಲಿ ಸರಪಂಚ್, ಗ್ರಾಮಾಭಿವೃದ್ಧಿ ಅಧಿಕಾರಿ, ಸ್ಟೇಷನ್ ಹೌಸ್ ಆಫೀಸರ್ ಮತ್ತು ಪ್ರತಿ ಸಮುದಾಯದ ಇಬ್ಬರು ಹಿರಿಯರು ಇರುತ್ತಾರೆ ಎಂದು ಬುಂಡಿ ಪೊಲೀಸ್ ವರಿಷ್ಠಾಧಿಕಾರಿ ಜೈ ಯಾದವ್ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತ ವರನ ಕುದುರೆ ಸವಾರಿಗೆ ಅಡ್ಡಿಪಡಿಸಿದ್ದ 9 ಜನರಿಗೆ 5 ವರ್ಷ ಜೈಲು

“ಅಭಿಯಾನವು ನಾವು ಆರಂಭದಲ್ಲಿ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಸಮುದಾಯ ಬೆಂಬಲವನ್ನು ಪಡೆದುಕೊಂಡಿದೆ. ಸಾಮರಸ್ಯವನ್ನು ಸೃಷ್ಟಿಸುವ ಹಾದಿಯಲ್ಲಿ ಮೇಲ್ಜಾತಿಗೆ ಸೇರಿದ ಪ್ರಭಾವಿ ಗ್ರಾಮಸ್ಥರನ್ನು ಸದಸ್ಯರನ್ನಾಗಿ ಒಳಗೊಳ್ಳುವುದು ಅಭಿಯಾನದ ಯಶಸ್ವಿಗೆ ಮತ್ತೊಂದು ಮೆಟ್ಟಿಲಾಗಿದೆ” ಎಂದು ಯಾದವ್ ಹೇಳಿದ್ದಾರೆ.

ಸಮಿತಿಯ ಸದಸ್ಯರು ನಿಯಮಿತವಾಗಿ ದಲಿತ ಕುಟುಂಬಗಳನ್ನು ಭೇಟಿಯಾಗಿ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುತ್ತಾರೆ. ನಂತರ, ಮೇಲ್ಜಾತಿಗಳಿಗೆ ಸೇರಿದ ಜನರಿಗೆ ಕಾನೂನಿನ ನಿಬಂಧನೆಗಳನ್ನು ವಿವರಿಸುತ್ತಾರೆ ಮತ್ತು ಸಾಂಪ್ರದಾಯದ ಹೆಸರಿನಲ್ಲಿ ನಡೆಸು ಆಚರಣೆಗಳನ್ನು ನಿಲ್ಲಿಸುವಂತೆ ಮನವಿ ಮಾಡುತ್ತಾರೆ ಎಂದು ಜೈ ಯಾದವ್ ವಿವರಿಸಿದ್ದಾರೆ.

ದಲಿತ ಕುಟುಂಬಗಳ ಮದುವೆಯ ಸಂದರ್ಭದಲ್ಲಿ ಯಾರಾದರೂ ತೊಂದರೆ ಕೊಡಬಹುದು ಎಂದು ಕಂಡುಬಂದರೆ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳುತ್ತಾರೆ. ಆಪರೇಷನ್ ಸಮಾನತಾ ಆರಂಭವಾದಾಗಿನಿಂದ ಹತ್ತಕ್ಕೂ ಹೆಚ್ಚು ದಲಿತರ ವಿವಾಹ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆದಿವೆ ಎಂದೂ ಅವರು ಮಾಹಿತಿ ಮಾಡಿದ್ದಾರೆ.

ಆದರೂ ಇತ್ತ, ಜಲಾವರ್ ಜಿಲ್ಲೆಯ ಗುರಾಡಿಯಾ ಭರ್ತಾ ಗ್ರಾಮದಲ್ಲಿ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ 23 ವರ್ಷದ ದಲಿತ ಯುವಕನ ಮದುವೆಯ ಮೆರವಣಿಗೆ ನಡೆಸುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

ಮೇಲ್ಜಾತಿಗಳಲ್ಲಿರುವ ಊಳಿಗಮಾನ್ಯ ಮನೋಭಾವವನ್ನು ಬದಲಾಯಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವವರೆಗೂ ದಲಿತರ ಮೇಲಿನ ದಾಳಿಗಳು ನಡೆಯುತ್ತಲೇ ಇರುತ್ತವೆ. ಜಲವಾರ್ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳ ಒಕ್ಕೂಟವು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಮುಂದೆ ಅರ್ಜಿ ಸಲ್ಲಿಸಿದೆ ಎಂದು ರಾಜಸ್ಥಾನದ ಸೆಂಟರ್ ಆಫ್ ದಲಿತ್ ರೈಟ್ಸ್ (ದಲಿತ ಹಕ್ಕುಗಳ ಕೇಂದ್ರ)ದ ಸಂಚಾಲಕ ಸತೀಶ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ರಾಜಸ್ಥಾನ: ಪೊಲೀಸ್ ರಕ್ಷಣೆಯಲ್ಲಿ ದಲಿತ ಮಧುಮಗನ ಕುದುರೆ ಸವಾರಿ – ಮೊಳಗಿದ ಜೈಭೀಮ್ ಘೋಷಣೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....