Homeಮುಖಪುಟಗಡಿಯಾಚೆಗಿನ ಭಯೋತ್ಪಾದಕರು, ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದ 'ಆಪರೇಷನ್ ಸಿಂಧೂರ' ಪತ್ರಿಕಾಗೋಷ್ಠಿ!

ಗಡಿಯಾಚೆಗಿನ ಭಯೋತ್ಪಾದಕರು, ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದ ‘ಆಪರೇಷನ್ ಸಿಂಧೂರ’ ಪತ್ರಿಕಾಗೋಷ್ಠಿ!

- Advertisement -
- Advertisement -

ಪಹಲ್ಗಾಮ್ ದಾಳಿಯ ವಿರುದ್ಧ ನಡೆದ ಆಪರೇಷನ್ ಸಿಂಧೂರ ಬಗ್ಗೆ ವಿವರಣೆ ನೀಡಲು ನಡೆಸಲಾದ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಭಾಗವಹಿಸಿದ್ದರು. ಆಪರೇಷನ್ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಭಾರತೀಯ ಸೇನೆ ಗಡಿಯಾಚೆಗಿನ ಭಯೋತ್ಪಾದಕರಿಗೂ, ಗಡಿಯೊಳಗಿನ ಕೋಮುವಾದಿಗಳಿಗೂ ಸರಿಯಾಗಿ ಉತ್ತರಿಸಿದೆ. ಗಡಿಯಾಚೆಗಿನ ಭಯೋತ್ಪಾದಕರು

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮೂಲಕ ಭಯೋತ್ಪಾದಕರು ಜಮ್ಮು ಕಾಶ್ಮೀರದಲ್ಲಿ ಶಾಂತಿ, ಅಭಿವೃದ್ಧಿ ಮತ್ತು ಕೋಮು ಸಾಮರಸ್ಯವನ್ನು ಭಂಗಗೊಳಲು ಬಯಸಿದ್ದರು ಎಂದು ಹೇಳಿದ್ದಾರೆ. ಅಂದರೆ, ಶಾಂತಿ, ಅಭಿವೃದ್ಧಿ ಜೊತೆಗೆ ಕೋಮು ಸಾಮರಸ್ಯವನ್ನು ಭಂಗಗೊಳಿಸಬೇಕು ಎಂಬುವುದು ಭಯೋತ್ಪಾದಕರ ಉದ್ದೇಶ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಒಂದು ಕ್ಷಣ ಆಲೋಚಿಸಿ, ಪಹಲ್ಗಾಮ್ ದಾಳಿಯ ನಂತರ ಈ ದೇಶದ ಕೋಮು ಸಾಮರಸ್ಯವನ್ನು ಹಾಳು ಮಾಡಲು ಪ್ರಯತ್ನಿಸಿ ಭಯೋತ್ಪಾದಕರ ಉದ್ದೇಶವನ್ನು ಈಡೇರಿಸಲು ಪ್ರಯತ್ನಿಸಿದವರು ಯಾರು? ಅಭಿವೃದ್ಧಿ ಹೊಂದುತ್ತಿರುವ ಕಾಶ್ಮೀರದ ಪ್ರವಾಸೋದ್ಯಮಕ್ಕೆ ಪೆಟ್ಟು ನೀಡಲು ಕರೆ ನೀಡದವರು ಯಾರು? ಅಲ್ಲಿಗೆ ಪ್ರವಾಸ ಹೋಗದಂತೆ ಕಾಶ್ಮೀರವನ್ನು ಬಹಿಷ್ಕರಿಸಲು ಕರೆ ನೀಡಿದವರು ಯಾರು? ದೇಶದ ಹಲವು ರಾಜ್ಯಗಳಲ್ಲಿರುವ ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದವರು ಯಾರು?

ಮೇಲಿನ ನನ್ನ ”ಯಾರು” ಎಂಬ ಪ್ರಶ್ನೆಗೆ ಉತ್ತರ ”ಯಾರು” ಎಂಬುವುದು ಇಡೀ ದೇಶಕ್ಕೆ ಗೊತ್ತಿದೆ. ಈ ಬಗ್ಗೆ ಹೆಚ್ಚೇನೂ ಹೇಳಬೇಕಾಗಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ವ್ಯಕ್ತಿಗಳ ವಾರಗಳ ಹಿಂದಿನ ಪೋಸ್ಟ್‌ಗಳನ್ನು ಕೆದಕಿದರೆ, ಭಯೋತ್ಪಾದಕರ ಉದ್ದೇಶವನ್ನು ಸಫಲಗೊಳಿಸಲು ಪ್ರಯತ್ನಿಸಿದವರ ದುಷ್ಕರ್ಮಗಳು ನಮ್ಮ ಕಣ್ಣ ಮುಂದೆಯೆ ಬರುತ್ತದೆ.

ಪಹಲ್ಗಾಮ್ ದಾಳಿ ನಡೆದಾಗ ದೇಶ ಒಗ್ಗಟ್ಟಾಗಿರಬೇಕು ಎಂದು, ಅದು ಭಯೋತ್ಪಾದಕರ ಉದ್ದೇಶ ಇಲ್ಲಿನ ಸೌಹಾರ್ದ ಹಾಳು ಮಾಡುವುದೆ ಆಗಿದೆ ಎಂದು ಸಾರಿ ಸಾರಿ ಹೇಳಿದವರ ಮೇಲೆ ದಾಳಿ ಮಾಡಲಾಯಿತು. ಸ್ವತಃ ಸಂತ್ರಸ್ತ ಸೈನಿಕರೊಬ್ಬರ ಪತ್ನಿಯ ಮೇಲೆ ಕೂಡಾ ಅಶ್ಲೀಲವಾಗಿ ದಾಳಿ ಮಾಡಲಾಯಿತು. ನಮ್ಮ ಸರ್ಕಾರ ಅದರ ಬಗ್ಗೆ ಇನ್ನೂ ಚಕಾರ ಎತ್ತದೆ ಮೌನಪಾಲಿಸಿದೆ.

ಆದರೆ, ಇಂದು ಆಪರೇಷನ್ ಸಿಂಧೂರದ ಬಗ್ಗೆ ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಸೇನೆ ಈ ಎಲ್ಲಾ ದುಷ್ಕರ್ಮಿಗಳಿಗೆ ಸರಿಯಾಗಿ ಉತ್ತರಿಸಿದೆ.

ಯಾವುದೇ ಮಿಲಿಟರಿ ಕಾರ್ಯಾಚರಣೆಗಳು ನಡೆದರೆ ಅವುಗಳ ಸುದ್ದಿಗಳನ್ನು ಸಾಂಪ್ರದಾಯಿಕವಾಗಿ ನೀಡುತ್ತಾ ಬಂದಿರುವುದು ಭಾರತ ಸರ್ಕಾರದ ರಕ್ಷಣಾ ಇಲಾಖೆ (MoD) ಮತ್ತು ಸೇನೆಯ ವಕ್ತಾರರು. ಆದರೆ, ಭಾರತೀಯ ಸೇನೆ ಈ ಬಾರಿ, ಬದಲಾವಣೆ ಮಾಡಿ, ಗಡಿಯಾಚೆಗಿನ ಭಯೋತ್ಪಾದಕರಿಗೆ ಮತ್ತು ಗಡಿಯೊಳಗಿನ ಕೋಮುವಾದಿಗಳಿಗೆ ಉತ್ತರ ನೀಡಿದೆ.

ಪಹಲ್ಗಾಮ್ ದಾಳಿಯ ನಂತರ ಅದರ ಪಾಪವನ್ನು ಭಾರತ ಸರ್ವ ಮುಸ್ಲಿಮರು ಹೊರಬೇಕು ಎಂಬಂತೆ ಪ್ರಚಾರ ಮಾಡಿದ ಕೋಮುವಾದಿಗಳಿಗೆ ಉತ್ತರವಾಗಿ ಸೇನೆ ಒಬ್ಬ ಮುಸ್ಲಿಂ ಮಹಿಳಾ ಸೇನಾಧಿಕಾರಿಯ ಕೈಯಲ್ಲೆ ಘಟನೆಯ ಬಗ್ಗೆ ವಿವರಗಳನ್ನು ನೀಡುವಂತೆ ಮಾಡಿತು. ಇದೀಗ ಇಡೀ ದೇಶ ಈ ಮಹಿಳೆ ಯಾರು, ಅವರು ಏನಾಗಿದ್ದರು ಎಂದು ಹುಡುಕುತ್ತಾ, ಅವರ ಸಾಧನೆ, ಧೈರ್ಯ ಮತ್ತು ಅವರ ದೇಶಪ್ರೇಮವನ್ನು ಕೊಂಡಾಡುವಂತೆ ಭಾರತೀಯ ಸೇನೆ ಮಾಡಿದೆ. ಗಡಿಯೊಳಗಿನ ಕೋಮುವಾದಿಗಳಿಗೆ ಇದಕ್ಕಿಂತ ಹೆಚ್ಚಿನ ಉತ್ತರ ಏನು ಬೇಕು ಹೇಳಿ.

ಅಷ್ಟೆ ಅಲ್ಲದೆ, ನಮ್ಮ ಗಡಿ ಪ್ರವೇಶಿಸಿ, ತಮ್ಮ ಕುಟುಂಬದೊಂದಿಗೆ ವಿಹರಿಸುತ್ತಿದ್ದ ಪ್ರವಾಸಿಗರನ್ನು, ಮಹಿಳೆಯರ ಕಣ್ಣು ಮುಂದೆಯೆ ಅವರ ಪತಿಯರನ್ನು ಕೊಂದ ಭಯೋತ್ಪಾದರ ಕೇಂದ್ರಗಳನ್ನು ನಾಶ ಮಾಡಿ, ಆ ಸಾಧನೆಯನ್ನು ಇಬ್ಬರು ಮಹಿಳೆಯರು ವಿವರಿಸುವಂತೆ ಮಾಡಿ, ಭಾರತೀಯ ಸೇನೆ ಭಯೋತ್ಪಾದರಿಗೆ ನಾವು ಹೆದರಿಲ್ಲ, ನಾವು ಗಟ್ಟಿಯಾಗಿದ್ದೇವೆ ಎಂಬ ಸಂದೇಶ ರವಾನಿಸಿದೆ.

ಅಷ್ಟಾಗಿಯೂ, ಪಹಲ್ಗಾಮ್ ದಾಳಿ ನಡೆಯಲು ಕಾರಣವಾದ ಭದ್ರತಾ ಲೋಪಕ್ಕೆ ಯಾರು ಕಾರಣ? ಅದಕ್ಕೆ ಹೊಣೆ ಯಾರು? ಸೇನೆಯಲ್ಲಿ ನೇಮಕಾತಿ ಯಾಕೆ ಆಗುತ್ತಿಲ್ಲ? ಎಂಬ ಪ್ರಶ್ನೆಯನ್ನು ನಾವು ಕೇಳುತ್ತಲೆ ಇರಬೇಕು. ಜೊತೆಗೆ ಈ ದೇಶದ ಬ್ರಾತೃತ್ವದ ಪರಂಪರೆಯನ್ನು ಒಡೆಯಲು ಬರುವವರ ಹುನ್ನಾರವನ್ನು ನಾವು ಒಡೆಯುತ್ತಲೆ ಇರಬೇಕು. ಯಾಕೆಂದರೆ ಈ ದೇಶ ಎಲ್ಲರದೂ. ಅಲ್ಲವೆ? ಗಡಿಯಾಚೆಗಿನ ಭಯೋತ್ಪಾದಕರು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಆಪರೇಷನ್ ಸಿಂಧೂರ | ಭಯೋತ್ಪಾದಕ ಗುಂಪುಗಳ ನಿರ್ಮೂಲನೆಗೆ ಭಾರತದ ಎಡಪಕ್ಷಗಳ ಒತ್ತಾಯ

ಆಪರೇಷನ್ ಸಿಂಧೂರ | ಭಯೋತ್ಪಾದಕ ಗುಂಪುಗಳ ನಿರ್ಮೂಲನೆಗೆ ಭಾರತದ ಎಡಪಕ್ಷಗಳ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...