Homeಚಳವಳಿರಾಜಸ್ಥಾನದಲ್ಲಿ ಜಾತಿ ದೌರ್ಜನ್ಯದ ವಿರುದ್ದ ’ಆಪರೇಷನ್ ಸಮಾನತಾ’: ದಲಿತರ ಮದುವೆಯಲ್ಲಿ ಕುದುರೆ ಸವಾರಿಗೆ ಆಡಳಿತದ ಸಾಥ್!

ರಾಜಸ್ಥಾನದಲ್ಲಿ ಜಾತಿ ದೌರ್ಜನ್ಯದ ವಿರುದ್ದ ’ಆಪರೇಷನ್ ಸಮಾನತಾ’: ದಲಿತರ ಮದುವೆಯಲ್ಲಿ ಕುದುರೆ ಸವಾರಿಗೆ ಆಡಳಿತದ ಸಾಥ್!

ಆಪರೇಷನ್ ಸಮಂತ ಆರಂಭವಾದಾಗಿನಿಂದ ಹತ್ತಕ್ಕೂ ಹೆಚ್ಚು ದಲಿತರ ವಿವಾಹಗಳು ಶಾಂತಿಯುತವಾಗಿ ನಡೆದಿವೆ- ಪೊಲೀಸ್ ವರಿಷ್ಠಾಧಿಕಾರಿ

- Advertisement -
- Advertisement -

ಜಾತಿ ದೌರ್ಜನ್ಯ, ಜಾತಿಯ ಅಡೆತಡೆಗಳನ್ನು ಮುರಿದು, ರಾಜಸ್ಥಾನದ ದಲಿತ ಯುವಕರೊಬ್ಬರು ತನ್ನ ಮದುವೆಯ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ್ದಾರೆ. ದಲಿತರು ಕುದುರೆ ಸವಾರಿ ಮಾಡಬಾರದು ಎಂದು ಮೇಲ್ಜಾತಿಯವರ ನಿರ್ಬಂಧವನ್ನು ಧಿಕ್ಕರಿಸಿರುವ ಅವರು ಕುದುರೆ ಸವಾರಿ ಮಾಡುವುದೂ ನಮ್ಮ ಹಕ್ಕು ಎಂದಿದ್ದಾರೆ. ಅವರ ಈ ಪ್ರಯತ್ನಕ್ಕೆ ಆಡಳಿತವು ಬೆಂಬಲ ನೀಡಿದೆ.

ದಲಿತರು ತಮ್ಮ ಮದುವೆಯಲ್ಲಿ ಕುದುರೆ ಮೇಲೆ ಸವಾರಿ ಮಾಡದಂತೆ ಮೇಲ್ಜಾತಿಯವರು ತಡೆಯುವುದು. ತಡೆದು ಹಲ್ಲೆ ನಡೆಸಿರುವ ಘಟನೆಗಳು ಸಾಕಷ್ಟು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಜಾತಿ ತಾರತಮ್ಯವನ್ನು ಮೀರಿ, ಅಂಚಿಗೆ ತಳ್ಳಲ್ಪಟ್ಟ ಜನರಿಗೆ ಅವರ ಹಕ್ಕುಗಳನ್ನು ಮರಳಿ ತರಲು ಬುಂದಿ ಜಿಲ್ಲೆಯಲ್ಲಿ ಪೋಲೀಸ್ ಮತ್ತು ಸ್ಥಳೀಯ ಆಡಳಿತವು ಪ್ರಾರಂಭಿಸಿದ ‘ಆಪರೇಷನ್ ಸಮಾನತಾ (ಸಮಾನತೆ)’ ಅಭಿಯಾನವು ಈ ವಿವಾದ ಮೂಲಕ ಒಂದು ಹಂತಕ್ಕೆ ಯಶಸ್ವಿಯಾಗಿದೆ. ಆ ಅಭಿಯಾನವು ದಲಿತ ಯುವಜನರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ದಲಿತರು ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಪಡೆದುಕೊಳ್ಳಲು. ಆ ಮೂಲಕ ತಮ್ಮ ಮದುವೆಯನ್ನು ಘನತೆಯಿಂದ ಮಾಡಿಕೊಳ್ಳಲು ಈ ಅಭಿಯಾನವು ಅನುವು ಮಾಡಿಕೊಟ್ಟಿದೆ. ಹಳ್ಳಿಗಳಲ್ಲಿನ ಪ್ರಭಾವಿ ಜನರನ್ನು ತಮ್ಮ ಸಹ ನಾಗರಿಕರನ್ನು ಗೌರವದಿಂದ ನಡೆಸಿಕೊಳ್ಳಬೇಕು ಮತ್ತು ಅವರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಮನವೊಲಿಸುವಲ್ಲಿಯೂ ಈ ಅಭಿಯಾನ ಜಿಲ್ಲೆಯ ಕೆಲವೆಡೆ ಯಶಸ್ವಿಯಾಗಿದೆ.

ಬುಂಡಿ ಜಿಲ್ಲೆಯ ಚಾಡಿ ಗ್ರಾಮದಲ್ಲಿ 27 ವರ್ಷದ ಶ್ರೀರಾಮ್ ಮೇಘವಾಲ್ ಅವರು ಮೇರ್ (ಕುದುರೆ) ಮೇಲೆ ಸವಾರಿ ಸೇರಿದಂತೆ ಎಲ್ಲಾ ವಿಧಿವಿಧಾನಗಳನ್ನು ಅನುಸರಿಸಿ, ಮದುವೆಯಾದ ಮೊದಲ ದಲಿತರಾಗಿದ್ದಾರೆ. ಮೇಲ್ಜಾತಿಗೆ ಸೇರಿದವರ ಮನೆಗಳ ಹಿಂದೆ ಸಾಗಿದ ಅವರ ಮದುವೆ ಮೆರವಣಿಗೆಯು ಪೋಲೀಸ್ ಪಡೆಯ ರಕ್ಷಣೆಯಲ್ಲಿತ್ತು. ಮಕ್ಕಳು ಮತ್ತು ಮಹಿಳೆಯರು ಸಂಗೀತವನ್ನು ಹಾಡುತ್ತಾ, ನೃತ್ಯ ಮಾಡುತ್ತಾ ಮೆರವಣಿಗೆಯನ್ನು ನಡೆಸಿದ್ದಾರೆ.

ನಂತರದಲ್ಲಿ, ಮನೋಜ್ ಬೈರ್ವಾ ಎಂಬುವವರು ನೀಮ್ ಕಾ ಖೇಡಾ ಗ್ರಾಮದ ಕಿರಿದಾದ ಹಾದಿಯಲ್ಲಿ ಮೇರ್ ಸವಾರಿ ಮಾಡಿ ತನ್ನ ಮದುವೆಯ ಮೆರವಣಿಗೆಯನ್ನು ನಡೆಸಿದ್ದಾರೆ. ಮೂರು ದಶಕಗಳ ಹಿಂದೆ ಆತನ ಚಿಕ್ಕಪ್ಪ ಅದೇ ಗ್ರಾಮದಲ್ಲಿ ತನ್ನ ಮದುವೆಯ ದಿನ ಕುದುರೆ (ಮೇರ್) ಸವಾರಿ ಮಾಡಲು ಮುಂದಾದಾಗ ಗ್ರಾಮದ ಮೇಲ್ಜಾತಿಯ ಜನರು ಅವರನ್ನು ಥಳಿಸಿದ್ದರು. ಇದೀಗ, ಆ ಹಳ್ಳಿಯ ದಲಿತರಲ್ಲಿ ಧೈರ್ಯ ಮತ್ತು ಮೇಲ್ಜಾತಿಯವರಲ್ಲಿ ಜಾಗೃತಿ ಬೆಳೆದಿದೆ. ಆ ಗ್ರಾಮದ ಗ್ರಾಮಸ್ಥರು ಜಾತಿ ಭೇದ ಮರೆತು ಮನೋಜ್‌ಗೆ ಹೂಮಾಲೆ ಹಾಕಿ ಸ್ವಾಗತಿಸಿದ್ದಾರೆ.

ಸ್ಥಳೀಯ ಆಡಳಿತದ ‘ಆಪರೇಷನ್ ಸಮಾನತಾ (ಸಮಾನತೆ)’ ಅಭಿಯಾನವು ದಲಿತರ ವಿರುದ್ಧ ತಾರತಮ್ಯದ ಇತಿಹಾಸವನ್ನು ಹೊಂದಿರುವ ಗ್ರಾಮಗಳನ್ನು ಗುರುತಿಸಿ, ಆ ಹಳ್ಳಿಗಳಲ್ಲಿ ಜಾಗೃತಿಯನ್ನು ಮೂಡಿಸಲು ಯೋಜಿಸಿತ್ತು. ಅದಕ್ಕಾಗಿ, ದಲಿತ ಮತ್ತು ಉನ್ನತ ಜಾತಿಗಳಿಗೆ ಸೇರಿದ ಜನರೊಂದಿಗೆ ಸಂವಹನ ನಡೆಸಲು ‘ಸಮನತಾ ಸಮಿತಿ’ಗಳನ್ನು ನೇಮಿಸಿತ್ತು. ಈ ಸಮಿತಿಗಳ ಸದಸ್ಯರಲ್ಲಿ ಸರಪಂಚ್, ಗ್ರಾಮಾಭಿವೃದ್ಧಿ ಅಧಿಕಾರಿ, ಸ್ಟೇಷನ್ ಹೌಸ್ ಆಫೀಸರ್ ಮತ್ತು ಪ್ರತಿ ಸಮುದಾಯದ ಇಬ್ಬರು ಹಿರಿಯರು ಇರುತ್ತಾರೆ ಎಂದು ಬುಂಡಿ ಪೊಲೀಸ್ ವರಿಷ್ಠಾಧಿಕಾರಿ ಜೈ ಯಾದವ್ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತ ವರನ ಕುದುರೆ ಸವಾರಿಗೆ ಅಡ್ಡಿಪಡಿಸಿದ್ದ 9 ಜನರಿಗೆ 5 ವರ್ಷ ಜೈಲು

“ಅಭಿಯಾನವು ನಾವು ಆರಂಭದಲ್ಲಿ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಸಮುದಾಯ ಬೆಂಬಲವನ್ನು ಪಡೆದುಕೊಂಡಿದೆ. ಸಾಮರಸ್ಯವನ್ನು ಸೃಷ್ಟಿಸುವ ಹಾದಿಯಲ್ಲಿ ಮೇಲ್ಜಾತಿಗೆ ಸೇರಿದ ಪ್ರಭಾವಿ ಗ್ರಾಮಸ್ಥರನ್ನು ಸದಸ್ಯರನ್ನಾಗಿ ಒಳಗೊಳ್ಳುವುದು ಅಭಿಯಾನದ ಯಶಸ್ವಿಗೆ ಮತ್ತೊಂದು ಮೆಟ್ಟಿಲಾಗಿದೆ” ಎಂದು ಯಾದವ್ ಹೇಳಿದ್ದಾರೆ.

ಸಮಿತಿಯ ಸದಸ್ಯರು ನಿಯಮಿತವಾಗಿ ದಲಿತ ಕುಟುಂಬಗಳನ್ನು ಭೇಟಿಯಾಗಿ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುತ್ತಾರೆ. ನಂತರ, ಮೇಲ್ಜಾತಿಗಳಿಗೆ ಸೇರಿದ ಜನರಿಗೆ ಕಾನೂನಿನ ನಿಬಂಧನೆಗಳನ್ನು ವಿವರಿಸುತ್ತಾರೆ ಮತ್ತು ಸಾಂಪ್ರದಾಯದ ಹೆಸರಿನಲ್ಲಿ ನಡೆಸು ಆಚರಣೆಗಳನ್ನು ನಿಲ್ಲಿಸುವಂತೆ ಮನವಿ ಮಾಡುತ್ತಾರೆ ಎಂದು ಜೈ ಯಾದವ್ ವಿವರಿಸಿದ್ದಾರೆ.

ದಲಿತ ಕುಟುಂಬಗಳ ಮದುವೆಯ ಸಂದರ್ಭದಲ್ಲಿ ಯಾರಾದರೂ ತೊಂದರೆ ಕೊಡಬಹುದು ಎಂದು ಕಂಡುಬಂದರೆ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳುತ್ತಾರೆ. ಆಪರೇಷನ್ ಸಮಾನತಾ ಆರಂಭವಾದಾಗಿನಿಂದ ಹತ್ತಕ್ಕೂ ಹೆಚ್ಚು ದಲಿತರ ವಿವಾಹ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆದಿವೆ ಎಂದೂ ಅವರು ಮಾಹಿತಿ ಮಾಡಿದ್ದಾರೆ.

ಆದರೂ ಇತ್ತ, ಜಲಾವರ್ ಜಿಲ್ಲೆಯ ಗುರಾಡಿಯಾ ಭರ್ತಾ ಗ್ರಾಮದಲ್ಲಿ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ 23 ವರ್ಷದ ದಲಿತ ಯುವಕನ ಮದುವೆಯ ಮೆರವಣಿಗೆ ನಡೆಸುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

ಮೇಲ್ಜಾತಿಗಳಲ್ಲಿರುವ ಊಳಿಗಮಾನ್ಯ ಮನೋಭಾವವನ್ನು ಬದಲಾಯಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವವರೆಗೂ ದಲಿತರ ಮೇಲಿನ ದಾಳಿಗಳು ನಡೆಯುತ್ತಲೇ ಇರುತ್ತವೆ. ಜಲವಾರ್ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳ ಒಕ್ಕೂಟವು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಮುಂದೆ ಅರ್ಜಿ ಸಲ್ಲಿಸಿದೆ ಎಂದು ರಾಜಸ್ಥಾನದ ಸೆಂಟರ್ ಆಫ್ ದಲಿತ್ ರೈಟ್ಸ್ (ದಲಿತ ಹಕ್ಕುಗಳ ಕೇಂದ್ರ)ದ ಸಂಚಾಲಕ ಸತೀಶ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ರಾಜಸ್ಥಾನ: ಪೊಲೀಸ್ ರಕ್ಷಣೆಯಲ್ಲಿ ದಲಿತ ಮಧುಮಗನ ಕುದುರೆ ಸವಾರಿ – ಮೊಳಗಿದ ಜೈಭೀಮ್ ಘೋಷಣೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...