Homeಮುಖಪುಟಗಡಿಯಾಚೆಗಿನ ಭಯೋತ್ಪಾದಕರು, ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದ 'ಆಪರೇಷನ್ ಸಿಂಧೂರ' ಪತ್ರಿಕಾಗೋಷ್ಠಿ!

ಗಡಿಯಾಚೆಗಿನ ಭಯೋತ್ಪಾದಕರು, ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದ ‘ಆಪರೇಷನ್ ಸಿಂಧೂರ’ ಪತ್ರಿಕಾಗೋಷ್ಠಿ!

- Advertisement -
- Advertisement -

ಪಹಲ್ಗಾಮ್ ದಾಳಿಯ ವಿರುದ್ಧ ನಡೆದ ಆಪರೇಷನ್ ಸಿಂಧೂರ ಬಗ್ಗೆ ವಿವರಣೆ ನೀಡಲು ನಡೆಸಲಾದ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಭಾಗವಹಿಸಿದ್ದರು. ಆಪರೇಷನ್ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಭಾರತೀಯ ಸೇನೆ ಗಡಿಯಾಚೆಗಿನ ಭಯೋತ್ಪಾದಕರಿಗೂ, ಗಡಿಯೊಳಗಿನ ಕೋಮುವಾದಿಗಳಿಗೂ ಸರಿಯಾಗಿ ಉತ್ತರಿಸಿದೆ. ಗಡಿಯಾಚೆಗಿನ ಭಯೋತ್ಪಾದಕರು

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮೂಲಕ ಭಯೋತ್ಪಾದಕರು ಜಮ್ಮು ಕಾಶ್ಮೀರದಲ್ಲಿ ಶಾಂತಿ, ಅಭಿವೃದ್ಧಿ ಮತ್ತು ಕೋಮು ಸಾಮರಸ್ಯವನ್ನು ಭಂಗಗೊಳಲು ಬಯಸಿದ್ದರು ಎಂದು ಹೇಳಿದ್ದಾರೆ. ಅಂದರೆ, ಶಾಂತಿ, ಅಭಿವೃದ್ಧಿ ಜೊತೆಗೆ ಕೋಮು ಸಾಮರಸ್ಯವನ್ನು ಭಂಗಗೊಳಿಸಬೇಕು ಎಂಬುವುದು ಭಯೋತ್ಪಾದಕರ ಉದ್ದೇಶ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಒಂದು ಕ್ಷಣ ಆಲೋಚಿಸಿ, ಪಹಲ್ಗಾಮ್ ದಾಳಿಯ ನಂತರ ಈ ದೇಶದ ಕೋಮು ಸಾಮರಸ್ಯವನ್ನು ಹಾಳು ಮಾಡಲು ಪ್ರಯತ್ನಿಸಿ ಭಯೋತ್ಪಾದಕರ ಉದ್ದೇಶವನ್ನು ಈಡೇರಿಸಲು ಪ್ರಯತ್ನಿಸಿದವರು ಯಾರು? ಅಭಿವೃದ್ಧಿ ಹೊಂದುತ್ತಿರುವ ಕಾಶ್ಮೀರದ ಪ್ರವಾಸೋದ್ಯಮಕ್ಕೆ ಪೆಟ್ಟು ನೀಡಲು ಕರೆ ನೀಡದವರು ಯಾರು? ಅಲ್ಲಿಗೆ ಪ್ರವಾಸ ಹೋಗದಂತೆ ಕಾಶ್ಮೀರವನ್ನು ಬಹಿಷ್ಕರಿಸಲು ಕರೆ ನೀಡಿದವರು ಯಾರು? ದೇಶದ ಹಲವು ರಾಜ್ಯಗಳಲ್ಲಿರುವ ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದವರು ಯಾರು?

ಮೇಲಿನ ನನ್ನ ”ಯಾರು” ಎಂಬ ಪ್ರಶ್ನೆಗೆ ಉತ್ತರ ”ಯಾರು” ಎಂಬುವುದು ಇಡೀ ದೇಶಕ್ಕೆ ಗೊತ್ತಿದೆ. ಈ ಬಗ್ಗೆ ಹೆಚ್ಚೇನೂ ಹೇಳಬೇಕಾಗಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ವ್ಯಕ್ತಿಗಳ ವಾರಗಳ ಹಿಂದಿನ ಪೋಸ್ಟ್‌ಗಳನ್ನು ಕೆದಕಿದರೆ, ಭಯೋತ್ಪಾದಕರ ಉದ್ದೇಶವನ್ನು ಸಫಲಗೊಳಿಸಲು ಪ್ರಯತ್ನಿಸಿದವರ ದುಷ್ಕರ್ಮಗಳು ನಮ್ಮ ಕಣ್ಣ ಮುಂದೆಯೆ ಬರುತ್ತದೆ.

ಪಹಲ್ಗಾಮ್ ದಾಳಿ ನಡೆದಾಗ ದೇಶ ಒಗ್ಗಟ್ಟಾಗಿರಬೇಕು ಎಂದು, ಅದು ಭಯೋತ್ಪಾದಕರ ಉದ್ದೇಶ ಇಲ್ಲಿನ ಸೌಹಾರ್ದ ಹಾಳು ಮಾಡುವುದೆ ಆಗಿದೆ ಎಂದು ಸಾರಿ ಸಾರಿ ಹೇಳಿದವರ ಮೇಲೆ ದಾಳಿ ಮಾಡಲಾಯಿತು. ಸ್ವತಃ ಸಂತ್ರಸ್ತ ಸೈನಿಕರೊಬ್ಬರ ಪತ್ನಿಯ ಮೇಲೆ ಕೂಡಾ ಅಶ್ಲೀಲವಾಗಿ ದಾಳಿ ಮಾಡಲಾಯಿತು. ನಮ್ಮ ಸರ್ಕಾರ ಅದರ ಬಗ್ಗೆ ಇನ್ನೂ ಚಕಾರ ಎತ್ತದೆ ಮೌನಪಾಲಿಸಿದೆ.

ಆದರೆ, ಇಂದು ಆಪರೇಷನ್ ಸಿಂಧೂರದ ಬಗ್ಗೆ ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಸೇನೆ ಈ ಎಲ್ಲಾ ದುಷ್ಕರ್ಮಿಗಳಿಗೆ ಸರಿಯಾಗಿ ಉತ್ತರಿಸಿದೆ.

ಯಾವುದೇ ಮಿಲಿಟರಿ ಕಾರ್ಯಾಚರಣೆಗಳು ನಡೆದರೆ ಅವುಗಳ ಸುದ್ದಿಗಳನ್ನು ಸಾಂಪ್ರದಾಯಿಕವಾಗಿ ನೀಡುತ್ತಾ ಬಂದಿರುವುದು ಭಾರತ ಸರ್ಕಾರದ ರಕ್ಷಣಾ ಇಲಾಖೆ (MoD) ಮತ್ತು ಸೇನೆಯ ವಕ್ತಾರರು. ಆದರೆ, ಭಾರತೀಯ ಸೇನೆ ಈ ಬಾರಿ, ಬದಲಾವಣೆ ಮಾಡಿ, ಗಡಿಯಾಚೆಗಿನ ಭಯೋತ್ಪಾದಕರಿಗೆ ಮತ್ತು ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದೆ.

ಪಹಲ್ಗಾಮ್ ದಾಳಿಯ ನಂತರ ಅದರ ಪಾಪವನ್ನು ಭಾರತ ಸರ್ವ ಮುಸ್ಲಿಮರು ಹೊರಬೇಕು ಎಂಬಂತೆ ಪ್ರಚಾರ ಮಾಡಿದ ಕೋಮುವಾದಿಗಳಿಗೆ ಉತ್ತರವಾಗಿ ಸೇನೆ ಒಬ್ಬ ಮುಸ್ಲಿಂ ಮಹಿಳಾ ಸೇನಾಧಿಕಾರಿಯ ಕೈಯಲ್ಲೆ ಘಟನೆಯ ಬಗ್ಗೆ ವಿವರಗಳನ್ನು ನೀಡುವಂತೆ ಮಾಡಿತು. ಇದೀಗ ಇಡೀ ದೇಶ ಈ ಮಹಿಳೆ ಯಾರು, ಅವರು ಏನಾಗಿದ್ದರು ಎಂದು ಹುಡುಕುತ್ತಾ, ಅವರ ಸಾಧನೆ, ಧೈರ್ಯ ಮತ್ತು ಅವರ ದೇಶಪ್ರೇಮವನ್ನು ಕೊಂಡಾಡುವಂತೆ ಭಾರತೀಯ ಸೇನೆ ಮಾಡಿದೆ. ಗಡಿಯೊಳಗಿನ ಕೋಮುವಾದಿಗಳಿಗೆ ಇದಕ್ಕಿಂತ ಹೆಚ್ಚಿನ ಉತ್ತರ ಏನು ಬೇಕು ಹೇಳಿ.

ಅಷ್ಟೆ ಅಲ್ಲದೆ, ನಮ್ಮ ಗಡಿ ಪ್ರವೇಶಿಸಿ, ತಮ್ಮ ಕುಟುಂಬದೊಂದಿಗೆ ವಿಹರಿಸುತ್ತಿದ್ದ ಪ್ರವಾಸಿಗರನ್ನು, ಮಹಿಳೆಯರ ಕಣ್ಣು ಮುಂದೆಯೆ ಅವರ ಪತಿಯರನ್ನು ಕೊಂದ ಭಯೋತ್ಪಾದರ ಕೇಂದ್ರಗಳನ್ನು ನಾಶ ಮಾಡಿ, ಆ ಸಾಧನೆಯನ್ನು ಇಬ್ಬರು ಮಹಿಳೆಯರು ವಿವರಿಸುವಂತೆ ಮಾಡಿ, ಭಾರತೀಯ ಸೇನೆ ಭಯೋತ್ಪಾದರಿಗೆ ನಾವು ಹೆದರಿಲ್ಲ, ನಾವು ಗಟ್ಟಿಯಾಗಿದ್ದೇವೆ ಎಂಬ ಸಂದೇಶ ರವಾನಿಸಿದೆ.

ಅಷ್ಟಾಗಿಯೂ, ಪಹಲ್ಗಾಮ್ ದಾಳಿ ನಡೆಯಲು ಕಾರಣವಾದ ಭದ್ರತಾ ಲೋಪಕ್ಕೆ ಯಾರು ಕಾರಣ? ಅದಕ್ಕೆ ಹೊಣೆ ಯಾರು? ಸೇನೆಯಲ್ಲಿ ನೇಮಕಾತಿ ಯಾಕೆ ಆಗುತ್ತಿಲ್ಲ? ಎಂಬ ಪ್ರಶ್ನೆಯನ್ನು ನಾವು ಕೇಳುತ್ತಲೆ ಇರಬೇಕು. ಜೊತೆಗೆ ಈ ದೇಶದ ಬ್ರಾತೃತ್ವದ ಪರಂಪರೆಯನ್ನು ಒಡೆಯಲು ಬರುವವರ ಹುನ್ನಾರವನ್ನು ನಾವು ಒಡೆಯುತ್ತಲೆ ಇರಬೇಕು. ಯಾಕೆಂದರೆ ಈ ದೇಶ ಎಲ್ಲರದೂ. ಅಲ್ಲವೆ? ಗಡಿಯಾಚೆಗಿನ ಭಯೋತ್ಪಾದಕರು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆಪರೇಷನ್ ಸಿಂಧೂರ | ಭಯೋತ್ಪಾದಕ ಗುಂಪುಗಳ ನಿರ್ಮೂಲನೆಗೆ ಭಾರತದ ಎಡಪಕ್ಷಗಳ ಒತ್ತಾಯ

ಆಪರೇಷನ್ ಸಿಂಧೂರ | ಭಯೋತ್ಪಾದಕ ಗುಂಪುಗಳ ನಿರ್ಮೂಲನೆಗೆ ಭಾರತದ ಎಡಪಕ್ಷಗಳ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...