Homeಮುಖಪುಟಗಡಿಯಾಚೆಗಿನ ಭಯೋತ್ಪಾದಕರು, ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದ 'ಆಪರೇಷನ್ ಸಿಂಧೂರ' ಪತ್ರಿಕಾಗೋಷ್ಠಿ!

ಗಡಿಯಾಚೆಗಿನ ಭಯೋತ್ಪಾದಕರು, ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದ ‘ಆಪರೇಷನ್ ಸಿಂಧೂರ’ ಪತ್ರಿಕಾಗೋಷ್ಠಿ!

- Advertisement -
- Advertisement -

ಪಹಲ್ಗಾಮ್ ದಾಳಿಯ ವಿರುದ್ಧ ನಡೆದ ಆಪರೇಷನ್ ಸಿಂಧೂರ ಬಗ್ಗೆ ವಿವರಣೆ ನೀಡಲು ನಡೆಸಲಾದ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಭಾಗವಹಿಸಿದ್ದರು. ಆಪರೇಷನ್ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಭಾರತೀಯ ಸೇನೆ ಗಡಿಯಾಚೆಗಿನ ಭಯೋತ್ಪಾದಕರಿಗೂ, ಗಡಿಯೊಳಗಿನ ಕೋಮುವಾದಿಗಳಿಗೂ ಸರಿಯಾಗಿ ಉತ್ತರಿಸಿದೆ. ಗಡಿಯಾಚೆಗಿನ ಭಯೋತ್ಪಾದಕರು

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮೂಲಕ ಭಯೋತ್ಪಾದಕರು ಜಮ್ಮು ಕಾಶ್ಮೀರದಲ್ಲಿ ಶಾಂತಿ, ಅಭಿವೃದ್ಧಿ ಮತ್ತು ಕೋಮು ಸಾಮರಸ್ಯವನ್ನು ಭಂಗಗೊಳಲು ಬಯಸಿದ್ದರು ಎಂದು ಹೇಳಿದ್ದಾರೆ. ಅಂದರೆ, ಶಾಂತಿ, ಅಭಿವೃದ್ಧಿ ಜೊತೆಗೆ ಕೋಮು ಸಾಮರಸ್ಯವನ್ನು ಭಂಗಗೊಳಿಸಬೇಕು ಎಂಬುವುದು ಭಯೋತ್ಪಾದಕರ ಉದ್ದೇಶ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಒಂದು ಕ್ಷಣ ಆಲೋಚಿಸಿ, ಪಹಲ್ಗಾಮ್ ದಾಳಿಯ ನಂತರ ಈ ದೇಶದ ಕೋಮು ಸಾಮರಸ್ಯವನ್ನು ಹಾಳು ಮಾಡಲು ಪ್ರಯತ್ನಿಸಿ ಭಯೋತ್ಪಾದಕರ ಉದ್ದೇಶವನ್ನು ಈಡೇರಿಸಲು ಪ್ರಯತ್ನಿಸಿದವರು ಯಾರು? ಅಭಿವೃದ್ಧಿ ಹೊಂದುತ್ತಿರುವ ಕಾಶ್ಮೀರದ ಪ್ರವಾಸೋದ್ಯಮಕ್ಕೆ ಪೆಟ್ಟು ನೀಡಲು ಕರೆ ನೀಡದವರು ಯಾರು? ಅಲ್ಲಿಗೆ ಪ್ರವಾಸ ಹೋಗದಂತೆ ಕಾಶ್ಮೀರವನ್ನು ಬಹಿಷ್ಕರಿಸಲು ಕರೆ ನೀಡಿದವರು ಯಾರು? ದೇಶದ ಹಲವು ರಾಜ್ಯಗಳಲ್ಲಿರುವ ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದವರು ಯಾರು?

ಮೇಲಿನ ನನ್ನ ”ಯಾರು” ಎಂಬ ಪ್ರಶ್ನೆಗೆ ಉತ್ತರ ”ಯಾರು” ಎಂಬುವುದು ಇಡೀ ದೇಶಕ್ಕೆ ಗೊತ್ತಿದೆ. ಈ ಬಗ್ಗೆ ಹೆಚ್ಚೇನೂ ಹೇಳಬೇಕಾಗಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ವ್ಯಕ್ತಿಗಳ ವಾರಗಳ ಹಿಂದಿನ ಪೋಸ್ಟ್‌ಗಳನ್ನು ಕೆದಕಿದರೆ, ಭಯೋತ್ಪಾದಕರ ಉದ್ದೇಶವನ್ನು ಸಫಲಗೊಳಿಸಲು ಪ್ರಯತ್ನಿಸಿದವರ ದುಷ್ಕರ್ಮಗಳು ನಮ್ಮ ಕಣ್ಣ ಮುಂದೆಯೆ ಬರುತ್ತದೆ.

ಪಹಲ್ಗಾಮ್ ದಾಳಿ ನಡೆದಾಗ ದೇಶ ಒಗ್ಗಟ್ಟಾಗಿರಬೇಕು ಎಂದು, ಅದು ಭಯೋತ್ಪಾದಕರ ಉದ್ದೇಶ ಇಲ್ಲಿನ ಸೌಹಾರ್ದ ಹಾಳು ಮಾಡುವುದೆ ಆಗಿದೆ ಎಂದು ಸಾರಿ ಸಾರಿ ಹೇಳಿದವರ ಮೇಲೆ ದಾಳಿ ಮಾಡಲಾಯಿತು. ಸ್ವತಃ ಸಂತ್ರಸ್ತ ಸೈನಿಕರೊಬ್ಬರ ಪತ್ನಿಯ ಮೇಲೆ ಕೂಡಾ ಅಶ್ಲೀಲವಾಗಿ ದಾಳಿ ಮಾಡಲಾಯಿತು. ನಮ್ಮ ಸರ್ಕಾರ ಅದರ ಬಗ್ಗೆ ಇನ್ನೂ ಚಕಾರ ಎತ್ತದೆ ಮೌನಪಾಲಿಸಿದೆ.

ಆದರೆ, ಇಂದು ಆಪರೇಷನ್ ಸಿಂಧೂರದ ಬಗ್ಗೆ ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಸೇನೆ ಈ ಎಲ್ಲಾ ದುಷ್ಕರ್ಮಿಗಳಿಗೆ ಸರಿಯಾಗಿ ಉತ್ತರಿಸಿದೆ.

ಯಾವುದೇ ಮಿಲಿಟರಿ ಕಾರ್ಯಾಚರಣೆಗಳು ನಡೆದರೆ ಅವುಗಳ ಸುದ್ದಿಗಳನ್ನು ಸಾಂಪ್ರದಾಯಿಕವಾಗಿ ನೀಡುತ್ತಾ ಬಂದಿರುವುದು ಭಾರತ ಸರ್ಕಾರದ ರಕ್ಷಣಾ ಇಲಾಖೆ (MoD) ಮತ್ತು ಸೇನೆಯ ವಕ್ತಾರರು. ಆದರೆ, ಭಾರತೀಯ ಸೇನೆ ಈ ಬಾರಿ, ಬದಲಾವಣೆ ಮಾಡಿ, ಗಡಿಯಾಚೆಗಿನ ಭಯೋತ್ಪಾದಕರಿಗೆ ಮತ್ತು ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದೆ.

ಪಹಲ್ಗಾಮ್ ದಾಳಿಯ ನಂತರ ಅದರ ಪಾಪವನ್ನು ಭಾರತ ಸರ್ವ ಮುಸ್ಲಿಮರು ಹೊರಬೇಕು ಎಂಬಂತೆ ಪ್ರಚಾರ ಮಾಡಿದ ಕೋಮುವಾದಿಗಳಿಗೆ ಉತ್ತರವಾಗಿ ಸೇನೆ ಒಬ್ಬ ಮುಸ್ಲಿಂ ಮಹಿಳಾ ಸೇನಾಧಿಕಾರಿಯ ಕೈಯಲ್ಲೆ ಘಟನೆಯ ಬಗ್ಗೆ ವಿವರಗಳನ್ನು ನೀಡುವಂತೆ ಮಾಡಿತು. ಇದೀಗ ಇಡೀ ದೇಶ ಈ ಮಹಿಳೆ ಯಾರು, ಅವರು ಏನಾಗಿದ್ದರು ಎಂದು ಹುಡುಕುತ್ತಾ, ಅವರ ಸಾಧನೆ, ಧೈರ್ಯ ಮತ್ತು ಅವರ ದೇಶಪ್ರೇಮವನ್ನು ಕೊಂಡಾಡುವಂತೆ ಭಾರತೀಯ ಸೇನೆ ಮಾಡಿದೆ. ಗಡಿಯೊಳಗಿನ ಕೋಮುವಾದಿಗಳಿಗೆ ಇದಕ್ಕಿಂತ ಹೆಚ್ಚಿನ ಉತ್ತರ ಏನು ಬೇಕು ಹೇಳಿ.

ಅಷ್ಟೆ ಅಲ್ಲದೆ, ನಮ್ಮ ಗಡಿ ಪ್ರವೇಶಿಸಿ, ತಮ್ಮ ಕುಟುಂಬದೊಂದಿಗೆ ವಿಹರಿಸುತ್ತಿದ್ದ ಪ್ರವಾಸಿಗರನ್ನು, ಮಹಿಳೆಯರ ಕಣ್ಣು ಮುಂದೆಯೆ ಅವರ ಪತಿಯರನ್ನು ಕೊಂದ ಭಯೋತ್ಪಾದರ ಕೇಂದ್ರಗಳನ್ನು ನಾಶ ಮಾಡಿ, ಆ ಸಾಧನೆಯನ್ನು ಇಬ್ಬರು ಮಹಿಳೆಯರು ವಿವರಿಸುವಂತೆ ಮಾಡಿ, ಭಾರತೀಯ ಸೇನೆ ಭಯೋತ್ಪಾದರಿಗೆ ನಾವು ಹೆದರಿಲ್ಲ, ನಾವು ಗಟ್ಟಿಯಾಗಿದ್ದೇವೆ ಎಂಬ ಸಂದೇಶ ರವಾನಿಸಿದೆ.

ಅಷ್ಟಾಗಿಯೂ, ಪಹಲ್ಗಾಮ್ ದಾಳಿ ನಡೆಯಲು ಕಾರಣವಾದ ಭದ್ರತಾ ಲೋಪಕ್ಕೆ ಯಾರು ಕಾರಣ? ಅದಕ್ಕೆ ಹೊಣೆ ಯಾರು? ಸೇನೆಯಲ್ಲಿ ನೇಮಕಾತಿ ಯಾಕೆ ಆಗುತ್ತಿಲ್ಲ? ಎಂಬ ಪ್ರಶ್ನೆಯನ್ನು ನಾವು ಕೇಳುತ್ತಲೆ ಇರಬೇಕು. ಜೊತೆಗೆ ಈ ದೇಶದ ಬ್ರಾತೃತ್ವದ ಪರಂಪರೆಯನ್ನು ಒಡೆಯಲು ಬರುವವರ ಹುನ್ನಾರವನ್ನು ನಾವು ಒಡೆಯುತ್ತಲೆ ಇರಬೇಕು. ಯಾಕೆಂದರೆ ಈ ದೇಶ ಎಲ್ಲರದೂ. ಅಲ್ಲವೆ? ಗಡಿಯಾಚೆಗಿನ ಭಯೋತ್ಪಾದಕರು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆಪರೇಷನ್ ಸಿಂಧೂರ | ಭಯೋತ್ಪಾದಕ ಗುಂಪುಗಳ ನಿರ್ಮೂಲನೆಗೆ ಭಾರತದ ಎಡಪಕ್ಷಗಳ ಒತ್ತಾಯ

ಆಪರೇಷನ್ ಸಿಂಧೂರ | ಭಯೋತ್ಪಾದಕ ಗುಂಪುಗಳ ನಿರ್ಮೂಲನೆಗೆ ಭಾರತದ ಎಡಪಕ್ಷಗಳ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...