Homeಮುಖಪುಟಗಡಿಯಾಚೆಗಿನ ಭಯೋತ್ಪಾದಕರು, ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದ 'ಆಪರೇಷನ್ ಸಿಂಧೂರ' ಪತ್ರಿಕಾಗೋಷ್ಠಿ!

ಗಡಿಯಾಚೆಗಿನ ಭಯೋತ್ಪಾದಕರು, ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದ ‘ಆಪರೇಷನ್ ಸಿಂಧೂರ’ ಪತ್ರಿಕಾಗೋಷ್ಠಿ!

- Advertisement -
- Advertisement -

ಪಹಲ್ಗಾಮ್ ದಾಳಿಯ ವಿರುದ್ಧ ನಡೆದ ಆಪರೇಷನ್ ಸಿಂಧೂರ ಬಗ್ಗೆ ವಿವರಣೆ ನೀಡಲು ನಡೆಸಲಾದ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಭಾಗವಹಿಸಿದ್ದರು. ಆಪರೇಷನ್ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಭಾರತೀಯ ಸೇನೆ ಗಡಿಯಾಚೆಗಿನ ಭಯೋತ್ಪಾದಕರಿಗೂ, ಗಡಿಯೊಳಗಿನ ಕೋಮುವಾದಿಗಳಿಗೂ ಸರಿಯಾಗಿ ಉತ್ತರಿಸಿದೆ. ಗಡಿಯಾಚೆಗಿನ ಭಯೋತ್ಪಾದಕರು

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮೂಲಕ ಭಯೋತ್ಪಾದಕರು ಜಮ್ಮು ಕಾಶ್ಮೀರದಲ್ಲಿ ಶಾಂತಿ, ಅಭಿವೃದ್ಧಿ ಮತ್ತು ಕೋಮು ಸಾಮರಸ್ಯವನ್ನು ಭಂಗಗೊಳಲು ಬಯಸಿದ್ದರು ಎಂದು ಹೇಳಿದ್ದಾರೆ. ಅಂದರೆ, ಶಾಂತಿ, ಅಭಿವೃದ್ಧಿ ಜೊತೆಗೆ ಕೋಮು ಸಾಮರಸ್ಯವನ್ನು ಭಂಗಗೊಳಿಸಬೇಕು ಎಂಬುವುದು ಭಯೋತ್ಪಾದಕರ ಉದ್ದೇಶ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಒಂದು ಕ್ಷಣ ಆಲೋಚಿಸಿ, ಪಹಲ್ಗಾಮ್ ದಾಳಿಯ ನಂತರ ಈ ದೇಶದ ಕೋಮು ಸಾಮರಸ್ಯವನ್ನು ಹಾಳು ಮಾಡಲು ಪ್ರಯತ್ನಿಸಿ ಭಯೋತ್ಪಾದಕರ ಉದ್ದೇಶವನ್ನು ಈಡೇರಿಸಲು ಪ್ರಯತ್ನಿಸಿದವರು ಯಾರು? ಅಭಿವೃದ್ಧಿ ಹೊಂದುತ್ತಿರುವ ಕಾಶ್ಮೀರದ ಪ್ರವಾಸೋದ್ಯಮಕ್ಕೆ ಪೆಟ್ಟು ನೀಡಲು ಕರೆ ನೀಡದವರು ಯಾರು? ಅಲ್ಲಿಗೆ ಪ್ರವಾಸ ಹೋಗದಂತೆ ಕಾಶ್ಮೀರವನ್ನು ಬಹಿಷ್ಕರಿಸಲು ಕರೆ ನೀಡಿದವರು ಯಾರು? ದೇಶದ ಹಲವು ರಾಜ್ಯಗಳಲ್ಲಿರುವ ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದವರು ಯಾರು?

ಮೇಲಿನ ನನ್ನ ”ಯಾರು” ಎಂಬ ಪ್ರಶ್ನೆಗೆ ಉತ್ತರ ”ಯಾರು” ಎಂಬುವುದು ಇಡೀ ದೇಶಕ್ಕೆ ಗೊತ್ತಿದೆ. ಈ ಬಗ್ಗೆ ಹೆಚ್ಚೇನೂ ಹೇಳಬೇಕಾಗಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ವ್ಯಕ್ತಿಗಳ ವಾರಗಳ ಹಿಂದಿನ ಪೋಸ್ಟ್‌ಗಳನ್ನು ಕೆದಕಿದರೆ, ಭಯೋತ್ಪಾದಕರ ಉದ್ದೇಶವನ್ನು ಸಫಲಗೊಳಿಸಲು ಪ್ರಯತ್ನಿಸಿದವರ ದುಷ್ಕರ್ಮಗಳು ನಮ್ಮ ಕಣ್ಣ ಮುಂದೆಯೆ ಬರುತ್ತದೆ.

ಪಹಲ್ಗಾಮ್ ದಾಳಿ ನಡೆದಾಗ ದೇಶ ಒಗ್ಗಟ್ಟಾಗಿರಬೇಕು ಎಂದು, ಅದು ಭಯೋತ್ಪಾದಕರ ಉದ್ದೇಶ ಇಲ್ಲಿನ ಸೌಹಾರ್ದ ಹಾಳು ಮಾಡುವುದೆ ಆಗಿದೆ ಎಂದು ಸಾರಿ ಸಾರಿ ಹೇಳಿದವರ ಮೇಲೆ ದಾಳಿ ಮಾಡಲಾಯಿತು. ಸ್ವತಃ ಸಂತ್ರಸ್ತ ಸೈನಿಕರೊಬ್ಬರ ಪತ್ನಿಯ ಮೇಲೆ ಕೂಡಾ ಅಶ್ಲೀಲವಾಗಿ ದಾಳಿ ಮಾಡಲಾಯಿತು. ನಮ್ಮ ಸರ್ಕಾರ ಅದರ ಬಗ್ಗೆ ಇನ್ನೂ ಚಕಾರ ಎತ್ತದೆ ಮೌನಪಾಲಿಸಿದೆ.

ಆದರೆ, ಇಂದು ಆಪರೇಷನ್ ಸಿಂಧೂರದ ಬಗ್ಗೆ ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಸೇನೆ ಈ ಎಲ್ಲಾ ದುಷ್ಕರ್ಮಿಗಳಿಗೆ ಸರಿಯಾಗಿ ಉತ್ತರಿಸಿದೆ.

ಯಾವುದೇ ಮಿಲಿಟರಿ ಕಾರ್ಯಾಚರಣೆಗಳು ನಡೆದರೆ ಅವುಗಳ ಸುದ್ದಿಗಳನ್ನು ಸಾಂಪ್ರದಾಯಿಕವಾಗಿ ನೀಡುತ್ತಾ ಬಂದಿರುವುದು ಭಾರತ ಸರ್ಕಾರದ ರಕ್ಷಣಾ ಇಲಾಖೆ (MoD) ಮತ್ತು ಸೇನೆಯ ವಕ್ತಾರರು. ಆದರೆ, ಭಾರತೀಯ ಸೇನೆ ಈ ಬಾರಿ, ಬದಲಾವಣೆ ಮಾಡಿ, ಗಡಿಯಾಚೆಗಿನ ಭಯೋತ್ಪಾದಕರಿಗೆ ಮತ್ತು ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದೆ.

ಪಹಲ್ಗಾಮ್ ದಾಳಿಯ ನಂತರ ಅದರ ಪಾಪವನ್ನು ಭಾರತ ಸರ್ವ ಮುಸ್ಲಿಮರು ಹೊರಬೇಕು ಎಂಬಂತೆ ಪ್ರಚಾರ ಮಾಡಿದ ಕೋಮುವಾದಿಗಳಿಗೆ ಉತ್ತರವಾಗಿ ಸೇನೆ ಒಬ್ಬ ಮುಸ್ಲಿಂ ಮಹಿಳಾ ಸೇನಾಧಿಕಾರಿಯ ಕೈಯಲ್ಲೆ ಘಟನೆಯ ಬಗ್ಗೆ ವಿವರಗಳನ್ನು ನೀಡುವಂತೆ ಮಾಡಿತು. ಇದೀಗ ಇಡೀ ದೇಶ ಈ ಮಹಿಳೆ ಯಾರು, ಅವರು ಏನಾಗಿದ್ದರು ಎಂದು ಹುಡುಕುತ್ತಾ, ಅವರ ಸಾಧನೆ, ಧೈರ್ಯ ಮತ್ತು ಅವರ ದೇಶಪ್ರೇಮವನ್ನು ಕೊಂಡಾಡುವಂತೆ ಭಾರತೀಯ ಸೇನೆ ಮಾಡಿದೆ. ಗಡಿಯೊಳಗಿನ ಕೋಮುವಾದಿಗಳಿಗೆ ಇದಕ್ಕಿಂತ ಹೆಚ್ಚಿನ ಉತ್ತರ ಏನು ಬೇಕು ಹೇಳಿ.

ಅಷ್ಟೆ ಅಲ್ಲದೆ, ನಮ್ಮ ಗಡಿ ಪ್ರವೇಶಿಸಿ, ತಮ್ಮ ಕುಟುಂಬದೊಂದಿಗೆ ವಿಹರಿಸುತ್ತಿದ್ದ ಪ್ರವಾಸಿಗರನ್ನು, ಮಹಿಳೆಯರ ಕಣ್ಣು ಮುಂದೆಯೆ ಅವರ ಪತಿಯರನ್ನು ಕೊಂದ ಭಯೋತ್ಪಾದರ ಕೇಂದ್ರಗಳನ್ನು ನಾಶ ಮಾಡಿ, ಆ ಸಾಧನೆಯನ್ನು ಇಬ್ಬರು ಮಹಿಳೆಯರು ವಿವರಿಸುವಂತೆ ಮಾಡಿ, ಭಾರತೀಯ ಸೇನೆ ಭಯೋತ್ಪಾದರಿಗೆ ನಾವು ಹೆದರಿಲ್ಲ, ನಾವು ಗಟ್ಟಿಯಾಗಿದ್ದೇವೆ ಎಂಬ ಸಂದೇಶ ರವಾನಿಸಿದೆ.

ಅಷ್ಟಾಗಿಯೂ, ಪಹಲ್ಗಾಮ್ ದಾಳಿ ನಡೆಯಲು ಕಾರಣವಾದ ಭದ್ರತಾ ಲೋಪಕ್ಕೆ ಯಾರು ಕಾರಣ? ಅದಕ್ಕೆ ಹೊಣೆ ಯಾರು? ಸೇನೆಯಲ್ಲಿ ನೇಮಕಾತಿ ಯಾಕೆ ಆಗುತ್ತಿಲ್ಲ? ಎಂಬ ಪ್ರಶ್ನೆಯನ್ನು ನಾವು ಕೇಳುತ್ತಲೆ ಇರಬೇಕು. ಜೊತೆಗೆ ಈ ದೇಶದ ಬ್ರಾತೃತ್ವದ ಪರಂಪರೆಯನ್ನು ಒಡೆಯಲು ಬರುವವರ ಹುನ್ನಾರವನ್ನು ನಾವು ಒಡೆಯುತ್ತಲೆ ಇರಬೇಕು. ಯಾಕೆಂದರೆ ಈ ದೇಶ ಎಲ್ಲರದೂ. ಅಲ್ಲವೆ? ಗಡಿಯಾಚೆಗಿನ ಭಯೋತ್ಪಾದಕರು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆಪರೇಷನ್ ಸಿಂಧೂರ | ಭಯೋತ್ಪಾದಕ ಗುಂಪುಗಳ ನಿರ್ಮೂಲನೆಗೆ ಭಾರತದ ಎಡಪಕ್ಷಗಳ ಒತ್ತಾಯ

ಆಪರೇಷನ್ ಸಿಂಧೂರ | ಭಯೋತ್ಪಾದಕ ಗುಂಪುಗಳ ನಿರ್ಮೂಲನೆಗೆ ಭಾರತದ ಎಡಪಕ್ಷಗಳ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...